• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರಧಾನಿ ಪ್ರಯಾಣದ ವೇಳೆ ನಿಜಕ್ಕೂ ನಡೆದದ್ದು ಏನು? ಭದ್ರತಾ ಲೋಪವೋ? ರ್‍ಯಾಲಿ ರದ್ದು ಮಾಡಲು ನೆಪವೋ?

ಯದುನಂದನ by ಯದುನಂದನ
January 6, 2022
in Top Story, ದೇಶ, ರಾಜಕೀಯ
0
ಪ್ರಧಾನಿ ಪ್ರಯಾಣದ ವೇಳೆ ನಿಜಕ್ಕೂ ನಡೆದದ್ದು ಏನು? ಭದ್ರತಾ ಲೋಪವೋ? ರ್‍ಯಾಲಿ ರದ್ದು ಮಾಡಲು ನೆಪವೋ?
Share on WhatsAppShare on FacebookShare on Telegram

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ (ಜನವರಿ 5) ಮಧ್ಯಾಹ್ನ ಪಂಜಾಬಿನ ಬಟಿಂಡಾದಿಂದ ಫಿರೋಜ್‌ಪುರದ ಹುಸೇನಿವಾಲಾ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಹೋಗುವ ನಡುವೆ ಫ್ಲೈಓವರ್‌ ಮೇಲೆ 15-20 ನಿಮಿಷ ಕಾಯಬೇಕಾಯಿತು. ‘ಇದಕ್ಕೆ ಪಂಜಾಬ್ ಸರ್ಕಾರದ ಭದ್ರತಾ ಲೋಪ ಕಾರಣ’ ಎಂದು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಆರೋಪಿಸುತ್ತಿದೆ. ‘ಫಿರೋಜ್‌ಪುರದಲ್ಲಿ ಮೋದಿ ರ್‍ಯಾಲಿಗೆ ಜನ ಬಂದಿರಲಿಲ್ಲ. ಅಲ್ಲಿ ಖಾಲಿ ಕುರ್ಚಿಗಳು ರಾಜಾಜಿಸುತ್ತಿದ್ದವು. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ರ್‍ಯಾಲಿ ರದ್ದು ಮಾಡಲಾಗಿದೆ.  ರ್‍ಯಾಲಿ ರದ್ದು ಮಾಡಲು ಬಿಜೆಪಿ ನಾಯಕರಿಗೆ ನೆಪ ಬೇಕಿತ್ತು. ಹಾಗಾಗಿ ಪಂಜಾಬ್ ಸರ್ಕಾರದ ಮೇಲೆ ಭದ್ರತಾ ಲೋಪದ ಆರೋಪ ಹೊರಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಹೇಳುತ್ತಿದೆ.

ADVERTISEMENT

ಹಾಗಾದರೆ ವಾಸ್ತವವಾಗಿ ಬಟಿಂಡಾ ಮತ್ತು ಫಿರೋಜ್‌ಪುರದ ನಡುವೆ ನಡೆದ ಘಟನೆಯಾದರೂ ಏನು? ಅಲ್ಲಿ ರಸ್ತೆ ತಡೆ ನಡೆಸುತ್ತಿದ್ದುದು ಯಾವ ಕಾರಣಕ್ಕೆ? ಯಾರು? ಎಂಬ ಬಗ್ಗೆ ರಾಷ್ಟ್ರೀಯ ದೈನಿಕ ‘ಇಂಡಿಯನ್ ಎಕ್ಸ್ ಪ್ರೆಸ್’ ಸಮಗ್ರವಾದ ವರದಿ ಮಾಡಿದೆ. ಅದರ ಸಾರಾಂಶವನ್ನು ‘ಪ್ರತಿಧ್ವನಿ’ ಕನ್ನಡಿಗ ಓದುಗರ ಮುಂದಿಡುತ್ತಿದೆ.

ಪ್ರತಿಭಟನೆ ನಡೆಸುತ್ತಿದ್ದ ರೈತರು ಯಾರು?

ಸುರ್ಜಿತ್ ಸಿಂಗ್ ಫೂಲ್ ನೇತೃತ್ವದ ಭಾರತೀಯ ಕಿಸಾನ್ ಯೂನಿಯನ್ ಕ್ರಾಂತಿಕಾರಿ (ಪೂಲ್) ಸಂಘಟನೆಗೆ ಸೇರಿದ ಸುಮಾರು 400ರಿಂದ 500 ರೈತರು ಬಟಿಂಡಾ ಮತ್ತು ಫಿರೋಜ್‌ಪುರದ ನಡುವೆ ಇರುವ ಪಿಯಾರಿಯಾನಾ ಗ್ರಾಮದ ಬಳಿಯ ಫ್ಲೈಓವರ್ ಮೇಲೆ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಈ  ಭಾರತೀಯ ಕಿಸಾನ್ ಯೂನಿಯನ್ ಕ್ರಾಂತಿಕಾರಿ (ಪೂಲ್) ದೆಹಲಿಯ ಗಡಿಗಳಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಒಂದು ವರ್ಷ ಸತತವಾಗಿ ಪ್ರತಿಭಟನೆ ಮಾಡಿ ಯಶಸ್ವಿಯಾದ ಸಂಯುಕ್ತ ಕಿಸಾನ್ ಮೋರ್ಚಾದ (SKM) ಭಾಗವಾಗಿದೆ. ಇದು ಪಂಜಾಬ್‌ನ ಮಾಲ್ವಾ ಪ್ರದೇಶದ 9 ಜಿಲ್ಲೆ ಹಾಗೂ ಮಜಾ ಪ್ರದೇಶದ 2 ಜಿಲ್ಲೆಗಳಲ್ಲಿ ಸಕ್ರೀಯವಾಗಿದೆ. 7 ಜಿಲ್ಲೆಗಳಲ್ಲಿ ಗಣನೀಯ ಪ್ರಮಾಣದಲ್ಲಿದೆ. ಒಟ್ಟಾರೆ ರಾಜ್ಯಾದ್ಯಂತ 25 ಸಾವಿರದಿಂದ 30 ಸಾವಿರ ಸದಸ್ಯರನ್ನು ಹೊಂದಿದೆ.

ಈ ರೈತರು ಪ್ರತಿಭಟನೆ ನಡೆಸುತ್ತಿದ್ದುದು ಏಕೆ?

ಭಾರತೀಯ ಕಿಸಾನ್ ಯೂನಿಯನ್ ಕ್ರಾಂತಿಕಾರಿ (ಪೂಲ್) ಪ್ರಧಾನ ಕಾರ್ಯದರ್ಶಿ ಬಲದೇವ್ ಸಿಂಗ್ ಝಿರಾ ಅವರ ಪ್ರಕಾರ, ರೈತರು ಬುಧವಾರ ಪಂಜಾಬಿನ ಮೂರು ಸ್ಥಳಗಳಲ್ಲಿ ರಸ್ತೆ ತಡೆ ನಡೆಸುತ್ತಿದ್ದರು. ಆ ಪೈಕಿ ಬಟಿಂಡಾ ಮತ್ತು ಫಿರೋಜ್‌ಪುರದ ನಡುವೆ ಇರುವ ಪಿಯಾರಿಯಾನಾ ಗ್ರಾಮದ ಬಳಿ ನಡೆಯುತ್ತಿದ್ದ ಪ್ರತಿಭಟನೆಯೂ ಒಂದು. ಇದೇ ರೀತಿ ಹರಿಕಾ ಮತ್ತು ಕುಲಗರ್ಹಿಯಲ್ಲಿ ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ವತಿಯಿಂದ ರಸ್ತೆ ತಡೆ ನಡೆಸಲಾಗುತ್ತಿತ್ತು. ಫಿರೋಜ್‌ಪುರದಲ್ಲಿ ಪ್ರಧಾನಿ ಮೋದಿ ರ್‍ಯಾಲಿಗೆ ಬಿಜೆಪಿ ಬೆಂಬಲಿಗರು ಬರದಂತೆ ತಡೆಯುವುದು ಇದರ ಉದ್ದೇಶವಾಗಿತ್ತು. 

ಮೋದಿ ಈ ರಸ್ತೆಯಲ್ಲಿ ಪ್ರಯಾಣಿಸುವ ಬಗ್ಗೆ ಗೊತ್ತಿತ್ತಾ?

ಬಲದೇವ್ ಸಿಂಗ್ ಝಿರಾ ಅವರ ಪ್ರಕಾರ ಪ್ರತಿಭಟನಾನಿರತ ರೈತರಿಗೆ ಈ ಮಾಹಿತಿ ಇರಲಿಲ್ಲ. ಅವರು ಪ್ರಧಾನಿ ಮೋದಿ ಹೆಲಿಕಾಪ್ಟರ್‌ನಲ್ಲಿ ಹೋಗುತ್ತಾರೆ ಎಂದುಕೊಂಡಿದ್ದರು. ‘ನಮ್ಮ ಉದ್ದೇಶ ಬಿಜೆಪಿ ಬೆಂಬಲಿಗರನ್ನು ತಡೆಯುವುದೇ ಹೊರತು ಪ್ರಧಾನಿಯನ್ನಲ್ಲ’ ಎನ್ನುತ್ತಾರೆ ಅವರು. ಯಾವಾಗ ಪ್ರಧಾನಿ ಬಟಿಂಡಾ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಹುಸೇನಿವಾಲಾಗೆ ಹೋಗಬೇಕೆಂದು ನಿರ್ಧರಿಸಿದರೋ ಆಗ ಫಿರೋಜ್‌ಪುರದ ಹಿರಿಯ ಪೊಲೀಸ್ ಅಧೀಕ್ಷಕ ಹರ್ಮನ್‌ದೀಪ್ ಸಿಂಗ್ ನಮಗೆ ಮಾಹಿತಿ ನೀಡಿದರು. ಆದರೆ ನಾವು ಅವರ ಮಾತನ್ನು ನಂಬಲಿಲ್ಲ. ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ರ್‍ಯಾಲಿಗೆ ಹೋಗಲು ಅವಕಾಶ ಮಾಡಿಕೊಡಲೆಂದು ನಮ್ಮ ಬಳಿ ಸುಳ್ಳು ಹೇಳುತ್ತಿದ್ದಾರೆ ಎಂದುಕೊಂಡೆವು. ಪ್ರಧಾನಿಯವರು ನಿಜವಾಗಿ ಆ ರಸ್ತೆಯಲ್ಲಿ ಪ್ರಯಾಣಿಸುತ್ತಾರೆ ಎಂದು ನಮಗೆ ತಿಳಿದಿದ್ದರೆ ನಾವು ನಮ್ಮ ಧರಣಿಯನ್ನು ಹಿಂತೆಗೆದುಕೊಳ್ಳುತ್ತಿದ್ದೆವು ಎಂದು ಕೂಡ ಅವರು ಹೇಳಿದ್ದಾರೆ.

ರೈತ ವಿರೋಧಿಯಾದ ಮೂರು ಕೃಷಿ ಕಾಯಿದೆಗಳನ್ನು ಜಾರಿಗೆ ತಂದ, ನಂತರ ಅವುಗಳನ್ನು ವಾಪಸ್ ಪಡೆಯಲು ಸತಾಯಿಸಿದ, ದೆಹಲಿ ಗಡಿಯಲ್ಲಿ ರೈತರಿಗೆ ಚಿತ್ರಹಿಂಸೆ ನೀಡಿದ ಬಿಜೆಪಿ ವಿರುದ್ಧ ನಮಗೆ ಸಾಕಷ್ಟು ಕೋಪವಿದೆ. ಹಾಗಾಗಿ ಬಿಜೆಪಿ ‌ರ್‍ಯಾಲಿಗೆ ಅಡ್ಡಿಪಡಿಸಬೇಕು ಎಂದು ನಿರ್ಧರಿಸಿದ್ದೆವು. ರ್‍ಯಾಲಿಗೆ ಬಿಜೆಪಿ ಬೆಂಬಲಿಗರು ಹೋಗದಂತೆ ಎಲ್ಲಾ ಕಡೆಗಳಲ್ಲೂ ರಸ್ತೆ ತಡೆ ಆಯೋಜಿಸಿದ್ದೆವು. ಯಾವಾಗ ಪ್ರಧಾನಿ ಪ್ರಯಾಣ ಮಾಡುತ್ತಿದ್ದಾರೆ ಎಂದು ಮನವರಿಕೆಯಾಯಿತೋ ಆಗ ಅವರಿಗೆ ಅವಕಾಶ ಮಾಡಿಕೊಟ್ಟೆವು ಎಂದು ಝಿರಾ ಹೇಳಿದ್ದಾರೆ.

ಪ್ರಧಾನಿ ರ್‍ಯಾಲಿ ವಿರುದ್ಧ ಪ್ರತಿಭಟನೆ ಉದ್ದೇಶವಿದೆಯೇ?

ಇದನ್ನು ಭಾರತೀಯ ಕಿಸಾನ್ ಯೂನಿಯನ್ ಕ್ರಾಂತಿಕಾರಿ (ಪೂಲ್) ಪ್ರಧಾನ ಕಾರ್ಯದರ್ಶಿ ಬಲದೇವ್ ಸಿಂಗ್ ಝಿರಾ ಸ್ಪಷ್ಟವಾಗಿ ನಿರಾಕರಿಸುತ್ತಾರೆ. ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ವತಿಯಿಂದ ಹೆದ್ದಾರಿಗಳು ಮತ್ತು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸುವ ಯೋಜನೆ ಇತ್ತು. ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು, ಅದಕ್ಕಾಗಿ ಕಾನೂನು ತರಬೇಕು, ಪ್ರತಿಭಟನೆಯ ಸಂದರ್ಭದಲ್ಲಿ ರೈತರ ವಿರುದ್ಧ ದಾಖಲಿಸಲಾದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು ಪ್ರತಿಭಟನೆ ವೇಳೆ ಸತ್ತ ರೈತರ ಕುಟುಂಬದವರಿಗೆ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡುವ ಕುರಿತು ಚರ್ಚಿಸಬೇಕು ಎಂಬ ನಮ್ಮ ಬೇಡಿಕೆಗಳ ಬಗ್ಗೆ ಮಾರ್ಚ್ 15ರಂದು ಪ್ರಧಾನಿ ಭೇಟಿ 

ಆಗಲು ಅವಕಾಶ ಮಾಡಿಕೊಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ ಬಳಿಕ ಉದ್ದೇಶಿತ  ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು‌ ರಾಜ್ಯದ ಅತಿದೊಡ್ಡ ರೈತ ಸಂಘ, ಭಾರತೀಯ ಕಿಸಾನ್ ಯೂನಿಯನ್ (ಉಗ್ರಹಣ) ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿತ್ತು. ಅಂದಾಜು 1 ಲಕ್ಷ ಯೂನಿಯನ್ ಸದಸ್ಯರು “ಗೋ ಬ್ಯಾಕ್ ಮೋದಿ” ಎಂಬ ಫಲಕಗಳನ್ನು ಹಿಡಿದು ವಿವಿಧ ಸ್ಥಳಗಳಲ್ಲಿ ಪ್ರಧಾನಿಯವರ ಪ್ರತಿಕೃತಿಗಳನ್ನು ಸುಟ್ಟಿದ್ದರು.

Tags: BJPCovid 19ಕೋವಿಡ್-19ನರೇಂದ್ರ ಮೋದಿಪಂಜಾಬ್ ಸರ್ಕಾರಪ್ರಧಾನಿ ನರೇಂದ್ರ ಮೋದಿಫಿರೋಜ್‌ಪುರಬಿಜೆಪಿಭದ್ರತಾ ಲೋಪವೋಭಾರತೀಯ ಕಿಸಾನ್ ಯೂನಿಯನ್ ಕ್ರಾಂತಿಕಾರಿರೈತ ಪ್ರತಿಭಟನೆರ್‍ಯಾಲಿಸುರ್ಜಿತ್ ಸಿಂಗ್ ಫೂಲ್
Previous Post

ಕಾಶಿ ಮಾದರಿಯಲ್ಲಿ ಬಸವಣ್ಣನ ಜನ್ಮ ಸ್ಥಳ ಕೂಡ ಅಭಿವೃದ್ದಿ ಆಗಲಿ ಎನ್ನುವ ಕೂಗು ಮುನ್ನೆಲೆಗೆ

Next Post

ಪಾದಯಾತ್ರೆ ಪಾಲಿಟಿಕ್ಸ್ : ಕಾಂಗ್ರೆಸಿಗೆ ಒಂದು ಪ್ರತ್ಯೇಕ ನಿಯಮ ಮಾಡಲು ಸಾಧ್ಯವಿಲ್ಲ – ಆರಗ ಜ್ಞಾನೇಂದ್ರ

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
0

ವಿಕಾಸದ ಗುರಿಯತ್ತ ಸಾಗುತ್ತಿರುವ ನವ-ಡಿಜಿಟಲ್‌ ಭಾರತ ಎಲ್ಲ ಮಗ್ಗುಲುಗಳಲ್ಲೂ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶದ ಪ್ರಗತಿ ಅಥವಾ ಅಭಿವೃದ್ಧಿಯ ಕಲ್ಪನೆಯನ್ನು ಆರ್ಥಿಕ ಪರಿಭಾಷೆಯಿಂದ ಹೊರತುಪಡಿಸಿ ವಿಶ್ಲೇಷಿಸುವಾಗ ಸಹಜವಾಗಿ...

Read moreDetails
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
Next Post
ರಾಜಕೀಯ ರ್ಯಾಲಿಗಳಿಗೆ ಬ್ರೇಕ್ ಹಾಕದೆ ಲಾಕ್ ಡೌನ್ ಬೆದರಿಕೆ ಹಾಕುವುದು ಎಷ್ಟು ಸರಿ ಗೃಹ ಸಚಿವರೇ?

ಪಾದಯಾತ್ರೆ ಪಾಲಿಟಿಕ್ಸ್ : ಕಾಂಗ್ರೆಸಿಗೆ ಒಂದು ಪ್ರತ್ಯೇಕ ನಿಯಮ ಮಾಡಲು ಸಾಧ್ಯವಿಲ್ಲ - ಆರಗ ಜ್ಞಾನೇಂದ್ರ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada