• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನ ಅಂತಿಮ: ಪ್ರತಾಪ್ ಸಿಂಹ

ಪ್ರತಿಧ್ವನಿ by ಪ್ರತಿಧ್ವನಿ
September 9, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪ್ರತಾಪ್‌ ಸಿಂಹ

ಪ್ರತಾಪ್‌ ಸಿಂಹ

Share on WhatsAppShare on FacebookShare on Telegram

ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ADVERTISEMENT

ಮೈಸೂರಿನಲ್ಲಿ ಶನಿವಾರ (ಸೆಪ್ಟೆಂಬರ್ 9) ಸುದ್ದಿಗಾರರೊಂದಿಗೆ ಮಾತನಾಡಿ, ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಯಡಿಯೂರಪ್ಪನವರು ನಮ್ಮ ಪ್ರಶ್ನಾತೀತ ನಾಯಕರು. ಅವರು ಏಕಾಂಗಿಯಾಗಿ ರಾಜ್ಯ ಪ್ರವಾಸ ಮಾಡಿ ಪಕ್ಷ ಕಟ್ಟಿದವರು. ಅವರು ಏನೇ ತೀರ್ಮಾನ ಮಾಡಿದ್ದರೂ ಪಕ್ಷದ ಒಳತಿಗಾಗಿ ಮಾಡಿರುತ್ತಾರೆ. ರಾಜ್ಯದ ಜನ ಕಳೆದ 40 ವರ್ಷಗಳಿಂದಲೂ, ಪ್ರತಿ 5 ವರ್ಷಕ್ಕೊಮ್ಮೆ ರಾಜ್ಯ ಸರ್ಕಾರವನ್ನು ಬದಲಿಸುತ್ತಾ ಬಂದಿದ್ದಾರೆ. ಆದರೆ 2004ರ ಲೋಕಸಭಾ ಚುನಾವಣೆಯಿಂದ 2019ರವರೆಗೂ ನಿರಂತರವಾಗಿ ಬಿಜೆಪಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೆ ಹೆಚ್ಚಿನ ಬೆಂಬಲ ಸಿಗುತ್ತದೆ ಎಂದು ಹೇಳಿದರು.

ಪ್ರತಾಪ್‌ ಸಿಂಹ
ಪ್ರಧಾನಿ ನರೇಂದ್ರ ಮೋದಿ ಮತ್ತು ಎಚ್‌.ಡಿ.ದೇವೇಗೌಡ

ಬಿಜೆಪಿ-ಜೆಡಿಎಸ್ ನಡುವಿನ ಮೈತ್ರಿಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಆದರೆ ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲೂ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ. ನಾನು ಎರಡು ಬಾರಿ ಸಂಸದನಾಗಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದೇನೆ. ನನ್ನ ಅಭಿವೃದ್ದಿ ಕಾರ್ಯಗಳನ್ನು ನೋಡಿರುವ ಮೈಸೂರು ಕೊಡಗಿನ ಜನರು ಮತ ನೀಡುತ್ತಾರೆ. ಜನರು ಹಾಗು ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ಮುಂದಿನ ಚುನಾವಣೆಯಲ್ಲೂ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ತಲೆ ಕೆಡಿಸಕೊಳ್ಳುವುದಿಲ್ಲ ಎಂದರೆ ಸುಮ್ಮನಿರಿ. ಪದೇ ಪದೇ ಯಾಕೆ ಅದೇ ವಿಚಾರ ಮಾತನಾಡುತ್ತೀರಿ. ಜನ ನಿಮಗೆ ಅಧಿಕಾರ ಕೊಟ್ಟಿದ್ದಾರೆ. ಗ್ಯಾರೆಂಟಿ ಯೋಜನೆಗಳ ಬಗ್ಗೆ ಬಸ್ಸಿನಲ್ಲಿ ಸ್ಟಿಕ್ಕರ್ ಅಂಟಿಸಿಕೊಂಡು ಇರಬೇಡಿ. ಯಾವಾಗಲೂ ಚುನಾವಣೆ ರಾಜಕೀಯ ಮಾಡಿಕೊಂಡು ಇರಬೇಡಿ ಎಂದು ತಿಳಿಸಿದರು.

ಪ್ರತಾಪ್‌ ಸಿಂಹ
ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಿಷ ದಸರಾ ಆಚರಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ ಸವಾಲು. ಅದೇಗೆ ಮಾಡ್ತಾರೋ ಮಾಡಲಿ ನೋಡ್ತೀನಿ. ಯಾವ ಸರ್ಕಾರ ಬಂದರೂ ಮಹಿಷ ದಸರಾ ಆಚರಣೆ ಮಾಡುವಂತಿಲ್ಲ. ಇದರಿಂದ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಏನೇ ಕಷ್ಟ ಬಂದರೂ ಲಕ್ಷಾಂತರ ಮಂದಿ ಚಾಮುಂಡಿ ತಾಯಿಯ ಬಳಿಗೆ ಹೋಗುತ್ತಾರೆ. ವಾಸ್ತವ ಪರಿಸ್ಥಿತಿ ಹೀಗಿರುವಾಗ ತಾಯಿಯನ್ನು ತುಚ್ಛವಾಗಿ ಮಾತನಾಡುವವರಿಗೆ ಹೇಗೆ ಅವಕಾಶ ನೀಡುತ್ತಾರೆ? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.

ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಸೋಮಣ್ಣ ಹಾಗೂ ನಾವು ಸೇರಿ ಅನುಮತಿಗೆ ಅವಕಾಶ ಕೊಟ್ಟಿರಲಿಲ್ಲ. ಮೈಸೂರಿಗರು ಈ ವಿಚಾರದಲ್ಲಿ ಒಟ್ಟಾಗಬೇಕು. ನಿಮಗೆ ಏನೇ ಕಷ್ಟ-ಸುಖ ಬಂದರೂ ತಾಯಿ ಬಳಿ ಬೇಡಿಕೊಳ್ಳುತ್ತೀರಿ. ಅಂತಹ ತಾಯಿಗೆ ಅವಮಾನವಾಗುವಾಗ ನೀವೆಲ್ಲರೂ ಒಟ್ಟಿಗೆ ಹೋರಾಡಬೇಕು. ಮಹಿಷ ದಸರಾ ಆಚರಣೆ ಮಾಡುವ ನಾಲ್ಕು ಜನರ ಮನೆಗೆ ಹೋಗಿ ನೋಡಿ. ಅವರ ಹೆಂಡತಿಯರು ಸಹ ಚಾಮುಂಡಿ ತಾಯಿಯನ್ನು ಆರಾಧನೆ ಮಾಡುತ್ತಾರೆ. ಇವರಿಗೆ ಕನಿಷ್ಠ ಅವರ ಮನೆಯವರ ಭಾವನೆಗಳನ್ನು ಕೂಡ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಇಲ್ಲಿಗೆ ಬಂದು ಉದ್ದುದ್ದ ಮಾತನಾಡುತ್ತಾರೆ ಎಂದು ಟೀಕಿಸಿದರು.

ಪ್ರತಾಪ್‌ ಸಿಂಹ
ಎಚ್‌.ಡಿ.ದೇವೇಗೌಡ ಮತ್ತು ಬಿ.ಎಸ್‌.ಯಡಿಯೂರಪ್ಪ

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸ್ಪೀಡ್ ಲಿಮಿಟ್ ಹೆಚ್ಚಳಕ್ಕೆ ಹೆದ್ದಾರಿ ಪ್ರಾಧಿಕಾರ ಚಿಂತನೆ ವಿಚಾರ ಮಾತನಾಡಿ, 120 ಕಿ. ಮೀ. ವೇಗದಲ್ಲಿ ಚಲಿಸಬಹುದಾದ ಹೈವೇ ಮಾಡಿದ್ದೇವೆ. ಮೊದಲು ಜನರನ್ನು ಶಿಸ್ತುಬದ್ಧಗೊಳಿಸೋಣ. ಈಗ ಟ್ರಕ್ ಲೈನ್ ಮಾಡುವ ಬಗ್ಗೆ ಕ್ರಮ ವಹಿಸಲಾಗುತ್ತಿದೆ. ಸಣ್ಣಪುಟ್ಟ ಕಾರುಗಳನ್ನು ಇಟ್ಟುಕೊಂಡು 120 ಕಿ ಮೀ ವೇಗದಲ್ಲಿ ಹೋದರೆ ಅಪಘಾತ ಆಗುತ್ತದೆ. ಲೈನ್ ಡಿಸಿಪ್ಲೀನ್ ಬರಲಿ, ಅಪಘಾತಗಳ ಸಂಖ್ಯೆ ಕಡಿಮೆಯಾಗಲಿ. ಅದೆಲ್ಲವನ್ನೂ ನೋಡಿಕೊಂಡು ವೇಗದ ಮಿತಿ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಪ್ರತಾಪ್ ಸಿಂಹ ಹೇಳಿದರು.

Tags: BJP JDS AllianceCM SiddaramaiahPratap Simhaಪ್ರತಾಪ್‌ ಸಿಂಹಬಿಜೆಪಿ ಜೆಡಿಎಸ್‌ ಮೈತ್ರಿಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ನಿಜಗುಣಾನಂದ ಸ್ವಾಮೀಜಿ ಅವರಿಗೆ ಕೊಲೆ ಬೆದರಿಕೆ ಪತ್ರ

Next Post

ಸೆಪ್ಟಂಬರ್ 28ಕ್ಕೆ ರಾಘವ್ ಲಾರೆನ್ಸ್-ಕಂಗನಾ ನಟನೆಯ ‘ಚಂದ್ರಮುಖಿ 2’ ರಿಲೀಸ್

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ಚಂದ್ರಮುಖಿ 2

ಸೆಪ್ಟಂಬರ್ 28ಕ್ಕೆ ರಾಘವ್ ಲಾರೆನ್ಸ್-ಕಂಗನಾ ನಟನೆಯ ‘ಚಂದ್ರಮುಖಿ 2’ ರಿಲೀಸ್

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada