• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Shivakumar: ಪಕ್ಷದ ಪರವಾಗಿ ಕೆಲಸ ಮಾಡಿ, ನಂತರ ಅನುಭವಿಸಿದ ಕಷ್ಟ ನನಗೆ ಮಾತ್ರ ಗೊತ್ತು..!!

ಪ್ರತಿಧ್ವನಿ by ಪ್ರತಿಧ್ವನಿ
August 26, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ನನ್ನ ಪಕ್ಷ ನಿಷ್ಠೆ ಪ್ರಶ್ನೆ ಮಾಡುವವರು ಮೂರ್ಖರು

ADVERTISEMENT

“ನಾನು ವಿರೋಧ ಪಕ್ಷಗಳ ಕಾಲೆಳೆಯಲು ಈ ಸಾಲುಗಳನ್ನು ಪ್ರಸ್ತಾಪಿಸಿದ್ದೇನೆ. ನನ್ನ ಕೆಲವು ಸ್ನೇಹಿತರು ಇದರಲ್ಲಿ ರಾಜಕೀಯ ಮಾಡಿ, ಸಾರ್ವಜನಿಕರಲ್ಲಿ ಗೊಂದಲ ಮೂಡಿಸಲು ಹೊರಟಿದ್ದಾರೆ. ನಾನು ಹುಟ್ಟು ಕಾಂಗ್ರೆಸಿಗ ಎಂಬ ಹೇಳಿಕೆಗೆ ನಾನು ಬದ್ಧ. ಪಕ್ಷ ಹಾಗೂ ಗಾಂಧಿ ಕುಟುಂಬಕ್ಕೆ ಇರುವ ನನ್ನ ನಿಷ್ಠೆಯನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ. ಪ್ರಶ್ನೆ ಮಾಡುವವರು ಮೂರ್ಖರು. ರಾಜ್ಯ ರಾಜಕೀಯ ಇತಿಹಾಸದಲ್ಲಿ ನಾನು ಮಾಡಿರುವ ಹೋರಾಟವನ್ನು ಬೇರೆ ಯಾರೂ ಮಾಡಿಲ್ಲ. ಹೋರಾಟದಲ್ಲಿ ಅವರು ನನ್ನ ಸಮೀಪಕ್ಕೂ ಬರಲು ಸಾಧ್ಯವಿಲ್ಲ. ನಾನು ಈ ಮಾತನ್ನು ನನ್ನ ಸಮಕಾಲೀನರನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ಹಿರಿಯ ನಾಯಕರ ಜೊತೆ ಹೋಲಿಕೆ ಮಾಡಿಕೊಳ್ಳುತ್ತಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರು.

“ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಅಧ್ಯಕ್ಷರು. ನಾನು ಅವರೊಂದಿಗೆ ಕಳೆದ 35 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವಾಲಯ. ಗಾಂಧಿಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ನೂರು ವರ್ಷವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೂರು ಕಾಂಗ್ರೆಸ್ ದೇವಾಲಯ ಸ್ಥಾಪಿಸಬೇಕು ಎಂಬ ಗುರಿ ಹೊಂದಿದ್ದೇನೆ. ಪ್ರತಿ ಕ್ಷೇತ್ರದಲ್ಲಿನ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯ ಮಹತ್ವ ಅರಿಯಬೇಕು ಎಂದು ಈ ತೀರ್ಮಾನ ಮಾಡಿದ್ದೇನೆ. ನಾನು ಎಷ್ಟು ವರ್ಷ ಅಧಿಕಾರದಲ್ಲಿ ಇರುತ್ತೇನೋ ಗೊತ್ತಿಲ್ಲ. ಆದರೆ ಪಕ್ಷದ ಇತಿಹಾಸ ಪುಟಗಳಲ್ಲಿ ನಾನು ಶಾಶ್ವತವಾಗಿ ಉಳಿಯಲು ಬಯಸುತ್ತೇನೆ. ನನ್ನನ್ನು ಟೀಕಿಸಿ, ಮಾರ್ಗದರ್ಶನ ನೀಡುತ್ತಿರುವ ನನ್ನ ಎಲ್ಲಾ ಸ್ನೇಹಿತರು ಹಾಗೂ ಮಾಧ್ಯಮದವರಿಗೆ ಧನ್ಯವಾದಗಳು” ಎಂದು ವಿವರಿಸಿದರು.

“ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದ ರಕ್ಷಣೆ ವೇಳೆ ನಾನು ಏನು ಮಾಡಿದೆ, ಅದರಿಂದ ನನ್ನ ವಿರುದ್ಧ ಎಷ್ಟು ಕೇಸ್ ದಾಖಲಾಯಿತು ಎಂದು ಎಲ್ಲರಿಗೂ ತಿಳಿದಿದೆ. ನಂತರ ಗುಜರಾತಿನ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ವೇಳೆ ಪಕ್ಷದ ಅಭ್ಯರ್ಥಿ ಅಹ್ಮದ್ ಪಟೇಲರು ಗೆಲ್ಲಲು ಅನುವಾಗುವಂತೆ ಶಾಸಕರನ್ನು ರಕ್ಷಣೆ ಮಾಡಿದೆ. ಇದಕ್ಕಾಗಿ ನನ್ನ ಮೇಲೆ, ನನ್ನ ಕುಟುಂಬ ಹಾಗೂ ಸ್ನೇಹಿತರು ಸೇರಿ 77 ಜನರ ಮೇಲೆ ಐಟಿ, ಸಿಬಿಐ ಹಾಗೂ ಇಡಿ ದಾಳಿ ನಡೆದವು. ಒಟ್ಟು 400 ಪ್ರಕರಣಗಳು ದಾಖಲಾದವು. ಇದರ ಬಗ್ಗೆ ಎಲ್ಲರಿಗೂ ಗೊತ್ತಿದೆ” ಎಂದು ತಿಳಿಸಿದರು.

“ಈ ಪ್ರಕ್ರಿಯೆಯಲ್ಲಿ ನಾನು ಎಷ್ಟು ಕಿರುಕುಳ ಅನುಭವಿಸಿದ್ದೇನೆ, ತಿಹಾರ್ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದೇನೆ. ಇ.ಡಿ ಪ್ರಕರಣ ದಾಖಲಾದವು. ಈ ಎಲ್ಲಾ ಪ್ರಕರಣಗಳು ಸುಪ್ರೀಂ ಕೋರ್ಟ್ ನಲ್ಲಿ ವಜಾಗೊಂಡವು. ತಿಹಾರ್ ಜೈಲಿನಲ್ಲಿ ನನಗೆ ಕೂರಲು ಚೇರ್ ಇರಲಿಲ್ಲ. ಇದರ ಪರಿಣಾಮ ನನ್ನ ಮಂಡಿಗೆ ಆಗಿರುವ ಹಾನಿ ನನಗೆ ಮಾತ್ರ ಗೊತ್ತಿದೆ. 10X10 ಅಡಿ ಜಾಗದ ಸೆಲ್ ನಲ್ಲಿ ಅಲ್ಲೇ ಶೌಚಾಲಯ ಮಾಡಿ, ನೆಲದ ಮೇಲೆ ಮಲಗಿ, ಅವರು ಕೊಟ್ಟ ಆಹಾರ ತಿಂದು ನಾನು ಹೇಗೆ ಅಷ್ಟು ದಿನ ಕಳೆದಿದ್ದೇನೆ ಎಂದು ನನಗೆ ಮಾತ್ರ ಗೊತ್ತಿದೆ. ಇ.ಡಿ ದಾಖಲಿಸಿದ ಪ್ರಕರಣ ಏನಾಯ್ತು ಎಂದು ಯಾರೂ ಚರ್ಚೆ ಮಾಡುವುದಿಲ್ಲ. ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ವಜಾ ಮಾಡಿದೆ. ಇದರ ಬಗ್ಗೆ ಯಾರೂ ಚರ್ಚೆ ಮಾಡುವುದಿಲ್ಲ. ಈ ಎಲ್ಲಾ ವಿಚಾರವನ್ನು ಸರಿಯಾಗಿ ದಾಖಲೆ ಹೋಗುವ ಸಂದರ್ಭ ಬಂದಾಗ ವಿವರವಾಗಿ ಹೇಳುತ್ತೇನೆ” ಎಂದರು.

“ನನ್ನ ಬಂಧನವಾದಾಗ, ಅನೇಕರು ಸಂತೋಷ ಪಟ್ಟರು. ಡಿ.ಕೆ. ಶಿವಕುಮಾರ್ ರಾಜಕಾರಣ ಮುಗಿದು ಹೋಯಿತು ಎಂದು ಭಾವಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಚರ್ಚೆ ಮಾಡಿ ನನಗೆ ಕೆಪಿಸಿಸಿ ಅಧ್ಯಕ್ಷಗಿರಿಯ ಜವಾಬ್ದಾರಿ ನೀಡಿದರು. ಅಂದಿನಿಂದ ಇಂದಿನವರೆಗೂ ಒಂದು ದಿನವೂ ಸರಿಯಾಗಿ ನಿದ್ದೆ ಮಾಡಿಲ್ಲ. ಸೋಮವಾರ ರಾತ್ರಿ ಕೂಡ ನಗರ ಪ್ರದಕ್ಷಿಣೆ ಮುಗಿಸಿ ಮಲಗಿದಾಗ 3 ಗಂಟೆ” ಎಂದು ತಿಳಿಸಿದರು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar video
Previous Post

DK Shivakumar: ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

DK Shivakumar: ನಾನು ಹಿಂದೂ, ಆದರೂ ಎಲ್ಲಾ ಧರ್ಮಗಳ ಮೇಲೆ ನಂಬಿಕೆ ಇದೆ..!!

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
DK Shivakumar: ನಾನು ಹಿಂದೂ, ಆದರೂ ಎಲ್ಲಾ ಧರ್ಮಗಳ ಮೇಲೆ ನಂಬಿಕೆ ಇದೆ..!!

DK Shivakumar: ನಾನು ಹಿಂದೂ, ಆದರೂ ಎಲ್ಲಾ ಧರ್ಮಗಳ ಮೇಲೆ ನಂಬಿಕೆ ಇದೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada