• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಂಜಾಬಿನ ಮತದಾನಕ್ಕೆ 3 ದಿನ ಮಾತ್ರ ಬಾಕಿ ಇದ್ದರೂ ಮೌನವಾಗಿರುವ ‘ಡೇರಾ ಸಚ್ಚಾ ಸೌದಾ’

ಯದುನಂದನ by ಯದುನಂದನ
February 17, 2022
in ದೇಶ, ರಾಜಕೀಯ
0
ಪಂಜಾಬಿನ ಮತದಾನಕ್ಕೆ 3 ದಿನ ಮಾತ್ರ ಬಾಕಿ ಇದ್ದರೂ ಮೌನವಾಗಿರುವ ‘ಡೇರಾ ಸಚ್ಚಾ ಸೌದಾ’
Share on WhatsAppShare on FacebookShare on Telegram

ಪಂಜಾಬ್ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಬಾಕಿ‌ ಉಳಿದಿರುವುದು ಮೂರೇ ದಿನ. ಆದರೂ ಪಂಜಾಬ್ ಚುನಾವಣೆ ಮೇಲೆ ತನ್ನದೇಯಾದ ಪ್ರಭಾವ ಹೊಂದಿರುವ ಮಲೇರ್‌ಕೋಟ್ಲಾ ಜಿಲ್ಲೆಯ ಅಹಮದ್‌ಗಢದಲ್ಲಿರುವ ಡೇರಾ ಸಚ್ಚಾ ಸೌದಾ ಶಾಖೆ ಮೌನವಾಗಿದೆ. ಡೇರಾ ಸಚ್ಚಾ ಸೌದಾದ ಕೇರ್‌ಟೇಕರ್ ಎಂದು ಕರೆಯಲ್ಪಡುವವರು ಮಾತ್ರ ಸಾಂದರ್ಭಿಕವಾಗಿ ಅಲ್ಲಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಅವರ ಒಲವು ಆಡಳಿತಾರೂಢ ಕಾಂಗ್ರೆಸ್, ಸ್ಥಳೀಯ ಪಕ್ಷ ಅಖಾಲಿದಳ ಹಾಗೂ ಹೊಸದಾಗಿ ನೆಲೆ ಕಂಡುಕೊಳ್ಳುತ್ತಿರುವ ಆಮ್ ಆದ್ಮಿ ಪಕ್ಷದ ಪೈಕಿ ಯಾರಿಗೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ADVERTISEMENT

ಡೇರಾದ ‘ಪ್ರೇಮಿ’ ಅಥವಾ ‘ಸೇವದಾರ್’ ಎಂದು ಕರೆಯಲ್ಪಡುವ ಬಲದೇವ್ ಸಿಂಗ್ ಅವರು, ಪಂಜಾಬ್ ಚುನಾವಣೆಗೆ ಮುಂಚಿತವಾಗಿ ಬಾಬಾ ರಾಮ್ ರಹೀಮ್ ಅವರನ್ನು 21 ದಿನಗಳ ಪೆರೋಲ್‌ನಲ್ಲಿ (ಫೆಬ್ರವರಿ 7 ರಿಂದ ಫೆಬ್ರವರಿ 27 ರವರೆಗೆ) ಬಿಡುಗಡೆ ಮಾಡಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ. ಈ ಮುಖಾಂತರ ಚುನಾವಣೆ ಬಗ್ಗೆ ಬಾಬಾ ರಾಮ್ ರಹೀಮ್ ತನ್ನದೇಯಾದ ಸಂದೇಶ ನೀಡಬಲ್ಲರು ಎಂಬ ಸುಳಿವನ್ನು ಬಲದೇವ್ ಸಿಂಗ್ ಕೊಡುತ್ತಾರೆ.

ಡೇರಾ ಸಚ್ಚಾ ಸೌದಾ ಪಂಜಾಬ್‌ನಲ್ಲಿ ಸುಮಾರು 40 ಲಕ್ಷ ಅನುಯಾಯಿಗಳನ್ನು ಹೊಂದಿದೆ.‌ ಅಲ್ಲದೆ ಕನಿಷ್ಠ 40 ವಿಧಾನಸಭಾ ಕ್ಷೇತ್ರಗಳ ಮೇಲೆ ತನ್ನ ಪ್ರಭಾವವನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ. ವಿಶೇಷವಾಗಿ ರಾಜಕೀಯವಾಗಿ ನಿರ್ಣಾಯಕವಾಗಿರುವ ಮಾಲ್ವಾ ಪ್ರದೇಶದಲ್ಲಿ. ಪಂಜಾಬ್ ಜೊತೆಗೆ ಹರಿಯಾಣ ಮತ್ತು ರಾಜಸ್ಥಾನಗಳಲ್ಲಿಯೂ ಕೆಲವೆಡೆ ತನ್ನ ಪ್ರಭಾವವನ್ನು ಹೊಂದಿದೆ. ಡೇರಾ ಸಚ್ಚಾ ಸೌದಾ ಕೇವಲ ಧಾರ್ಮಿಕ ಅಥವಾ ಸಾಮಾಜಿಕ ಸೇವಾ ಸಂಸ್ಥೆಯಾಗಿಲ್ಲ, ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ಜಾತಿಗಳ ಪರ ಹಲವಾರು ಕೆಲಸ ಮಾಡುತ್ತಿದೆ. ಅದೇ ಕಾರಣಕ್ಕೆ ಆ ಸಮುದಾಯಗಳಲ್ಲಿ ಡೇರಾ ಸಚ್ಚಾ ಸೌದಾ ರಾಜಕೀಯವಾಗಿಯೂ ಪ್ರಭಾವಶಾಲಿಯಾಗಿದೆ. ಡೇರಾಗಳು ವರ್ಷಗಳಿಂದ ತಮ್ಮ ಅನುಯಾಯಿಗಳ ಮತದಾನದ ಮಾದರಿಯ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಡೇರಾ ಕಾರ್ಯಕರ್ತ ಬಲದೇವ್ ಸಿಂಗ್ ಅವರು, ‘ನಮ್ಮಲ್ಲಿ ರಾಜಕೀಯ ಸಮಿತಿ ಇದೆ ಮತ್ತು ಅದು ನಮಗೆ ಮತ್ತು ನಮ್ಮ ಸಹವರ್ತಿ ಗ್ರಾಮಸ್ಥರಿಗೆ ಯಾವ ಪಕ್ಷಕ್ಕೆ ಮತ ಹಾಕಬೇಕೆಂದು ಹೇಳುತ್ತದೆ. ಡೇರಾ ಸೂಚನೆಗೆ ಅನ್ವಯವಾಗಿಯೇ ನಾವು ಮತ ಚಲಾಯಿಸುತ್ತೇವೆ’ ಎಂದು ಹೇಳುತ್ತಾರೆ.

2017ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಡೇರಾ ಸಚ್ಚಾ ಸೌದಾ ಮತದಾರರ ಮೇಲೆ ಪ್ರಭಾವ ಬೀರಿತ್ತು. ಬಹಳ ಲೆಕ್ಕಾಚಾರ ಹಾಕಿ ಕೆಲವು ಕಡೆ ಅಕಾಲಿದಳ ಮತ್ತು ಹಲವು ಕಡೆ ಕಾಂಗ್ರೆಸ್ ಅನ್ನು ಮೌನವಾಗಿ ಬೆಂಬಲಿಸಿತ್ತು. ಡೇರಾ ಸಚ್ಚಾ ಸೌದಾ ಅಭ್ಯರ್ಥಿಗಳ ಮುಖ ನೋಡಿಕೊಂಡು ಕೂಡ ಬೆಂಬಲ ವ್ಯಕ್ತಪಡಿಸುತ್ತದೆ. ಕಳೆದ ಬಾರಿ ಹಾಗೆ ಮಾಡಿದ ಕಾರಣಕ್ಕಾಗಿಯೇ ಪಂಜಾಬಿನಲ್ಲಿ ಕಾಂಗ್ರೆಸ್ ಸರ್ಕಾರ ಬರಲು ಸಾಧ್ಯವಾಯಿತು.‌ ಕಾಂಗ್ರೆಸ್ ಈ ಬಾರಿಯೂ ಅಂತಹುದೇ ನಿರೀಕ್ಷೆ ಇಟ್ಟುಕೊಂಡಿದೆ. ಆದರೆ ಈ‌ ಬಾರಿ ಯುವ ಮತದಾರರು ಅದರಲ್ಲೂ ಡೇರಾ ಸಚ್ಚಾ ಸೌದಾದ ಅನುಯಾಯಿಗಳ ಪೈಕಿ ಕೆಲವರು ಹೊಸ ಪಕ್ಷ ಆಮ್ ಆದ್ಮಿ ಪರ ಒಲವು ತೋರುತ್ತಿದ್ದಾರೆ. ಹಾಗಾಗಿಯೇ ಡೇರಾ ನಿಲುವು ಪ್ರಕಟಿಸಲು ತಡ ಮಾಡುತ್ತಿದೆ ಎಂದು ಕೂಡ ಹೇಳಲಾಗುತ್ತಿದೆ.

ಹರಿಯಾಣ ಸರ್ಕಾರವು ರಾಮ್ ರಹೀಮ್‌‌ ಅವರಿಗೆ ಜೈಲಿನಲ್ಲಿ ನೀಡಿದ ಬೆಂಬಲದ ಕಾರಣಕ್ಕೆ ಪಂಜಾಬಿನಲ್ಲಿ ತನ್ನ ಪರವಾಗಿ ನಿಲುವು ತೆಗೆದುಕೊಳ್ಳಬಹುದು ಎಂದು ಬಿಜೆಪಿ ನಿರೀಕ್ಷೆ ಇಟ್ಟುಕೊಂಡಿದೆ. ಡೇರಾ ಸಚ್ಚಾ ಸೌದಾವನ್ನು ಮಾತ್ರವಲ್ಲದೆ ಇತರ ಪ್ರಭಾವಿ ಪಂಗಡದ ನಾಯಕರನ್ನೂ ತನ್ನತ್ತ ಸೆಳೆಯಲು ಬಿಜೆಪಿ ಬಯಸಿದೆ. ಉದಾಹರಣೆಗೆ ಪಂಜಾಬ್‌ಗೆ ಭೇಟಿ ನೀಡುವ ಒಂದು ದಿನದ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಆರು ಶಕ್ತಿಶಾಲಿ ಡೇರಾಗಳಲ್ಲಿ ಒಂದಾದ ರಾಧಾ ಸೋಮಿ ಸತ್ಸಂಗ್ ಬಿಯಾಸ್‌ನ ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರನ್ನು ಭೇಟಿ ಮಾಡಿದ್ದರು.

ಆದರೆ ಅಹಮದ್‌ಗಢದ ಗ್ರಾಮಸ್ಥರು ತಮ್ಮ ಅಗತ್ಯತೆಗಳು ಎಲ್ಲರಂತೆಯೇ ಇದೆ ಎಂದು ಹೇಳುತ್ತಾರೆ. ನಮಗೆ ಉದ್ಯೋಗಗಳು ಮತ್ತು ಉತ್ತಮ ಸೌಲಭ್ಯಗಳು ಬೇಕು. ಬಾಬಾ ರಾಮ್ ರಹೀಮ್ ಅವರು ನಮ್ಮ ಬೇಡಿಕೆಯನ್ನು ರಾಜಕೀಯ ಪಕ್ಷಗಳಿಂದ ಖಚಿತಪಡಿಸಿಕೊಳ್ಳುತ್ತಾರೆ. ನಂತರ ಯಾರಿಗೆ ಮತ ನೀಡಬಹುದು ಎಂದು ಹೇಳುತ್ತಾರೆ. ಅವರಿಗೆ ಮತ ಹಾಕುತ್ತೇವೆ ಎಂದು ಮಾಲ್ವಾ ಭಾಗದ ಬಹುತೇಕ ಜನರ ಅಭಿಪ್ರಾಯವಾಗಿದೆ. ಸಣ್ಣ ಗುಂಪುಗಳಲ್ಲಿ, ಕಡಿಮೆ ಆದಾಯ ಹೊಂದಿರುವ ಸಮುದಾಯಗಳಲ್ಲಿ ಅಥವಾ ಇನ್ನಿತರ ವರ್ಗಗಳು ಸಾಮಾನ್ಯವಾಗಿ ಡೇರಾ ಸಚ್ಚಾ ಸೌದಾ ಹೇಳುವ ಮತದಾನದ ಮಾದರಿಯನ್ನು ಅನುಸರಿಸುತ್ತವೆ. ಆದುದರಿಂದ ಈಗ ರಾಜಕೀಯ ಪಕ್ಷಗಳು ಡೇರಾ ಸಚ್ಚಾ ಸೌದಾದ ನಡೆಯನ್ನು ಗಮನಿಸುತ್ತಿವೆ.

ಅತ್ಯಾಚಾರ ಆರೋಪ ಎದುರಿಸುತ್ತಿರುವ, ಜಾಮೀನಿನ ಮೇಲೆ ಹೊರಗಡೆ ಇರುವ ಬಾಬಾ ರಾಮ್ ರಹೀಮ್ ಅವರನ್ನು ಎಂದಿನಂತೆ ನೇರವಾಗಿ ಭೇಟಿಯಾಗಿ ಬೆಂಬಲ ಕೇಳಲು ರಾಜಕೀಯ ಪಕ್ಷಗಳು ಹಿಂಜರಿಯುತ್ತಿವೆ. ಅತ್ಯಾಚಾರ ಪ್ರಕರಣದಲ್ಲಿ ಆದ ಹಿನ್ನಡೆ ಮತ್ತು ವರ್ಷಗಳ ಕಾಲ ಜೈಲಿನಲ್ಲೇ ಇದ್ದುದರಿಂದ ಹಾಗೂ ಈಗ ನೇರವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲದಿರುವ ಕಾರಣಕ್ಕೆ ಬಾಬಾ ರಾಮ್ ರಹೀಮ್ ವರ್ಚಸ್ಸು ಕೂಡ ಕೊಂಚ ಕುಂದಿರುವುದು ನಿಜ. ಮೇಲಾಗಿ ರಾಜ್ಯದ ನಿರ್ಣಾಯಕ ಮತದಾರರಾಗಿರುವ ದಲಿತ ಸಮುದಾಯದಲ್ಲಿ ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಚರಂಜಿತ್ ಸಿಂಗ್ ಚನ್ನಿ ಅವರು ಕೂಡ ಈ ಬಾರಿ ಡೇರಾ ಅನುಯಾಯಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಹೇಳಲಾಗುತ್ತಿದೆ.

ಕೇಂದ್ರ ಚುನಾವಣಾ ಆಯೋಗ ಗುರು ರವಿದಾಸ್​ ಜಯಂತಿ ಸಮಯದಲ್ಲೇ ಪಂಜಾಬಿನ ವಿಧಾನಸಭಾ ದಿನಾಂಕವನ್ನು (ಫೆಬ್ರವರಿ 14) ನಿಗದಿ ಮಾಡುತ್ತಿದ್ದಂತೆ ಎತ್ತೆಚ್ಚುಕೊಂಡ ಮುಖ್ಯಮಂತ್ರಿ ಚರಣಜಿತ್ ಚನ್ನಿ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಪಂಜಾಬಿನಲ್ಲಿ ಗುರು ರವಿದಾಸ್​ ಜಯಂತಿ ಅತ್ಯಂತ ದೊಡ್ಡ ಆಚರಣೆ. ಆ ಸಂದರ್ಭದಲ್ಲಿ ಅಂದರೆ ಫೆಬ್ರವರಿ 10ರಿಂದ ಫೆಬ್ರವರಿ 16ರವರೆಗೆ ರಾಜ್ಯದ ಪರಿಶಿಷ್ಠ ಜಾತಿ ಸಮುದಾಯದ ಭಕ್ತರು ಉತ್ತರ ಪ್ರದೇಶದ ವಾರಣಾಸಿಗೆ ತೆರಳುತ್ತಾರೆ. ಸುಮಾರು 20 ಲಕ್ಷ ಮತದಾರರು ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಅವರು ಮತ ಚಲಾವಣೆಯಿಂದ ಅಥವಾ ಗುರು ರವಿದಾಸ್​ ಜಯಂತಿ ಆಚರಣೆಯಿಂದ ವಂಚಿತರಾಗಬೇಕಾಗುತ್ತದೆ. ಆದುದರಿಂದ ಮತದಾನದ ದಿನಾಂಕವನ್ನು ಮುಂದೂಡಬೇಕು ಎಂದು ಪತ್ರ ಬರೆದಿದ್ದರು. ಚರಣಜಿತ್ ಸಿಂಗ್ ಚನ್ನಿ ಅವರ ಮನವಿಗೆ ಸ್ಪಂದಿಸಿದ ಕೇಂದ್ರ ಚುನಾವಣಾ ಆಯೋಗ ಮತದಾನದ ದಿನಾಂಕವನ್ನು ಫೆಬ್ರವರಿ 14ರ ಬದಲು ಫೆಬ್ರವರಿ 20ಕ್ಕೆ ನಿಗದಿ ಮಾಡಿತು. ಚರಣಜಿತ್ ಸಿಂಗ್ ಚನ್ನಿ ಅವರ ಈ ನಡೆ ಬಗ್ಗೆ ದಲಿತ ಸಮುದಾಯದಲ್ಲಿ ವ್ಯಾಪಕವಾದ ಮೆಚ್ಚುಗೆ ಇದೆ. ಇದು ಫಲಿತಾಂಶದ ಮೇಲೂ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ.

Tags: BJPCongress PartyCovid 19ಕರೋನಾಕೋವಿಡ್-19ಡೇರಾ ಸಚ್ಚಾ ಸೌದಾನರೇಂದ್ರ ಮೋದಿಪಂಜಾಬಿಬಿಜೆಪಿಮತದಾನ
Previous Post

ವಿದೇಶಿಯರಿಗೆ ಹಿಜಾಬ್ ವಿಚಾರವಾಗಿ ಕಮೆಂಟ್ ಮಾಡುವ ಅಧಿಕಾರವಿಲ್ಲ: ಕೇಂದ್ರ

Next Post

ಗುತ್ತಿಗೆ ಹಣ ಪಾವತಿ ಮಾಡದ ಬಿಬಿಎಂಪಿ : ಶುಕ್ರವಾರದಿಂದ ಕಸ ಎತ್ತದಿರಲು ಗುತ್ತಿಗೆದಾರರ ನಿರ್ಧಾರ!

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
Next Post
ಗುತ್ತಿಗೆ ಹಣ ಪಾವತಿ ಮಾಡದ ಬಿಬಿಎಂಪಿ : ಶುಕ್ರವಾರದಿಂದ ಕಸ ಎತ್ತದಿರಲು ಗುತ್ತಿಗೆದಾರರ ನಿರ್ಧಾರ!

ಗುತ್ತಿಗೆ ಹಣ ಪಾವತಿ ಮಾಡದ ಬಿಬಿಎಂಪಿ : ಶುಕ್ರವಾರದಿಂದ ಕಸ ಎತ್ತದಿರಲು ಗುತ್ತಿಗೆದಾರರ ನಿರ್ಧಾರ!

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿಯಿಂದ ವೋಟಿಂಗ್‌ ಬಾಕ್ಸ್‌ ಲೂಟಿ, ರಕ್ಷಿತಾಗೆ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿಯಿಂದ ವೋಟಿಂಗ್‌ ಬಾಕ್ಸ್‌ ಲೂಟಿ, ರಕ್ಷಿತಾಗೆ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada