• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನಮ್ಮ ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 29, 2023
in ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಮೈಸೂರು ಚಾಮುಂಡೇಶ್ವರಿ ದೇವಾಲಯಕ್ಕೆ ಮಂಗಳವಾರ (ಆಗಸ್ಟ್ 29) ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ನಾವು ಯಶಸ್ವಿಯಾಗಿ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ.

ಇದಲ್ಲದೆ ಪ್ರಣಾಳಿಕೆಯಲ್ಲಿ ಹೇಳಿರುವ 76 ಕಾರ್ಯಕ್ರಮಗಳನ್ನು ಜಾರಿ ಮಾಡುತ್ತೇವೆ ಎಂದರು.

ಮೇ 9 ರಂದು ಚುನಾವಣೆಯ ಹಿಂದಿನ ದಿನ ನಾನು ಮತ್ತು ಡಿ.ಕೆ.ಶಿವಕುಮಾರ್ ಅವರು ಗ್ಯಾರಂಟಿ ಕಾರ್ಡುಗಳನ್ನು ಚಾಮುಂಡೇಶ್ವರಿ ತಾಯಿ ಸನ್ನಿಧಿಯಲ್ಲಿ ಪೂಜೆ ಮಾಡಿ ವಿತರಿಸಿದ್ದೆವು. ನಾಳೆ ಐದು ಗ್ಯಾರಂಟಿ ಗಳಲ್ಲಿ ಪ್ರಮುಖ ವಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯುತ್ತಿದೆ. ರಾಜ್ಯಸಭಾ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಚಾಲನೆ ನೀಡಲಾಗುತ್ತಿದೆ. ನಾಳೆ ನಡೆಯುತ್ತಿರುವುದು ಸರ್ಕಾರಿ ಕಾರ್ಯಕ್ರಮ. ಆ ಮೂಲಕ 1.10 ಲಕ್ಷ ಕುಟುಂಬಗಳ ಯಜಮಾನಿಯರಿಗೆ 2000 ರೂ. ಪ್ರತಿ ತಿಂಗಳು ನೀಡಲಾಗುತ್ತದೆ.

ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಬೆಲೆಯೇರಿಕೆ ಮತ್ತು ಹಣದುಬ್ಬರ ತಡೆಯಲು ವಿಫಲವಾಗಿದೆ. ಸಾಮಾನ್ಯ ಜನರು, ಮಧ್ಯಮ ವರ್ಗದವರು ಮತ್ತು ಬಡ ಕುಟುಂಬದವರಿಗೆ ಆರ್ಥಿಕವಾಗಿ ಸಹಾಯ ಮಾಡಲು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಒಂದು ಕುಟುಂಬ ಕ್ಕೆ ತಿಂಗಳಿಗೆ ಕನಿಷ್ಠ 4-6 ಸಾವಿರ ರೂಗಳು ದೊರೆಯಲಿವೆ. ಬಡಬರ ಬಳಿ ಹಣವಿದ್ದರೆ ಮಾತ್ರ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ ಎಂದರು.

ಗೃಹಜ್ಯೋತಿ ಅನ್ನಭಾಗ್ಯ, ಶಕ್ತಿ ಯೋಜನೆ ಈಗಾಗಲೇ ಚಾಲನೆಗೆ ಬಂದಿದೆ. ನಾಳೆ ಗೃಹಜ್ಯೋತಿ ಪ್ರಾರಂಭವಾಗಲಿದೆ ಎಂದರು.

ದೇಶದಲ್ಲಿಯೇ ಇಂಥ ಬೇರೆ ಯೋಜನೆ ಇಲ್ಲ

ಗೃಹಲಕ್ಷ್ಮಿಯ ರೀತಿ ದೇಶದಲ್ಲಿಯೇ ಒಂದೇ ಯೋಜನೆಗೆ ಇಷ್ಟೊಂದು ಹಣ ಖರ್ಚು ಮಾಡುತ್ತಿರುವ ಬೇರೆ ಯಾವ ಯೋಜನೆಯೂ ಇಲ್ಲ ಎಂದರು.

1.10 ಕೋಟಿ ಕಾರ್ಡುಗಳನ್ನು ಹಂಚಿ, ಡಿಬಿಟಿ ಮೂಲಕ ಅವರ ಖಾತೆಗೆ ಹಣವನ್ನು ವರ್ಗಾಯಿಸಲಾಗುವುದು ಎಂದರು.

ಬಿಜೆಪಿಗೆ ಯಾವ ನೈತಿಕ ಹಕ್ಕಿದೆ

ಮೈಸೂರು, ಆಗಸ್ಟ್ 29; ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದುಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು 4 ವರ್ಷ ಸರ್ಕಾರದಲ್ಲಿ ಏನೂ ಜನರ ಕೆಲಸ ಮಾಡದವರು ನಮಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ತನಿಖೆ ಆರಂಭವಾಗುತ್ತಿವೆ. ತನಿಖೆ ಕೈಗೊಂಡಿರುವ ಬಗ್ಗೆ ಮೊದಲು ಉತ್ತರಿಸಲಿ ಎಂದರು.

ತನಿಖೆಗೆ ಹಿಂದೆಯೇ ಒತ್ತಾಯ ಮಾಡಿದ್ದೆವು

ಬಿಜೆಪಿಯವರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ನಾವು ಮೊದಲೇ ಹೇಳಿದ್ದೆವು. ಅಧಿಕಾರಕ್ಕೆ ಬರುವ ಮುನ್ನವೇ ಅವರ ಎಲ್ಲಾ ಹಗರಣಗಳ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದೆವು. ಪಿ.ಎಸ್.ಐ ಹಗರಣವನ್ನು ನಿವೃತ್ತ ನ್ಯಾ. ಬಿ.ವೀರಪ್ಪ ಅವರು, 40% ಹಗರಣವನ್ನು ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ತನಿಖೆ ಮಾಡಲಿದೆ, ಕೋವಿಡ್ ಕಾಲದ ಹಗರಣವನ್ನು ನಿವೃತ್ತ ನ್ಯಾ. ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ತನಿಖೆ ನಡೆಯುತ್ತಿದೆ. ಇದರಲ್ಲಿ ದ್ವೇಷ ಎಲ್ಲಿದೆ? ರಾಜ್ಯದ ಜನರ ಹಿತಾಸಕ್ತಿ ಇದರಲ್ಲಿದೆ. ಬಿಜೆಪಿಯವರು

ಅಧಿಕಾರದಲ್ಲಿದ್ದಾಗಲೇ ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಿ ಎಂದು ನಾವು ಒತ್ತಾಯ ಮಾಡಿದ್ದೆವು ಎಂದು ಮಾಧ್ಯಮದವರಿಗೆ ನೆನಪಿಸಿದರು.

ದ್ವೇಷದ ರಾಜಕಾರಣ ಮಾಡುತ್ತಿಲ್ಲ

ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಅವರು ಅಧಿಕಾರದಲ್ಲಿದ್ದಾಗ 40 ಪರ್ಸೆಂಟ್ ಗೆ ಒತ್ತಾಯ ಮಾಡಿರಲಿಲ್ಲವೇ? ತನಿಖೆಗೆ ನಾವು ಆಗಲೇ ಒತ್ತಾಯ ಮಾಡಿದ್ದೆವು. ಅಧಿಕಾರಕ್ಕೆ ಬಂದ ನಂತರ ತನಿಖೆಗೆ ಕ್ರಮ ಕೈಗೊಂಡಿದ್ದೇವೆ. ಹಾಗಾದರೆ ಜನರ ದುಡ್ಡನ್ನು ತಿಂದುಕೊಂಡು ಹೋಗಿ ಎಂದು ಬಿಡಬೇಕಿತ್ತೆ ಎಂದು ಪ್ರಶ್ನಿಸಿದರು.

ವಿರೋಧ ಪಕ್ಷಗಳು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸಂಬಂಧದ ಬಗ್ಗೆಯೇ ಅನುಮಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೇಳಿದಷ್ಟೂ ನಮ್ಮ ಸಂಬಂಧ ಉತ್ತಮಗೊಳ್ಳುತ್ತಿದೆ ಎಂದು ತಿಳಿ ಹೇಳಿದರು.

Tags: CM SiddaramaiahMysuruಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರು
Previous Post

ಮೋದಿ ಪ್ರಧಾನಿ ಆಗೋದು ಪಕ್ಕಾ: ಮಾಜಿ ಸಚಿವ ಈಶ್ವರಪ್ಪ ಭವಿಷ್ಯ

Next Post

ಸಮಗ್ರ ಅಭಿವೃದ್ದಿಗೆ ನೀಲಿನಕ್ಷೆ ತಯಾರಿಸಿ ಸಲ್ಲಿಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Related Posts

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ
ರಾಜಕೀಯ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

by ಪ್ರತಿಧ್ವನಿ
April 23, 2026
0

ತಮಿಳುನಾಡಿನಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಮಹತ್ವವನ್ನು ಮನದಟ್ಟು ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.“2026ರ ವಿಧಾನಸಭಾ ಚುನಾವಣೆಯಲ್ಲಿ ನಾನು ನನ್ನ ಮತವನ್ನು...

Read moreDetails
ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

April 23, 2026
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
Next Post
ಪ್ರಿಯಾಂಕ್‌ ಖರ್ಗೆ

ಸಮಗ್ರ ಅಭಿವೃದ್ದಿಗೆ ನೀಲಿನಕ್ಷೆ ತಯಾರಿಸಿ ಸಲ್ಲಿಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada