• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
October 23, 2025
in Top Story, ಕರ್ನಾಟಕ, ರಾಜಕೀಯ, ಶೋಧ
0
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Share on WhatsAppShare on FacebookShare on Telegram

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ADVERTISEMENT

ಹೈಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಏಕಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ಹೊಸದಾಗಿ ಪ್ರಕರಣವನ್ನು ಪರಿಗಣಿಸಲು ಹೈಕೋರ್ಟ್ ಸೂಚಿಸಿತ್ತು. ತನಿಖೆಯ ಎಲ್ಲಾ ಅಂಶಗಳನ್ನೂ ಪರಿಶೀಲಿಸಿ ಕಾಗ್ನಿಜೆನ್ಸ್ ಪಡೆಯಬೇಕಿತ್ತು. ಸಂತ್ರಸ್ತೆಯ ಹೇಳಿಕೆ ಬಿಟ್ಟು ಉಳಿದ ಸಾಕ್ಷ್ಯಗಳನ್ನು ಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿದ್ದ ಸಾಕ್ಷಿಗಳ ಹೇಳಿಕೆಗಳನ್ನು ಪರಿಗಣಿಸಿಲ್ಲ. ಆಡಿಯೋ ರೆಕಾರ್ಡಿಂಗ್ ಅನ್ನೂ ನ್ಯಾಯಾಲಯ ಪರಿಗಣಿಸಿಲ್ಲ. ಹೊಸದಾಗಿ ಕಾಗ್ನಿಜೆನ್ಸ್ ಪಡೆದಿರುವ ಆದೇಶ ಸರಿಯಿಲ್ಲವೆಂದು ವಾದ ಮಂಡಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರದ ಪರ ಎಸ್‌ಪಿಪಿ ಪ್ರೊ.ರವಿವರ್ಮ ಕುಮಾರ್ ವಾದ ಮಂಡನೆ ಮಾಡಿ, ಕೊಠಡಿಯಲ್ಲಿ ಲಾಕ್ ಮಾಡಿಕೊಂಡಿದ್ದರಿಂದ ಸಂತ್ರಸ್ತೆ ಹೇಳಿಕೆಯೇ ಮುಖ್ಯ. ಯಡಿಯೂರಪ್ಪ ಸೂಚನೆ ಮೇರೆಗೆ ಮೊಬೈಲ್​ನಲ್ಲಿದ್ದ ವಿಡಿಯೋ ಡಿಲೀಟ್ ಮಾಡಲಾಗಿದೆ. ಮೊಬೈಲ್ ರೆಕಾರ್ಡಿಂಗ್​ನಲ್ಲಿರುವುದು ಯಡಿಯೂರಪ್ಪ ಧ್ವನಿ ಎಂಬ ಬಗ್ಗೆ ಎಫ್​​ಎಸ್​ಎಲ್ ವರದಿಯಿದೆ. ಫಿರ್ಯಾದಿ ಮಹಿಳೆಗೆ ಬ್ಯಾಗ್​ನಲ್ಲಿ 2 ಲಕ್ಷ ರೂಪಾಯಿ ಹಣ ನೀಡಲಾಗಿದೆ. ನಡೆದ ಘಟನೆಯನ್ನು ಬಾಲಕಿಯೇ ವಿವರಿಸಿದ್ದಾಳೆ ಎಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಇದು ರದ್ದುಪಡಿಸಬೇಕಾದ ಪ್ರಕರಣವೆಂದು ಮನವರಿಕೆಯಾಗಿಲ್ಲ. ಆದರೆ ಕಾಗ್ನಿಜೆನ್ಸ್ ಪಡೆದ ವಿಧಾನದ ಬಗ್ಗೆ ಪ್ರಶ್ನೆಗಳಿವೆ ಎಂದು ಹೇಳಿದ್ದು, ಆದೇಶ ಕಾಯ್ದಿರಿಸಿದೆ.

Lakshmi Hebbalkar: ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಹಾರ ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..!

ಏನಿದು ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್

ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಮನೆಗೆ ಬಂದಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ 2024 ರ ಮಾರ್ಚ್​ನಲ್ಲಿ ಕೇಳಿಬಂದಿತ್ತು. ಸಂತ್ರಸ್ತೆಯ ತಾಯಿ ಈ ಆರೋಪ ಮಾಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ಕೇಸ್ ನೀಡಿತ್ತು.

ಸಿಐಡಿ ಅಧಿಕಾರಿಗಳು ಆರೋಪಿ ಯಡಿಯೂರಪ್ಪಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು.

ಆದರೆ ಪ್ರಕರಣವನ್ನು ರದ್ದು ಮಾಡಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಸದ್ಯ ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ಈಗಾಗಲೇ ಸಿಕ್ಕಿದೆ. ಪ್ರಕರಣದ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯೂ ಇದೀಗ ಮುಕ್ತಾಯಗೊಂಡಿದ್ದು, ಆದೇಶ ಪ್ರಕಟವಾಗಬೇಕಿದೆ

Tags: BJPCongress Partyfir against muruga srimurugha seer pocso case updatesmurugha sri casePOCSO caseposco caseಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

Next Post

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

Related Posts

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು
ಇತರೆ / Others

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

by ಪ್ರತಿಧ್ವನಿ
November 19, 2025
0

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ವಿಡಿಯೋಗಳ ವೈರಲ್ ಸಂಬಂಧ ದಾಖಲಾಗಿರೋ ಪ್ರಕರಣದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೆಸರು ಕೇಳಿಬಂದಿದೆ. ವಿಡಿಯೋಗಳ ವೈರಲ್ ಸಂಬಂಧ ಪರಪ್ಪನ ಅಗ್ರಹಾರ...

Read moreDetails

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025
Next Post
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

November 19, 2025
ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada