• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜೀವ-ಜೀವನದ ನಡುವೆ ಜನರು ಸಿಲುಕಿಕೊಂಡಿದ್ದಾರೆ, ಲಾಕ್‌ಡೌನ್ ಬೇಡ: ಡಿ.ಕೆ ಶಿವಕುಮಾರ್

by
April 15, 2021
in ಕರ್ನಾಟಕ
0
ಜೀವ-ಜೀವನದ ನಡುವೆ ಜನರು ಸಿಲುಕಿಕೊಂಡಿದ್ದಾರೆ, ಲಾಕ್‌ಡೌನ್ ಬೇಡ:  ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

‘ಕೊರೊನಾ ವಿಚಾರವಾಗಿ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವುದು ಕೇವಲ ನನ್ನ ನಿರ್ಧಾರವಲ್ಲ. ಇದು ರಾಜ್ಯದ ವಿಚಾರ. ಈ ಬಗ್ಗೆ ನಮ್ಮ ನಾಯಕರ ಕುರಿತು ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ADVERTISEMENT

ಬುಧವಾರ ತಮ್ಮ ಸದಾಶಿವನಗರ ಹಾಗೂ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ಸರ್ಕಾರ ಈವರೆಗೂ ನಮ್ಮ ಸಲಹೆ ಕೇಳಿಲ್ಲ. ಅವರ ಇಚ್ಛೆಯಂತೆ ನಿರ್ಧಾರ ತೆಗೆದುಕೊಂಡಿದ್ದಾರೆ. ಪರಿಸ್ಥಿತಿ ಕೈಮೀರಿರುವ ಹಿನ್ನೆಲೆಯಲ್ಲಿ ಈಗ ಸರ್ವಪಕ್ಷ ಸಭೆ ಕರೆದಿದ್ದಾರೆ. ಅವರು ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇವೆ. ನಮಗೆ ಇನ್ನು ಅಧಿಕೃತವಾಗಿ ಮಾಹಿತಿ ಬಂದಿಲ್ಲ ಎಂದು ಹೇಳಿದ್ದಾರೆ. 

ಕೊರೊನಾ ಹೆಸರಿನಲ್ಲಿ ಸಾಕಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಅದನ್ನು ನಾವು ಪ್ರಶ್ನೆ ಮಾಡಿದರೂ ಲೆಕ್ಕಿಸದೆ, ನೀವು ಎಷ್ಟಾದರೂ ಅರಚಿಕೊಳ್ಳಿ ನಾವು ಮಾಡಿದ್ದೆ ಸರಿ ಎಂಬ ಧೋರಣೆ ಅನುಸರಿಸಿದ್ದಾರೆ. ಅವೈಜ್ಞಾನಿಕ ನೈಟ್ ಕರ್ಫ್ಯು ಅಗತ್ಯವಿಲ್ಲ. ಆದರೂ ಜಾರಿಗೊಳಿಸಿದ್ದಾರೆ ಎಂದು ಅವರು ಕಿಡಿ ಕಾರಿದ್ದಾರೆ.

ಕೇಂದ್ರ ಸರ್ಕಾರ ಲಸಿಕೆ ರಫ್ತು ನಿಲ್ಲಿಸಿ ದೇಶದ ಜನರಿಗೆ ಮೊದಲು ನೀಡಲಿ ಎಂದು ಅವರು ಆಗ್ರಹಿಸಿದ್ದಾರೆ.

ವೈಯಕ್ತಿಕವಾಗಿ ಲಾಕ್ ಡೌನ್ ವಿಚಾರದಲ್ಲಿ ಹೇಳುವುದಾದರೆ ಇದರ ಅಗತ್ಯವಿಲ್ಲ. ಜನ ಈಗಾಗಲೇ ನರಳುತ್ತಿದ್ದಾರೆ. ಲಾಕ್ ಡೌನ್ ಅಗತ್ಯವಿಲ್ಲ. ಮುಂಜಾಗ್ರತೆ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು. ಅವರಿಗೆ ಈ ಪರಿಸ್ಥಿತಿ ನಿಭಾಯಿಸಲು ಆಗುತ್ತಿಲ್ಲ ಹೀಗಾಗಿ ನೆಪ ಹುಡುಕುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಜನರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಅವರಿಗೆ ಆರ್ಥಿಕ ನೆರವನ್ನೂ ನೀಡುತ್ತಿಲ್ಲ. ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಅಂತಾ ಹೇಳಿದರು, ರಾಜ್ಯ ಸರ್ಕಾರ 1600 ಕೋಟಿ ಪ್ಯಾಕೇಜ್ ಎಂದರು. ಯಾರಿಗೂ ಸಹಾಯವಾಗಿಲ್ಲ. ಒಂದು ಕಡೆ ಜೀವ, ಮತ್ತೊಂದು ಕಡೆ ಜೀವನ.  ಇವೆರಡರ ನಡುವೆ ಜನ ಸಿಲುಕಿದ್ದಾರೆ ಎಂದು ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.

ಉದ್ಯೋಗಸ್ಥರು ಮತ್ತು ಉದ್ಯೋಗದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗೆ ಬ್ಯಾಂಕ್ ಸಾಲದಲ್ಲಿ 6ತಿಂಗಳಿಂದ ಒಂದು ವರ್ಷದವರೆಗೂ ಬಡ್ಡಿ ಮನ್ನಾ ಮಾಡಲು ಆಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅವರು ಏನು ಮಾಡಬೇಕು? ಎಂದು ಪ್ರಶ್ನಿಸಿದ ಅವರು, ದೊಡ್ಡ ಹೋಟೆಲ್ ಗಳ ಸ್ಥಿತಿಯೂ ಗಂಭೀರವಾಗಿದ್ದು, ಎಲ್ಲರೂ ಮಾರಿಕೊಳ್ಳುವ ಸ್ಥಿತಿ ತಲುಪಿದ್ದಾರೆ. ಸರ್ಕಾರ ಪರಿಹಾರ ನೀಡುತ್ತೇವೆ ಎಂದವರಿಗೆ ಸರಿಯಾಗಿ ಪರಿಹಾರ ತಲುಪಿಲ್ಲ. ಏಳೂವರೆ ಲಕ್ಷ ಚಾಲಕರಿಗೆ ಪರಿಹಾರ ಎಂದರು ಆದರೆ ಯಾರಿಗೂ ಕೊಟ್ಟಿಲ್ಲ. ಯಾರಿಗೆ ಕೊಟ್ಟಿದ್ದೀರ ಎಂದು ಪಟ್ಟಿಕೊಡಿ ಅಂತಾ ಕೇಳಿದೆವು. ಸಂಪ್ರದಾಯ ವೃತ್ತಿ ಅವಲಂಬಿಸಿರುವವರಿಗೂ ಯಾವುದೇ ಪರಿಹಾರ ಕೊಟ್ಟಿಲ್ಲ ಎಂದು ಅವರು ಹೇಳಿದ್ದಾರೆ.

ಇದೆಲ್ಲದರ ಮಧ್ಯೆ ಬೆಲೆ ಏರಿಕೆ. ರಸಗೊಬ್ಬರ ಬೆಲೆ ಶಿಖರಕ್ಕೇರಿದೆ.  ಸೀಮೆಂಟ್, ಕಬ್ಬಿಣ ಎಲ್ಲವೂ ಬೆಲೆ ಹೆಚ್ಚಾಗಿದೆ.  

ಅಂಬೇಡ್ಕರ್ ಅವರ ಸಂವಿಧಾನವೇ ನಮಗೆ ಭಗವದ್ಗೀತೆ, ಕುರಾನ್, ಬೈಬಲ್:

ಇಂದು ಅಂಬೇಡ್ಕರ್ ಜಯಂತಿ ಆಚರಣೆ ಮಾಡುತ್ತಿದ್ದೇವೆ. ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ನಮ್ಮ ಪ್ರಜಾಪ್ರಭುತ್ವದ ಒಂದು ಭಾಗ. ನಾವೆಲ್ಲ ಸೇರಿ ಅದನ್ನು ಉಳಿಸಬೇಕಿದೆ.  ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವೇ ಈ ದೇಶಕ್ಕೆ ಭಗವದ್ಗೀತೆ, ಕುರಾನ್, ಬೈಬಲ್ ನಂತೆ. ಇಡೀ ದೇಶದಲ್ಲಿ ಅಂಬೇಡ್ಕರ್ ಪ್ರತಿಮೆಗಳಷ್ಟು, ಇನ್ಯಾರ ಪ್ರತಿಮೆಗಳು ಇಲ್ಲ.  ಅವರು ಸಂವಿಧಾನದ ಮೂಲಕ ದೇಶಕ್ಕೆ ಸಾಮಾಜಿಕ, ಶೈಕ್ಷಣಿಕವಾಗಿ ಸಮಾನತೆ ಕೊಟ್ಟಿದ್ದಾರೆ. ಜನರಲ್ಲಿ ಶಾಂತಿ, ನೆಮ್ಮದಿ ಮೂಡಿಸಲು ಭದ್ರ ಬುನಾದಿ ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ.

ನಾವು ಅಂಬೇಡ್ಕರ್ ಅವರ ಆಚಾರ ವಿಚಾರಗಳನ್ನು ಉಳಿಸಿಕೊಂಡು ಹೋಗಬೇಕಿದೆ. ನಾವು ಕಳೆದ ವರ್ಷ ಸಂವಿಧಾನ ಪೀಠಿಕೆ ಓದಿದ್ದೆವು. ಅದನ್ನು ಓದಿಯೇ ನಾನು ಅಧಿಕಾರ ವಹಿಸಿಕೊಂಡಿದ್ದೆ. ಬೇರೆಯವರು ಈ ಸಂವಿಧಾನ ಬದಲಿಸಲು ಸಾಕಷ್ಟು ಶ್ರಮಿಸುತ್ತಿದ್ದಾರೆ. ಇದು ಸಾಧ್ಯವಿಲ್ಲ. ಎಲ್ಲ ವರ್ಗದವರಿಗೂ ಗೌರವ ಕೊಟ್ಟು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದು ಅವರು ಹೇಳಿದ್ದಾರೆ.

Previous Post

ಹಸೀ ಸುಳ್ಳುಗಳಿಂದ ಸಮರ ಗೆಲ್ಲುವ ವರಸೆಗೆ ಬೆಲೆ ತೆರುತ್ತಿದೆಯೇ ಭಾರತ?

Next Post

ಭಾರತದಲ್ಲಿ 2 ಲಕ್ಷಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣಗಳು ಪತ್ತೆ; ಗೊಂದಲದಲ್ಲಿ ಜನತೆ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಭಾರತದಲ್ಲಿ 2 ಲಕ್ಷಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣಗಳು ಪತ್ತೆ; ಗೊಂದಲದಲ್ಲಿ ಜನತೆ

ಭಾರತದಲ್ಲಿ 2 ಲಕ್ಷಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣಗಳು ಪತ್ತೆ; ಗೊಂದಲದಲ್ಲಿ ಜನತೆ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada