• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

PHONE PAY ಅನ್ ಇನ್‌ಸ್ಟಾಲ್ ಮಾಡಿಲ್ವಾ ಇನ್ನು.. ಏನ್ ಕಾರಣ ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
July 20, 2024
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
PHONE PAY ಅನ್ ಇನ್‌ಸ್ಟಾಲ್ ಮಾಡಿಲ್ವಾ ಇನ್ನು.. ಏನ್ ಕಾರಣ ಗೊತ್ತಾ..?
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಕೊಡಬೇಕು ಅಂತ ರಾಜ್ಯ ಸರ್ಕಾರ ಒಂದು ಕಾನೂನು ಜಾರಿಗೆ ಮುಂದಾಗಿತ್ತು. ಕೆಲವು ಉದ್ಯಮಿಗಳು ಸರ್ಕಾರದ ನಿಲುವನ್ನು ವಿರೋಧಿಸಿದ್ರು. ತಾತ್ಕಾಲಿಕವಾಗಿ ಸರ್ಕಾರ ತನ್ನ ನಿಲುವಿನಿಂದ ಹಿಂದೆ ಸರಿದಿದೆ. ಆದರೆ ಕನ್ನಡ ಪತ ಒಕ್ಕೂಟಗಳು, ಕನ್ನಡ ಪರವಾಗಿರುವ ಜನರು, ಉದ್ಯಮಗಳು, ರಾಜಕಾರಣಿಗಳು ಎಲ್ಲರೂ ಉದ್ಯೋಗದಲ್ಲಿ ಕನ್ನಡಿಗರಿಗೆ ಇಂತಿಷ್ಟು ಮೀಸಲಾತಿ ತಪ್ಪಲ್ಲ ಎನ್ನುವ ವಾದ ಮಂಡಿಸುತಿದ್ದಾರೆ. ಈ ನಡುವೆ ಕಾನೂನು ತಜ್ಞರು ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ಆಗದಂತೆ ಕಾಯ್ದೆ ಜಾರಿಯಾದರೆ ತಪ್ಪಿಲ್ಲ ಎನ್ನುತ್ತಿದ್ದಾರೆ.

ADVERTISEMENT

ಈ ನಡುವೆ ಫೋನ್ ಪೇ Founder & CEO Sameer.Nigam ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು ಕನ್ನಡಿಗರನ್ನು ಕೆರಳುವಂತೆ ಮಾಡಿದೆ. ನನಗೆ 46 ವರ್ಷ, ಯಾವುದೇ ರಾಜ್ಯದಲ್ಲಿ 15 ವರ್ಷಕ್ಕಿಂತ ಹೆಚ್ಚಿನ ವರ್ಷ ವಾಸ ಮಾಡಿಲ್ಲ. ನನ್ನ ತಂದೆ ಭಾರತೀಯ ನೌಕಪಡೆಯಲ್ಲಿದ್ರು. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗ ಪಡೆಯಲು ಅರ್ಹರಲ್ಲವೇ..? ನಾಚಿಕೆಗೇಡು ಎಂದು ಟ್ವೀಟ್ ಮಾಡಿದ್ದು ಕನ್ನಡಿಗರ ಕಣ್ಣು‌ ಕೆಂಪಾಗುವಂತೆ ಮಾಡಿದೆ.

ನಿನಗೆ ಕೆಲಸ ಮಾಡಲು ಅರ್ಹತೆಯಿಲ್ಲ ಎಂದು ಯಾರು ಹೇಳಿದ್ರು..? ಆದರೆ ಕರ್ನಾಟಕದಲ್ಲಿ ಕೆಲಸ ಮಾಡುವುದಾದರೆ ಕನ್ನಡ ಭಾಷೆ ಕಲಿಯುವುದು ಸೂಕ್ತ ಎನ್ನುವ ಪೋಸ್ಟ್‌ಗೆ ಮತ್ತೊಮ್ಮೆ ಖಾರವಾಗಿ ಪ್ರತಿಕ್ರಿಯಿಸಿರುವ ಸಮೀರ್ ನಿಗಮ್, ಕರ್ನಾಟಕ ಇರುವುದು ಕೇವಲ ಕನ್ನಡ ಭಾಷಿಕರಿಗಾ..? ಎಂದು ಪ್ರಶ್ನಿಸುವ ಜೊತೆಗೆ ಭಾರತದಲ್ಲಿ ಎಲ್ಲಿ ಬೇಕೋ ಅಲ್ಲಿ ನಾನು ಕೆಲಸ ಮಾಡುತ್ತೇನೆ. ನನಗೆ ಬೇಕಾದ ಭಾಷೆ ಕಲಿಯುತ್ತೇನೆ‌. ಭಾರತ ಸಂವಿಧಾನ ನನಗೆ ಈ ಹಕ್ಕನ್ನು ಕೊಟ್ಟಿದೆ. ಇದು ನನ್ನ ಆಯ್ಕೆ ಎಂದು ಧಿಮಾಕು ಪ್ರದರ್ಶನ ಮಾಡಿರುವುದು ಕನ್ನಡಿಗರ ಕಿಚ್ಚು ಹೆಚ್ಚಾಗುವಂತೆ ಮಾಡಿದೆ.

Sameer Nigam, co-founder and chief executive officer of PhonePe, speaks during a product unveiling in Bengaluru, India, on Tuesday, Oct. 31, 2017. Phone Pe is the digital payments unit of Flipkart Online Services Pvt, India’s biggest online retailer. Photographer: Samyukta Lakshmi/Bloomberg via Getty Images

ಕನ್ನಡಿಗರು ಎನಿಸಿಕೊಂಡ ಪ್ರತಿಯೊಬ್ಬರು ಸಮೀರ್ ನಿಗಮ್‌ಗೆ ಪ್ರತಿಕ್ರಿಯೆ ಕೊಡುತ್ತಿದ್ದು, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಹಿಂದಿಯವನ ಮಾಲೀಕತ್ವದ Phone pay ಅನ್ ಇನ್‌ಸ್ಟಾಲ್ ಮಾಡ್ತಿದ್ದೀವಿ ಎಂದು ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಆಮ್ ಆದ್ಮಿ ಪಕ್ಷದ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ಕಾಂಗ್ರೆಸ್‌ನ ಲಾವಣ್ಯ ಬಲ್ಲಾಳ್ ಜೈನ್ ಸೇರಿದಂತೆ ಸಾಕಷ್ಟು ಜನರು ಫೋನ್ ಪೇ ಮಾಲೀಕರ ವಾದ ಖಂಡಿಸಿದ್ದಾರೆ. ಜೊತೆಗೆ ಫೋನ್ ಪೇ Uninstall ಮಾಡಿದ್ದಾರೆ. ನೀವೂ ಕೂಡ ಕನ್ನಡಿಗರಲ್ಲವೇ..? ಕನ್ನಡಿಗರ ಮಕ್ಕಳಿಗೆ ಉದ್ಯೋಗ ಮೀಸಲಾತಿ ಕೊಟ್ಟರೆ ತಪ್ಪೇನು..? ಕರ್ನಾಟಕದ ನೆಲ, ಜಲ ಬಳಸಿಕೊಂಡು ಹಿಂದಿವಾಲಾಗಳ ಗುಲಾಮರಾಗಿ ಕೆಲಸ ಮಾಡಬೇಕೇ..? ಇಲ್ಲ ಎನ್ನುವುದಾರೆ ನೀವು ಕೂಡ ಫೋನ್ ಪೇ ಅನ್‌ಇನ್‌ಸ್ಟಾಲ್ ಮಾಡಿ. ಕನ್ನಡಿಗರ ತಾಕತ್ತು ಆತನಿಗೂ ಸ್ವಲ್ಪ ತಿಳಿಯಲಿ ಅಲ್ಲವೇ..?

Tags: ​ HomeIndia NewsRahul Gandhi To Hold 'Jai Bharat' Rally In Karnataka's Kolar Ahead Of Polls Rahul Gandhi To Hold 'Jai Bharat' Rally In KarnatakaBJPCongress Partyjobನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರು ಪೊಲೀಸರಲ್ಲಿ ಮರೆಯಾಯ್ತಾ ಮಾನವೀಯತೆ..? ವ್ಯಕ್ತಿ ಪ್ರಾಣ ಹೋಗ್ತಿದ್ರೂ ಸುಮ್ಮನೆ ನಿಂತಿದ್ದು ಏಕೆ..? ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್..

Next Post

ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿ.ಎಂ.ಸಿದ್ದರಾಮಯ್ಯ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ: ಸಿ.ಎಂ.ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada