• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹನಿಟ್ರ್ಯಾಪ್​ ಬಗ್ಗೆ ಕ್ರಮಕ್ಕೆ ವಿಪಕ್ಷಗಳ ಒತ್ತಾಯ.. ಸ್ಪೀಕರ್​ ಪೀಠಕ್ಕೆ ನುಗ್ಗಿ ದಾಂಧಲೆ..

ಕೃಷ್ಣ ಮಣಿ by ಕೃಷ್ಣ ಮಣಿ
March 21, 2025
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಪೀಠಕ್ಕೆ ನುಗ್ಗುವ ಯತ್ನ ನಡೆದಿದೆ. ಬಿಜೆಪಿ ಸದಸ್ಯರ ಈ ಕೃತ್ಯದ ಬಗ್ಗೆ ಸ್ಪೀಕರ್​ ಯು.ಟಿ ಖಾದರ್ ಮಾತನಾಡಿದ್ದು, ಇವತ್ತು ನಮ್ಮ ಫೈನಾನ್ಸ್ ಬಿಲ್ ಪಾಸ್ ಆಗೋದು ಇಂಪಾರ್ಟೆಂಟ್ ಇತ್ತು. ಹಾಗಾಗಿ ನಾವು ಬಿಲ್ ಪಾಸ್ ಮಾಡೋದರ ಕಡೆ ಗಮನ ಹರಿಸಿದ್ವಿ. ಪ್ರತಿಭಟನೆ ಪ್ರಜಾಪ್ರಭುತ್ವದ ಸೌಂದರ್ಯ. ನಾನು ಬಿಲ್ ಪಾಸ್ ಮಾಡಿದ್ದೇನೆ. ವಿಧಾನಪರಿಷತ್​ನಲ್ಲಿ ಇಂದು ಪಾಸ್ ಆಗುತ್ತೆ. ಅವರವರ ಸಂಸ್ಕೃತಿಯನ್ನು ಅವರು ಬಿಂಬಿಸುತ್ತಾರೆ. ಹನಿಟ್ರ್ಯಾಪ್​ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡ್ತೇವೆ ಅಂತ ಹೇಳಿದ್ದಾರೆ ಡಿಸಿಎಂ, ಹೋಂ ಮಿನಿಸ್ಟರ್ ಹೇಳಿದ್ದಾರೆ. ಇಷ್ಟೆಲ್ಲಾ ಭರವಸೆ ಕೊಟ್ಟ ಮೇಲೂ ಗದ್ದಲ ಎಬ್ಬಿಸಿದ್ದಾರೆ. ಬಿಲ್ ಪಾಸ್ ಆಗಬಾರದು ಅಂತ ಗಲಭೆ ಎಬ್ಬಿಸಿದ್ದಾರೆ ಎಂದಿದ್ದಾರೆ.

ADVERTISEMENT
Assembly Session: ಸಿಎಂ ಮೇಲೆ ಪೇಪರ್‌ ಎಸೆದಿದ್ದಕ್ಕೆ ಸಿಡಿದೆದ್ದ ಸಚಿವ  ಬೈರತಿ ಸುರೇಶ್‌..! #byrathisuresh

ನಮ್ಮ ಉದ್ದೇಶ ಫೈನಾನ್ಸ್​ ಬಿಲ್​ ಪಾಸ್​ ಆಗಿ ಜನರಿಗೆ ಒಳ್ಳೆಯದಾಗಬೇಕು ಅನ್ನೋದು. ಅದಕ್ಕಾಗಿ ಬಿಲ್ ಪಾಸ್ ಮಾಡಿದ್ದೇವೆ. ಗದ್ದಲ ವೇಳೆ ಸ್ಪೀಕರ್ ಪೀಠ ಹತ್ತಿಳಿದಿದ್ದಾರೆ ವಿಪಕ್ಷ ಸದಸ್ಯರು. ಬಿಜೆಪಿ ಸದಸ್ಯರಿಂದ ಸ್ಪೀಕರ್​ ಪೀಠ ಹತ್ತಿ ಅಗೌರವ. ಸದನದ ನಡಾವಳಿ ನಿಯಮಗಳನ್ನು ಉಲ್ಲಂಘಿಸಿ ವಿಪಕ್ಷದವರಿಂದ ಧರಣಿ ಮಾಡಿದ್ದಾರೆ. ಈ ಬಗ್ಗೆ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಸ್ಪೀಕರ್ ಒತ್ತಾಯ. ಬಿಜೆಪಿ ಸದಸ್ಯರಾದ ಅಶ್ವಥನಾರಾಯಣ, ಎಸ್.ಆರ್ ವಿಶ್ವನಾಥ್, ದೊಡ್ಡನಗೌಡ ಪಾಟೀಲ್, ಶರಣು ಸಲಗಾರ್, ಸಿ ಕೆ ರಾಮಮೂರ್ತಿ, ಸುರೇಶ ಗೌಡ ವಿರುದ್ಧ ಕ್ರಮಕ್ಕೆ ಸ್ಪೀಕರ್ ನೇತೃತ್ವದ ಸಭೆಯಲ್ಲಿ ನಿರ್ಧಾರ. ಒಂದು ಅಧಿವೇಶನದಿಂದ ಸಸ್ಪೆಂಡ್ ಮಾಡಲು ತೀರ್ಮಾನ

ಸದನದಲ್ಲಿ ಹನಿಟ್ರ್ಯಾಪ್​ ಗದ್ದಲದ ಬಳಿಕ ನೊಂದುಕೊಂಡ ಶಾಸಕ ಬಿ.ಆರ್​ ಪಾಟೀಲ್​, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ ಎಂದು ಘೋಷಣೆ. ಸದನದಲ್ಲಿನ ಘಟನೆ ನನಗೆ ತೀವ್ರ ಬೇಸರ ತಂದಿದೆ. ವಿಪಕ್ಷಗಳು ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದಾರೆ. ಈ ರೀತಿಯ ಘಟನೆ ಆಗಬಾರದು. ರಾಜೀನಾಮೆ ಕೊಡ್ತೇನೆ, ಸಿಎಂ ಬಳಿಯೂ ಮಾತಾಡ್ತೇನೆ ಎಂದ ಶಾಸಕ ಬಿಆರ್ ಪಾಟೀಲ್. ಮಾಧ್ಯಮಗಳ ಜೊತೆಗೆ ಬಿ.ಆರ್ ಪಾಟೀಲ್ ಮಾತಾಡುವಾಗಲೇ ವಿಧಾನ ಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ. ಬಿ.ಆರ್ ಪಾಟೀಲ್​ ನೋಡಿ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ, ನನ್ನ ಸ್ನೇಹಿತ ಬಿ.ಆರ್ ಪಾಟೀಲ್, ಮಾತಾಡ್ತೇನೆ ಎಂದಾಗ ನಾನು ರಾಜೀನಾಮೆ ಕೊಡ್ತೇನೆ ಎಂದು ಸಿಎಂ ಮುಂದೆ ಅಳಲು ತೋಡಿಕೊಂಡ ಶಾಸಕ,

ಹನಿಟ್ರ್ಯಾಪ್ ಪ್ರಕರಣದಲ್ಲಿ 48 ಜನ ರಾಜಕಾರಣಿಗಳು ಸಿಕ್ಕಿ ಬಿದ್ದಿರುವ ಬಗ್ಗೆ ಬಿಜೆಪಿ ಕಾಂಗ್ರೆಸ್​ ಶಾಸಕರು ಒಕ್ಕೋರಲಿನಿಂದ ದನಿ ಎತ್ತಿದ್ದು, ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಒತ್ತಾಯ ಮಾಡಿ ಗೃಹಸಚಿವ ಡಾ . ಜಿ ಪರಮೇಶ್ವರ್​ಗೆ ಪತ್ರ ಬರೆದಿದ್ದಾರೆ. ಇನ್ನು ಸದನದಲ್ಲೂ ಸಿಬಿಐ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ. ಜೊತೆಗೆ ಹನಿಟ್ರ್ಯಾಪ್​ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಉತ್ತರ ಕೊಡಬೇಕು ಎನ್ನುವುದು ಕೇಸರಿ ಪಾಳಯದ ಆಗ್ರಹ ಆಗಿತ್ತು. ಆದರೆ ಸರ್ಕಾರ ಫೈನಾನ್ಸ್​ ಬಿಲ್​ ಪಾಸ್​ ಮಾಡಿಕೊಳ್ಳುವ ತರಾತುರಿಯಲ್ಲಿದ್ದಾಗ ಬಿಜೆಪಿ ಸದಸ್ಯರು ಸ್ಪೀಕರ್​ ಪೀಠದ ಮೇಲೆ ಹತ್ತಿ, ಫೈನಾನ್ಸ್​ ಬಿಲ್​ ಹರಿದು ದಾಂಧಲೆ ನಡೆಸಿದ್ದಾರೆ. ಕ್ರಮದ ಬಗ್ಗೆ ಇನ್ನಷ್ಟೇ ಅಧಿಕೃತ ಆದೇಶ ಹೊರ ಬೀಳಬೇಕಿದೆ.

Tags: Honey Traphoney trap casehoney trap case indiahoney trap in karnatakahoney trap karnatakahoney trap scandal in karnatakakarnataka assembly sessionkarnataka honey trapkarnataka honey trap casekarnataka honey trap rowkarnataka honey trap scandalkarnataka latest newskarnataka newskarnataka political leaders honey trapKarnataka Politicskn rajanna honey trapkn rajanna honey trap caserajanna honey trap
Previous Post

ಸಿಎಂ ಮೂಗಿನ ನೇರಕ್ಕೆ ಹನಿಟ್ರ್ಯಾಪ್ ಪ್ರಕರಣ, ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಬೊಮ್ಮಾಯಿ

Next Post

ನಾಳೆ ಕರ್ನಾಟಕ ಬಂದ್​ ಇರುತ್ತಾ..? ಇಲ್ವಾ..? ಇಲ್ಲಿದೆ ಡೀಟೈಲ್ಸ್​..

Related Posts

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
0

ಅಂದರ್-ಬಾಹರ್ ನಲ್ಲಿ ತೊಡಗಿದ್ದವರನ್ನ ಬೇಟೆಯಾಡಿದ ಖಾಕಿ ಗದಗ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ ಗದಗ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪೊಲೀಸರ ದಾಳಿ ಗದಗ ಎಸ್ಪಿ ರೋಹನ್ ಜಗದೀಶ್...

Read moreDetails
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
Next Post
ನಾಳೆ ಕರ್ನಾಟಕ ಬಂದ್​ ಇರುತ್ತಾ..? ಇಲ್ವಾ..? ಇಲ್ಲಿದೆ ಡೀಟೈಲ್ಸ್​..

ನಾಳೆ ಕರ್ನಾಟಕ ಬಂದ್​ ಇರುತ್ತಾ..? ಇಲ್ವಾ..? ಇಲ್ಲಿದೆ ಡೀಟೈಲ್ಸ್​..

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada