• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸೇನಾ ಸಮವಸ್ತ್ರ ಧರಿಸಿದ ಪ್ರಧಾನಿ ಮೋದಿಗೆ ಉತ್ತರಪ್ರದೇಶ ಕೋರ್ಟ್ ನೋಟಿಸ್‌ ನೀಡಿದ್ದೇಕೆ?

ಫೈಝ್ by ಫೈಝ್
February 5, 2022
in ದೇಶ
0
ಸೇನಾ ಸಮವಸ್ತ್ರ ಧರಿಸಿದ ಪ್ರಧಾನಿ ಮೋದಿಗೆ ಉತ್ತರಪ್ರದೇಶ ಕೋರ್ಟ್ ನೋಟಿಸ್‌ ನೀಡಿದ್ದೇಕೆ?
Share on WhatsAppShare on FacebookShare on Telegram

ಸ್ವತಂತ್ರ ಭಾರತದ ಪ್ರಧಾನಿಗಳಲ್ಲಿ ಮತ್ತು ದೇಶವನ್ನು ಆಳಿದ ಪಕ್ಷಗಳಲ್ಲಿ ಭಾರತೀಯ ಸೇನೆಯನ್ನು ಬಿಜೆಪಿ ಹಾಗೂ ಮೋದಿಯಷ್ಟು ರಾಜಕೀಯಕ್ಕೆ ಬಳಸಿಕೊಂಡವರು ಯಾರೂ ಇಲ್ಲ. ಅಷ್ಟಕ್ಕೂ, ಮೋದಿ ಪ್ರಧಾನಿಯಾಗಿರುವ ಕಾಲಘಟ್ಟದಲ್ಲಿ ಮಿತಿ ಮೀರಿದ ಸೇನಾ ದೇಶ ಯುದ್ಧೋನ್ಮಾದದಿಂದ ಸಾಕಷ್ಟು ಬಳಲಿದೆ.

ADVERTISEMENT

ಸರ್ಜಿಕಲ್‌ ಸ್ಟ್ರೈಕ್‌ ಉದಾಹರಣೆಯನ್ನೇ ತೆಗೆದುಕೊಂಡರೆ, ಅದರ ಸಂಪೂರ್ಣ ಕ್ರೆಡಿಟನ್ನು ನರೇಂದ್ರ ಮೋದಿ 2019 ರ ಲೋಕಸಭಾ ಚುನಾವಣೆಯಲ್ಲಿ ಪಡೆದುಕೊಂಡಿದ್ದಾರೆ. ಅದೇ ವೇಳೆ, ಪುಲ್ವಾಮದಲ್ಲಿ ಹುತಾತ್ಮರಾದ ಸೈನಿಕರ ಹಾಗೂ ಗಾಲ್ವಾನ್‌ ಕಣಿವೆಯಲ್ಲಿ ಜೀವ ತೆತ್ತ ಯೋಧರ ಸಾವಿನ ಲೆಕ್ಕವನ್ನು ಹೊರುವುದರಿಂದ ಪ್ರಧಾನಿ ನುಣುಚಿಕೊಂಡಿದ್ದಾರೆ.

ಆದರೆ, ಇದೀಗ ಸೇನೆ ಸಮವಸ್ತ್ರವನ್ನು ಧರಿಸಿ, ಯೋಧರೊಂದಿಗೆ ಫೋಟೋ ಶೂಟ್‌ ಮಾಡುತ್ತಾ, ಸೇನೆಯನ್ನು ರಾಜಕೀಯ ಸ್ವಹಿತಕ್ಕೆ ಬಳಸಿದ ಪ್ರಧಾನಿ ಮೋದಿಯನ್ನು ಮುಜುಗರಕ್ಕೀಡಾಗಿಸುವಂತಹ ಕ್ರಮವನ್ನು ಉತ್ತರ ಪ್ರದೇಶದ ನ್ಯಾಯಾಲಯವು ಕೈಗೊಂಡಿದೆ.

ಕಳೆದ ವರ್ಷ ಜಮ್ಮು ಕಾಶ್ಮೀರ ಭೇಟಿ ಸಂಧರ್ಭದಲ್ಲಿ, ಭಾರತೀಯ ಸೇನೆಗೆ ಮಾತ್ರ ನಿಗದಿಯಾಗಿರುವ ಸಮವಸ್ತ್ರವನ್ನು ನರೇಂದ್ರ ಮೋದಿ ಧರಿಸಿರುವ ಕುರಿತಂತೆ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಉತ್ತರ ಪ್ರದೇಶದ ಜಿಲ್ಲಾ ನ್ಯಾಯಾಲಯವೊಂದು ನೋಟಿಸ್‌ ನೀಡಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 140 ರ ಅಡಿಯಲ್ಲಿ ಸೈನಿಕರು ಬಳಸುವ ವಸ್ತ್ರವನ್ನು ಧರಿಸುವುದು ಅಥವಾ ಸೇನಾ ಸಿಬ್ಬಂದಿಗಳ ಗುರುತನ್ನು ಬಳಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪ್ರಯಾಗರಾಜ್ನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ದೈನಿಕ್ ಭಾಸ್ಕರ್ ಅವರ ವರದಿಯ ಪ್ರಕಾರ, ಜಿಲ್ಲಾ ನ್ಯಾಯಾಧೀಶ ನಳಿನ್ ಕುಮಾರ್ ಶ್ರೀವಾಸ್ತವ ಅವರು ಅರ್ಜಿಯನ್ನು ಸಲ್ಲಿಸಿದ ವಕೀಲ ರಾಕೇಶ್ ನಾಥ್ ಪಾಂಡೆ ಅವರ ವಾದಗಳನ್ನು ಆಲಿಸಿ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 156 (3) ಅಡಿಯಲ್ಲಿ ನೋಟಿಸ್ ನೀಡಲು ಸೂಚಿಸಿದ್ದಾರೆ.

ಕಳೆದ ವರ್ಷದ ಡಿಸೆಂಬರ್ನಲ್ಲಿಯೇ ಪಾಂಡೆ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ಮುಖ್ಯ ಮ್ಯಾಜಿಸ್ಟ್ರೇಟ್ ಹರೇಂದ್ರ ನಾಥ್ ಅವರು, ಈ ಘಟನೆಯು ಸದರಿ ನ್ಯಾಯಾಲಯದ ವ್ಯಾಪ್ತಿಯಲ್ಲಿ ನಡೆದಿಲ್ಲ ಎಂದು ಅರ್ಜಿಯನ್ನು ತಿರಸ್ಕರಿಸಿದ್ದರು. ಅದೇ ವೇಳೆ, ಘಟನೆ ನಡೆದ ನ್ಯಾಯಾಲಯದ ವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಇದರ ವಿಚಾರಣೆ ನಡೆಸಬಹುದು ಎಂದು ಹೇಳಿದ್ದರು. ಈ ಆದೇಶವನ್ನು ಅರ್ಜಿ ಸಲ್ಲಿಸಿದ್ದ ಪಾಂಡೆ ಅವರು ಜಿಲ್ಲಾ ನ್ಯಾಯಾಧೀಶರ ಮುಂದೆ ಪ್ರಶ್ನಿಸಿದ್ದರು. ಇದೀಗ ನ್ಯಾಯಾಲಯವು ಪ್ರಧಾನಿ ಕಾರ್ಯಾಲಯಕ್ಕೆ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ 2ರಂದು ಮುಂದಿನ ವಿಚಾರಣೆ ನಡೆಯಲಿದೆ ಎಂದು ವರದಿಯಾಗಿದೆ.


2017 ರಿಂದ ಸೇನಾ ಸಮವಸ್ತ್ರ ಬಳಸುತ್ತಿರುವ ಮೋದಿ ಪ್ರಧಾನಿ ನರೇಂದ್ರ ಮೋದಿ ಅವರು 2016 ರಿಂದ ಸೈನಿಕರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಸೈನಿಕರನ್ನು ಬಳಸಿ ಪ್ರಧಾನಿ ವೈಯಕ್ತಿಕ ಇಮೇಜ್‌ ಗಳಿಸಿಕೊಳ್ಳುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪದ ನಡುವೆಯೇ, ಮೋದಿ, 2017 ರಲ್ಲಿ ಸೇನೆಯ ಸಮವಸ್ತ್ರವನ್ನು ಧರಿಸಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.


ಅದಾಗ್ಯೂ, 2017 ರಿಂದ ದೀಪಾವಳಿ ಸಂದರ್ಭದಲ್ಲಿ ಪ್ರಧಾನಿ ಸೇನಾ ಸಮವಸ್ತ್ರವನ್ನು ಅಕ್ರಮವಾಗಿ ಬಳಸುತ್ತಿದ್ದಾರೆ. 2021 ರ ನವೆಂಬರಿನಲ್ಲಿ ಜಮ್ಮು ಕಾಶ್ಮೀರದ ನೌಷೆರ ಜಿಲ್ಲೆಯಲ್ಲಿ ಭಾರತದ ಸಶಸ್ತ್ರ ಪಡೆಯೊಂದಿಗೆ ದೀಪಾವಳಿ ಆಚರಿಸಿದ್ದ ಮೋದಿ ಸೇನಾ ಸಮವಸ್ತ್ರ ಧರಿಸಿದ್ದರು.

ಸೇನೆಯ ಸಮವಸ್ತ್ರವನ್ನು ಭಾರತದ ಪ್ರಧಾನಿ ಮೋದಿ ಮಾತ್ರವಲ್ಲ, ಜಾಗತಿಕ ಇತರೆ ನಾಯಕರೂ ಬಳಸುತ್ತಿದ್ದಾರೆ. ತುರ್ಕಿಯ ರೆಸೆಪ್‌ ತಯ್ಯಿಪ್‌ ಎರ್ದುಗಾನ್‌, ರಷ್ಯಾದ ವ್ಲಾದಿಮಿರ್‌ ಪುಟಿನ್‌, ಚೀನಾದ ಕ್ಸಿ ಜಿನ್‌ಪಿಂಗ್‌ ಮೊದಲಾದ ನಾಯಕರು ಆಯಾ ದೇಶದ ಸೇನಾ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದ ಹಾಗೆ, ಇತರೆ ದೇಶದ ಈ ನಾಯಕರುಗಳೆಲ್ಲಾ ನಿರಂಕುಶ ಸರ್ವಾಧಿಕಾರಿಗಳು ಎನ್ನುವುದು ಕಾಕತಾಳೀಯ!

Tags: BJPCongress PartyCovid 19ಉತ್ತರಪ್ರದೇಶ ಕೋರ್ಟ್ಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

2022 – 23ನೇ ಸಾಲಿನ ಬಜೆಟ್‌ಗೆ BBMP ತಯಾರಿ : ಚುನಾವಣೆ ಜೊತೆಯಲ್ಲೇ ಪಾಲಿಕೆಯಿಂದ ಬಜೆಟ್‌ಗೆ ಸಿದ್ಧತೆ

Next Post

ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿಯೇ ಸಿದ್ದರಾಮಯ್ಯರಿಂದ ಹಿಜಾಬ್ ವಿವಾದ ಮುನ್ನೆಲೆಗೆ : ಬಿಜೆಪಿ ಆರೋಪ

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

Heartattack:1 ತಿಂಗಳಲ್ಲಿ 14 ಜನ ಸಾವು, 24 ಗಂಟೆಗಳಲ್ಲಿ ಹಾಸನದ ಇಬ್ಬರು ಹೃದಯಾಘಾತಕ್ಕೆ ಬಲಿ.

June 26, 2025

BJP Ex Renukacharya vs Congress MLA Shivaganga: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

June 26, 2025
Next Post
ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿಯೇ ಸಿದ್ದರಾಮಯ್ಯರಿಂದ ಹಿಜಾಬ್ ವಿವಾದ ಮುನ್ನೆಲೆಗೆ : ಬಿಜೆಪಿ ಆರೋಪ

ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿಯೇ ಸಿದ್ದರಾಮಯ್ಯರಿಂದ ಹಿಜಾಬ್ ವಿವಾದ ಮುನ್ನೆಲೆಗೆ : ಬಿಜೆಪಿ ಆರೋಪ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada