• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನ ಬಿಜೆಪಿಯವರನ್ನು ಗಂಟೂಮೂಟೆ ಕಟ್ಟಿ ಮನೆಗೆ ಕಳಿಸುತ್ತಾರೆ: ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
February 9, 2023
in ಕರ್ನಾಟಕ, ರಾಜಕೀಯ
0
ಜನ ಬಿಜೆಪಿಯವರನ್ನು ಗಂಟೂಮೂಟೆ ಕಟ್ಟಿ ಮನೆಗೆ ಕಳಿಸುತ್ತಾರೆ: ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಶಿವಮೊಗ್ಗ: . ರಾಜ್ಯ ಬಿಜೆಪಿ ಸರ್ಕಾರ ಅವಧಿ ಇನ್ನು 60 ದಿನ ಮಾತ್ರ. ನಂತರ ಜನ ಬಿಜೆಪಿಯವರಿಗೆ ಗಂಟೂಮೂಟೆ ಕಟ್ಟಿ ಮನೆಗೆ ಕಳಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ADVERTISEMENT

ತೀರ್ಥಹಳ್ಳಿ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯವರು ಸಂಕಲ್ಪ ಯಾತ್ರೆ ಮಾಡುತ್ತಿದ್ದಾರೆ? ಜನ ಇವರನ್ನು ಮನೆಗೆ ಕಳಿಸುವ ಸಂಕಲ್ಪ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಅರಗ ಜ್ಞಾನೇದ್ರ ಅವರು ಕಾರ್ಯಕರ್ತರ ಮೇಲೆ ಕೇಸು ಹಾಕಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಪಿಎಸ್’ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಅಧಿಕಾರಿಗಳನ್ನು ಜೈಲಿಗೆ ಹಾಕುವುದರ ಜತೆಗೆ ಇದಕ್ಕೆ ಕಾರಣರಾದ ಮಂತ್ರಿಗಳನ್ನು ಒಳಗೆ ಹಾಕಬೇಕು ಎಂದು ಹರಿಹಾಯ್ದರು.

ನಾವು ಉತ್ತಮ ಆಡಳಿತ ನೀಡಿದ್ದರೂ ಜನ ನಮ್ಮನ್ನು ಬೆಂಬಲಿಸಲಿಲ್ಲ. ರಾಜ್ಯದಲ್ಲಿ ಕೋಮುವಾದಿ ಪಕ್ಷವನ್ನು ದೂರವಿಡಲು ಕುಮಾರಸ್ವಾಮಿ ಅವರಿಗೆ ಬೇಷರತ್ ಬೆಂಬಲ ನೀಡಿದೆವು. ಕುಮಾರಸ್ವಾಮಿ ಅವರು ಸರ್ಕಾರ ಉಳಿಸಿಕೊಳ್ಳಲಿಲ್ಲ. ಬಿಜೆಪಿ ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿತು. ಅಧಿಕಾರಕ್ಕೆ ಬಂದ ನಂತರ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ ಎಂದು ತಿಳಿಸಿದರು.

ಶಿವಮೊಗ್ಗ ಅಭಿವೃದ್ಧಿ ಆಗಿದೆ ಎಂದು ಹೇಳುತ್ತಾರೆ. ಅಭಿವೃದ್ಧಿ ಆಗಿದ್ದರೆ, ಇತ್ತೀಚೆಗೆ ನಡೆದ ಜಾಗತಿಕ ಬಂಡವಾಳ ಹೂಡಿಕೆಯಲ್ಲಿ 10 ಲಕ್ಷ ಕೋಟಿ ಬಂದಿದೆ ಎಂದರು. ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಬಂಡವಾಳವೇ ಬಂದಿಲ್ಲ. ಈ ಬಂಡವಾಳ ಬಂದರೆ ಉದ್ಯೋಗ ಸೃಷ್ಟಿಯಾಗುತ್ತದೆ. ಆದರೆ ಈ ಸರ್ಕಾರ ಮಲೆನಾಡು ಕರಾವಳಿ ಭಾಗದಲ್ಲಿ ಜಾತಿ, ಧರ್ಮಗಳ ನಡುವೆ ಜಗಳ ಸೃಷ್ಟಿಸಿ ರಾಜಕಾರಣ ಮಾಡುತ್ತಾರೆ ಎಂದು ಕಿಡಿಕಾರಿದರು.

ಅರಣ್ಯ ಹಕ್ಕು ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ತಿದ್ದುಪಡಿ ತಂದು ಎಲ್ಲ ಸಮುದಾಯದವರಿಗೂ 25 ವರ್ಷಗಳ ಮಿತಿಯನ್ನು ಕಡಿಮೆ ಮಾಡುತ್ತೇವೆ. ನಮ್ಮ ಪಕ್ಷ ಕರಾವಳಿ, ಮಲೆನಾಡು ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ನೀಡಲು ನಿರ್ಧರಿಸಿದ್ದೇವೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಈಗಾಗಲೇ ವಿಶೇಷ ಯೋಜನೆ ಘೋಷಣೆ ಮಾಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಕಾರ್ಯಕ್ರಮ ಘೋಷಿಸಿದ್ದೇವೆ ಎಂದು ತಿಳಿಸಿದರು.

200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಿದ್ದೇವೆ. ಪ್ರತಿ ಮನೆ ಯಜಮಾನಿಗೆ 2000 ರೂ. ಪ್ರತಿ ತಿಂಗಳು ಕೊಡ್ತೇವೆ. ವರ್ಷಕ್ಕೆ ಒಟ್ಟು 42 ಸಾವಿರದಂತೆ 5 ವರ್ಷಕ್ಕೆ 2 ಲಕ್ಷ ಕೊಡ್ತೆವೆ. ಜತೆಗೆ 10 ಕೆಜಿ ಅಕ್ಕಿ. ನಾನು ಸಿದ್ದರಾಮಯ್ಯ ಸಹಿ ಹಾಕಿರೋ ಗ್ಯಾರಂಟಿ ಕಾರ್ಡ್ ನಿಮ್ಮ ಮನೆಗೆ ಬರ್ತದೆ. ಇನ್ನು ಪ್ರತಿ ಮನೆಗೆ ನೀಡಲಾಗುವ 5 ಕೆ.ಜಿ ಅಕ್ಕಿಯನ್ನು 10 ಕೆ.ಜಿಗೆ ಏರಿಕೆ ಮಾಡುತ್ತೇವೆ ಎಂದು ಹೇಳಿದರು.

ಈ ಕ್ಷೇತ್ರದಲ್ಲಿ ಇಬ್ಬರು ಟಿಕೆಟ್’ಗೆ ಅರ್ಜಿ ಹಾಕಿದ್ದಾರೆ. ಈ ಇಬ್ಬರನ್ನು ನಾವು ವಿಧಾನಸೌಧದಲ್ಲಿ ಕೂರುವಂತೆ ಮಾಡುತ್ತೇವೆ. ನೀವು ಒಗ್ಗಟ್ಟಾಗಿ ಕೆಲಸ ಮಾಡಿ. ನಾವು ಯಾರನ್ನೇ ಅಭ್ಯರ್ಥಿಯನ್ನಾಗಿ ಮಾಡಿದರೆ ನೀವು ಅವರ ಪರವಾಗಿ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

Tags: Congress Partyಡಿ.ಕೆ.ಶಿವಕುಮಾರ್ಶಿವಮೊಗ್ಗ ಜಿಲ್ಲೆ
Previous Post

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

Next Post

ಚಾಮುಂಡಿ ಬೆಟ್ಟ ಸೇರಿದಂತೆ 15 ಕಡೆ ರೋಪ್ ವೇ ಯೋಜನೆ

Related Posts

ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ
ಕರ್ನಾಟಕ

ದೇವೇಗೌಡ, ಸುಮಲತಾ ಅವರಿಗೆ ರಾಜ್ಯಸಭೆ ಟಿಕೆಟ್ ಸಿಗದ ವಿಚಾರ: ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸ್ಪಷ್ಟನೆ

by ಪ್ರತಿಧ್ವನಿ
June 8, 2026
0

ಬೆಂಗಳೂರು: ಎನ್‌ಡಿಎ ವತಿಯಿಂದ ರಾಜ್ಯಸಭಾ ಚುನಾವಣೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್...

Read moreDetails
ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

June 8, 2026
ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

June 8, 2026
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

June 8, 2026
ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ದ್ರೋಹಿಗಳು ನೀವು: ಜೆಡಿಎಸ್‌ ಕಿಡಿ

ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ದ್ರೋಹಿಗಳು ನೀವು: ಜೆಡಿಎಸ್‌ ಕಿಡಿ

June 8, 2026
Next Post
ಚಾಮುಂಡಿ ಬೆಟ್ಟ ಸೇರಿದಂತೆ 15 ಕಡೆ ರೋಪ್ ವೇ ಯೋಜನೆ

ಚಾಮುಂಡಿ ಬೆಟ್ಟ ಸೇರಿದಂತೆ 15 ಕಡೆ ರೋಪ್ ವೇ ಯೋಜನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada