• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಿಎಂ ಕೇರ್ಸ್ ನಿಧಿಯ ಹಣ ಕನಿಷ್ಠ ಲಸಿಕೆ ಸಂಶೋಧನೆಗೂ ಬಳಕೆಯಾಗಿಲ್ಲ! ಹಾಗಾದ್ರೆ ಇದು ಯಾರ ನಿಧಿ?

Shivakumar by Shivakumar
January 27, 2022
in Top Story
0
ಪಿಎಂ ಕೇರ್ಸ್ ನಿಧಿಯ ಹಣ ಕನಿಷ್ಠ ಲಸಿಕೆ ಸಂಶೋಧನೆಗೂ ಬಳಕೆಯಾಗಿಲ್ಲ! ಹಾಗಾದ್ರೆ ಇದು ಯಾರ ನಿಧಿ?
Share on WhatsAppShare on FacebookShare on Telegram

ಕೋವಿಡ್ ಸಾಂಕ್ರಾಮಿಕ ಮತ್ತು ಅದರ ನಿಯಂತ್ರಣಕ್ಕಾಗಿ ಹೇರಲಾದ ಲಾಕ್ ಡೌನ್ ನಿಂದಾಗಿ ದೇಶದ ಜನ ದುಡಿಮೆ, ಬದುಕು ಮತ್ತು ಜೀವ ಕಳೆದುಕೊಳ್ಳುತ್ತಿರುವಾಗ, ಸಂಕಷ್ಟದಲ್ಲಿರುವ ದೇಶವಾಸಿಗಳಿಗೆ ನೆರವಾಗುವುದಾಗಿ ಹೇಳಿ ಪ್ರಧಾನಿ ಮೋದಿಯವರು ಪಿಎಂ ಕೇರ್ಸ್ ಎಂಬ ನಿಧಿ ಸ್ಥಾಪಿಸಿ ದೇಶದ ಮುಂಚೂಣಿ ಸಾರ್ವಜನಿಕ ಸಂಸ್ಥೆಗಳು, ಕಾರ್ಪೊರೇಟ್ ಕಂಪನಿಗಳಿಂದ ಚಂದಾ ಎತ್ತಿದ್ದರು.

ADVERTISEMENT

ಅದಾಗಲೇ ಇದ್ದ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(ಪಿಎಂಎನ್ ಆರ್ ಎಫ್) ಗೆ ಪರ್ಯಾಯವಾಗಿ ಪಿಎಂ ಕೇರ್ಸ್ ಎಂಬ ಹೆಸರಿನಲ್ಲಿ ಸ್ಥಾಪಿಸಿದ ಈ ನಿಧಿಯನ್ನು ಸಾರ್ವಜನಿಕ ಲೆಕ್ಕಪತ್ರ ಮತ್ತು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡಲಾಗಿತ್ತು. ಅಲ್ಲದೆ, ಆ ನಿಧಿಗೆ ಹರಿದುಬಂದ ದೇಣಿಗೆಯ ವಿವರವಾಗಲೀ, ಆ ನಿಧಿಯ ಹಂಚಿಕೆ ಅಥವಾ ವೆಚ್ಚದ ವಿವರಗಳನ್ನಾಗಲೀ ತಿಳಿಯುವ ಹಕ್ಕು ದೇಶದ ನಾಗರಿಕರಿಗೆ ಇಲ್ಲ ಎಂದೂ ಪ್ರಧಾನಮಂತ್ರಿಗಳ ಕಚೇರಿಯೇ ಸ್ವತಃ ಸುಪ್ರೀಂಕೋರ್ಟಿಗೆ ತಿಳಿಸಿತ್ತು!

2019ರಲ್ಲಿ ನಿಧಿ ಸ್ಥಾಪನೆಯಾಗಿ ಒಂದೇ ವರ್ಷದಲ್ಲಿ ಹತ್ತಾರು ಸಾವಿರ ಕೋಟಿ ದೇಣಿಗೆ ಸಂಗ್ರಹಿಸಿದ ಪಿಎಂ ಕೇರ್ಸ್ ನಿಧಿಯಲ್ಲಿ ದೊಡ್ಡ ಪಾಲು ಇದ್ದದ್ದು ದೇಶದ ವಿವಿಧ ಸಾರ್ವಜನಿಕ ವಲಯದ, ಸರ್ಕಾರಿ ಸ್ವಾಮ್ಯದ ಕಂಪನಿಗಳು ದೇಣಿಗೆಯದ್ದೇ. ಸಾರ್ವಜನಿಕ ತೆರಿಗೆ ಹಣದಲ್ಲಿ ನಿರ್ಮಾಣವಾದ, ದಶಕಗಳಿಂದ ಉದ್ಯಮ ಮತ್ತು ಸೇವಾ ಚಟುವಟಿಕೆ ನಡೆಸಿಕೊಂಡುಬಂದಿರುವ ಈ ಸಂಸ್ಥೆಗಳ ನಿಧಿ ಎಂದರೆ ಅದು ಅಂತಿಮವಾಗಿ ದೇಶದ ಎಲ್ಲ ಸಾರ್ವಜನಿಕರ ಹಣವೇ ಅಲ್ಲವೆ? ಹಾಗಿದ್ದರೂ ಪಿಎಂ ಕೇರ್ಸ್ ನಿಧಿಯ ವಿವರಗಳನ್ನು ದೇಶದ ಜನರಿಗೆ ನೀಡಲು ಪ್ರಧಾನಿ ಮೋದಿಯವರು ನಿರಾಕರಿಸಿದ್ದರು. ಆದರೆ, ದೇಶವ್ಯಾಪ್ತಿ ಪ್ರಧಾನಿಗಳ ಆ ನಿಲುವು ವ್ಯಾಪಕ ಟೀಕೆ ಮತ್ತು ಹಲವು ಶಂಕೆಗಳಿಗೆ ಈಡಾಗಿತ್ತು.

Also Read : ಪಿಎಂ ಕೇರ್ಸ್ ನಿಧಿ ಕರ್ಮಕಾಂಡ: ಲಸಿಕೆ ಸಂಶೋಧನೆಗೆ ಘೋಷಿಸಿದ್ದು 100 ಕೋಟಿ, ಕೊಟ್ಟದ್ದು ಸೊನ್ನೆ!

ಆ ಹಿನ್ನೆಲೆಯಲ್ಲಿ ಕಳೆದ ವರ್ಷ ಕೋವಿಡ್ ಎರಡನೇ ಅಲೆಯ ಹೊತ್ತಿಗೆ ಸಾರ್ವಜನಿಕರ ಕಣ್ಣೊರೆಸುವ ಯತ್ನವಾಗಿ ಮೋದಿಯವರು ಪಿಎಂ ಕೇರ್ಸ್ ನಿಂದ ವೆಂಟಿಲೇಟರ್, ಆಕ್ಸಿಜನ್ ಪ್ಲಾಂಟ್, ಲಸಿಕೆ ತಯಾರಿಕೆ ಮುಂತಾದ ಜನರ ಜೀವ ರಕ್ಷಣೆಯ ಕೆಲಸಕಾರ್ಯ ಸಂಶೋಧನೆಗಳಿಗೆ ಅನುದಾನ ನೀಡುವುದಾಗಿ ಘೋಷಿಸಿದ್ದರು. 50 ಸಾವಿರ ವೆಂಟಿಲೇಟರ್ ಖರೀದಿ ಮತ್ತು ಲಾಕ್ ಡೌನ್ ನಿಂದಾಗಿ ಬೀದಿಪಾಲಾದ ವಲಸೆ ಕಾರ್ಮಿಕರ ಪರಿಹಾರಕ್ಕಾಗಿ ಪಿಎಂ ಕೇರ್ಸ್ ನಿಧಿಯಿಂದ 3,100 ಕೋಟಿ ರೂ. ಅನುದಾನ ನೀಡುವುದಾಗಿ 2020ರ ಮೇನಲ್ಲಿ ಮೋದಿಯವರ ಸರ್ಕಾರ ಘೋಷಿಸಿತ್ತು. ಆ 3100 ಕೋಟಿ ರೂ. ಪ್ಯಾಕೇಜಿನ ಭಾಗವಾಗಿಯೇ ದೇಶೀಯವಾಗಿ ಕೋವಿಡ್ ಲಸಿಕೆ ಸಂಶೋಧನೆ ಮತ್ತು ಉತ್ಪಾದನೆಗಾಗಿ 100 ಕೋಟಿ ರೂ. ಮೀಸಲಿಟ್ಟಿರುವುದಾಗಿಯೂ ಘೋಷಿಸಲಾಗಿತ್ತು.

ಅಂತಹ ಘೋಷಣೆಯ ಮೂಲಕ ಪಿಎಂ ಕೇರ್ಸ್ ನಿಧಿಯ ವಿಷಯದಲ್ಲಿ ಪ್ರಧಾನಿ ಮೋದಿ ಮತ್ತು ಅವರ ಬಿಜೆಪಿ ಸರ್ಕಾರ ದೇಶದ ಸಾರ್ವಜನಿಕರಿಂದ ಮುಚ್ಚಿಡುತ್ತಿರುವ ಮಾಹಿತಿಯ ಕುರಿತು ಎದ್ದ ಆಕ್ರೋಶವನ್ನು ತಣಿಸುವ ಯತ್ನ ಮಾಡಲಾಗಿತ್ತು. ಆದರೆ, 3100 ಕೋಟಿ ರೂಪಾಯಿ ಪ್ಯಾಕೇಜಿನ ಭಾಗವಾಗಿ ಅಷ್ಟು ಹಣದಲ್ಲಿ ಘೋಷಿಸಿದಂತೆ 50 ಸಾವಿರ ವೆಂಟಿಲೇಟರ್ ಖರೀದಿಸಲಾಯಿತೆ? ಎಷ್ಟು ಆಮ್ಲಜನಕ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಲಾಯಿತು? ಎಷ್ಟು ಕಾರ್ಮಿಕರಿಗೆ ಮತ್ತು ಎಷ್ಟು ಮೊತ್ತದ ನೆರವನ್ನು ಈವರೆಗೆ ಒದಗಿಸಲಾಗಿದೆ ಎಂಬ ವಿವರಗಳು ಸದ್ಯಕ್ಕೆ ಸಾರ್ವಜನಿಕವಾಗಿ ಲಭ್ಯವಿಲ್ಲ.

Also Read : ಪಿಎಂ ಕೇರ್ಸ್ ವಿವಾದ: ಮತ್ತಷ್ಟು ಕಗ್ಗಂಟಾದ ಪ್ರಶ್ನೆಗಳಿಗೆ ಸಿಗುವುದೇ ಉತ್ತರ?

ಆದರೆ, ಲಸಿಕೆ ಸಂಶೋಧನೆ ಮತ್ತು ಉತ್ಪಾದನೆಗಾಗಿ ಪಿಎಂ ಕೇರ್ಸ್ ನಿಂದ ಎಷ್ಟು ನಿಧಿ ನೀಡಲಾಗಿದೆ ಮತ್ತು ಅದನ್ನು ಯಾವೆಲ್ಲಾ ಲಸಿಕೆ ತಯಾರಿಕಾ ಸಂಸ್ಥೆಗಳಿಗೆ ಹಂಚಲಾಗಿದೆ ಎಂಬ ವಿವರ ನೀಡುವಂತೆ ಕೋರಿ ಲೋಕೇಶ್ ಕೆ ಭಾತ್ರಾ ಎಂಬುವರು ಕೇಂದ್ರ ಬಯೋಟೆಕ್ನೋಲಜಿ ಇಲಾಖೆಗೆ ಸಲ್ಲಿಸಿದ್ದ ಆರ್ ಟಿಐಗೆ ಇಲಾಖೆ ನೀಡಿದ ಮಾಹಿತಿ ಲಸಿಕೆಯ ವಿಷಯದಲ್ಲಿ ಪಿಎಂ ಕೇರ್ಸ್ ನಿಧಿ ಹಂಚಿಕೆಯ ಘೋಷಣೆಯ ಅಸಲೀತನವನ್ನು ಬಯಲುಮಾಡಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ಅವರಿಗೆ ನೀಡಿರುವ ಮಾಹಿತಿಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರೀಸರ್ಚ್ (ಐಸಿಎಂಆರ್) ಮತ್ತು ಬಯೋಟೆಕ್ನಾಲಜಿ ಇಲಾಖೆಗಳು, ಪಿಎಂ ಕೇರ್ಸ್ ನಿಧಿಯಿಂದ ತಮಗೆ ಯಾವುದೇ ಬಿಡಿಗಾಸೂ ಬಂದಿಲ್ಲ ಎಂದು ಸ್ಪಷ್ಟಪಡಿಸಿವೆ. 2020ರ ಮೇನಲ್ಲಿ 100 ಕೋಟಿ ರೂಪಾಯಿ ಲಸಿಕೆ ಸಂಶೋಧನೆ ಮತ್ತು ಉತ್ಪಾದನೆಗಾಗಿ ಪಿಎಂ ಕೇರ್ಸ್ ನಿಧಿಯಿಂದ ನೀಡಲಾಗುವುದು ಎಂದು ಘೋಷಿಸಿ ಬರೋಬ್ಬರಿ ಒಂದೂ ಮುಕ್ಕಾಲು ವರ್ಷ ಕಳೆದರೂ ಈವರೆಗೂ ಬಿಡಿಗಾಸು ಕೂಡ ಸಂಬಂಧಪಟ್ಟ ಇಲಾಖೆ ಮತ್ತು ಸಂಸ್ಥೆಗಳಿಗೇ ಸೇರಿಲ್ಲ ಎಂಬುದು ಪಿಎಂ ಕೇರ್ಸ್ ವಿಷಯದಲ್ಲಿ ಪ್ರಧಾನಿ ಮೋದಿ ಮತ್ತು ಅವರ ಸರ್ಕಾರ ಹೇಳಿದ ಮಾತುಗಳು, ಮಾಡಿದ ಘೋಷಣೆಗಳು ಎಷ್ಟು ವಾಸ್ತವ ಎಂಬುದಕ್ಕೆ ಕನ್ನಡಿ ಹಿಡಿದಿದೆ.

ವಾಸ್ತವವಾಗಿ 2020ರ ಮೇನಲ್ಲಿ 100 ಕೋಟಿ ರೂಪಾಯಿ ಪಿಎಂ ಕೇರ್ಸ್ ನಿಂದ ಲಸಿಕೆ ಸಂಶೋಧನೆ ಮತ್ತು ಅಭಿವೃದ್ಧಿಗೆ ನೀಡುವುದಾಗಿ ಘೋಷಿಸಿದ್ದ ಮೋದಿಯವರ ಸರ್ಕಾರ, ಅದಾದ ಕೆಲವೇ ತಿಂಗಳಲ್ಲಿ ಅದೇ ಉದ್ದೇಶಕ್ಕೆ ಮಿಷನ್ ಕೋವಿಡ್ ಸುರಕ್ಷಾ ಪ್ಯಾಕೇಜ್ ಘೋಷಣೆ ಮಾಡಿ, ಅದರಡಿಯೂ ಬರೋಬ್ಬರಿ 900 ಕೋಟಿ ರೂಪಾಯಿ ನೀಡುವುದಾಗಿ ಹೇಳಿತ್ತು. ಅಂದರೆ, ಅಲ್ಲಿಗೆ ಬರೋಬ್ಬರಿ ಸಾವಿರ ಕೋಟಿ ರೂಪಾಯಿ ಬೃಹತ್ ಮೊತ್ತವನ್ನು ಲಸಿಕೆ ಸಂಶೋಧನೆ ಮತ್ತು ಉತ್ಪಾದನೆಯ ದೇಶೀಯ ಪ್ರಯತ್ನಗಳಿಗೇ ನೀಡುವುದಾಗಿ ಹೇಳಲಾಗಿತ್ತು. ಆದರೆ, 2020ರ ನವೆಂಬರ್ ನಲ್ಲಿ ಘೋಷಣೆಯಾದ ಆ ಮಿಷನ್ ಕೋವಿಡ್ ಸುರಕ್ಷಾ ಪ್ಯಾಕೇಜ್ ನ ಮೊದಲ ಹಂತದ ಅವಧಿ 12 ತಿಂಗಳುಗಳಾಗಿದ್ದರೂ ನಿಗದಿತ ಅವಧಿಯಲ್ಲಿ ಆ 900 ಕೋಟಿಯಲ್ಲೂ ಬಿಡಿಗಾಸು ಉತ್ಪಾದನಾ ಸಂಸ್ಥೆಗಳಿಗೆ ತಲುಪಿಲ್ಲ ಎಂಬುದೂ ಬಯಲಾಗಿದೆ(ದ ಪ್ರಿಂಟ್ ವರದಿ).

Also Read : ಅತ್ತ ಪಿಎಂ ಕೇರ್ಸ್ ನಿಧಿ ಸಾವಿರಾರು ಕೋಟಿ, ಇತ್ತ ಆಸ್ಪತ್ರೆಯಲ್ಲಿ ಹತ್ತಿಗೂ ಹಣವಿಲ್ಲ!

ಬರೋಬ್ಬರಿ 14 ತಿಂಗಳ ಬಳಿಕ ಆ ಪ್ಯಾಕೇಜ್ ನ 900 ಕೋಟಿ ರೂಪಾಯಿಗೆ ಬದಲಾಗಿ ಕೇವಲ 116 ಕೋಟಿ ರೂಪಾಯಿಗಳನ್ನು ಲಸಿಕೆ ಅಭಿವೃದ್ಧಿಗಾಗಿ ಐದು ಕಂಪನಿಗಳಿಗೆ ನೀಡಲಾಗಿದೆ. ಜೊತೆಗೆ ಫರೀದಾಬಾದ್ ಮೂಲದ ಟ್ರಾನ್ಸ್ ಲೇಷನಲ್ ಹೆಲ್ತ್ ಸೈನ್ಸ್ ಅಂಡ್ ಟೆಕ್ನಾಲಜಿ ಇನ್ ಸ್ಟಿಟ್ಯೂಟ್ ಗೆ ಲಸಿಕೆ ಸಂಶೋಧನೆಗಾಗಿ 78.96 ಕೋಟಿ ರೂಪಾಯಿ ನೀಡಲಾಗಿದೆ ಎಂದು ಬಯೋಟೆಕ್ನಾಲಜಿ ಇಲಾಖೆ ನೀಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ. ಅಂದರೆ, ಕೇಂದ್ರ ಸರ್ಕಾರದ ಅನುದಾನದಲ್ಲಿ ಘೋಷಿಸಲಾಗಿದ್ದ ಕೋವಿಡ್ ಸುರಕ್ಷಾ ಪ್ಯಾಕೇಜಿನಡಿ 900 ಕೋಟಿ ರೂಪಾಯಿಗಳ ಪೈಕಿ ಕೇವಲ ಶೇ.15ರಷ್ಟು ಅನುದಾನ ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಉದ್ದೇಶಿತ ಕಾರ್ಯದಲ್ಲಿ ನಿರತ ಸಂಸ್ಥೆಗಳಿಗೆ ತಲುಪಿದೆ. ಆದರೆ, ಪಿಎಂ ಕೇರ್ಸ್ ನಿಧಿಯಿಂದ ನೀಡುವುದಾಗಿ ಹೇಳಿದ್ದ 100 ಕೋಟಿ ಅನುದಾನದಲ್ಲಿ ನಯಾಪೈಸೆ ಕೂಡ ಈವರೆಗೆ ಯಾರಿಗೂ ತಲುಪಿಲ್ಲ!

ದೇಶದ ಜನರು ಮತ್ತು ಜನರ ತೆರಿಗೆ ಹಣದಲ್ಲಿ ಕಟ್ಟಿದ ಸಂಸ್ಥೆಗಳ ದೇಣಿಗೆಯಲ್ಲಿ ಹುಟ್ಟಿದ ಪಿಎಂ ಕೇರ್ಸ್ ನಿಧಿಯ ಹಣ ಕನಿಷ್ಠ ಲಸಿಕೆ ಸಂಶೋಧನೆ ಮತ್ತು ಅಭಿವೃದ್ಧಿಯಂತಹ ಜನರ ಜೀವ ಉಳಿಸುವ ಕಾರ್ಯಕ್ಕೂ ಬಳಕೆಯಾಗದು ಎಂದಾದರೆ, ಆ ನಿಧಿ ಯಾರ ನಿಧಿ ಮತ್ತು ಯಾರಿಗಾಗಿ ಇರುವ ನಿಧಿ ಎಂಬ ಪ್ರಶ್ನೆ ಏಳುವುದು ಸಹಜ. ಕಳೆದ ಎರಡು ವರ್ಷಗಳಿಂದ ಇಂತಹದ್ದೇ ಪ್ರಶ್ನೆಗಳನ್ನು ದೇಶದ ಜನತೆ ಕೇಳುತ್ತಿದ್ದರೂ ಉತ್ತರ ಕೊಡಬೇಕಾದವರು ಅದನ್ನು ಕೋವಿಡ್ ವಿರುದ್ಧ ಹೋರಾಟಕ್ಕೆ ಲಸಿಕೆ, ವೈದ್ಯಕೀಯ ಸೌಕರ್ಯಕ್ಕಾಗಿ ಬಳಸಲಾಗುವುದು ಎಂದು ಹೇಳಿ ತಿಪ್ಪೆ ಸಾರಿಸುತ್ತಿದ್ದರು. ಇದೀಗ ಲೋಕೇಶ್ ಭಾತ್ರಾ ಅವರ ಆರ್ ಟಿಐ ಅರ್ಜಿಗೆ ಸಂಬಂಧ ಪಟ್ಟ ಇಲಾಖೆಗಳು ನೀಡಿರುವ ಪ್ರತಿಕ್ರಿಯೆಯಲ್ಲಿ ಆ ತಿಪ್ಪೆಸಾರಿಸುವ ಕಾರ್ಯ ಅಧಿಕೃತವಾಗಿಯೇ ಬಯಲಾಗಿದೆ!
Tags: ಐಸಿಎಂಆರ್ಕೋವಿಡ್ಕೋವಿಡ್ ಲಸಿಕೆಪಿಎಂ ಕೇರ್ಸ್ ನಿಧಿಪಿಎಂಎನ್ ಆರ್ ಎಫ್ಪ್ರಧಾನಿ ಮೋದಿಬಿಜೆಪಿ
Previous Post

ರಾಷ್ಟ್ರಪತಿಗಳ ಅಂಗರಕ್ಷಕ ವಿರಾಟ್ ಗೆ ಬೀಳ್ಕೊಡುಗೆ

Next Post

ಕಾಂಗ್ರೆಸ್ಸಿಗೂ ನನಗೂ ಇಂದಿಗೆ ಸಂಬಂಧ ಮುಗಿಯಿತು : ಸಿಎಂ ಇಬ್ರಾಹಿಂ

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
0

ವಿಕಾಸದ ಗುರಿಯತ್ತ ಸಾಗುತ್ತಿರುವ ನವ-ಡಿಜಿಟಲ್‌ ಭಾರತ ಎಲ್ಲ ಮಗ್ಗುಲುಗಳಲ್ಲೂ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶದ ಪ್ರಗತಿ ಅಥವಾ ಅಭಿವೃದ್ಧಿಯ ಕಲ್ಪನೆಯನ್ನು ಆರ್ಥಿಕ ಪರಿಭಾಷೆಯಿಂದ ಹೊರತುಪಡಿಸಿ ವಿಶ್ಲೇಷಿಸುವಾಗ ಸಹಜವಾಗಿ...

Read moreDetails
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

January 27, 2026
Next Post
ಕಾಂಗ್ರೆಸ್ಸಿಗೂ ನನಗೂ ಇಂದಿಗೆ ಸಂಬಂಧ ಮುಗಿಯಿತು : ಸಿಎಂ ಇಬ್ರಾಹಿಂ

ಕಾಂಗ್ರೆಸ್ಸಿಗೂ ನನಗೂ ಇಂದಿಗೆ ಸಂಬಂಧ ಮುಗಿಯಿತು : ಸಿಎಂ ಇಬ್ರಾಹಿಂ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada