ಹಿಂದೂ ಕಾರ್ಯಕರ್ತ ಎನ್ನಲಾದ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಆರೋಪಿಗೆ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಹುದ್ದೆ ನೀಡಿದ್ದ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದು, ಇದು ವಿರೋಧ ಪಕ್ಷದವರು ಮಾಡಿರುವ ಆಯ್ಕೆ ಎಂದಿದ್ದಾರೆ.
ಹೌದು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿಗೆ ನಮ್ಮ ಕಡೆಯಿಂದ 50% ಜನ ವಿರೋಧ ಪಕ್ಷದಿಂದ 50% ಜನ ಕೊಡಬೇಕು ಎಂಬ ತೀರ್ಮಾನ ಆಗಿತ್ತು. ನಾವು ಕೊಟ್ಟಿರುವ ಪಟ್ಟಿ ಸರಿ ಇದೆ. ವಿರೋಧ ಪಕ್ಷದವರು ಕೊಟ್ಟ ಪಟ್ಟಿಯಲ್ಲಿ ಅಣ್ಣಿಗೇರಿ ಇದ್ದರು. ಇದು ಸರಿಯಲ್ಲ ಎಂದು ನಾನು ಹೇಳಿದಾಗ ಈ ಪಟ್ಟಿಯನ್ನು ರದ್ದು ಮಾಡಿದ್ದಾರೆ.
ಪರೇಶ್ ಮೆಸ್ತಾ ಹತ್ಯೆ ವಿರುದ್ಧವೇ ಹೋರಾಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಇದೀಗ ಆರೋಪಿಗೆ ಸ್ಥಾನವನ್ನು ಕೊಟ್ಟಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಸ್ಥಳೀಯ ಜನಪ್ರತಿನಿಧಿಗಳ ಸಹಕಾರದಿಂದಲೇ ಆರೋಪಿಗೆ ಉಪಾಧ್ಯಕ್ಷ ಸ್ಥಾನವನ್ನ ನೀಡಿದ್ದು, ಬಿಜೆಪಿಗೆ ಏನು ನೈತಿಕತೆ ಇದೆ ಎಂದು ವಿರೋಧಗಳು ವ್ಯಕ್ತವಾದ ಹಿನ್ನೆಲೆ ಆಕ್ರೋಶಕ್ಕೆ ಮಣಿದು ರಾಜ್ಯ ವಕ್ಫ್ ಮಂಡಳಿ ಆದೇಶ ತಡೆಹಿಡಿದಿದೆ.