• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

GSTಯಡಿ ಪೆಟ್ರೋಲ್ ಡೀಸೆಲ್: ರಾಜ್ಯಗಳ ಒತ್ತಡದ ಮುಂದೆ ಕೈಸುಟ್ಟುಕೊಂಡ ಗ್ರಾಹಕ

Shivakumar A by Shivakumar A
September 22, 2021
in ದೇಶ
0
GSTಯಡಿ ಪೆಟ್ರೋಲ್ ಡೀಸೆಲ್: ರಾಜ್ಯಗಳ ಒತ್ತಡದ ಮುಂದೆ ಕೈಸುಟ್ಟುಕೊಂಡ ಗ್ರಾಹಕ
Share on WhatsAppShare on FacebookShare on Telegram

45ನೇ GST ಮಂಡಳಿಯ ಸಭೆ ಸೆಪ್ಟೆಂಬರ್ 17ರಂದು ಜರುಗಿತು. ತೈಲ ಬೆಲೆ ಏರಿಕೆಯಿಂದ ಕಂಗಾಲಾಗಿರುವ ದೇಶದ ಜನರಿಗೆ ಏನಾದರೂ ಸಿಹಿ ಸುದ್ದಿ ಸಿಗಬಹುದೆಂದು ಮೂಡಿದ್ದ ಭರವಸೆ ಹುಸಿಯಾಗಿ ಹೋಯಿತು. ಹಿಂದಿನಿಂದಲೂ ಪೆಟ್ರೋಲ್ ಹಾಗೂ ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆಯಡಿ ತರಲು ಬೇಡಿಕೆ ಕೇಳಿ ಬರುತ್ತಲೇ ಇದೆ. ಆದರೆ, ಪ್ರತಿ ಬಾರಿಯಂತೆ ಈ ಬಾರಿಯೂ ಅದು ಕೇವಲ ಚರ್ಚೆಗಷ್ಟೇ ಸೀಮಿತವಾಗಿದೆ. 

ADVERTISEMENT

ಜುಲೈ 2017ರಲ್ಲಿ ಜಿಎಸ್‌ಟಿ ಜಾರಿಯಾದಾಗಿನಿಂದಲು ಕಚ್ಚಾ ತೈಲ, ನೈಸರ್ಗಿಕ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ವಿಮಾನಗಳ ಟರ್ಬೈನ್ ಇಂಧನವನ್ನು ಜಿಎಸ್‌ಟಿಯಿಂದ ಹೊರಗಿಡಲಾಗಿದೆ. ಇದಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತ್ಯೇಕ ತೆರಿಗೆಯನ್ನು ವಿಧಿಸುತ್ತವೆ. ಇದರಿಂದಾಗಿ, ಗ್ರಾಹಕರಿಗೆ ಜೇಬಿಗೆ ಹೆಚ್ಚಿನ ಹೊರೆ ಬೀಳುತ್ತಲೇ ಇದೆ. 

ಈ ಬಾರಿ ಪೆಟ್ರೋಲ್ ಡೀಸೆಲ್ ಬೆಲೆ ಎಲ್ಲಾ ದಾಖಲೆಗಲನ್ನು ಮೀರಿ ನಿಂತ ಪರಿಣಾಮವಾಗಿ, ದೇಶದ ಬಡ ಮತ್ತು ಮಧ್ಯಮ ವರ್ಗದ ಜನರು ಇನ್ನಿಲ್ಲದ ಸಂಕಷ್ಟಕ್ಕೆ ತಲುಪಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಅಂತಹ ಏರಿಕೆ ಇಲ್ಲದಿದ್ದರೂ, ಪ್ರಪಂಚದಲ್ಲಿಯೇ ಪೆಟ್ರೋಲ್ ಮೇಲೆ ಅತಿ ಹೆಚ್ಚು ತೆರಿಗೆ ಪಾವತಿಸುವ ದೇಶವೆಂದರೆ ಅದು ಭಾರತ. ಜನರ ಮೇಲಿನ ಹೊರೆಯನ್ನು ಕಡಿಮೆಗೊಳಿಸುವ ಸಲುವಾಗಿ, ಪೆಟ್ರೋಲ್ ಡೀಸೆಲ್ ಅನ್ನು ಜಿಎಸ್‌ಟಿಯಡಿ ತರುವ ಕುರಿತು ಚರ್ಚೆ ನಡೆಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿತ್ತು. ಇದರಂತೆ 45ನೇ GST ಮಂಡಳಿಯ ಸಭೆಯಲ್ಲಿ ಇದನ್ನು ಚರ್ಚಿಸಲಾಗಿತ್ತು ಕೂಡಾ. 

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್, ಪೆಟ್ರೋಲ್, ಡೀಸೆಲ್ ಅನ್ನು ಜಿಎಸ್‌ಟಿಯಡಿ ತರುವ ವಿಚಾರವಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಚರ್ಚೆಯ ಫಲಿತಾಂಶವಾಗಿ ಇದು ಸರಿಯಾದ ಸಂದರ್ಭವಲ್ಲ ಎಂದು ನಿರ್ಧಾರವಾಗಿದೆ. ಈ ವಿಚಾರವನ್ನು ನಾವು ಕೇರಳ ಹೈಕೋರ್ಟ್’ಗೆ ತಿಳಿಸುತ್ತೇವೆ, ಎಂದು ಹೇಳಿದ್ದಾರೆ. 

“ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಕಾರಣಕ್ಕಾಗಿ ಮಾತ್ರ ಈ ವಿಚಾರವನ್ನು ಚರ್ಚೆಗೆ ಪರಿಗಣಿಸಲಾಗಿದೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

ಇಂಧನವನ್ನುಜಿಎಸ್‌ಟಿಯಡಿತರಲುಇರುವತೊಡಕುಗಳೇನು? 

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟು ಐದು ಲಕ್ಷ ಕೋಟಿ ಆದಾಯವನ್ನು ಕೇವಲ ಪೆಟ್ರೋಲಿಯಂ ಉತ್ಪನ್ನಗಳಿಂದ ಪಡೆಯುತ್ತಿದೆ. ಕೇಂದ್ರ ಸಚಿವರಾದ ಸುಶೀಲ್ ಕುಮಾರ್ ಮೋದಿ ಅವರು ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸಿ ನೀಡಿದ ಮಾಹಿತಿಯಂತೆ ಮುಂದಿನ ಎಂಟರಿಂದ ಹತ್ತು ವರ್ಷಗಳವರೆಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿಯಡಿ ತರಲು ಸಾಧ್ಯವಿಲ್ಲ. 

ಇದಕ್ಕೆ ಮುಖ್ಯ ಕಾರಣ, ರಾಜ್ಯ ಸರ್ಕಾರಗಳು ತಮ್ಮ ಪಾಲಿನ ಅತಿ ದೊಡ್ಡ ಆದಾಯವನ್ನು ಕಳೆದುಕೊಳ್ಳಲು ಇಷ್ಟಪಡುತ್ತಿಲ್ಲ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿಯಡಿ ತಂದಲ್ಲಿ, ವಾರ್ಷಿಕ ಎರಡರಿಂದ ಎರಡೂವರೆ ಲಕ್ಷ ಕೋಟಿ ನಷ್ಟವಾಗುವ ಸಾಧ್ಯತೆಯಿದೆ. ಈ ನಷ್ಟವನ್ನು ಭರಿಸಲು, ರಾಜ್ಯ ಸರ್ಕಾರಗಳಿಗೆ ಯಾವುದೇ ಅಬಕಾರಿ ಮತ್ತು ಸ್ಟ್ಯಾಂಪ್ ಸುಂಕ ಬಿಟ್ಟರೆ ಬೇರೆ ಯಾವುದೇ ದಾರಿಯಿಲ್ಲ. 

ಜಿಎಸ್‌ಟಿಯಲ್ಲಿರುವ ಅತಿ ದೊಡ್ಡ ತೆರಿಗೆ ದರವೆಂದರೆ 28%. ಒಂದು ವೇಳೆ ಈ ದರ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಜಾರಿಯಾದಲ್ಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಲಾ ರೂ.14 ಮಾತ್ರ ಪಡೆಯಲಿವೆ. ಆದರೆ, ಈಗ ಎರಡೂ ಸರ್ಕಾರಗಳು ಒಟ್ಟು 60 ರೂ. ತೆರಿಗೆಯನ್ನು ಸಂಗ್ರಹಿಸುತ್ತಿವೆ. ಈ ಇಡಿಗಂಟನ್ನು ಕಳೆದುಕೊಳ್ಳಲು ರಾಜ್ಯ ಹಾಗೂ ಕೇಂದ್ರ ಎರಡೂ ಸರ್ಕಾರಗಳಿಗೂ ಇಷ್ಟವಿಲ್ಲ. 

ಮುಖ್ಯವಾಗಿ ಕೇರಳ, ಮಹಾರಾಷ್ಟ್ರ ಮತ್ತು ಕರ್ನಾಟಕ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿಯಡಿ ತರಲು ಒಪ್ಪುತ್ತಿಲ್ಲ. ರಾಜ್ಯಗಳಿಗೆ ಅರ್ಹವಾಗಿ ತಲುಪಬೇಕಾದ ಜಿಎಸ್‌ಟಿ ಪಾಲನ್ನು ಕೇಂದ್ರ ಸರ್ಕಾರ ನೀಡದೇ ಇರುವುದು ಇದಕ್ಕೆ ಕಾರಣ. ಪ್ರತಿ ಬಾರಿಯೂ ಹಕ್ಕಿನಿಂದ ಪಡೆಯಬೇಕಾದ ಆದಾಯಕ್ಕಾಗಿ ಕೇಂದ್ರ ಸರ್ಕಾರದ ಬಳಿ ಕೈಯೊಡ್ಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಾತ್ರವಲ್ಲದೇ VAT ವ್ಯವಸ್ಥೆ ಇರುವಾಗ ರಾಜ್ಯಗಳು ಪಡೆಯುತ್ತಿದ್ದ ಆದಾಯಕ್ಕೆ ದೊಡ್ಡ ಪೆಟ್ಟು ಬಿದ್ದಿರುವುದರಿಂದ ಚಿನ್ನದ ಮೊಟ್ಟೆಯಿಡುವ ಕೋಳಿಯಾದ ಪೆಟ್ರೋಲ್ ಹಾಗೂ ಡೀಸೆಲ್ ಅನ್ನು ಸುಲಭದಲ್ಲಿ ಕೈಯಿಮದ ಬಿಟ್ಟುಕೊಡಲು ತಯಾರಿಲ್ಲ. 

ಕೇರಳದ ವಿತ್ತ ಸಚಿವರಾಗಿರುವ ಕೆ ಎನ್ ಬಾಲಗೋಪಾಲ್ ಅವರು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿಯಡಿ ತರುವ ವಿಚಾರಕ್ಕೆ ಬಲವಾದ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ರಾಜ್ಯಕ್ಕೆ ವಾರ್ಷಿಕ ರೂ. 8000 ಕೋಟಿಯಷ್ಟು ನಷ್ಟ ಉಂಟಾಗುತ್ತದೆ. ಈಗ ತೈಲ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ 2020ರಲ್ಲಿ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದೇ ಕಾರಣ ಎಂದು ಆರೋಪಿಸಿದ್ದಾರೆ. 

ಇನ್ನು ಬಿಜೆಪಿಯ ಆಡಳಿತವಿರುವ ಕರ್ನಾಟಕವೂ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದೆ. ಮಹಾರಾಷ್ಟ್ರ ವಿತ್ತ ಸಚಿವ ಅಜಿತ್ ಪವಾರ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಪರಿಧಿಯಲ್ಲಿ ಬರುವಂತಹ ವಿಚಾರಗಳಲ್ಲಿ ತಲೆಯಿಡಬಾರದು ಎಂದು ಹೇಳಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿಯಡಿ ತಂದಲ್ಲಿ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂ. ನಷ್ಟಕ್ಕೆ ಸಿಲುಕುತ್ತವೆ. ಅತಿ ದೊಡ್ಡ ಆದಾಯದ ಮೂಲವನ್ನು ಕಳೆದುಕೊಳ್ಳುತ್ತವೆ ಎಂದಿದ್ದಾರೆ. 

ಹೀಗೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಹಗ್ಗ ಜಗ್ಗಾಟದಿಂದಾಗಿ ಜನರ ಜೇಬಿಗೆ ಕತ್ತರಿ ಬೀಳುವುದು ಮುಂದಿವರೆದಿದೆ. ರಾಜ್ಯಗಳು ಕೂಡಾ ಇತರೆ ಆದಾಯದ ಮೂಲಗಳಿಲ್ಲದೇ, ಅನಿವಾರ್ಯವಾಗಿ ಪೆಟ್ರೋಲ್ ಡೀಸೆಲ್ ಮೇಲೆ ಸುಂಕವನ್ನು ವಿಧಿಸುತ್ತಿವೆ. ಕೇಂದ್ರ ಸರ್ಕಾರವು ರಾಜ್ಯಗಳ ಮೇಲೆ ಗೂಬೆ ಕೂರಿಸಿ ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುವ ಮೊಂಡುತನ ತೋರಿಸುತ್ತಿದೆ. ಕೊನೆಗೆ ಗ್ರಾಹಕ ಮಾತ್ರ ವಿಧಿಯಿಲ್ಲದೇ ಹೆಚ್ಚಾಗುತ್ತಿರುವ ಆರ್ಥಿಕ ಹೊರೆಯನ್ನು ಹೊರುತ್ತ ಅಸಹಾಯಕನಾಗಿ ನಿಂತಿದ್ದಾನೆ. 

Tags: BJPGSTNirmala SitharamanPetrol Diesel Priceನರೇಂದ್ರ ಮೋದಿಬಿಜೆಪಿ
Previous Post

ಅವಧಿಗೂ ಮುನ್ನ ದೇಶದ 5 ರಾಜ್ಯಗಳಲ್ಲಿ 6 ಸಿಎಂ ಬದಲಾವಣೆ : ಇದು ರಾಷ್ಟ್ರ ರಾಜಕಾರಣದಲ್ಲಿ‌ ಶುರುವಾದ ಹೊಸ ರಾಜಕೀಯ ‘ತಂತ್ರ’ಗಾರಿಕೆಯೇ ?

Next Post

BSY ರಾಜ್ಯ ಪ್ರವಾಸಕ್ಕೆ ಯಾಕೆ ಬೇಕು ಹೈಕಮಾಂಡ್ ಗ್ರೀನ್ ಸಿಗ್ನಲ್; ಹೀಗೆ ಮಾಜಿ ಸಿಎಂ ಪರ ಅರುಣ್ ಸಿಂಗ್ ಬ್ಯಾಟಿಂಗ್‌ ಮಾಡಲು ಕಾರಣವೇನು?

Related Posts

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್
Top Story

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್

by ಪ್ರತಿಧ್ವನಿ
October 26, 2025
0

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ "ವೋಟ್ ಚೋರಿ" ವಿರುದ್ಧ ನಡೆಯುತ್ತಿರುವ...

Read moreDetails
ಹೆಣ್ಣು ಜೀವ – ಎಳೆಯ ಭ್ರೂಣ ಮತ್ತು ಸಾಮಾಜಿಕ ಪ್ರಜ್ಞೆ

ಹೆಣ್ಣು ಜೀವ – ಎಳೆಯ ಭ್ರೂಣ ಮತ್ತು ಸಾಮಾಜಿಕ ಪ್ರಜ್ಞೆ

October 26, 2025
ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

October 25, 2025
ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

October 23, 2025
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025
Next Post
BSY ರಾಜ್ಯ ಪ್ರವಾಸಕ್ಕೆ ಯಾಕೆ ಬೇಕು ಹೈಕಮಾಂಡ್ ಗ್ರೀನ್ ಸಿಗ್ನಲ್; ಹೀಗೆ ಮಾಜಿ ಸಿಎಂ ಪರ ಅರುಣ್ ಸಿಂಗ್ ಬ್ಯಾಟಿಂಗ್‌ ಮಾಡಲು ಕಾರಣವೇನು?

BSY ರಾಜ್ಯ ಪ್ರವಾಸಕ್ಕೆ ಯಾಕೆ ಬೇಕು ಹೈಕಮಾಂಡ್ ಗ್ರೀನ್ ಸಿಗ್ನಲ್; ಹೀಗೆ ಮಾಜಿ ಸಿಎಂ ಪರ ಅರುಣ್ ಸಿಂಗ್ ಬ್ಯಾಟಿಂಗ್‌ ಮಾಡಲು ಕಾರಣವೇನು?

Please login to join discussion

Recent News

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ
Top Story

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

by ಪ್ರತಿಧ್ವನಿ
October 28, 2025
ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ
Top Story

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

by ಪ್ರತಿಧ್ವನಿ
October 28, 2025
ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ
Top Story

ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ

by ಪ್ರತಿಧ್ವನಿ
October 28, 2025
ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್
Top Story

ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್

by ಪ್ರತಿಧ್ವನಿ
October 28, 2025
ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ
Top Story

ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ

by ಪ್ರತಿಧ್ವನಿ
October 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

October 28, 2025
ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada