ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಮಾರ್ಗರೇಟ್ ಆಳ್ವ(80) ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
ಆಗಷ್ಟ್10ರಂದು ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರವಧಿ ಕೊನೆಗೊಳಲಿದ್ದು. ಆಗಷ್ಟ್ 6ಕ್ಕೆ ಹೊಸ ಅಭ್ಯರ್ಥಿ ಆಯ್ಕೆಗೆ ಚುನಾವಣೆ ನಡೆಯಲಿದೆ.
ಮಾರ್ಗರೇಟ್ ಆಳ್ವ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಸಿಪಿಐ(ಎಂ)ನ ಸೀತರಾಂ ಯಚೂರಿ, ಡಿ.ರಾಜ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದೆ.
ಉಮೇದುವಾರಿಕೆ ಸಲ್ಲಿಕೆ ನಂತರ ಮಾತನಾಡಿದ ಮಾರ್ಗರೇಟ್ ಆಳ್ವ ನಿಸ್ಸಂದೇಹವಾಗಿ ಇದು ಕಠಿಣ ಚುನಾವಣೆಯಾಗಿದೆ. ಆದರೆ, ಸವಾಲು ಸ್ವೀಕರಿಸಲು ನಾನು ಹೆದರುವುದಿಲ್ಲ ನನ್ನನು ಆಯ್ಕೆ ಮಾಡಿ ಬೆಂಬಲ ಸೂಚಿಸಿದ ವಿರೋಧ ಪಕ್ಷಗಳ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.
ಈ ಹಿಂದೆ ರಾಜಸ್ಥಾನದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ ಅನುಭವ ಆಳ್ವರವರಿಗಿದೆ. ಆಗಷ್ಟ್ 6ರಂದು ನಡೆಯುವ ಚುನಾವಣೆಯಲ್ಲಿ ಲೋಕಸಭೆ, ರಾಜ್ಯಸಭೆಯ ಸಂಸದರು ಸೇರಿದಂತೆ ಎಲ್ಲಾ ನಾಮನಿರ್ದೇಶಿತ ಸದಸ್ಯರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.