ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಿರುವ ಪವಿತ್ರಾ ಗೌಡಗೆ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್ ನೀಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿ 6024 ವಿಚಾರಣಾಧೀನ ಖೈದಿ ನಂಬರ್ ನೀಡಿದ್ದಾರೆ.
ಸದ್ಯ ಮಹಿಳಾ ವಿಭಾಗದ ಡಿ ಬ್ಯಾರಕ್ ನಲ್ಲಿ ಪವಿತ್ರಾ ಗೌಡಾಳನ್ನ ಇರಿಸಲಾಗಿದ್ದು, ಹೈಫೈ ಜೀವನ ಲೀಡ್ ಮಾಡಿದ್ದ ಪವಿತ್ರಾಗೆ ಜೈಲಿನಲ್ಲಿ ಮುದ್ದೆ ಮುರಿಯೋ ಸ್ಥಿತಿ ಬಂದಿದೆ.