• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
October 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಚನ್ನಪಟ್ಟಣ:“ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.

ADVERTISEMENT

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಕೇಳಿದಾಗ, “ನಾವು ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಸಂಗ್ರಹಣೆ ಮಾಡಲು ಮುಂದಾಗಿದ್ದೇವೆ. ನಿರಂತರವಾಗಿ ಎರಡು ಮೂರು ದಿನ ಚರ್ಚೆ ನಡೆಸಿ ಪಕ್ಷವು ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ” ಎಂದು ತಿಳಿಸಿದರು.

ಅಭ್ಯರ್ಥಿ ಯಾರಾಗುತ್ತಾರೆ ಎಂದು ಕೇಳಿದಾಗ, “ನಾಮಪತ್ರ ಸಲ್ಲಿಕೆಗೆ ಇನ್ನು 25ನೇ ತಾರೀಕಿನವರೆಗೂ ಸಮಯವಿದೆ” ಎಂದರು.ನೀವು ಕಣಕ್ಕಿಳಿಯಬೇಕು ಎಂದು ಒತ್ತಡ ಬರುತ್ತಿದೆ ಎಂದು ಕೇಳಿದಾಗ, “ನನಗೆ ಜನ ವಿಶ್ರಾಂತಿ ನೀಡಿದ್ದು, ನಾನು ವಿಶ್ರಾಂತಿಯಲ್ಲಿದ್ದೇನೆ” ಎಂದು ತಿಳಿಸಿದರು.

ಪಕ್ಷ ಒತ್ತಾಯ ಮಾಡಿದರೆ ಏನು ಮಾಡುತ್ತೀರಿ ಎಂದು ಕೇಳಿದಾಗ, “ನನ್ನ ಆಚಾರ, ವಿಚಾರ, ಅಭಿಪ್ರಾಯವನ್ನು ನಾನು ಪಕ್ಷಕ್ಕೆ ತಿಳಿಸಿದ್ದೇನೆ” ಎಂದರು.ಅಚ್ಚರಿ ಅಭ್ಯರ್ಥಿ ಮೈತ್ರಿಕೂಟದಿಂದ ಬಂಡಾಯ ಎದ್ದು ಬರುವ ಅಭ್ಯರ್ಥಿಯಾಗಿರಬಹುದೇ ಎಂದು ಕೇಳಿದಾಗ, “ಅವರಿಗೂ ನಮಗೂ ಸಂಬಂಧವಿಲ್ಲ. ಮೈತ್ರಿಕೂಟದಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ, ಯಾರು ಸಿಡಿದೇಳುತ್ತಾರೆ, ಅವರ ವಿಚಾರಗಳ ಬಗ್ಗೆ ನಾವು ಚರ್ಚೆ ಮಾಡುವುದಿಲ್ಲ. ನಾವು ನಮ್ಮ ಪಕ್ಷದ ಸಂಘಟನೆ, ನಮ್ಮ ಪಕ್ಷದ ಕಾರ್ಯಕ್ರಮ, ನಮ್ಮ ಕಾರ್ಯಕರ್ತರ ವಿಚಾರದ ಬಗ್ಗೆ ಮಾತ್ರ ಚರ್ಚೆ ಮಾಡುತ್ತೇವೆ. ಕಳೆದ ಮೂರು ತಿಂಗಳಿಂದ ಉಪಮುಖ್ಯಮಂತ್ರಿಗಳು, ನಮ್ಮ ಕಾರ್ಯಕರ್ತರು ಹಗಲು ರಾತ್ರಿ ಅಭಿವೃದ್ಧಿ ಕೆಲಸಕ್ಕೆ ಚಾಲನೆ ನೀಡಿ ಚನ್ನಪಟ್ಟಣಕ್ಕೆ ಹೊಸ ದಿಕ್ಕು ನೀಡಿದ್ದಾರೆ. ಅದಕ್ಕೆ ಪೂರಕವಾಗಿ ನಾವು ಚುನಾವಣೆ ಮಾಡುತ್ತೇವೆ” ಎಂದು ತಿಳಿಸಿದರು.

ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಂಸ್ಥೆ 15ದಿನಗಳ ಹಿಂದೆಯೇ ಪ್ರಕರಣ ದಾಖಲಿಸಿಕೊಂಡಿದೆ. ಅವರು ಕಾನೂನು ಪ್ರಕಾರ ತಮ್ಮ ಕೆಲಸದ ಭಾಗವಾಗಿ ಮೂಡಾ ಕಚೇರಿ ಹಾಗೂ ಸಂಬಂಧಪಟ್ಟವರ ಮನೆ ಮೇಲೆ ದಾಳಿ ಮಾಡಿದ್ದಾರೆ. ಇದು ಪಾರದರ್ಶಕವಾದ ವಿಚಾರಣೆ. ಇಡಿ ತನಿಖೆ ಮಾಡಬೇಕಾದರೆ ಕೆಲವು ಪ್ರಕ್ರಿಯೆ ಪಾಲಿಸಬೇಕು. ಇದು ಅವರ ಕಾರ್ಯವೈಖರಿ.

ಇಡಿ ಸಂಸ್ಥೆ ಏನೇ ಮಾಡಿದರೂ ಮೂಡಾ ಪ್ರಕರಣದಲ್ಲಿ ಯಾವುದೇ ರೀತಿಯ ಹಣಕಾಸಿನ ವಹಿವಾಟು ನಡೆದಿಲ್ಲ. ನ್ಯಾಯಾಲಯದ ವಿಚಾರಣೆಯಲ್ಲೂ ಯಾವುದೇ ಹಂತದಲ್ಲಿ ಹಣಕಾಸಿನ ವಿಚಾರ ಚರ್ಚೆಯಾಗಿಲ್ಲ. ಇಡಿ ಅವರು ವಿಚಾರಣೆ ಮಾಡುವಾಗ ಹಣಕಾಸಿನ ಬಗ್ಗೆ ತನಿಖೆ ಮಾಡಬೇಕಾಗುತ್ತದೆ. ಆಗ ಅವರಿಗೆ ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂದು ಮನದಟ್ಟಾಗುತ್ತದೆ. ನಂತರ ಅವರು ಬಿ ರಿಪೋರ್ಟ್ ಹಾಕಲು ಅಗತ್ಯ ಕ್ರಮ ತೆಗೆದುಕೊಳ್ಳುತ್ತಾರೆ. ನನಗೆ ತಿಳಿದ ಪ್ರಕಾರ ಈ ಪ್ರಕರಣ ಸರ್ಕಾರದ ನಡುವೆ ಇರುವ ಪ್ರಕರಣವೇ ಹೊರತು, ಖಾಸಗಿ ವ್ಯಕ್ತಿಗಳ ನಡುವೆ ಇರುವ ಪ್ರಕರಣವಲ್ಲ. ಇಲ್ಲಿ ಖಾಸಗಿ ವ್ಯಕ್ತಿಗಳ ಹಸ್ತಕ್ಷೇಪವಿಲ್ಲ. ಇಲ್ಲಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಮೂಡಾ ಆಡಳಿತ ವೈಫಲ್ಯಗಳ ಬಗ್ಗೆ ಮಾತ್ರ ತನಿಖೆಯಾಗಲಿದೆ.

ಹಣಕಾಸು ವ್ಯವಹಾರವಾಗಿಲ್ಲವಾದರೆ ಇಡಿ ಪ್ರವೇಶ ಮಾಡಿದ್ದು ಹೇಗೆ ಎಂದು ಕೇಳಿದಾಗ, “ಲೋಕಾಯುಕ್ತ ತನಿಖೆಯಲ್ಲಿ ಸಂಶಯಾಸ್ಪದವಾಗಿ 120 ಬಿ ಸೆಕ್ಷನ್ ಹಾಕಲಾಗಿದ್ದು, ಇದರಿಂದ ಲೋಕಾಯುಕ್ತ ಪ್ರವೇಶವಾಗಿದೆ. ಈ ತನಿಖೆ ನಡೆದಾಗ ಸತ್ಯಾಂಶ ಹೊರಗೆ ಬರುತ್ತದೆ. ಇಡಿ ಅವರು ವಿಚಾರಣೆ ಮಾಡಲು ಹಣಕಾಸಿನ ವ್ಯವಹಾರವಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಸರ್ಕಾರ ಆರೋಪಮುಕ್ತವಾಗಲಿದೆ” ಎಂದರು.

ಇದು ರಾಜಕೀಯ ಪ್ರೇರಿತ ಕ್ರಮವೇ ಎಂದು ಕೇಳಿದಾಗ, “ಈ ಪ್ರಕರಣ ಹಾಗೂ ದಾಳಿಗಳು ರಾಜಕೀಯ ಪ್ರೇರಿತ. ಇದರಲ್ಲಿ ಯಾವುದೇ ರೀತಿಯ ಸತ್ಯಾಂಶವಿಲ್ಲ. ನ್ಯಾಯಾಲಯದಲ್ಲಿ ಎಲ್ಲಾ ವಿಚಾರಗಳು ಕೂಲಂಕುಶವಾಗಿ ವಾದ ವಿವಾದಗಳು ನಡೆದಿವೆ. ಇನ್ನು ಈ ತನಿಖೆಯನ್ನು ಲೋಕಾಯುಕ್ತ ಸಂಸ್ಥೆ ನಡೆಸುತ್ತಿದೆ. ಈ ಮಧ್ಯೆ ರಾಜಕೀಯವಾಗಿ ಬೆದರಿಕೆ ತಂತ್ರಗಳನ್ನು ಅನುಸರಿಸುತ್ತಿದ್ದಾರೆ. ಈ ಬೆದರಿಕೆಗೆ ಸರ್ಕಾರವಾಗಲಿ, ಮಾನ್ಯ ಮುಖ್ಯಮಂತ್ರಿಗಳಾಗಲಿ ಹೆದರುವ ಪ್ರಶ್ನೆಯಿಲ್ಲ” ಎಂದು ತಿಳಿಸಿದರು.

ವಾಲ್ಮೀಕಿ ಹಗರಣ ಪ್ರಕರಣದಲ್ಲಿ ಸಿಎಂ, ಡಿಸಿಎಂ ಹೆಸರು ಹೇಳಲು ಇಡಿ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ ಎಂಬ ನಾಗೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇಡಿ, ಆದಾಯ ತೆರಿಗೆ, ಸಿಬಿಐ ಕೇಂದ್ರ ಸರ್ಕಾರದ ಅಸ್ತ್ರವಾಗಿವೆ. ಇವುಗಳನ್ನು ತಮಗೆ ಬೇಕಾದ ರೀತಿಯಲ್ಲಿ ಬಳಸಲಾಗುತ್ತಿದೆ. ವಿರೋಧ ಪಕ್ಷಗಳ ಮೇಲೆ ಈ ಸಂಸ್ಥೆಗಳನ್ನು ಪ್ರಯೋಗಿಸುವುದು ಹೊಸತೇನಲ್ಲ. ಕಳೆದ 10 ವರ್ಷಗಳಿಂದ ಇದು ನಡೆದುಕೊಂಡು ಬಂದಿದ್ದು, ಈ ಅವಧಿಯಲ್ಲೂ ಮುಂದುವರಿಯುತ್ತಿದೆ. ಸರ್ಕಾರವನ್ನು ಅಸ್ಥಿರಗೊಳಿಸಲು, ನಾಯಕತ್ವಕ್ಕೆ ಧಕ್ಕೆ ತರಲು ಈ ಪ್ರಯತ್ನ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಸಿಎಂ, ಡಿಸಿಎಂ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಲಿಲ್ಲ ಎಂಬ ಆರೋಪದ ಬಗ್ಗೆ ಕೇಳಿದಾಗ, “ಪ್ರಧಾನಿಯೂ ಭೇಟಿ ನೀಡಿಲ್ಲ” ಎಂದು ತಿರುಗೇಟು ನೀಡಿದರು.

ಪ್ರಹ್ಲಾದ್ ಜೋಶಿ ಅವರು ಮುಕ್ತವಾಗಿ ಸತ್ಯಾಂಶ ತಿಳಿಸಲಿ: ಪ್ರಹ್ಲಾದ್ ಜೋಶಿ ಅವರ ಸೋದರ ಮತ್ತು ಸೋದರಿ ಜೆಡಿಎಸ್ ಅಭ್ಯರ್ಥಿಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಕೇಳಿದಾಗ, “ಅದು ಅವರವರ ಪಕ್ಷದ ವಿಚಾರ. ಇಲ್ಲಿ ಪ್ರಹ್ಲಾದ್ ಜೋಶಿ ಅವರು ಉತ್ತರ ನೀಡಬೇಕು. ನಾನು ಹೇಗೆ ಉತ್ತರ ನೀಡಲು ಸಾಧ್ಯ? ಈ ಪ್ರಕರಣದಲ್ಲಿ ನಾವೇನಾದರೂ ಮಾತನಾಡಿದರೆ ನಾವೇ ಈ ಪ್ರಕರಣ ಮಾಡಿಸಿದ್ದೇವೆ ಎಂದು ನಮ್ಮ ಮೇಲೆ ಆರೋಪ ಮಾಡುತ್ತಾರೆ. ಅವರಿಗೆ ಸಂಬಂಧಿಸಿದ ವಿಚಾರವನ್ನು ಅವರ ಬಳಿಯೇ ಕೇಳಿ. ಅವರು ಎಲ್ಲಾ ವಿಚಾರದಲ್ಲೂ ಮಾತನಾಡುತ್ತಾರೆ. ಅದೇ ರೀತಿ ಈ ವಿಚಾರದಲ್ಲೂ ಮುಕ್ತವಾಗಿ ಮಾತನಾಡಿ ಜನರಿಗೆ ಸತ್ಯಾಂಶವನ್ನು ತಿಳಿಸಲಿ” ಎಂದು ಹೇಳಿದರು.

Tags: Channapatna By Election:Congress Partydk sureshParty to field surprise candidate to win
Previous Post

ಸರ್ವಜ್ಞನಗರ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಚಾಲನೆ

Next Post

ಕಾಂಗ್ರೆಸ್‌ ಸಂಸದರಾದ ಜಿ.ಕುಮಾರ್ ನಾಯಕ್, ಇ.ತುಕಾರಾಂ ರಾಜೀನಾಮೆ ನೀಡಲಿ: ಲೆಹರ್ ಸಿಂಗ್ ಆಗ್ರಹ

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post

ಕಾಂಗ್ರೆಸ್‌ ಸಂಸದರಾದ ಜಿ.ಕುಮಾರ್ ನಾಯಕ್, ಇ.ತುಕಾರಾಂ ರಾಜೀನಾಮೆ ನೀಡಲಿ: ಲೆಹರ್ ಸಿಂಗ್ ಆಗ್ರಹ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada