• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅತ್ತ ಉಕ್ರೇನ್ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟದಲ್ಲಿದ್ದರೆ, ಇತ್ತ ಚುನಾವಣಾ ಭಾಷಣದಲ್ಲಿ PM ಮೋದಿ ಹೇಳಿದ್ದೇ ಬೇರೆ!

Any Mind by Any Mind
March 2, 2022
in ದೇಶ, ರಾಜಕೀಯ, ವಿದೇಶ
0
ಅತ್ತ ಉಕ್ರೇನ್ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟದಲ್ಲಿದ್ದರೆ, ಇತ್ತ ಚುನಾವಣಾ ಭಾಷಣದಲ್ಲಿ PM ಮೋದಿ ಹೇಳಿದ್ದೇ ಬೇರೆ!
Share on WhatsAppShare on FacebookShare on Telegram

ಯುದ್ದ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಹಾಗೂ ಸ್ಥಳಾಂತರ ವಿಚಾರದಲ್ಲಿ ತೀವ್ರ ಮುಜುಗರಕ್ಕೀಡಾಗಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇದೀಗ ಭಾರೀ ಸುದ್ದಿಯಲ್ಲಿದೆ.

ADVERTISEMENT

ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳು ಹಾಗೂ ನಾಗರೀಕರ ಮೇಲೆ ದೌರ್ಜನ್ಯ, ಗಡಿ ಭಾಗದಲ್ಲಿ ತಾರತಮ್ಯ ನೀತಿಗಳ ವಿರುದ್ದ ದೇಶಾದ್ಯಂತ ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇದು ದೇಶದ ಏರುತ್ತಿರುವ ಶಕ್ತಿಯ ಸೂಚನೆ ಎಂದು ಹೇಳಿದ್ದಾರೆ.

ಹೌದು, ಇಂದು ಉತ್ತರಪ್ರದೇಶದ ಸೋನೆಭದ್ರೆಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತೀಯರನ್ನು ವಾಪಸ್ ತಾಯ್ನಾಡಿಗೆ ಕರೆತರುವುದಕ್ಕೆ ತಮ್ಮ ಸರ್ಕಾರ ಯಾವ ಪ್ರಯೋಗ ಮಾಡುವುದಕ್ಕು ಸಿದ್ದ ಎಂದು ಹೇಳಿದ್ದಾರೆ.

ಉಕ್ರೇನ್ನಿಂದ ಭಾರತೀಯರ ಸ್ಥಳಾಂತರಿಸುತ್ತಿರುವುದನ್ನು ನೋಡಿದರೆ ವಿಶ್ವದಲ್ಲಿ ಭಾರತದ ಶಕ್ತಿ ಏರುತ್ತಿರುವುದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಹೇಳಿದ್ದಾರೆ. ನಾಗರೀಕರನ್ನು ವಾಪಸ್ ಕರೆತರುವ ಸಲುವಾಗಿ ಸರ್ಕಾರವು ನಾಲ್ವರು ಮಂತ್ರಿಗಳನ್ನು ನೇಮಿಸಿದೆ ಮತ್ತು IAFಅನ್ನು ನಿಯೋಜಿಸಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸೇರಿದಂತೆ ಸ್ವಪಕ್ಷಿಯರಿಂದಲೇ ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮೋದಿ ಈ ರೀತಿ ಹೇಳಿದ್ದಾರೆ.

ಪ್ರಧಾನಿ ಮೋದಿ ಮಾತನಾಡುವ ವೇಳೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ಪಟ್ಟಿಯನ್ನು ಜನರು ಒದಿದ್ದಾರೆ ಮತ್ತು ಯೋಗಿ ಆದಿತ್ಯನಾಥ್ ಅಡಿಯಲ್ಲಿ ಉತ್ತರ ಪ್ರದೇಶ ಅಗಾಧವಾದ ಪ್ರಗತಿಯನ್ನು ಸಾಧಿಸಿದೆ. ಕುಟುಂಬ ರಾಜಕಾರಣಕ್ಕೆ ನೀವು ಅವಕಾಶ ಕೊಡಬೇಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ದೇಶವನ್ನು ಅವಮಾನಿಸುವ ಅವಕಾಶವನ್ನು ಕುಟುಂಬ ರಾಜಕಾರಣ ಮಾಡುವವರು ಅನೇಕ ಭಾರೀ ಸದುಪಯೋಗ ಪಡಿಸಿಕೊಂಡಿದ್ದಾರೆ. ಅವರು ಅಧಿಕಾರದಲ್ಲಿ ಇದ್ದ ವೇಳೆ ನಿಮ್ಮಗಾಗಿ ಏನನ್ನು ಮಾಡಿಲ್ಲ ನೀವು ಅವರನ್ನು ಯಾವುದೇ ಕಾರಣಕ್ಕು ಬೆಂಬಲಿಸಬಾರದು ಎಂದು ಮನವಿ ಮಾಡಿದ್ದಾರೆ.

ಹಾಲಿ ನಡೆಯುತ್ತಿರುವ ಚುನಾವಣೆ ಉತ್ತರಪ್ರದೇಶದ ಭವಿಷಯವನ್ನು ನಿರ್ಧರಿಸಲಿದೆ ನಮ್ಮ ಸರ್ಕಾರವು ಸಮಾಜದ ಬಡ ಜನರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಕೊಡುಗೆಯಾಗಿ ನೀಡಿದ್ದೇವೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ದೇಶಾದ್ಯಂತ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಜನರಿಂದ ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಮೋದಿ ಸರ್ಕಾರ ವಿಷಯಾಂತರ ಮಾಡಲು ಮುಂದಾಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

Tags: BJPCongress PartyPM Modi dubs evacuation of stranded Indians in Ukraine as nations rising powerRussiaRussian Ukraine WarRussiaUkraineCrisisUkraineUkraineConflictUkraineUnderAttackನರೇಂದ್ರ ಮೋದಿಬಿಜೆಪಿ
Previous Post

ತಾಯಿ ಭೇಟಿಗೆ ಆನಂದ್‌ ತೇಲ್ತುಂಬಡೆ ಎರಡು ದಿನಗಳ ಅವಕಾಶ ನೀಡಿದ ಬಾಂಬೆ ಹೈಕೋರ್ಟ್

Next Post

ಇನ್ನೆಷ್ಟು ಕನ್ನಡದ ಮಕ್ಕಳು ನೀಟ್ ಗೆ ಬಲಿಯಾಗಬೇಕು?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಇನ್ನೆಷ್ಟು ಕನ್ನಡದ ಮಕ್ಕಳು ನೀಟ್ ಗೆ ಬಲಿಯಾಗಬೇಕು?

ಇನ್ನೆಷ್ಟು ಕನ್ನಡದ ಮಕ್ಕಳು ನೀಟ್ ಗೆ ಬಲಿಯಾಗಬೇಕು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada