• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮದು ಸ್ವಚ್ಛ ಆಡಳಿತದ ಸರ್ಕಾರ, ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 30, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

“ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ. ಆತ್ಮಹತ್ಯೆ ಪತ್ರದಲ್ಲಿಅವರ ವಿರುದ್ಧ ನೇರ ಆರೋಪವಿಲ್ಲ. ಬೇರೆಯವರ ಮೇಲೆ ಆರೋಪ ಮಾಡಿದಾಕ್ಷಣ ಇವರು ರಾಜೀನಾಮೆ ನೀಡಲು ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ಬಗ್ಗೆ ನಮಗೆ ಗೊತ್ತಿದೆ. ಗುತ್ತಿಗೆದಾರನ ಸಾವಿನ ಬಗ್ಗೆ ಕಾನೂನು ಪ್ರಕಾರ ತನಿಖೆ ನಡೆಯುತ್ತದೆ” ಎಂದರು.

ವಿಜಯೇಂದ್ರ, ಯಡಿಯೂರಪ್ಪ ಅವರ ಫೋಟೋ ಬಿಡುಗಡೆ ಮಾಡಲೇ:

ಸಾವಿಗೆ ಕಾರಣವಾಗಿರುವ ಆರೋಪ ಹೊತ್ತಿರುವ ರಾಜು ಎಂಬುವವರು ನಿಮ್ಮ ಜತೆ, ಸಿಎಂ, ಪ್ರಿಯಾಂಕ ಖರ್ಗೆ ಅವರ ಜತೆ ಇರುವ ಫೋಟೋಗಳನ್ನು ವಿಜಯೇಂದ್ರ ಅವರು ಬಿಡುಗಡೆ ಮಾಡಿದ್ದಾರೆ ಎಂದು ಕೇಳಿದಾಗ, “ನನ್ನ ಜೊತೆ ವಿಜಯೇಂದ್ರ, ಯಡಿಯೂರಪ್ಪ ಅವರು ಇರುವ ಫೋಟೋಗಳಿವೆ. ನಮ್ಮ ಮನೆಗೆ ಬಂದವರು, ಮದುವೆ ಕಾರ್ಯಕ್ರಮಕ್ಕೆ ಹೋದಾಗ ಅನೇಕರು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ವಿಜಯೇಂದ್ರ, ಯಡಿಯೂರಪ್ಪ ಅವರು ಕ್ರಿಮಿನಲ್, ರೌಡಿಗಳು ಸೇರಿದಂತೆ ಯಾರೆಲ್ಲರ ಜತೆ ಫೋಟೋ ತೆಗೆಸಿಕೊಂಡಿದ್ದಾರೆ ಎಂದು ನಾನು ಬಿಡುಗಡೆ ಮಾಡಲೇ? ಅವರಿಗೆ ಬೇಕು ಎಂದರೆ ಬಿಡುಗಡೆ ಮಾಡುತ್ತೇನೆ. ಆರೋಪಿಗಳು ಹಾಗೂ ನಮ್ಮ ಜತೆ ಮಾತುಕತೆ, ವ್ಯವಹಾರ ನಡೆದಿರುವುದಕ್ಕೆ ದಾಖಲೆ ಇದ್ದರೆ ಆರೋಪ ಮಾಡಲಿ. ನಾವು ಉತ್ತಮವಾಗಿ ಸರ್ಕಾರ ನಡೆಸುತ್ತಿದ್ದು, ವಿರೋಧ ಪಕ್ಷದವರು ಸುಮ್ಮನೆ ಮಾತಾಡಬೇಕು ಎಂಬ ಕಾರಣಕ್ಕೆ ಮಾತನಾಡುತ್ತಾರೆ. ಮಾತಾಡಲಿ ಬಿಡಿ” ಎಂದು ಹೇಳಿದರು.

ಬಿಜೆಪಿ ಅವಧಿಯಲ್ಲಿ ಯಾಕೆ ಸಿಬಿಐ ತನಿಖೆಗೆ ನೀಡಲಿಲ್ಲ?:ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಮುತ್ತಿಗೆ ಹಾಕುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಮುತ್ತಿಗೆ ಹಾಕಲಿ. ನನ್ನ ಸಹೋದರ ಸುರೇಶ್, ರಾಜರಾಜೇಶ್ವರಿ ನಗರದ ಕೆಲವು ಪ್ರಕರಣಗಳನ್ನು ಪ್ರಸ್ತಾಪಿಸಿದ್ದಾರೆ. ಅವೆಲ್ಲವನ್ನು ಸೇರಿಸಿ ಸಿಬಿಐಗೆ ವಹಿಸೋಣ. ಬಿಜೆಪಿ ಸರ್ಕಾರ ಇದ್ದಾಗ ನನ್ನ ಪ್ರಕರಣವನ್ನು ಮಾತ್ರ ಸಿಬಿಐಗೆ ನೀಡಿದ್ದರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಸಾವು, ಸೌಜನ್ಯ ಸಾವು, ಪರೇಶ್ ಮೆಸ್ತಾ ಪ್ರಕರಣ ಸೇರಿದಂತೆ ಸುಮಾರು 12 ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಿದ್ದೆವು. ಬಿಜೆಪಿಯವರು ನನ್ನ ಪ್ರಕರಣದ ಜತೆ ಬಿಜೆಪಿ ಸಚಿವರ ಪ್ರಕರಣಗಳನ್ನು ಸಿಬಿಐಗೆ ನೀಡಬೇಕಿತ್ತು. ಯಾಕೆ ನೀಡಲಿಲ್ಲ” ಎಂದರು.

ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಬಿಜೆಪಿಗೆ ಅಸೂಯೆ:

ಬಿಜೆಪಿಯವರು ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುತ್ತಿರುವ ಬಗ್ಗೆ ಕೇಳಿದಾಗ, “ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ಯಾವ ತಪ್ಪು ಮಾಡಿದ್ದಾರೆ ಎಂದು ರಾಜೀನಾಮೆ ನೀಡಬೇಕು? ಪ್ರಿಯಾಂಕ್ ಖರ್ಗೆ ನಮ್ಮ ಪಕ್ಷದ ಧ್ವನಿ. ಅವರ ಮೇಲಿನ ಅಸೂಯೆಗೆ ವಿರೋಧ ಪಕ್ಷಗಳು ಈ ರೀತಿ ನಡೆದುಕೊಳ್ಳುತ್ತಿವೆ. ದಲಿತ ಸಮುದಾಯದ ನಾಯಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಐಟಿ-ಬಿಟಿ ಇಲಾಖೆಯನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಕೃಷ್ಣ ಅವರ ಸರ್ಕಾರದ ನಂತರ ಐಟಿ-ಬಿಟಿ ಕ್ಷೇತ್ರದಲ್ಲಿ ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವುದು ಪ್ರಿಯಾಂಕ್ ಖರ್ಗೆ. ಹೀಗಾಗಿ ಅವರನ್ನು ಕೆಳಗಿಳಿಸುವ ಸಂಚು ಮಾಡುತ್ತಿದ್ದಾರೆ” ಎಂದರು.

ಕೆಪಿಎಸ್ ಸಿ ಪರೀಕ್ಷೆಯಲ್ಲಿ ಗೊಂದಲದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಗಮನ ಹರಿಸುತ್ತೇವೆ. ಅನ್ಯಾಯ ಆಗಿರುವರಿಗೆ ನ್ಯಾಯ ಒದಗಿಸಲಾಗುವುದು” ಎಂದು ತಿಳಿಸಿದರು.

ರಾಜ್ಯಪಾಲರನ್ನು ಭೇಟಿ ಮಾಡಿ ಬಿಜೆಪಿ ನಾಯಕರು ದೂರು ನೀಡಿದ ಬಗ್ಗೆ ಕೇಳಿದಾಗ, “ಅವರು ನಿತ್ಯ ನಮ್ಮನ್ನು ನೆನೆಯಬೇಕು. ನೆನೆಯಲಿ ಬಹಳ ಸಂತೋಷ” ಎಂದರು.

ಪ್ರಿಯಾಂಕ್ ಖರ್ಗೆ ಅವರ ವಿರುದ್ಧದ ಪ್ರಕರಣ ಸಿಬಿಐಗೆ ಯಾಕೆ ಕೊಡಬಾರದು ಎಂದು ಕೇಳಿದಾಗ, “ಇದು ಸಿಬಿಐಗೆ ನೀಡಬೇಕಾದ ಪ್ರಕರಣವಲ್ಲ. ನಮ್ಮ ತನಿಖಾ ಸಂಸ್ಥೆಗಳು ಈ ಪ್ರಕರಣಗಳ ತನಿಖೆ ಮಾಡಲು ಸಮರ್ಥವಾಗಿವೆ. ಅಧಿಕಾರಿಗಳು ಸಮರ್ಥರಾಗಿದ್ದಾರೆ. ಸಿಬಿಐ ತನಿಖೆ ವೈಖರಿ ನಮಗೂ ಗೊತ್ತಿದೆ” ಎಂದು ತಿಳಿಸಿದರು.

ಹೊಸವರ್ಷದ ಶುಭಾಶಯಗಳು:“ರಾಜ್ಯದ ಜನತೆಗೆ ಹೊಸವರ್ಷದ ಹಾರ್ದಿಕ ಶುಭಾಶಯಗಳು. 2025 ರ ವರ್ಷ ಎಲ್ಲರ ಪಾಲಿಗೂ ಉತ್ತಮವಾಗಿರಲಿ. ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದೆ. ಯಾವುದೇ ದುರ್ವರ್ತನೆ, ಅಹಿತಕರ ಘಟನೆಗೆ ಅವಕಾಶ ಇಲ್ಲ. ನಮಗೆ ಬೆಂಗಳೂರಿನ ಘನತೆ ಬಹಳ ಮುಖ್ಯ. ಯಾರೇ ಕಾನೂನು ಉಲ್ಲಂಘನೆ ಮಾಡಿದರೂ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಾರೆ” ಎಂದು ತಿಳಿಸಿದರು.

Tags: BJP is jealous of Priyank Kharge:BJP leadersCBI investigated during BJP?:contractor's deathDalit community growingDCM D.K ShivakumarHappy New Year:IT-BT departmentMinister Priyank Kharge
Previous Post

ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ವರೆಗೆ ಸಂಜು ವೆಡ್ಸ್ ಗೀತಾ ಕಥೆ..

Next Post

ಸ್ಟೀಮ್ ತೆಗೆದುಕೊಳ್ಳುವುದರಿಂದ ತ್ವಚೆಗೆ ಸಿಗುವಂತಹ ಪ್ರಯೋಜನಗಳೇನು?

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post
ಸ್ಟೀಮ್ ತೆಗೆದುಕೊಳ್ಳುವುದರಿಂದ ತ್ವಚೆಗೆ ಸಿಗುವಂತಹ ಪ್ರಯೋಜನಗಳೇನು?

ಸ್ಟೀಮ್ ತೆಗೆದುಕೊಳ್ಳುವುದರಿಂದ ತ್ವಚೆಗೆ ಸಿಗುವಂತಹ ಪ್ರಯೋಜನಗಳೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada