ಕರ್ನಾಟಕದಲ್ಲಿ ಶುರುವಾದ ಹಿಜಾಬ್ ವಿವಾದವು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದೇ ಬೆನ್ನಲ್ಲಿ ವಿದೇಶಾಂಗ ಇಲಾಖೆ ಪ್ರತಿಕ್ರಿಯಿಸಿದ್ದು, ಹಿಜಾಬ್ ವಿಚಾರವಾಗಿ ವಿದೇಶಿಯರಿಗೆ ಕಮೆಂಟ್ ಮಾಡುವ ಯಾವುದೇ ಅಧಿಕಾರವಿಲ್ಲ ಎಂದು ಹೇಳಿದೆ.
ಈ ಕುರಿತು ಮಾತನಾಡಿರುವ ವಿದೇಶಾಂಗ ಇಲಾಖೆಯೂ, ಇದು ಭಾರತದ ಆಂತರಿಕ ವಿಷಯವಾಗಿದೆ ಮತ್ತು ಇತರೆ ದೇಶಗಳು ಪ್ರತಿಕ್ರಿಯಿಸಲು ಯಾವುದೇ ಅಧಿಕಾರವಿಲ್ಲ ಎಂದು ಹೇಳಿದೆ.
ಮುಂದುವರೆದು, ಇದು ವಿದೇಶಾಂಗ ವ್ಯವಹಾರಗಳ ವ್ಯಾಪ್ತಿಗೆ ಬರುವುದಿಲ್ಲ. ಈ ವಿಚಾರವಾಗಿ ಯಾವುದೇ ಇತರ ದೇಶ ಹಾಗೂ ವಿದೇಶಿಯರು ಅಥವಾ ಬೇರೆ ದೇಶದವರು ಈ ವಿಚಾರವಾಗಿ ಮಾತನಾಡುವುದು ಸರಿಯಲ್ಲ ಎಂದು ವಿದೇಶಾಂಗ ಇಲಾಖೆಯ ವಕ್ತಾರರೊಬ್ಬರು ತಿಳಿಸಿದ್ದಾರೆ.
ನಮ್ಮಲ್ಲಿ ಸಾಂವಿಧಾನಿಕ ಕಾರ್ಯವಿಧಾನ, ನ್ಯಾಯಾಂಗ ವ್ಯವಸ್ಥೆ ಮತ್ತು ಪ್ರಜಾಸತ್ತಾತ್ಮಕ ತತ್ವವಿದೆ. ಇವುಗಳು ಅಂತಹ ವಿಷಯಗಳಿಗೆ ಪರಿಹಾರಗಳನ್ನು ಹುಡುಕಲು ನಮಗೆ ದಾರಿ ತೋರುತ್ತದೆ ಮತ್ತು ಈ ವಿಷಯವು ನ್ಯಾಯಾಲಯದಲ್ಲಿದೆ. ಕರ್ನಾಟಕ ಹೈಕೋರ್ಟ್ ಇದನ್ನು ಪರಿಶೀಲಿಸುತ್ತಿದೆ” ಎಂದು ಅವರು ಹೇಳಿದರು.