ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಪರಿಷತ್ ಚುನಾವಣೆ ಎದುರಾಗಿದ್ದು, ಬಿಜೆಪಿ-ಜೆಡಿಎಸ್ (BJP-jds) ಮೈತ್ರಿ ಪರಿಷತ್ ಚುನಾವಣೆಯಲ್ಲೂ ಮುಂದುವರೆದಿದೆ. ಇದು ಕಾಂಗ್ರೆಸ್ ಗೆ ಸವಾಲಾಗಿದ್ದು, ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
![](https://pratidhvani.com/wp-content/uploads/2024/03/Congress-BJP-JDS-2-1024x576.jpg)
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (congress government) ಅಸ್ತಿತ್ವದಲ್ಲಿದೆ. ಪಕ್ಷದ ಆರು ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ನಮಗಿದೆ. ಪದವೀಧರರ ಹಾಗೂ ಶಿಕ್ಷಕರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅರಿವಿದೆ. ಇವರ ಬದುಕಿನ ಬಗ್ಗೆ ನಮಗೆ ಕಾಳಜಿ ಇರುವ ಕಾರಣ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಇವರ ಸಮಸ್ಯೆಗಳ ನಿವಾರಣೆಗೆ ಕೆಲಸ ಮಾಡಿದ್ದೇವೆ ಎಂದು ಹೇಳಿದರು.
ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ (Election manifesto) ನೂತನ ಶಿಕ್ಷಣ ನೀತಿ ಸೇರಿದಂತೆ ಇತರೇ ಸಮಸ್ಯೆಗಳ ನಿವಾರಣೆ ಬಗ್ಗೆ ಹೇಳಿದ್ದೇವೆ. ನಿರುದ್ಯೋಗಿ ಪದವೀಧರರ ಸಮಸ್ಯೆ ನಿವಾರಣೆಗೆ ನಾವು ಕೆಲಸ ಮಾಡಿದ್ದೇವೆ. ಹಿಂದಿನ ಬಿಜೆಪಿ (BJP) ಸರ್ಕಾರ ಈ ವರ್ಗಕ್ಕೆ ಏನಾದರೂ ಸಹಾಯ ಮಾಡಿದೆಯೇ? ಇಲ್ಲ. ಒಟ್ಟಿನಲ್ಲಿ ಇವರ ಕೆಲಸಗಳು ಆಗಬೇಕು. ಜವಾಬ್ದಾರಿ ನಮ್ಮದು. ಶಿಕ್ಷಕರು, ಪದವೀಧರರ ಮೇಲೆ ನಮಗೆ ವಿಶ್ವಾಸವಿದೆ. ” ಎಂದು ಹೇಳಿದರು.