ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏಕರೂಪ ನಾಗರಿಕ ಸಂಹಿತೆ(UCC)ಯನ್ನು ಜಾರಿಗೆ ತರಲು ಚಿಂತಿಸಿದೆ. ಈ ಮಧ್ಯೆ ಈ ಕುರಿತು ಮಾತನಾಡಿರುವ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ.
ಈ ಕುರಿತು ಮಾತನಾಡಿರುವ ಓವೈಸಿ, ಇದರ ಅಗ್ಯತತ್ತೆ ದೇಶಕ್ಕಿಲ್ಲ ಎಂದು ಭಾರತೀಯ ಕಾನೂನು ಆಯೋಗ ಅಭಿಪ್ರಾಯಪಟ್ಟಿದೆ ಎಂದು ಹೇಳಿದ್ದಾರೆ. ಮುಂದುವರೆದು, ಬಿಜೆಪಿ ಆಡಳಿತವಿರುವ ಗೋವಾದಲ್ಲಿ ದಂಪತಿಗಳು 30 ವರ್ಷದೊಳಗೆ ಗಂಡು ಮಗುವನ್ನು ಪಡೆಯದಿದ್ದರೆ ಅಂತಹ ಪುರುಷರಿಗೆ ಇನ್ನೊಂದು ಮದುವೆಯಾಗುವ ಹಕ್ಕಿದೆ. ಇದರ ಬಗ್ಗೆ ಬಿಜೆಪಿ ಏನು ಹೇಳುತ್ತದೆ ಅವರ ಸರ್ಕಾರವಿರುವುದರಿಂದ ಏಕರೂಪ ನಾಗರಿಕ ಸಂಹಿತೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಹಿಂದೂ ಅವಿಭಜಿತ ಕುಟುಂಬಗಳಿಗೆ ನೀಡುವ ತೆರಿಗೆ ವಿನಾಯ್ತಿ ಮುಸ್ಲಿಂ, ಸಿಖ್ ಹಾಗೂ ಕ್ರಿಶ್ಚಿಯನ್ನರ ಕುಟುಂಬಕ್ಕೆ ಏಕೆ ನೀಡುವುದಿಲ್ಲ? ಭಾರತ ಸಂವಿಧಾನದಲ್ಲಿ ಹಕ್ಕುಗಳ ಸಂರಕ್ಷಣೆ ಬಗ್ಗೆ ಉಲ್ಲೇಖಿಸಲಾಗಿದೆ ಆದರೆ, ಮಿಜೋರಾಂ, ಮೇಘಾಲಯ ಹಾಗೂ ನಾಗಾಲ್ಯಾಂಡಿನ ಸಂಸ್ಕೃತಿಯನ್ನು ಕಡೆಗಣಿಸಲಾಗುತ್ತಿದೆ ಇದು ಹಕ್ಕುಗಳ ಉಲ್ಲಂಘನೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ.