• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಸಚಿವರ ಮನವೊಲಿಸಿದ ಡಿಕೆಶಿ, ಪರಿಷತ್‌ಗೆ ಸುಧಾಮ್‌ ದಾಸ್‌‌ ಆಯ್ಕೆ..!

ಕೃಷ್ಣ ಮಣಿ by ಕೃಷ್ಣ ಮಣಿ
August 20, 2023
in ಅಂಕಣ, ಅಭಿಮತ
0
ಸಚಿವರ ಮನವೊಲಿಸಿದ ಡಿಕೆಶಿ, ಪರಿಷತ್‌ಗೆ ಸುಧಾಮ್‌ ದಾಸ್‌‌ ಆಯ್ಕೆ..!
Share on WhatsAppShare on FacebookShare on Telegram

ವಿಧಾನ ಪರಿಷತ್‌ ಪರಿಷತ್‌ ಸ್ಥಾನಕ್ಕೆ ಮೂವರನ್ನು ನಾಮ ನಿರ್ದೇಶನ ಮಾಡಿದ್ದ ಕಾಂಗ್ರೆಸ್‌, ಉಮಾಶ್ರೀ, ಎಂ.ಆರ್‌ ಸೀತಾರಾಂ ಹಾಗು ಮಾಜಿ ಜಾರಿನಿರ್ದೇಶನಾಲಯ ಅಧಿಕಾರಿ ಸುಧಾಮ್‌ ದಾಸ್‌‌ ಅವರನ್ನು ಆಯ್ಕೆ ಮಾಡಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿತ್ತು. ಆದರೆ ಕೇವಲ ಮೂರು ತಿಂಗಳ ಹಿಂದಷ್ಟೇ ಪಕ್ಷ ಸೇರ್ಪಡೆ ಆಗಿರುವ ಸುಧಾಮ್‌ ದಾಸ್‌ಗೆ ಪರಿಷತ್‌ ಸ್ಥಾನ ಕೊಟ್ಟ ಬಗ್ಗೆ ಕಾಂಗ್ರೆಸ್‌‌ ಸರ್ಕಾರದಲ್ಲಿ ಸಚಿವರಾಗಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಹಾಗು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಪತ್ರ ಬರೆದಿದ್ದರು. ಆದರೂ ಅಂತಿಮವಾಗಿ ಒಪ್ಪಿಗೆಯ ಮುದ್ರೆ ಬಿದ್ದಿದೆ. ಮೂವರೂ ಪರಿಷತ್‌ ಸದಸ್ಯರಾಗಿದ್ದಾರೆ.

ADVERTISEMENT

ಪತ್ರಕ್ಕೆ ಕಿಮ್ಮತ್ತು ಕೊಡದ ಹೈಕಮಾಂಡ್‌, ರಾಜ್ಯಪಾಲರ ಒಪ್ಪಿಗೆ..!

ವಿಧಾನ ಪರಿಷತ್ ಸ್ಥಾನಕ್ಕೆ ಮೂವರನ್ನು ನಾಮನಿರ್ದೇಶನ ಸರ್ಕಾರದ ಶಿಫಾರಸಿಗೆ ರಾಜ್ಯಪಾಲರು ಒಪ್ಪಿಗೆ ಮುದ್ರೆ ಒತ್ತಿದ್ದಾರೆ. ಈ ಮೂಲಕ ಮೂವರು ಹೆಸರನ್ನು ಪರಿಷತ್‌ ಸದಸ್ಯರಾಗಿ ರಾಜ್ಯಪಾಲರು ಅನುಮೋದಿಸಿದ್ದಾರೆ. ಎಂ.ಆರ್ ಸೀತಾರಾಂ, ಹಿರಿಯ ನಟಿ ಉಮಾಶ್ರಿ, ಮಾಜಿ ED ಅಧಿಕಾರಿ ಸುಧಾಮ್ ದಾಸ್ ಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಗೃಹಸಚಿವ ಡಾ ಜಿ ಪರಮೇಶ್ವರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದು ನಿಜ. ಪತ್ರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಬಂದಿದ್ದು ನಿಜ. ಬೇರೆ ವಿಚಾರಗಳನ್ನು ಮಾಧ್ಯಮದ ಎದುರು ಮಾತನಾಡಲು ಬಯಸಲ್ಲ ಎಂದಿದ್ದಾರೆ.

ಪರಮೇಶ್ವರ್‌ ಕಚೇರಿಗೆ ಬಂದಿದ್ದ ಡಿಸಿಎಂ ಡಿಕೆಶಿ..!

ಸುಧಾಮ್‌ ದಾಸ್‌ ಆಯ್ಕೆ ಮಾಡಿದ್ದು ಡಿಸಿಎಂ ಡಿ.ಕೆ ಶಿವಕುಮಾರ್‌ ಎನ್ನಲಾಗಿದೆ. ಆದರೆ ಪರಿಷತ್‌‌ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಿದ್ರಿಂದ ಸಲಿತ ಸಮುದಾಯದ ನಾಲ್ವರು ಸಚಿವರು ಒಟ್ಟಾಗಿ ವಿರೋಧ ಮಾಡಿದ್ದರಿಂದ, ಸ್ವತಃ ಡಿ.ಕೆ ಶಿವಕುಮಾರ್‌ ಅಖಾಡಕ್ಕೆ ಇಳಿದಿದ್ದರು. ಪರಿಷತ್‌ ಸದಸ್ಯನಾಗಿ ನಾಮನಿರ್ದೇಶನ ಆಗಿದ್ದ ಸುಧಾಮ್ ದಾಸ್ ಜೊತೆಗೆ ಪರಮೇಶ್ವರ್ ಭೇಟಿಗೆ ಡಿ.ಕೆ ಶಿವಕುಮಾರ್‌ ಪ್ರಯತ್ನ ನಡೆಸಿದ್ದರು. ಸುಧಾಮ್ ದಾಸ್ ಕರೆದುಕೊಂಡು ತಾವೇ ಪರಮೇಶ್ವರ್ ಕಚೇರಿಗೆ ತೆರಳಿದ್ದರು. ಆದರೆ ಪರಮೇಶ್ವರ್ ಕ್ಯಾಬಿನೆಟ್ ಹಾಲ್‌ಗೆ ತೆರಳಿದ್ದರಿಂದ ಭೇಟಿ ಸಾಧ್ಯವಾಗದೇ ವಾಪಸ್ ಆಗಿದ್ದರು. ಆ ಬಳಿಕ ಮಾತನಾಡಿ, ಆಯ್ಕೆ ಹಿಂದಿನ ಗುಟ್ಟನ್ನು ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

ಸುಧಾಮ್‌ ದಾಸ್‌ ಆಯ್ಕೆಗೆ ಸಮ್ಮತಿ ಪಡೆಯಲಿಲ್ಲ ಎನ್ನುವ ಕಿಚ್ಚು..!

ಸುಧಾಮ್‌ ದಾಸ್‌ ಜಾರಿ ನಿರ್ದೇಶನಾಲಯದಲ್ಲಿ ಹಿರಿಯ ಅಧಿಕಾರಿಯಾಗಿ ರಾಜೀನಾಮೆ ನೀಡಿ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಆಗಿದ್ದಾರೆ. ದಲಿತ ಸಮುದಾಯಕ್ಕೆ ಸೇರಿ ನಾಯಕರಾಗಿರುವ ಕಾರಣಕ್ಕೆ ನಾಲ್ವರು ಹಿರಿಯ ಸಚಿವರು ವಿರೋಧಿಸಿದ್ದಾರೆ ಎನ್ನಲಾಗಿದೆ. ನಮ್ಮದೇ ಸಮುದಾಯಕ್ಕೆ ಸೇರಿದ ನಾಯಕನನ್ನು ಪರಿಷತ್‌ಗೆ ನೇಮಕ ಮಾಡುವಾಗ ನಮ್ಮನ್ನು ಡಿ.ಕೆ ಶಿವಕುಮಾರ್‌ ಕ್ಯಾರೇ ಎನ್ನಲಿಲ್ಲ ಎನ್ನುವ ಕೋಪ ಒಂದು ಕಡೆಯಾದರೆ, ಮತ್ತೊಂದು ಕಡೆ ಡಿ.ಕೆ ಶಿವಕುಮಾರ್‌ ಮತ್ತೋರ್ವ ದಲಿತ ನಾಯಕನನ್ನು ಬೆಳೆಸಲು ಮುಂದಾಗಿರುವುದು ನಾಯಕರಿಗೆ ಕಸಿವಿಸಿ ತಂದಿಟ್ಟಿದೆ. ಇದೇ ಕಾರಣಕ್ಕೆ ಸುಧಾಮ್‌ ದಾಸ್‌ ಆಯ್ಕೆಗೆ ವಿರೋಧ ಕೂಡ ಮಾಡಿದ್ದರು. ಆದರೆ ಹೈಕಮಾಂಡ್‌ ನಾಯಕರು ಸೊಪ್ಪು ಹಾಕದಿದ್ದರಿಂದ ತೆಪ್ಪಗಾದರು ಎನ್ನಲಾಗಿದೆ.

ಕೃಷ್ಣಮಣಿ

Tags: Congress GuaranteeDKShivakumarG ParameshwarKarnatakaMLC
Previous Post

ಅಂಕಣ | ಹೊಸತನದ ಅರಸುವಿಕೆಯ ಹರಿಕಾರ ಅರಸು

Next Post

ಲಡಾಖ್‌ | ಸೇನಾ ವಾಹನ ಕಮರಿಗೆ ಉರುಳಿ 9 ಯೋಧರು ಸಾವು

Related Posts

Top Story

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

by ಪ್ರತಿಧ್ವನಿ
July 1, 2025
0

ನಾಯಕತ್ವ ಬದಲಾವಣೆಯ ನಿರ್ಧಾರವು ಪಕ್ಷದ ಹೈಕಮಾಂಡ್‌ ಕೈಯಲ್ಲಿ ಇರುತ್ತದೆ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಭೇಟಿ ನೀಡಿದ ನಂತರ ಈ ಊಹಾಪೋಹ ಬಲಗೊಂಡಿದೆ. ಡಿ.ಕೆ.ಶಿವಕುಮಾರ್...

Read moreDetails

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

July 1, 2025

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

June 30, 2025

DK Shivakumar: ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್

June 30, 2025

Golder Star Ganesh: ವಿಶೇಷ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹುಟ್ಟುಹಬ್ಬದ ಉಡುಗೊರೆ ನೀಡಿದ ಗೋಲ್ಡನ್ ಸ್ಟಾರ್ .

June 30, 2025
Next Post
ಲಡಾಖ್‌

ಲಡಾಖ್‌ | ಸೇನಾ ವಾಹನ ಕಮರಿಗೆ ಉರುಳಿ 9 ಯೋಧರು ಸಾವು

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada