ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ 91 ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಹರ್ ಘರ್ ತಿರಂಗ’ ಅಭಿಯಾನದ ಅಡಿಯಲ್ಲಿ ಜನರು ಆಗಸ್ಟ್ 2 ರಿಂದ 15 ರವರೆಗೆ ತಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜವನ್ನು ಹಾಕಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಭಾರತದ ಸ್ವಾತಂತ್ರ್ಯದ 75 ನೇ ವರ್ಷ ಅಂಗವಾಗಿ ಪಿಎಂ ಮೋದಿ ಇದನ್ನು ಹೇಳಿದ್ದಾರೆ.
“ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ, ಆಗಸ್ಟ್ 13 ರಿಂದ 15 ವರೆಗೆ, ಹರ್ ಘರ್ ತಿರಂಗಾ ಎಂಬ ವಿಶೇಷ ಆಂದೋಲನ ಆಯೋಜಿಸಲಾಗುತ್ತಿದೆ. ಆಗಸ್ಟ್ 2 ರಿಂದ 15 ರವರೆಗೆ ನಾವೆಲ್ಲರೂ ನಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜವನ್ನು ಹಾಕಿಕೊಳ್ಳಲು ನಾನು ಈ ಮೂಲಕ ಕೋರುತ್ತಿದ್ದೇವೆ ಎಂದು ಮೋದಿ ಹೇಳಿದರು.
ಆಗಸ್ಟ್ 2ಕ್ಕೂ ತ್ರಿವರ್ಣ ಧ್ವಜಕ್ಕೂ ವಿಶೇಷ ಸಂಬಂಧವಿದೆ ಎಂದು ಹೇಳಿದ ಪ್ರಧಾನಿ. “ಈ ದಿನ ನಮ್ಮ ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಲಿ ವೆಂಕಯ್ಯ ಅವರ ಜನ್ಮದಿನ. ಅವರಿಗೆ ನನ್ನ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಮಹಾನ್ ಕ್ರಾಂತಿಕಾರಿ ಮೇಡಂ ಕಾಮಾ ಅವರನ್ನೂ ನಾನು ಈ ಸಮಯದಲ್ಲಿ ನೆನಪಿಸಿಕೊಳ್ಳುತ್ತೇನೆ ಎಂದು ಅವರು ಹೇಳಿದರು.
“31 ರಂದು ನಡೆಯಲಿರುವ ಈ ತಿಂಗಳ #MannKiBaat ಗಾಗಿ ನೀವು ಇನ್ಪುಟ್ಗಳನ್ನು ಹೊಂದಿದ್ದೀರಾ? ನಾನು ಅವುಗಳನ್ನು ಕೇಳಲು ಎದುರು ನೋಡುತ್ತಿದ್ದೇನೆ… MyGov ಅಥವಾ NaMo ಆಪ್ನಲ್ಲಿ ಹಂಚಿಕೊಳ್ಳಿ. 1800-11-7800 ಅನ್ನು ಡಯಲ್ ಮಾಡುವ ಮೂಲಕ ನಿಮ್ಮ ಸಂದೇಶವನ್ನು ರೆಕಾರ್ಡ್ ಮಾಡಿ,” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.