
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಿಡಿತದಲ್ಲಿದೆ – ಪರಮೇಶ್ವರ್ (Karnataka home minister)
ಬಿಜೆಪಿಯವರು ಹೇಳುವ ಹಾಗೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಎಲ್ಲವೂ ನಮ್ಮ ಹಿಡಿತದಲ್ಲಿದೆ. ಚುನಾವಣಾ ಸಂದರ್ಭದಲ್ಲಿ ಸುಖಾಸುಮ್ಮನೆ ಬಿಜೆಪಿಯವರು ಕೋಮು ಸೌಹಾರ್ದತೆಯನ್ನು ಕದಡುವ ಕೆಲಸಕ್ಕೆ ಮುಂದಾಗುತ್ತಾರೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ರೋಪಿಸಿದ್ದಾರೆ.ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ? (Karnataka Home Minister G Parameshwara)

ಗದಗದಲ್ಲಿ ಆಗಿರುವ ನಾಲ್ಕು ಮರ್ಡರ್ ಕುಟುಂಬಕ್ಕೆ ಸಂಬಂಧಿಸಿರುವ ಘಟನೆ ಎಂಬ ಮಾಹಿತಿ ಇದೆ. ಇದರ ಬಗ್ಗೆ ಇನ್ನು ತನಿಖೆ ಪ್ರಗತಿಯಲ್ಲಿದೆ. ಇತ್ತ ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ, ಆ ಇಬ್ಬರು ಯುವಕ-ಯುವತಿ ಪರಸ್ಪರ ಪ್ರೀತಿಸುತ್ತಿದ್ರು. ಅದರಲ್ಲಿ ಕುಟುಂಬದ ವಿರೋಧ ವ್ಯಕ್ತಪಡಿಸಿದ್ದು, ಹುಡುಗಿ ಪ್ರೀತಿ ನಿರಾಕರಿಸಿದ್ದನ್ನು ಸಹಿಸಲಾಗದ ಹುಡುಗ ಚಾಕುವಿನಿಂದ ಆಕೆಯನ್ನು ಇರಿದು ಕೊಲೆ ಮಾಡಿದ್ದಾನೆ.ಇನ್ನು ಬೆಂಗಳೂರಿನ ಡಬಲ್ ಮರ್ಡರ್, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಆಗಿರುವುದು.

ಇದಕ್ಕೆ ಬಿಜೆಪಿಯವರು ರಾಜಕೀಯ ಬಣ್ಣ ಲೇಪಿಸುವುದು ಎಷ್ಟರಮಟ್ಟಿಗೆ ಸರಿ? ಇನ್ನು ಚುನಾವಣಾ ಹೊಸ್ತಿಲಿನಲ್ಲಿ ಇಂತಹ ಘಟನೆಗಳನ್ನು ಮಾಡಿಸುವುದು ಅವರೇ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಿಜೆಪಿಗರ ವಿರುದ್ಧ ಕಿಡಿಕಾರಿದ್ದಾರೆ.