ಮಂಗಳೂರು: ಮುಖ್ಯಮಂತ್ರಿ ಸ್ಥಾನದ ವಿಚಾರದಲ್ಲಿ ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(D. K. Shivakumar) ಹೇಳಿದ್ದಾರೆ.

ಮಂಗಳೂರು ಪ್ರವಾಸ ಮುಗಿಸಿ ಹೊರಡುವಾಗ ಮಾತನಾಡಿದ ಡಿ.ಕೆ. ಶಿವಕುಮಾರ್, ನಾನು ಮುಖ್ಯಮಂತ್ರಿ ಆಗಬೇಕು ಎಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ ಎಂದು ಸಿಎಂ ಸ್ಥಾನದ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆ ಆಗುವುದೇ ಎಂಬ ಪ್ರಶ್ನೆಗೆ, ಸಮಯವೇ ಉತ್ತರ ನೀಡಲಿದೆ ಎಂದು ಜಾರಿಕೊಂಡರು. ಇನ್ನು ಚಿಕ್ಕಮಗಳೂರಲ್ಲಿ ದಲಿತ ಸಂಘಟನೆಗಳು ಗೃಹ ಸಚಿವ ಜಿ.ಪರಮೇಶ್ವರ ಸಿಎಂ ಆಗಬೇಕು ಎಂದು ಘೋಷಣೆ ಕೂಗಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರ ಅಭಿಮಾನಿಗಳು ಆಸೆ ಪಡುತ್ತಾರೆ. ಅದನ್ನು ನಾನು ಬೇಡ ಎಂದು ಹೇಳಲು ಆಗುವುದಿಲ್ಲ ಎಂದರು.







