• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮೇಲೆ ಜನರಿಗೆ ವಿಶ್ವಾಸವಿಲ್ಲ: ಸಿಎಂ ಬೊಮ್ಮಾಯಿ

Any Mind by Any Mind
April 24, 2023
in ರಾಜಕೀಯ
0
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮೇಲೆ ಜನರಿಗೆ ವಿಶ್ವಾಸವಿಲ್ಲ: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಚುನಾವಣೆಯ ಕಾವು ಜೋರಾಗಿದ್ದು, ಪಕ್ಷದ ನಾಯಕರು ಹಾಗೂ ಮುಖಂಡರು ರಾಜ್ಯದ ಮೂಲೆ ಮೂಲೆಗೂ ತೆರಳಿ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಇಂದು ರಾಣೆಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ʻಜಯವಾಹಿನಿ ಎಲ್ಲೇ ಹೋದರೂ ಜನರಿಂದ ಅಭೂತಪೂರ್ವ ಜನಬೆಂಬಲ ಸಿಗ್ತಿದೆ. ಕಳೆದ 3 ವರ್ಷದಲ್ಲಿ ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. 2023ರ ಚುನಾವಣೆಯಲ್ಲೂ ಬಿಜೆಪಿಯನ್ನು ಬೆಂಬಲಿಸಬೇಕು. ಅರುಣ್ ಕುಮಾರ್ ಅವರನ್ನು 30 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿಕೊಂಡರು. ʻ2013-18 ರವರೆಗೆ ರಾಣೆಬೆನ್ನೂರು ನಗರದ ಅಭಿವೃದ್ಧಿ ಶೂನ್ಯವಾಗಿತ್ತು. ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು. ಈಗ ಎಲ್ಲಾ 35 ವಾರ್ಡ್ ಗಳಲ್ಲೂ 24/7 ಕುಡಿಯುವ ನೀರಿನ ವ್ಯವಸ್ಥೆ ಆಗಿದೆ. ಅದಕ್ಕೆ ಕಾರಣೀಭೂತರು ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಸರ್ಕಾರ. ಈ ಸಂಬಂಧ ನಾವು ಕೊಟ್ಟಿದ್ದ ವಚನವನ್ನು ನಾವು ಪಾಲಿಸಿದ್ದೇವೆ. ರಾಣೆಬನ್ನೂರು ಅಭಿವೃದ್ಧಿ ಗೆ 110 ಕೊಟಿ ರೂ. ಅನುದಾನ ಬಂದಿದೆ. ಹಿಂದೆ ಇಷ್ಟು ಅನುದಾನ ಇತಿಹಾಸದಲ್ಲಿ ಎಂದೂ ಹಣ ಬಂದಿರಲಿಲ್ಲ. ಇದು ಸಾಧ್ಯವಾಗಿದ್ದು ಡಬಲ್ ಎಂಜಿನ್ ಸರ್ಕಾರದಿಂದ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ADVERTISEMENT

ʻಈ ಭಾಗದಲ್ಲಿ ನೇಕಾರ ಸಮುದಾಯ ದೊಡ್ಡ ಪ್ರಮಾಣದಲ್ಲಿದೆ. ಅವರಿಗಾಗಿ ಜವಳಿ ಪಾರ್ಕ್ ಮಾಡುವುದಾಗಿ ಹೇಳಿದ್ದೆವು. ಈಗಾಗಲೇ ಜವಳಿ ಪಾರ್ಕ್ ಮಂಜೂರಾತಿ ಆಗಿ ಕೆಲಸ ಪ್ರಾರಂಭ ಆಗ್ತಿದೆ. ಟೆಂಡರ್ ಆಗಿದೆ, ಚುನಾವಣೆ ಮುಗಿದ ನಂತರ ಕಾಮಗಾರಿ ಆರಂಭವಾಗಲಿದೆ. ಸ್ಲಂಬೋರ್ಡ್‌ನಿಂದ ಬಡವರಿಗೆ 1,500 ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಕೇವಲ ಸುಳ್ಳು ಭರವಸೆ ಕೊಡುವ ಪಕ್ಷ. ಅವರು ಅಧಿಕಾರದಲ್ಲಿದ್ದಾಗ ಆ ಭಾಗ್ಯ ಈ ಭಾಗ್ಯ  ಅಂತ ಕೊಟ್ಟರು. ಆದರೆ ಯಾವ ಭಾಗ್ಯವೂ ಜನರನ್ನು ಮುಟ್ಟಲಿಲ್ಲ. ಕಾಂಗ್ರೆಸ್ ಅಂದರೆ ದೌರ್ಭಾಗ್ಯ. ಅದಕ್ಕೆ 2018 ರಲ್ಲಿ ಜನ ಅವರನ್ನು ಮನೆಗೆ ಕಳಿಸಿದ್ದರು.

ʻಕಾಂಗ್ರೆಸ್‌ನವರು ಈಗ 10 ಕೆಜಿ ಅಕ್ಕಿ ಕೊಡುವುದಾಗಿ ಚುನಾವಣೆ ಸಂದರ್ಭದಲ್ಲಿ ಹೇಳುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಜನರಿಗೆ ಮೋಸ ಮಾಡುವ ತಂತ್ರ ಕಾಂಗ್ರೆಸ್‌ದು. ಮೋಸ ಮಾಡುವ ಕಾಂಗ್ರೆಸ್ ಈಗ ಮತ್ತೆ ಗ್ಯಾರಂಟಿ ಕಾರ್ಡ್ ಜೊತೆ ಬಂದಿದ್ದಾರೆ. ಅವರ ಮೇಲೆ ಜನರಿಗೆ ವಿಶ್ವಾಸ ಇಲ್ಲ. ಅದು ಬೋಗಸ್ ಕಾರ್ಡ್. ಚುನಾವಣೆವರೆಗೂ ಮಾತ್ರ ಗ್ಯಾರಂಟಿ.  ಆಮೇಲೆ ಗಳಗಂಟಿ. ಅವರು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳದ ಬೇಡಿಕೆ ಇದ್ದರೂ ಕಾಂಗ್ರೆಸ್‌ನವರು ಮಾಡಲಿಲ್ಲ. ನಾನು ಮೀಸಲಾತಿ ಹೆಚ್ಚಳ ಮಾಡಲು ಮುಂದಾದಾಗ ಜೇನುಗೂಡಿಗೆ ಕೈ ಹಾಕಬೇಡಿ ಅಂದರು. ನಾನು ಜೇನು ಕಡಿಸಿಕೊಂಡು ಜೇನು ತುಪ್ಪ ನೀಡಿದ್ದೇನೆ. ಆಂತರಿಕ ಮೀಸಲಾತಿ ಹೆಚ್ಚಳ ಮಾಡಿ ಎಲ್ಲ ಸಮುದಾಯಕ್ಕೆ ನ್ಯಾಯ ಕೊಡಿಸುತ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ʻಎಲ್ಲಾ ಸಮುದಾಯಗಳಿಗೂ ನಾವು ಸಾಮಾಜಿಕ ನ್ಯಾಯ ಕೊಡುವ ಪ್ರಯತ್ನ ಮಾಡಿದ್ದೇವೆ. ಅಧಿಕಾರವನ್ನು ದೀನ ದಲಿತರ ಪರವಾಗಿ ಬಳಕೆ ಮಾಡಿ ಅವರಿಗೆ ರಕ್ಷಣೆ ಕೊಟ್ಟು ಮೀಸಲಾತಿ ನೀಡದರೆ ಅದೇ ಸಾಮಾಜಿಕ ನ್ಯಾಯ. ನಿಜವಾದ ಸಾಮಾಜಿಕ ನ್ಯಾಯ ನೀಡ್ತಿರೋದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ. ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆ ಕತೆ ರೈತ ವಿದ್ಯಾನಿಧಿ ಯೋಜನೆ ಮಾಡಿದ್ದೇವೆ. 5 ಲಕ್ಷ ಕಾರ್ಮಿಕರ ಮಕ್ಕಳು, 1.5 ಲಕ್ಷ ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಸಿಗುತ್ತಿದೆ. 1.25 ಲಕ್ಷ ನೇಕಾರರಿಗೆ ತಲಾ 5 ಸಾವಿರ ಸಹಾಯ ಧನ ಕೊಡುವ ನೇಕಾರ ಸನ್ಮಾನ ಯೋಜನೆ ಜಾರಿ ಮಾಡಿದ್ದೇವೆ. ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿವರೆಗೂ ಸಾಲ ಸಿಗುವಂತೆ ಮಾಡಿದ್ದೇವೆ. ವಿದ್ಯುತ್ ಖರೀದಿಯಲ್ಲೂ ಸಬ್ಸಿಡಿ ನೀಡುತ್ತಿದ್ದೇವೆ. ಇದರ ಜತೆ ನೇಕಾರ ಅಭಿವೃದ್ಧಿ ನಿಗಮ ಸೇರಿದಂತೆ ಎಲ್ಲ ಕಸುಬುದಾರರಿಗೆ ಮಾಲಗಾರ್, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಗಳನ್ನು ಮಾಡಿದ್ದೇವೆ. ಎಲ್ಲ ಸಮುದಾಯಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದೇವೆʼ ಎಂದು ಸಿಎಂ ಬೊಮ್ಮಾಯಿ ಹೇಳಿದರು. ʻಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯುವ ಶಕ್ತಿ ಯೋಜನೆ, 30 ಸಾವಿರ ಸ್ತ್ರೀ ಶಕ್ತಿ ಸಂಘಕ್ಕೆ ಅನುದಾನ ನೀಡಿ ಯೋಜನೆ ಜಾರಿಗೆ ತಂದು ಸ್ವಂತ ಉದ್ಯೋಗ ಮಾಡಿ ಮಾರುಕಟ್ಟೆ ಒದಗಿಸಲಾಗುತ್ತಿದೆ. ಇದೆಲ್ಲವನ್ನೂ ಮನೆಮನೆಗೆ ಮುಟ್ಟಿಸಿ ಜನರಿಂದ ಮತದಾನದ ಮುದ್ರೆ ಒತ್ತಿಸಿ ಮತ್ತೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ, ಜನಪರ ಹಾಗೂ ಜನಕಲ್ಯಾಣ ಬಿಜೆಪಿ ಸರ್ಕಾರ ರಚನೆ ಮೂಲಕ ನವ ಕರ್ನಾಟಕದಿಂದ ನವ ಭಾರತ ನಿರ್ಮಾಣಕ್ಕೆ ಆಶೀರ್ವಾದ ಮಾಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕೇಳಿಕೊಂಡರು.

Tags: #basavarajbommai#bjp#campaign#election2023#karnataka#karnatakaassemblyelection#pratidhvani#pratidhvanidigital#pratidhvaninews#roadshow
Previous Post

ʻಕಾಂಗ್ರೆಸ್ ಪಕ್ಷ ನಮ್ಮ ನೇರ ಎದುರಾಳಿʼ.. ಜೆಡಿಎಸ್‌ನವರು ಏನು ಮಾಡ್ತಾರೋ ಗೊತ್ತಿಲ್ಲ: ಸಿ.ಟಿ.ರವಿ

Next Post

ರಾಜ್ಯದ ಜನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ: ಕೆ.ಸಿ ವೇಣುಗೋಪಾಲ್

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ರಾಜ್ಯದ ಜನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ: ಕೆ.ಸಿ ವೇಣುಗೋಪಾಲ್

ರಾಜ್ಯದ ಜನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ: ಕೆ.ಸಿ ವೇಣುಗೋಪಾಲ್

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada