ಪಾಪಿ ಪಾಕಿಸ್ತಾನ (Pakistan) ಯಾಕೋ ಸುಮ್ಮನಾಗುವಂತೆ ಕಾಣುತ್ತಿಲ್ಲ. ಇಂದು ಮುಂಜಾನೆ ಪಾಕಿಸ್ತಾನ ಮತ್ತೆ ಭಾರತದ (India) ಮೇಲೆ ವಾಯು ದಾಳಿ ನಡೆಸಲು ಮುಂದಾಗಿದ್ದು, ಕಾಶ್ಮೀರದ ಶ್ರೀನಗರದ (Sri nagar) ಮೇಲೆ ಗುರಿಯಿಟ್ಟು ದಾಳಿ ನಡೆಸುವ ಪ್ರಯತ್ನ ಮಾಡಿದೆ.

ಆದ್ರೆ ಈ ಸಂಭಾವ್ಯ ದಾಳಿಯನ್ನು ನಿರೀಕ್ಷಿಸಿದ್ದ ಭಾರತ, ಪಾಕಿಸ್ತಾನ ನಡೆಸಿದ ಈ ದಾಳಿಯನ್ನ ಯಶಸ್ವಿಯಾಗಿ ಹಿಮ್ಮೆಟ್ಟಿಸಿ ವಿಫಲಗೊಳಿಸಿದೆ ಎನ್ನಲಾಗಿದೆ. ಹೀಗಾಗಿ ಕಾಶ್ಮೀರದಲ್ಲಿ (Kashmir) ಯಾವುದೇ ಹಾನಿ ಅಥವಾ ಸಾವುನೋವು ಸಂಭವಿಸಿಲ್ಲ.

ಆದ್ರೆ ಮತ್ತೊಂದೆಡೆ ರಾಜೌರಿಯಲ್ಲಿ ಪಾಕಿಸ್ತಾನದ ಶೆಲ್ ದಾಳಿ (Shelling) ಮುಂದುವರೆಸಿದ್ದು, ಈ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದ್ದಾರೆ. ಈ ಕುರಿತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿ ಖಾತ್ರಿ ಪಡಿಸಿದ್ದಾರೆ.