• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತದಲ್ಲಿ ಕರೋನಾ 2ನೇ ಅಲೆ; ಮೋದಿ ಸೃಷ್ಟಿಸಿದ ರಾಷ್ಟ್ರೀಯ ದುರಂತ

ಯದುನಂದನ by ಯದುನಂದನ
May 9, 2021
in ದೇಶ
0
ಭಾರತದಲ್ಲಿ ಕರೋನಾ 2ನೇ ಅಲೆ; ಮೋದಿ ಸೃಷ್ಟಿಸಿದ ರಾಷ್ಟ್ರೀಯ ದುರಂತ
Share on WhatsAppShare on FacebookShare on Telegram

ADVERTISEMENT

ಭಾರತದಲ್ಲಿ ಪ್ರತಿ ದಿನ ‌4 ಲಕ್ಷಕ್ಕಿಂತಲೂ ಹೆಚ್ಚು ಜ‌ನ ಕರೋನಾ ಸೋಂಕು ಪೀಡಿತರಾಗುತ್ತಿದ್ದಾರೆ. 4 ಸಾವಿರಕ್ಕೂ ಹೆಚ್ಚು ಜನ ಕರೋನಾದಿಂದ ಸಾಯುತ್ತಿದ್ದಾರೆ. ನಡುವೆ ಆಮ್ಲಜನಕದ ಸಮಸ್ಯೆ ಸೃಷ್ಟಿಯಾಗಿದೆ. ಬೆಡ್, ಐಸಿಯು, ವೆಂಟಿಲೇಟರ್ ಮತ್ತು ಔಷಧೀಯ ಸಾಮಾಗ್ರಿಗಳ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕರೋನಾ ಲಸಿಕೆಗಳು ಕೂಡ ಅಗತ್ಯಕ್ಕೆ ತಕ್ಕಷ್ಟು ಲಭ್ಯವಾಗುತ್ತಿಲ್ಲ. ಹೀಗೆ ಸಮಸ್ಯೆಗಳ ಸರಮಾಲೆ ಸೃಷ್ಠಿಯಾಗಲು, ಸತ್ತವರನ್ನು ಸುಡಲು ಸಾಲುಗಟ್ಟಿ ನಿಲ್ಲಬೇಕಾದ ಕಂಡೂಕೇಳರಿಯದ ಪರಿಸ್ಥಿತಿ ನಿರ್ಮಾಣವಾಗಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಕಾರಣ ಎಂದು ಅಂತರರಾಷ್ಟ್ರೀಯ ವೈದ್ಯಕೀಯ ಜರ್ನಲ್ ‘ದಿ ಲ್ಯಾನ್ಸೆಟ್’ ಹೇಳಿದೆ.

ಭಾರತದ ಮಾಧ್ಯಮಗಳು ಇಷ್ಟು ನೇರವಾಗಿ, ನಿಷ್ಠೂರವಾಗಿ ಕೇಂದ್ರ ಸರ್ಕಾರದ ತಪ್ಪುಗಳನ್ನು ಎತ್ತಿ ಹೇಳುತ್ತಿಲ್ಲ. ಅಲ್ಲೊಮ್ಮೆ ಇಲ್ಲೊಮ್ಮೆ ಕೇಳಿಬರುವ ಸಣ್ಣ ಪುಟ್ಟ ಟೀಕೆ-ವಿಮರ್ಶೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗಂಭೀರವಾಗಿ ‌ಪರಿಗಣಿಸುವುದಿಲ್ಲ. ಅಂತಾರಾಷ್ಟ್ರೀಯ ಮನ್ನಣೆ ಗಳಿಸಿರುವ ಆರ್ಥಿಕ ತಜ್ಞರೂ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನೀಡಿದಂತಹ ಸಲಹೆಗಳನ್ನು ಸಹಿಸಿಕೊಳ್ಳಲಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರೋನಾ ವಿಷಯದಲ್ಲಿ ಆಡಿದ ಮೌಲಿಕ ಮಾತುಗಳನ್ನು ಅಣಕಮಾಡಲಾಯಿತು. ಆದರೀಗ ದೇಶದಲ್ಲಿ ಹದಗೆಟ್ಟಿರುವ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ಸಮುದಾಯ ಭಾರತದತ್ತ ಬೊಟ್ಟು ಮಾಡುವಂತಾಗಿದೆ.

ಅಂತರರಾಷ್ಟ್ರೀಯ ವೈದ್ಯಕೀಯ ಜರ್ನಲ್ ‘ದಿ ಲ್ಯಾನ್ಸೆಟ್’ ಶನಿವಾರದ ತನ್ನ ಸಂಪಾದಕೀಯದಲ್ಲಿ ‘ಕರೋನಾ ನಿಯಂತ್ರಿಸುವಲ್ಲಿ ಭಾರತವು ಆರಂಭಿಕ ಹಂತದಲ್ಲಿ ಯಶಸ್ಸು ಸಾಧಿಸಿತ್ತು’ ಎಂಬುದನ್ನು ಹೇಳಿದೆ‌. ಕ್ರಮೇಣ ಆ ಆರಂಭಿಕ ಯಶಸ್ಸನ್ನು ಹಾಳುಮಾಡಿದೆ ಎಂಬುದಾಗಿ ಕೂಡ ಉಲ್ಲೇಖಿಸಿದೆ. ಅದಕ್ಕಿಂತ ಗಮನಾರ್ಹವಾದ ಸಂಗತಿ ಎಂದರೆ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವೇ ಈ “ಸ್ವಯಂ ಪ್ರೇರಿತ ರಾಷ್ಟ್ರೀಯ ದುರಂತ”ದ ನೇತೃತ್ವ ವಹಿಸಿದೆ ಎಂಬ ಕಹಿ ಸತ್ಯವನ್ನು ಬಿಚ್ಚಿಟ್ಟಿದೆ.

ಜಗತ್ತಿನಾದ್ಯಂತ ವ್ಯಾಪಕವಾಗಿ ಮನ್ನಣೆಗಳಿಸಿರುವ ‘ದಿ ಲ್ಯಾನ್ಸೆಟ್’ ಜರ್ನಲ್, ಭಾರತದ ಕರೋನಾ ಸಾಂಕ್ರಾಮಿಕ ಬಿಕ್ಕಟ್ಟು ನಿವಾರಣೆ ಆಗುವುದು ಸದ್ಯ ಪ್ರಧಾನಿ ಮೋದಿಯ ಆಡಳಿತವು ತನ್ನ ತಪ್ಪುಗಳನ್ನು ಒಪ್ಪಿಕೊಂಡು ತೆಗೆದುಕೊಳ್ಳುವ ನಿರ್ಧಾರಗಳ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಹೇಳಿದೆ. ‘ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಟೀಕೆಗಳನ್ನು ಮತ್ತು ಮುಕ್ತ ಚರ್ಚೆಯನ್ನು ತಡೆಯುವ ಮೋದಿ ಸರ್ಕಾರದ ಕ್ರಮಗಳು ಕ್ಷಮಿಸಲು ಅರ್ಹವಲ್ಲ’ ಎಂದು ಅಭಿಪ್ರಾಯಪಟ್ಟಿದೆ.

ಕರೋನಾ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಭಾರತ ತನ್ನ ಆರಂಭಿಕ ಯಶಸ್ಸನ್ನು ಹೇಗೆ ಹಾಳು ಮಾಡಿತು ಎಂಬುದನ್ನು ವಿವರಿಸಲಾಗಿದೆ. ಕರೋನಾ ಎರಡನೇ ಅಲೆ ತಾರಕಕ್ಕೆ ಏರುವವರೆಗೆ  ಏಪ್ರಿಲ್ ವರೆಗೆ ಕೇಂದ್ರ ಸರ್ಕಾರವು ಕೋವಿಡ್ ಕಾರ್ಯಪಡೆಯ‌ ಜೊತೆ ತಿಂಗಳ ಸಭೆಯನ್ನೇ ನಡೆಸಲಿಲ್ಲ. ಇಂತಹ ಕ್ರಮಗಳಿಂದ ಆದ ಪರಿಣಾಮಗಳು ನಮ್ಮ ಕಣ್ಣ ಮುಂದೆಯೇ ಇವೆ. ಆದುದರಿಂದ ಈಗ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿರುವ ಸಂದರ್ಭದಲ್ಲಿ ಭಾರತವು ಈಗ ತನ್ನ ಪ್ರತಿಕ್ರಿಯೆಯನ್ನು ಪುನರರಾಂಭ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ.‌ ಈ ಪ್ರಯತ್ನಗಳು ಸರ್ಕಾರವು ತನ್ನ ತಪ್ಪುಗಳನ್ನು ಒಪ್ಪಿಕೊಳ್ಳುವುದು, ಜವಾಬ್ದಾರಿಯುತ ನಾಯಕತ್ವ ನೀಡುವುದು, ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವುದು ಮತ್ತು ವಿಜ್ಞಾನವನ್ನು ಅಂತರ್ಗತಗೊಂಡ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸ್ಥಾಪಿಸವುದರ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಅದು ಹೇಳಿದೆ.

ಕರೋನಾ ಎರಡನೇ ಅಲೆಯ ಅಪಾಯಗಳು ಮತ್ತು ಹೊಸ ತಳಿಗಳ ಹೊರಹೊಮ್ಮುವಿಕೆಯ ಬಗ್ಗೆ ಪದೇ ಪದೇ ಎಚ್ಚರಿಕೆ ನೀಡಿದ್ದರೂ, ಹಲವಾರು ತಿಂಗಳ ಕಡಿಮೆ ಪ್ರಕರಣಗಳ ಬಂದಿದ್ದಕ್ಕೆ ಭಾರತವು ಕೋವಿಡ್ ಅನ್ನು ಸೋಲಿಸಿದೆ ಎಂಬ ಅಭಿಪ್ರಾಯಕ್ಕೆ ಬರಲಾಯಿತು. ಕರೋನಾ ಎರಡನೇ ಅಲೆ ಹುಟ್ಟುವ ಹಂತದಲ್ಲಿ ಅಂದರೆ ಇದೇ ಮಾರ್ಚ್ ಆರಂಭದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಲು ಪ್ರಾರಂಭಿಸುವ ಮೊದಲು, ಭಾರತವು ಸಾಂಕ್ರಾಮಿಕ ರೋಗದಿಂಸ ಮುಕ್ತಾಯವಾಗುವ ಹಂತದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಘೋಷಿಸಿದ್ದರು ಎಂಬುದರ ಮೇಲೆ ಜರ್ನಲ್ ಬೆಳಕುಚೆಲ್ಲಿದೆ.

ಸೂಪರ್-ಸ್ಪ್ರೆಡರ್ ಘಟನೆಗಳ ಅಪಾಯಗಳ ಬಗ್ಗೆ ಎಚ್ಚರಿಕೆಗಳನ್ನು ನೀಡಿದ್ದರೂ ಧಾರ್ಮಿಕ ಉತ್ಸವಗಳನ್ನು ಮುಂದುವರಿಸಲು ಸರ್ಕಾರವು ಅವಕಾಶ ಮಾಡಿಕೊಟ್ಟಿತು. ದೇಶಾದ್ಯಂತದ ಲಕ್ಷಾಂತರ ಜನರು ಸೇರಿ ಮಾಡುವ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಯಿತು. ಬೃಹತ್ ರಾಜಕೀಯ ಸಮಾವೇಶಗಳನ್ನು ನಡೆಸಲಾಯಿತು. ಇವೆಲ್ಲವೂ ಕರೋನಾ ವ್ಯಾಪಕವಾಗಿ ಹರಡಲು ಕಾರಣವಾದವು ಎಂದು ಲ್ಯಾನ್ಸೆಟ್ ಹೇಳಿದೆ. ಅಲ್ಲದೆ ಭಾರತದ ವ್ಯಾಕ್ಸಿನೇಷನ್ ನೀತಿಯ ಬಗ್ಗೆ ಕೂಡ ಆಕ್ಷೇಪಣೆ ಎತ್ತಿದೆ. ರಾಜ್ಯ ಸರ್ಕಾರಗಳ ಜೊತೆ ಚರ್ಚಿಸದೆ ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ನಿರ್ಧರಿಸಿದೆ. ಮತ್ತು ದೇಶದ ಒಟ್ಡು ಜನಸಂಖ್ಯೆಯ ಶೇಕಡಾ 2ಕ್ಕಿಂತ ಕಡಿಮೆ ಲಸಿಕೆ ನೀಡುವಲ್ಲಿ ಮಾತ್ರ ಯಶಸ್ವಿಯಾಗಿದೆ ಎಂದು ಟೀಕೆ ಮಾಡಿದೆ.

Tags: PM Modi's Actions "Inexcusable"
Previous Post

ಅಮ್ಮಾ…ಎಂದರೆ ಅನುಭಾವದ ಗಣಿ

Next Post

ಕೇಂದ್ರ ಕಳೆದ 6 ತಿಂಗಳು ಕೆಲಸ ಮಾಡಿಲ್ಲ, ಹಾಗಾಗಿಯೇ ಭಾರತ ಕರೋನ ಬಿಕ್ಕಟ್ಟಿಗೆ ಸಿಲುಕಿದೆ: ಮಮತಾ ಬ್ಯಾನರ್ಜಿ ಆರೋಪ

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025
Next Post
ಕೇಂದ್ರ ಕಳೆದ 6 ತಿಂಗಳು ಕೆಲಸ ಮಾಡಿಲ್ಲ, ಹಾಗಾಗಿಯೇ ಭಾರತ ಕರೋನ ಬಿಕ್ಕಟ್ಟಿಗೆ ಸಿಲುಕಿದೆ: ಮಮತಾ ಬ್ಯಾನರ್ಜಿ ಆರೋಪ

ಕೇಂದ್ರ ಕಳೆದ 6 ತಿಂಗಳು ಕೆಲಸ ಮಾಡಿಲ್ಲ, ಹಾಗಾಗಿಯೇ ಭಾರತ ಕರೋನ ಬಿಕ್ಕಟ್ಟಿಗೆ ಸಿಲುಕಿದೆ: ಮಮತಾ ಬ್ಯಾನರ್ಜಿ ಆರೋಪ

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada