• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಆಲೂಗೆಡ್ಡೆ ಬೆಳೆದು ಕೊಟ್ಟ ರೈತರ ಮೇಲಯೇ ಮೊಕದ್ದಮೆ ಹೂಡಿದ್ದ ಪೆಪ್ಸಿ-LAYS ಗೆ ಕಪಾಳಮೋಕ್ಷ: ಪೇಟೆಂಟ್ ಹಕ್ಕನ್ನು ಕಿತ್ತೊಗೆದ ಭಾರತ

ಪಿಕೆ ಮಲ್ಲನಗೌಡರ್ by ಪಿಕೆ ಮಲ್ಲನಗೌಡರ್
December 5, 2021
in ವಿದೇಶ
0
ಆಲೂಗೆಡ್ಡೆ ಬೆಳೆದು ಕೊಟ್ಟ ರೈತರ ಮೇಲಯೇ ಮೊಕದ್ದಮೆ ಹೂಡಿದ್ದ ಪೆಪ್ಸಿ-LAYS ಗೆ ಕಪಾಳಮೋಕ್ಷ: ಪೇಟೆಂಟ್ ಹಕ್ಕನ್ನು ಕಿತ್ತೊಗೆದ ಭಾರತ
Share on WhatsAppShare on FacebookShare on Telegram

ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ರಕ್ಷಣೆ (ಪಿಪಿವಿಎಫ್‌ಆರ್) ಪ್ರಾಧಿಕಾರವು ಶುಕ್ರವಾರ ಹೊರಡಿಸಿದ ಆದೇಶದ ಪ್ರಕಾರ, ಪೆಪ್ಸಿಕೋ ಕಂಪನಿಯ ಜನಪ್ರಿಯ LAYs ಆಲೂಗೆಡ್ಡೆ ಚಿಪ್ಸ್‌ಗಳಿಗಾಗಿ ಪ್ರತ್ಯೇಕವಾಗಿ ಬೆಳೆದ ಆಲೂಗಡ್ಡೆ ತಳಿಯ ಪೇಟೆಂಟ್ ಅನ್ನು ಭಾರತ ರದ್ದುಗೊಳಿಸಿದೆ.

ADVERTISEMENT

ಇದರಿಂದ ಬಹುರಾಷ್ಟ್ರೀಯ ಕಂಪನಿ ಪೆಪ್ಸಿಕೊಗೆ ಕಪಾಳಮೋಕ್ಷವಾಗಿದೆ. ಆಲೂಗೆಡ್ಡೆ ಬೆಳೆದು ಕೊಟ್ಟ ರೈತರ ಮೇಲೆಯೇ ಈ ರಾಕ್ಷಸ ಕಂಪನಿ ಮೊಕದ್ದಮೆ ಹೂಡುವ ಮೂಲಕ ಅಧಿಕಪ್ರಸಂಗತನ ಮೆರೆದಿತ್ತು.

ತಾನು ಕೊಟ್ಟ ಬೀಜಗಳನ್ನು ತನಗಾಗಿ ಮಾತ್ರ ಬೆಳೆಯಬೇಕು ಎಂದು ಸರ್ವಾಧಿಕಾರಿ ಧೋರಣೆ ತೋರಿತ್ತು. ಪೆಪ್ಸಿಕೊ ಒಪ್ಪಂದದಿಂದ  ಆಚೆ ಬಂದ ರೈತರು ಎಫ್‌ಸಿ-5 ತಳಿಯನ್ನು ಬೆಳೆಯಕೂಡದು ಎಂದು ಅದು ಕೆಲವು ರೈತರ ಮೇಲೆ ಮೊಕದ್ದಮೆ ಹೂಡಿತ್ತು.

2019 ರಲ್ಲಿ, ಪೆಪ್ಸಿಕೋ ಗುಜರಾತ್ ಮೂಲದ ಕೆಲವು ರೈತರ ಮೇಲೆ FC5 ಆಲೂಗೆಡ್ಡೆ ತಳಿಯ ಕುರಿತಾಗಿ ಮೊಕದ್ದಮೆ ಹೂಡಿತ್ತು. ಈ ತಳಿಯು ಆಲೂಗಡ್ಡೆ ಚಿಪ್ಸ್‌ನಂತಹ ತಿಂಡಿಗಳನ್ನು ತಯಾರಿಸಲು ಅಗತ್ಯವಾದ ಕಡಿಮೆ ತೇವಾಂಶವನ್ನು ಹೊಂದಿದೆ.

ಅದೇ ವರ್ಷ ಮೊಕದ್ದಮೆಗಳನ್ನು ಹಿಂತೆಗೆದುಕೊಂಡ ನ್ಯೂಯಾರ್ಕ್ ಮೂಲದ ಪೆಪ್ಸಿಕೋ ಕಂಪನಿಯು ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸಲು ಬಯಸಿದ್ದೇವೆ ಎಂದು ಹೇಳಿತ್ತು.

ನಂತರ, ರೈತರ ಹಕ್ಕುಗಳ ಹೋರಾಟಗಾರ್ತಿ ಕವಿತಾ ಕುರುಗಂಟಿ, ಪೆಪ್ಸಿಕೋದ ಎಫ್‌ಸಿ 5 ಆಲೂಗೆಡ್ಡೆ ಪ್ರಭೇದಕ್ಕೆ ನೀಡಲಾದ ಬೌದ್ಧಿಕ  ಹಕ್ಕು (ಪೇಟೆಂಟ್‌ ರೈಟ್‌) ರಕ್ಷಣೆಯನ್ನು ಹಿಂಪಡೆಯಲು ʼಸಸ್ಯ ಪ್ರಭೇದಗಳ ರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರಕ್ಕೆ (ಪಿಪಿವಿಎಫ್ಆರ್ ) ಅರ್ಜಿ ಸಲ್ಲಿಸಿದರು, ಭಾರತದ ನಿಯಮಗಳು ಬೀಜ ಪ್ರಭೇದಗಳ ಮೇಲೆ ಪೇಟೆಂಟ್ ಅನ್ನು ಅನುಮತಿಸುವುದಿಲ್ಲ ಎಂದು ಕವಿತಾ ವಾದ ಮಾಡಿದರು.

ಬೀಜ ವೈವಿಧ್ಯದ ಮೇಲೆ ಪೆಪ್ಸಿ ಪೇಟೆಂಟ್ ಪಡೆಯಲು ಸಾಧ್ಯವಿಲ್ಲ ಎಂಬ ಕುರುಗಂಟಿಯವರ ವಾದವನ್ನು PPVFR ಪ್ರಾಧಿಕಾರವು ಒಪ್ಪಿಕೊಂಡಿತು.

“ನೋಂದಣಿ ಪ್ರಮಾಣಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಪಿಪಿವಿಎಫ್ಆರ್ ಪ್ರಾಧಿಕಾರದ ಅಧ್ಯಕ್ಷ ಕೆ ವಿ ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ.

ಪೆಪ್ಸಿಕೊ ಇಂಡಿಯಾ ವಕ್ತಾರರು, “PPVFR ಪ್ರಾಧಿಕಾರವು ಜಾರಿಗೊಳಿಸಿದ ಆದೇಶದ ಬಗ್ಗೆ ನಮಗೆ ತಿಳಿದಿದೆ ಮತ್ತು ಅದನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಹೇಳಿದ್ದಾರೆ.

ಪೆಪ್ಸಿಕೋ ತಾನು FC5 ವಿಧದ ಆಲೂಗಡ್ಡೆಯನ್ನು ಅಭಿವೃದ್ಧಿಪಡಿಸಿದ್ದು, 2016 ರಲ್ಲಿ ಗುಣಲಕ್ಷಣವನ್ನು ನೋಂದಾಯಿಸಿದೆ ಎಂದು ಸಮರ್ಥಿಸಿಕೊಂಡಿತ್ತು..

1989 ರಲ್ಲಿ ಭಾರತದಲ್ಲಿ ತನ್ನ ಮೊದಲ ಆಲೂಗೆಡ್ಡೆ ಚಿಪ್ಸ್ ಸ್ಥಾವರವನ್ನು ಸ್ಥಾಪಿಸಿದ ಕಂಪನಿಯು FC5 ಬೀಜದ ವಿಧವನ್ನು ರೈತರ ಗುಂಪಿಗೆ ಪೂರೈಸುತ್ತದೆ, ಅವರು ತಮ್ಮ ಉತ್ಪನ್ನಗಳನ್ನು ಕಂಪನಿಗೆ ನಿಗದಿತ ಬೆಲೆಗೆ ಮಾರಾಟ ಮಾಡುತ್ತಾರೆ.

PPVFR ಪ್ರಾಧಿಕಾರದ ತೀರ್ಪನ್ನು ಶ್ಲಾಘಿಸಿದ ಗುಜರಾತ್‌ನ ಆಲೂಗಡ್ಡೆ ರೈತರು, ಇದು ಬೆಳೆಗಾರರ ವಿಜಯ ಎಂದು ಹೇಳಿದ್ದಾರೆ.

“ಈ ಆದೇಶವು ಭಾರತದ ರೈತರಿಗೆ ದೊಡ್ಡ ವಿಜಯವಾಗಿದೆ ಮತ್ತು ಯಾವುದೇ ಬೆಳೆಗಳನ್ನು ಬೆಳೆಯುವ ಅವರ ಹಕ್ಕನ್ನು ಪುನರುಚ್ಚರಿಸುತ್ತದೆ” ಎಂದು 2019 ರಲ್ಲಿ ಪೆಪ್ಸಿಯಿಂದ ಮೊಕದ್ದಮೆ ಹೂಡಲ್ಪಟ್ಟಿದ್ದ ಗುಜರಾತ್ ಮೂಲದ ರೈತರಲ್ಲಿ ಒಬ್ಬರಾದ ಬಿಪಿನ್ ಪಟೇಲ್ ಹೇಳಿದ್ದಾರೆ.

Previous Post

8000 ಕೋಟಿ ವಿಮಾನ ಖರೀದಿಸುವ ಮೋದಿಗೆ 4000 ಕೋಟಿ ರೂ. ಕಬ್ಬಿನ ಬಾಕಿ ನೀಡೊಕೆ ಆಗ್ತಿಲ್ಲ – ಪ್ರಿಯಾಂಕಾ ಗಾಂಧಿ

Next Post

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಕರ ಮೇಲೆ ಯುಪಿ ಪೊಲೀಸರಿಂದ ಲಾಠಿ ಚಾರ್ಜ್ : ರಾಹುಲ್ ಗಾಂಧಿ ಸೇರಿ ಹಲವು ನಾಯಕರು ಆಕ್ರೋಶ

Related Posts

Top Story

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

by ಪ್ರತಿಧ್ವನಿ
June 25, 2025
0

ಇದುವೇ ಗುಡ್‌ ಅಂಡ್‌ ವೈಬ್ರೆಂಡ್‌ ಡೆಮಾಕ್ರಸಿ. ನಮ್ಮದು ಕಾಂಗ್ರೆಸ್‌ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು....

Read moreDetails

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

June 25, 2025

CM Siddaramaiah: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಿ.ಎಂ. ಸಿದ್ದರಾಮಯ್ಯ..

June 24, 2025

Shimla: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಶಿಕ್ಷಕನ ವಿರುದ್ಧ ತಿರುಗಿಬಿದ್ದ ಬಾಲಕಿಯರು.!!

June 24, 2025

ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?

June 23, 2025
Next Post
ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಕರ ಮೇಲೆ ಯುಪಿ ಪೊಲೀಸರಿಂದ ಲಾಠಿ ಚಾರ್ಜ್ : ರಾಹುಲ್ ಗಾಂಧಿ ಸೇರಿ ಹಲವು ನಾಯಕರು ಆಕ್ರೋಶ

ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಕರ ಮೇಲೆ ಯುಪಿ ಪೊಲೀಸರಿಂದ ಲಾಠಿ ಚಾರ್ಜ್ : ರಾಹುಲ್ ಗಾಂಧಿ ಸೇರಿ ಹಲವು ನಾಯಕರು ಆಕ್ರೋಶ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada