• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರ ವರ್ಗಾವಣೆ ಕುರಿತು ನಡೆಯುತ್ತಿದೆಯೇ ಹಗ್ಗಜಗ್ಗಾಟ..?

Any Mind by Any Mind
May 21, 2021
in ಕರ್ನಾಟಕ
0
ಚಾಮರಾಜನಗರ  ಜಿಲ್ಲಾಧಿಕಾರಿ ಎಂ.ಆರ್ ರವಿ ಅವರ ವರ್ಗಾವಣೆ  ಕುರಿತು  ನಡೆಯುತ್ತಿದೆಯೇ ಹಗ್ಗಜಗ್ಗಾಟ..?
Share on WhatsAppShare on FacebookShare on Telegram

ADVERTISEMENT

ಚಾಮರಾಜನಗರ   ಜಿಲ್ಲಾಸ್ಪತ್ರೆಯಲ್ಲಿ  ಕಳೆದ ಮೇ 2 ನೇ ತಾರೀಕಿನಂದು ಆಕ್ಸಿಜನ್‌ ಕೊರತೆಯಿಂದ  24 ರೋಗಿಗಳು ಮೃತಪಟ್ಟ  ಘಟನೆ   ಇಡೀ ದೇಶಾದ್ಯಂತ ದೊಡ್ಡ ಮಟ್ಟದ ಸುದ್ದಿ ಆಗುತ್ತಿರುವಂತೆ  ವ್ಯಾಪಕ ಖಂಡನೆ ವ್ಯಕ್ತವಾಯಿತು. ಪ್ರಕರಣದ ಹೊಣೆ ಹೊತ್ತು ರಾಜ್ಯ ಆರೋಗ್ಯ ಸಚಿವ ಡಾ ಸುಧಾಕರ್‌, ಜಿಲ್ಲಾ ಉಸ್ತುವಾರಿ ಸಚಿವ  ಎಸ್‌ ಸುರೇಶ್‌ ಕುಮಾರ್‌ ಅವರೂ ರಾಜೀನಾಮೆ ನೀಡಬೇಕೆಂಬ ಒತ್ತಾಯವೂ  ಕೇಳಿ ಬಂದಿತು. ನಂತರ ರಾಜ್ಯ ಹೈ ಕೋರ್ಟ್‌ ರಚಿಸಿದ ಮೂವರು ಸದಸ್ಯರ ಸಮಿತಿಯು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ  ಆಕ್ಸಿಜನ್‌ ಕೊರತೆಗೆ  ಜಿಲ್ಲಾಧಿಕಾರಿ ಮತ್ತು ಅರೋಗ್ಯಾಧಿಕಾರಿಗಳೇ ಕಾರಣ ಎಂದು ವರದಿ ನೀಡಿತ್ತು. ಸದರಿ ವರದಿಯಲ್ಲಿ  ಅಸ್ಪತ್ರೆಯ ಆಕ್ಸಿಜನ್‌ ರಿಜಿಸ್ಟರ್‌ ನ  ದಾಖಲೆಗಳನ್ನೂ ತಿದ್ದಿರುವ ಸಂಶಯ ವ್ಯಕ್ತಪಡಿಸಿ  ದಾಖಲಾತಿಗಳನ್ನು  ನ್ಯಾಯಾಲಯವೇ ವಶಕ್ಕೆ ಪಡೆದುಕೊಳ್ಳುವಂತೆಯೂ ಸೂಚಿಸಿತ್ತು.

ಚಾಮರಾಜನಗರ ಆಕ್ಸಿಜನ್ ದುರಂತ ; ಇಬ್ಬರೂ ಜಿಲ್ಲಾಧಿಕಾರಿಗಳ ತಲೆದಂಡ ಖಚಿತ..?

ಇದಕ್ಕೂ ಮುನ್ನ   ಚಾಮರಾಜನಗರ ಜಿಲ್ಲೆಗೆ ಸರಬರಾಜಾಗುವ  ಆಕ್ಸಿಜನ್‌ ಮರುಪೂರಣ ಘಟಕಕ್ಕೆ  ಮೌಕಿಕ ಸೂಚನೆ ನೀಡಿ  ಸರಬರಾಜಿಗೆ ತಡೆ ಒಡ್ಡಿದ್ದರೆಂದು  ಮೈಸೂರು ಜಿಲ್ಲಾಧಿಕಾರಿ  ರೋಹಿಣಿ ಸಿಂಧೂರಿ ಅವರ ಮೇಲೆ ಅರೋಪ ಮಾಡಲಾಗಿತ್ತು. ಈ ಆರೋಪವನ್ನು  ಸ್ವತಃ  ಚಾಮರಾಜನಗರ ಜಿಲ್ಲಾಧಿಕಾರಿ ಡಾ ಎಂ ಆರ್‌ ರವಿ ಅವರೇ ಮಾಡಿದ್ದರು. ಆದರೆ ಇದನ್ನು  ರೋಹಿಣಿ ತಳ್ಳಿ ಹಾಕಿದ್ದರು ಅಲ್ಲದೆ  ಆಮ್ಲ ಜನಕ ಸರಬರಾಜು ಆಗಿರುವ ದಾಖಲೆಗಳನ್ನೂ ಪ್ರದರ್ಶಿಸಿದ್ದರು.  ಇಬ್ಬರೂ ಜಿಲ್ಲಾಧಿಕಾರಿಗಳ ಪರಸ್ಪರ ಆರೋಪಗಳಿಂದ  ರಾಜ್ಯ ಸರ್ಕಾರಕ್ಕೆ ಮುಜುಗರವೂ ಆಗಿದ್ದು ಇಬ್ಬರನ್ನೂ ಸ್ಥಳ ತೋರಿಸದೆ ವರ್ಗಾವಣೆ ಮಾಡುವ ಕುರಿತೂ ಮುಖ್ಯ ಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು  ಗೃಹ ಸಚಿವ ಬೊಮ್ಮಾಯಿ ಅವರ ಜತೆ ಗಂಭೀರ ಚರ್ಚೆ ನಡೆಸಿದ್ದರೆಂದೂ ಸರ್ಕಾರದ  ಉನ್ನತ ಮೂಲಗಳು ತಿಳಿಸಿದ್ದವು. ಆದರೆ ವಾರ ಕಳೆದರೂ  ಯಾವುದೇ ವರ್ಗಾವಣೆ ಆಗಿರಲಿಲ್ಲ.

ಆದರೆ ಬುಧವಾರ ರಾತ್ರಿ  ಚಾಮರಾಜನಗರ ಜಿಲ್ಲಾಧಿಕಾರಿ ಡಾ ಎಂ ಅರ್‌ ರವಿ ಅವರ ವರ್ಗಾವಣೆ ಆದೇಶ ಹೊರಬಿದ್ದಿದ್ದು   ಡಾ ಬಿ ಸಿ ಸತೀಶ್‌ ಅವರು  ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ  ಮಾಡಬೇಕಾಗಿತ್ತು.  ಆಧರೆ  ಗುರುವಾರ  ಬೆಳಿಗ್ಗೆಯೇ ಈ ಆದೇಶ ರದ್ದಾಗಿದೆ ಎಂದು ತಿಳಿದು ಬಂದಿದೆ.  ವರ್ಗಾವಣೆ ಆಗಿರುವ ಕುರಿತು ಕೆಲ ಮಾಧ್ಯಮಗಳೂ  ವೆಬ್‌ ಎಡಿಷನ್‌ ನಲ್ಲಿ ಸುದ್ದಿ ಪ್ರಕಟಿಸಿದ್ದವು. ಇದೀಗ ವರ್ಗಾವಣೆಯೇ ರದ್ದಾಗಿರುವುದು  ಅಚ್ಚರಿ ಮೂಡಿಸಿದೆ.  ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಬೇಕಿದ್ದ ಡಾ.ಬಿ.ಸಿ. ಸತೀಶ್ ಅವರು ಈ ಬಗ್ಗೆ  ವರದಿಗಾರರೊಬ್ಬರ ಜತೆ  ಮಾತನಾಡಿ, ನಿನ್ನೆ ರಾತ್ರಿ ವರ್ಗಾವಣೆ ಆಗಿತ್ತು. ಬೆಳಗ್ಗೆ ಬದಲಾಗಿದೆ. ನಾನು ಚಾಮರಾಜನಗರಕ್ಕೆ ಬರುತ್ತಿಲ್ಲ  ಎಂದು ಹೇಳಿದರು..ಸರ್ಕಾರ ಕೆಲ ತಿಂಗಳ ಹಿಂದೆ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾಗ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರನ್ನು ಬೆಂಗಳೂರಿನ ಸಕಾಲ ಮಿಷನ್ ನ ಹೆಚ್ಚುವರಿ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಿತ್ತು. ಚಾಮರಾಜನಗರ ನೂತನ ಜಿಲ್ಲಾಧಿಕಾರಿಯಾಗಿ ಬೆಂಗಳೂರು ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಡಾ.ಬಿ.ಸಿ.ಸತೀಶ್ ಅವರನ್ನು ನಿಯುಕ್ತಿಗೊಳಸಲಾಗಿತ್ತು. ಆದರೆ ಜಿಲ್ಲಾಧಿಕಾರಿ ರವಿ ವರ್ಗಾವಣೆ ಮಾತ್ರ ಆಗಲಿಲ್ಲ. ಅವರೇ ಈವರೆಗೂ ಮುಂದುವರಿದಿದ್ದಾರೆ.  ಆಮ್ಲಜನಕ ದುರಂತದಲ್ಲಿ ಹೈಕೋರ್ಟ್ ನೇಮಸಿದ್ದ ಸಮಿತಿ ಸತ್ಯಶೋಧನೆ ನಡೆಸಿ ಜಿಲ್ಲಾಧಿಕಾರಿ ವೈಫಲ್ಯವನ್ನು ಎತ್ತಿ ತೋರಿಸಿದೆ.. ಈ ಹಿನ್ನೆಲೆಯಲ್ಲಿ ಸರ್ಕಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮೇಲೆ ಶಿಸ್ತು ಕ್ರಮಕೈಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿತ್ತು. .

ಇದರ ಪರಿಣಾಮವಾಗಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ವರ್ಗಾವಣೆ ಆಗಿದೆ ಎಂದು ಹೇಳಲಾಗಿತ್ತು. ಗುಂಡ್ಲುಪೇಟೆ ಬಿಜೆಪಿ ಶಾಸಕ ಮತ್ತು ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಸಹ ಗುರುವಾರ ಬೆಳಗ್ಗೆ ಡಿಸಿ ರವಿ ವರ್ಗಾವಣೆ ಆಗಿರುವುದಾಗಿ ತಿಳಿಸಿದ್ದರು. ಆದರೆ, ಬುಧವಾರ ವರ್ಗಾವಣೆ ಆಗಿ ಗುರುವಾರ ಬೆಳಗ್ಗೆ ಬದಲಾಗಿರುವುದು ಪ್ರಭಾವಿಗಳ ಕೃಪೆಯಿಂದ ಡಿಸಿ ರವಿ ಚಾಮರಾಜನಗರದಲ್ಲೇ ಉಳಿದುಕೊಂಡಿರಬಹುದು ಎಂಬ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಡಾ.ಬಿ.ಸಿ.ಸತೀಶ್ ಅವರನ್ನು ಎರಡು ಬಾರಿ ಜಿಲ್ಲೆಗೆ ಕಳುಹಿಸಲು ಮುಂದಾಗಿ ಮತ್ತೆ ವಾಪಸ್ ಕರೆಸಲಾಗಿದೆ. ಅವರಿಗೆ ಸರ್ಕಾರ ಇನ್ನು ಯಾವುದೇ ಹುದ್ದೆ ತೋರಿಲ್ಲ.   ಈ ಕುರಿತು ಮಾಧ್ಯಮಗಳಿಗೆ ಕೋಪದಲ್ಲೇ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ನಾನು ಇಲ್ಲೇ ಇದ್ದೀನಲ್ಲಪ್ಪಾ, ಇಲ್ಲೆ ಇದ್ದೀನಿ. ವರ್ಗಾವಣೆ ಆಗಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದೆ ಆಕ್ಸಿಜನ್ ಮಾರಾಟ ದಂಧೆ

ಬಿಜೆಪಿ ಮುಖಂಡರ ಒಂದು ಗುಂಪು ಜಿಲ್ಲಾದಿಕಾರಿ ರವಿ ಅವರ ವರ್ಗಾವಣೆ ಮಾಡದಂತೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿದೆ ಎಂದು ಮೂಲಗಳು ತಿಳಿಸಿವೆ.  ಈ ಗುಂಪು ರಾಜ್ಯ ಹೈ ಕೋರ್ಟ್  ಆಕ್ಸಿಜನ್‌ ದುರಂತದ  ಪ್ರಕರಣದ ತನಿಖೆ ನಡೆಸಲು ನೇಮಿಸಿರುವ  ಏಕಸದಸ್ಯ ಆಯೋಗವು ತನಿಖೆ ನಡೆಸಿ ತಪ್ಪಿತಸ್ಥರನ್ನು ಗುರುತಿಸುವವರೆಗೆ  ರವಿ ಅವರನ್ನು ವರ್ಗಾವಣೆ ಮಾಡದಂತೆ  ಪ್ರಬಲ ಒತ್ತಡ ಹೇರಿದೆ ಎಂದು ಮೂಲಗಳು ತಿಳಿಸಿವೆ. ಈ ಗುಂಪು  ಚಾಮರಾಜನಗರಕ್ಕೆ  ಅಕ್ಸಿಜನ್‌ ಸರಬರಾಜಿನಲ್ಲಿ ತಡೆ ಉಂಟಾಗಿದ್ದಕ್ಕೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಅವರು  ಆಕ್ಸಿಜನ್‌ ಸರಬರಾಜುದಾರರಿಗೆ ಮೌಕಿಕವಾಗಿ ಸೂಚಿಸಿದ್ದೇ ಕಾರಣ ಎಂದು ಪ್ರತಿಪಾದಿಸುತಿದ್ದು  ಹೈ ಕೋರ್ಟ್‌ ನ ಮೂವರ ಸದಸ್ಯರ ಸಮಿತಿ ಈ ಕುರಿತ ಅರೋಪದ ಬಗ್ಗೆ  ತನಿಖೆಯನ್ನೇ ಮಾಡದೆ  ರೋಹಿಣಿ ಅವರಿಗೆ ಕ್ಲೀನ್‌ ಚಿಟ್‌ ನೀಡಿದೆ ಎಂದು  ಹೇಳುತ್ತಿದೆ. ಹಾಗೊಂದು ವೇಳೆ ವರ್ಗಾವಣೆ ಮಾಡುವುದೇ ಆದಲ್ಲಿ ಇಬ್ಬರೂ ಜಿಲ್ಲಾಧಿಕಾರಿಗಳನ್ನೂ ವರ್ಗವಣೆ ಮಾಡಿ ಎಂದು ಪಟ್ಟು ಹಿಡಿದಿದೆ ಎಂದು ಹೇಳಲಾಗಿದ್ದು ಒಟ್ಟಿನಲ್ಲಿ ಈ ಹಗ್ಗ ಜಗ್ಗಾಟ ಈಗಲೂ ಮುಂದುವರೆದಿದೆ ಎನ್ನಲಾಗಿದೆ.

Previous Post

ಸಿ.ಸಿ ಪಾಟೀಲ್ ಹಾಗೂ ಎಚ್.ಕೆ ಪಾಟೀಲ್ ನಡುವೆ ಮುಂದುವರೆದ ವೆಂಟಿಲೇಟರ್ ಟಾಕ್ ವಾರ್…!

Next Post

ದನಿಗಳನ್ನು ಅಡಗಿಸಿ-ಜೀವಗಳನ್ನಾದರೂ ಕಾಪಾಡುವಿರಾ..?

Related Posts

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
0

ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ...

Read moreDetails
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ದನಿಗಳನ್ನು ಅಡಗಿಸಿ-ಜೀವಗಳನ್ನಾದರೂ ಕಾಪಾಡುವಿರಾ..?

ದನಿಗಳನ್ನು ಅಡಗಿಸಿ-ಜೀವಗಳನ್ನಾದರೂ ಕಾಪಾಡುವಿರಾ..?

Please login to join discussion

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada