ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಮಹಾರಾಷ್ಟ್ರ ಮುಗಿಸಿ ಮಧ್ಯಪ್ರಧೇಶ ಪ್ರವೇಶಿಸಿದ್ದು ಯಾತ್ರೆಯೂ ರಾಜ್ಯದಲ್ಲಿ ಜನಮನ್ನಣೆ ಗಳಿಸುವಲ್ಲಿ ಯಶಸ್ವಿಯಾಗಿದೆ.
ಇನ್ನು ಯಾತ್ರೆಯೂ ಮಧ್ಯಪ್ರದೇಶದ ಕರ್ಗಾಂವ್ ಜಿಲ್ಲೆಯಲ್ಲಿ ಸಾಗುತ್ತಿದ್ದು ಪಾದಯಾತ್ರೆಯ ವೇಳೆ ಕೆಲವು ಕಿಡಿಗೇಡಿಗಳು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗುವ ಮೂಲಕ ಯಾತ್ರೆಯನ್ನು ವಿವಾದದ ಕೇಂದ್ರ ಬಿಂದುವನ್ನಾಗಿಸಿದ್ದಾರೆ.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಬಾಲಿವುಡ್ ನಟಿ ರಿಚಾ ಚಡ್ಡಾ ಯಾತ್ರೆ ಕೂಡಿಕೊಳ್ಳುವ ಬಗ್ಗೆ ರಾಹುಲ್ ಗಾಂಧಿಗೆ ಮನವಿ ಮಾಡಿರುವ ಬೆನ್ನಲ್ಲೇ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.
ವಿಡಿಯೋದಲ್ಲಿ ಕಂಡು ಬರುವ ಹಾಗೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಹಾಗೂ ಇತರೆ ಕಾಂಗ್ರೆಸ್ ನಾಯಕರು ಹೆಜ್ಜೆ ಹಾಕುತ್ತಿರುವ ಸಮಯದಲ್ಲಿ ಘೋಷಣೆ ಕೂಗುವುದು ಕೇಳಿ ಬರುತ್ತದೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಇದು ಬಿಜೆಪಿಯವರ ಕೊಳಕು ರಾಜಕಾರಣದ ಪರಮಾವಧಿ ಎಂದು ಕಿಡಿಕಾರಿದ್ದಾರೆ ಮತ್ತು ಬಿಜೆಪಿ ನಾಯಕರ ವಿರುದ್ದ ಪ್ರಕರಣವನ್ನ ದಾಖಲಿಸಿಕೊಂಡು ಕಠಿಣ ಕಾನೂನು ಕ್ರಮವನ್ನ ಜರುಗಿಸುವಂತೆ ಆಗ್ರಹಿಸಿದ್ದಾರೆ.