• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತಾಲಿಬಾನ್‌ಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಂತಿ ಸಭೆ ರದ್ದುಪಡಿಸಿದ ಪಾಕ್

ಫಾತಿಮಾ by ಫಾತಿಮಾ
July 17, 2021
in ದೇಶ, ವಿದೇಶ
0
ತಾಲಿಬಾನ್‌ಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಂತಿ ಸಭೆ ರದ್ದುಪಡಿಸಿದ ಪಾಕ್
Share on WhatsAppShare on FacebookShare on Telegram

ಉಜ್ಬೇಕಿಸ್ತಾನದ ರಾಜಧಾನಿ ತಾಷ್ಕೆಂಟ್ನಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ, ಪಾಕಿಸ್ತಾನ ಸರ್ಕಾರದ ವಾಗ್ದಾಳಿ ನಡೆಸುತ್ತಾ ಇಸ್ಲಾಮಾಬಾದ್ ಅಫ್ಘಾನಿಸ್ತಾನದಲ್ಲಿ ಹಿಂಸಾಚಾರವನ್ನು ಹುಟ್ಟುಹಾಕುತ್ತಿದೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಇಸ್ಲಾಮಾಬಾದ್ನಲ್ಲಿ ಶನಿವಾರ ಆಯೋಜಿಸಲು ಉದ್ದೇಶಿಸಿದ್ದ ಅಫ್ಘಾನಿಸ್ತಾನದಲ್ಲಿನ ಶಾಂತಿ ಕುರಿತ ಮೂರು ದಿನಗಳ ಸಮಾವೇಶವನ್ನು ಪಾಕಿಸ್ತಾನ ತಾತ್ಕಾಲಿಕವಾಗಿ ರದ್ದುಗೊಳಿಸಿ ಅದನ್ನು ಈದ್ ಉಲ್ ಅಝ್ಹಾವರೆಗೆ ಮುಂದೂಡಿದೆ.

ADVERTISEMENT

ಕಳೆದ ತಿಂಗಳಲ್ಲಿ 10,000 ಕ್ಕೂ ಹೆಚ್ಚು ಭಯೋತ್ಪಾದಕರು ಪಾಕಿಸ್ತಾನದಿಂದ ತಮ್ಮ ದೇಶಕ್ಕೆ ಬಂದಿದ್ದಾರೆ ಎಂದು ಘನಿ ಹೇಳಿದ್ದಾರೆ. ಇದಲ್ಲದೆ, ಅಫಘಾನ್ ಸೈನಿಕರೊಂದಿಗಿನ ಘರ್ಷಣೆಯ ನಂತರ ತಾಲಿಬಾನ್ ಉಗ್ರರಿಗೆ ಪಾಕಿಸ್ತಾನದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಘನಿ ಹೇಳಿದ್ದಾರೆ. ಅಫ್ಘಾನಿಸ್ತಾನದ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಅವರು ಪಾಕಿಸ್ತಾನದ ವಾಯುಪಡೆಯು ಚಮನ್ ಮತ್ತು ಸ್ಪಿನ್ ಬೋಲ್ಡಾಕ್ ಗಡಿ ಪ್ರದೇಶಗಳಲ್ಲಿನ ತಾಲಿಬಾನ್ ಉಗ್ರರಿಗೆ ವಾಯು ಬೆಂಬಲವನ್ನು ನೀಡುತ್ತಿದೆ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಆದರೆ ಈ ಹೇಳಿಕೆಯನ್ನು ತಿರಸ್ಕರಿಸಿದ ಪಾಕಿಸ್ತಾನದ ವಿದೇಶಾಂಗ ಕಚೇರಿ “ಇಂತಹ ಹೇಳಿಕೆಗಳು ಅಫ್ಘಾನ್ ಒಡೆತನದ ಮತ್ತು ಅಫಘಾನ್ ನೇತೃತ್ವದ ಪರಿಹಾರದಲ್ಲಿ ಪಾತ್ರ ವಹಿಸುವ ಪಾಕಿಸ್ತಾನದ ಪ್ರಾಮಾಣಿಕ ಪ್ರಯತ್ನಗಳನ್ನು ಹಾಳುಮಾಡುತ್ತವೆ” ಎಂದು ಹೇಳಿದೆ.

ಅಫ್ಘಾನ್ ಪಡೆ ಮತ್ತು ಕಂದಹಾರ್ನಲ್ಲಿ ತಾಲಿಬಾನ್ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ಹೋರಾಟ ನಡೆಯುತ್ತಿದೆ. ಇತ್ತೀಚಿನ ವಾರಗಳಲ್ಲಿ ತಾಲಿಬಾನ್ ಉಗ್ರರು ಡಜನ್ಗಟ್ಟಲೆ ಜಿಲ್ಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಯುಎಸ್ ಮತ್ತು ಪಾಶ್ಚಿಮಾತ್ಯ ಸೈನ್ಯವನ್ನು ಅಫ್ಘಾನಿಸ್ತಾನದಿಂದ ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವ ಮುನ್ನ ದೇಶದ ಮೂರನೇ ಒಂದು ಭಾಗದಷ್ಟು ಜನರನ್ನು ತಾಲಿಬಾನ್ ನಿಯಂತ್ರಿಸಲಿದೆ ಎಂದು ಈಗಾಗಲೇ ರಾಜಕೀಯ ಪಂಡಿತರು ಅಭಿಪ್ರಾಯ ಪಟ್ಟಿದ್ದಾರೆ.

ಕಳೆದ ವಾರ, ತಾಲಿಬಾನ್ ಅವರು ಈಗ ಅಫ್ಘಾನಿಸ್ತಾನದ ಶೇಕಡಾ 85 ರಷ್ಟು ಭೂಪ್ರದೇಶವನ್ನು ತಾವು ನಿಯಂತ್ರಿಸುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದರು.

ಯುಎಸ್ ಮತ್ತು ಮಿತ್ರ ಪಡೆಗಳ ಸಾಂಪ್ರದಾಯಿಕ ಭದ್ರಕೋಟೆಯಾಗಿದ ಉತ್ತರ ಅಫ್ಘಾನಿಸ್ತಾನದಲ್ಲಿ 1,000ಕ್ಕೂ ಹೆಚ್ಚು ಅಫಘಾನ್ ಸೈನಿಕರು ಕಳೆದ ವಾರ ಗಡಿಯುದ್ದಕ್ಕೂ ಓಡಿ ಉತ್ತರ ತಜಕಿಸ್ತಾನ ತಲುಪಿದ್ದರು. ಇರಾನ್ ಸರ್ಕಾರವು ನೂರಾರು ಅಫ್ಘಾನ್ ಸೈನಿಕರು ಇರಾನ್ ಗಡಿ ದಾಟಿದ್ದಾರೆ ಎಂದು ಹೇಳಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಾವು ಅಫ್ಘಾನಿಸ್ತಾನದ 85 ಶೇಕಡಾ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಹೇಳಿಕೊಂಡಿರುವ ತಾಲಿಬಾನ್ ಹೇಳಿಕೆಯನ್ನು ನಂಬಲೇ ಬೇಕಾಗಿದೆ. ಪ್ರಮುಖ ಗಡಿಗಳನ್ನು ತಮ್ಮ ವಶಕ್ಕೆ ತೆಗೆದುಕೊಳ್ಳುವುದು ತಾಲಿಬಾನ್ಗೆ ಗಮನಾರ್ಹ ಆದಾಯವನ್ನು ನೀಡುತ್ತದೆ ಮತ್ತು ಕಾಬೂಲ್ ಸರ್ಕಾರದೊಂದಿಗೆ ಮುಂದಿನ ಯಾವುದೇ ಮಾತುಕತೆಗಳಲ್ಲಿ ತಮ್ಮ ಕೈಯನ್ನು ಬಲಪಡಿಸಲು ಸಹಾಯ ಮಾಡಲಿದೆ.

ಅಫ್ಘಾನ್ನಲ್ಲಿ ನಡೆಯುತ್ತಿರುವ ಅಂತರ್ಯುದ್ಧದಿಂದ ಭಾರತ ಸೇರಿದಂತೆ ಜಗತ್ತಿನಾದ್ಯಂತ ಆತಂಕ ಮನೆ ಮಾಡಿದೆ. ಆಗಸ್ಟ್ ಅಂತ್ಯದ ವೇಳೆಗೆ ಯುಎಸ್ ತನ್ನ ಸೈನ್ಯವನ್ನು ಅಫ್ಘಾನಿಸ್ತಾನದಿಂದ ಸಂಪೂರ್ಣವಾಗಿ ಹಿಂದೆಗೆಯಲಿದೆ ಎಂದು ಘೋಷಿಸಿದ್ದು ಈ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಇನ್ಪುಟ್ಸ್: ಪಿಟಿಐ

Previous Post

ಸಂವಿಧಾನ ವಿರೋಧಿಸುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ

Next Post

ನಡ್ಡಾ, ಬಿಎಸ್‌ವೈ ಭೇಟಿ; ʼಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ನನ್ನ ಮೇಲೆ ಹೊರಿಸಿದ್ದಾರೆʼ – ಬಿಎಸ್‌ವೈ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
Next Post

ನಡ್ಡಾ, ಬಿಎಸ್‌ವೈ ಭೇಟಿ; ʼಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ನನ್ನ ಮೇಲೆ ಹೊರಿಸಿದ್ದಾರೆʼ - ಬಿಎಸ್‌ವೈ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada