ಹಾವೇರಿ (ಹಿರೇಕೆರೂರು), ಜನವರಿ 25: ಭಾರತೀಯ ಜನತಾ ಪಕ್ಷದ ಸರ್ಕಾರ ಏನು ಕೊಡುಗೆ ನೀಡಿದೆ ಎಂದು ನಮ್ಮ ಕೆಲಸಗಳೇ ಸಾಕ್ಷಿ ಹೇಳುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹಿರೇಕೆರೂರು ತಾಲ್ಲೂಕಿನಲ್ಲಿ ಬಾಜಪ ವತಿಯಿಂದ ಏರ್ಪಡಿಸಿದ್ದ ಜನಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನೀರಾವರಿ ಯೋಜನೆಗಳು
ಸರ್ವಜ್ಞ ಏತ ನೀರಾವರಿ ಯೋಜನೆಯಡಿ 184 ಕೋಟಿ ರೂ.ಗಳ ವೆಚ್ಚದಲ್ಲಿ 93 ಕೆರೆಗಳನ್ನು ತುಂಬಿಸಲಾಗಿದೆ. ಹಾನಗಲ್ ತಾಲ್ಲೂಕಿನಲ್ಲಿ ಬಾಳಂದೂರು ಏತ ನೀರಾವರಿ ಯೋಜನೆಗೆ 388 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡಿದ್ದೇವೆ. ಹಾನಗಲ್ ತಾಲ್ಲೂಕಿನಲ್ಲಿ. 160 ಕೋಟಿ ರೂ.ಗಳ ಯೋಜನೆ ಬ್ಯಾಡಗಿ ತಾಲ್ಲೂಕಿನಲ್ಲಿ ಏತನೀರಾವರಿ ಯೋಜನೆಗೆ 157 ಕೋಟಿ ರೂ.ಗಳು, ಆನೂರು ಏತನೀರಾವರಿಗೆ 112 ಕೋಟಿ ರೂ.ಗಳು. ಮುಂದಿನ ತಿಂಗಳು ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ರಾಣೆಬೆನ್ನೂರು ತಾಲ್ಲೂಕಿನ ಮೆಡ್ಲೇರಿ ಏತ ನೀರಾವರಿ 140 ಕೋಟಿ ರೂ.ಗಳ ವೆಚ್ಛದಲ್ಲಿ ಕೈಗೊಂಡು ಇಲ್ಲಿ ಅಭಿವೃದ್ಧಿಯ ಪರ್ವ ನಮ್ಮ ಕಾಲದಲ್ಲಿ ಆಗಿದೆ. ತುಂಗಾ ಮೇಲ್ದಂಡೆಯಿಂದ 8 ಏತ ನೀರಾವರಿ ಯೋಜನೆಗಳನ್ನು ನಮ್ಮ ಕಾಲದಲ್ಲಿ ಅನುಮೋದಿಸಿ, ನಮ್ಮ ಕಾಲದಲ್ಲಿಯೇ ಉದ್ಘಾಟಿಸುತ್ತಿದ್ದೇವೆ. ಇದೊಂದು ದಾಖಲೆ ಎಂದರು.
ಹಿರೇಕೆರೂರು ತಾಲ್ಲೂಕಿನ 109 ಗ್ರಾಮಗಳಿಗೆ 335 ಕೋಟಿ ರೂ.ಗಳ ಯೋಜನೆಗೆ ಅಡಿಗಲ್ಲು
ಮೆಗಾ ಎಪಿಎಂಸಿಗಾಗಿ 100 ಕೋಟಿ ರೂ.ಗಳನ್ನು ಒದಗಿಸಿದ್ದು ರಾಣೆಬೆನ್ನೂರಿನ ಹೊರವಲಯದಲ್ಲಿ ಆಗುತ್ತಿದೆ. ಜಲಜೀವನ್ ಮಿಷನ್ ಅಡಿ ಹಿರೇಕೆರೂರು ತಾಲ್ಲೂಕಿನ 109 ಗ್ರಾಮಗಳಿಗೆ 335 ಕೋಟಿ ರೂ.ಗಳ ಯೋಜನೆಗೆ ಅಡಿಗಲ್ಲು ಹಾಕಿದ್ದೇವೆ. 196 ಕೋಟಿ ರೂ.ಗಳ ವೆಚ್ಚದಲ್ಲಿ ಹಿರೇಕೆರೂರು- ರಟ್ಟಿಹಳ್ಳಿ ಭಾಗದಲ್ಲಿ ಪ್ರತಿ ಮನೆಗೆ ನೀರು ಒದಗಿಸಲು ಇಂದು ಶಂಕುಸ್ಥಾಪನೆ ನೆರವೇರಿದೆ. ಹಾವೇರಿ ಜಿಲ್ಲೆಯಲಿ ಸುಮಾರು 2500 ಕೋಟಿ ರೂ.ಗಳ ಜಲಜೀವನ್ ಮಿಷನ್ ಯೋಜನೆಗೆ ಅನುದಾನ ನೀಡಿ ಕೆಲಸ ಪ್ರಾರಂಭವಾಗಿದೆ.
ವೈದ್ಯಕೀಯ ಕಾಲೇಜು ಅಂತಿಮ ಹಂತದಲ್ಲಿದೆ
ವೈದ್ಯಕೀಯ ಕಾಲೇಜು ಈಗಾಗಲೇ ಅಂತಿಮ ಹಂತದಲ್ಲಿದ್ದು, ನಮ್ಮ ಕನಸು ನನಸಾಗುವ ಹಂತದಲ್ಲಿದೆ. ಅದು ಸಂಪೂರ್ಣವಾಗಿ ಬಿಜೆಪಿ ಆಡಳಿತದಲ್ಲಿ ಮಂಜೂರಾಗಿ, ಅನುದಾನ ಪಡೆದು ನಿರ್ಮಾಣವಾಗಿದೆ. ನಮ್ಮ ನಾಯಕ ನರೇಂದ್ರ ಮೋದಿವರು ಸಶಕ್ತ ಭಾರತದ ಕನಸನ್ನು ಕಂಡಿದ್ದಾರೆ. ದುಡಿಯುವ ರೈತನಿಗೆ ಶಕ್ತಿ ತುಂಬಲು ಕೃಷಿ ಸಮ್ಮಾನ್ ಯೋಜನೆಯಡಿ ರಾಜ್ಯದಲ್ಲಿ 53.43 ಲಕ್ಷ ರೈತರಿಗೆ 10.ಸಾವಿರ ರೂ.ಗಳನ್ನು ನೇರವಾಗಿ ಡಿಬಿಟಿ ಮೂಲಕ ಒದಗಿಸಲಾಗಿದೆ. ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಸ್ವಚ್ಛ ಭಾರತಕ್ಕೆ ಅನುಕೂಲವಾಗಿದ್ದು, ಗ್ಯಾಸ್ ಸಿಲಿಂಡರ್, ಮಕ್ಕಳ ವಿದ್ಯಾಭ್ಯಾಸ, ಪ್ರತಿ ಮನೆಗೆ ವಿದ್ಯುಚ್ಛಕ್ತಿ ನೀಡಿರುವುದು ನರೇಂದ್ರ ಮೋದಿಯವರ ಕಾರ್ಯಕ್ರಮ ಎಂದರು.
ದುಡಿಯುವ ವರ್ಗಕ್ಕೆ ಬೆಲೆ
ರೈತ ಮಕ್ಕಳಿಗೆ ರೈತ ವಿದ್ಯಾ ನಿಧಿ ಯೋಜನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ರೂಪಿಸಲಾಗಿದೆ. ಈ ವರ್ಷ 11 ಲಕ್ಷ ಮಕ್ಕಳಿಗೆ 483 ಕೋಟಿ ರೂ.ಗಳನ್ನು ಈ ಯೋಜನೆಯಡಿ ವಿತರಿಸಲಾಗಿದೆ. 6 ಲಕ್ಷ ರೈತ ಕೂಲಿಕಾರರ ಮಕ್ಕಳು, ಮೀನುಗಾರ, ನೇಕಾರರ ಮಕ್ಕಳಿಗೆ ನೀಡಲಾಗುತ್ತಿದೆ. ದುಡಿಯುವ ವರ್ಗಕ್ಕೆ ಸಹಾಯ ನೀಡಲಾಗಿದೆ. ಗ್ರಾಮೀಣ ಕುಶಲಕರ್ಮಿಗಳಿಗೆ 50 ಸಾವಿರ ರೂ. ಗಳ ಕಾಯಕ ಯೋಜನೆ, ಸ್ತ್ರೀ ಸಾಮಥ್ರ್ಯ ಯೋಜನೆ, ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ರೂಪಿಸಿದೆ. ದುಡಿಯುವ ವರ್ಗಕ್ಕೆ ಬೆಲೆ ನೀಡುವ ಕೆಲಸವಾಗುತ್ತಿದೆ ಎಂದರು.