ನವದೆಹಲಿ: ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ವಹಿಸಿಕೊಂಡ ನಂತರ ಮೊದಲಿಗೆ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆಗೆ (PM Kisan Yojana 17th installment release) ಇರುವ ಕಡತಕ್ಕೆ ಸಹಿ ಹಾಕಿದ್ದರು.
ಜೂನ್ 18ರಂದು 9.26 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ. ನಂತೆ ಒಟ್ಟು 20,000 ಕೋಟಿ ರೂ ಬಿಡುಗಡೆ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ವಾರಾಣಸಿಗೆ ಭೇಟಿ ನೀಡಿದ ವೇಳೆ ಪಿಎಂ ಕಿಸಾನ್ ಯೋಜನೆ ಹಣ ಅಧಿಕೃತವಾಗಿ ಬಿಡುಗಡೆಯಾಗಲಿದೆ.
ಮೋದಿ ಮೂರನೇ ಬಾರಿ ಪಿಎಂ ಆದ ಬಳಿಕ ವಾರಾಣಸಿ ಕ್ಷೇತ್ರಕ್ಕೆ ನೀಡಲಿರುವ ಮೊದಲ ಭೇಟಿ ಇದಾಗಲಿದೆ. ಈ ಸಂದರ್ಭದಲ್ಲಿ 30 ಸಾವಿರ ಕೃಷಿ ಸಖಿಯರಿಗೆ ಪ್ರಮಾಣಪತ್ರಗಳನ್ನು ನೀಡಲಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಜಮೀನು ಉಳುಮೆ ಮಾಡುವ ರೈತರಿಗೆ ವರ್ಷಕ್ಕೆ ಆರು ಸಾವಿರ ರೂ ನೀಡುತ್ತದೆ. ತಲಾ 2 ಸಾವಿರ ರೂ.ಗಳಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ರೈತರ ಖಾತೆಗಳಿಗೆ ಹಣ ಜಮೆಯಾಗಲಿದೆ.