ಇಡೀ ದೇಶವೇ ಬೆಚ್ಚಿಬೀಳಿಸಿದ ಮೆಹ್ರೌಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಪಾಲಿಗ್ರಾಫ್ ಪರೀಕ್ಷೆ ನಡೆಸುವುದಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಅರ್ಜಿಯನ್ನ ನ್ಯಾಯಾಧೀಶೆ ವಿಜಯಶ್ರೀ ರಾಥೋಡ್ ಅವರಿಗೆ ವರ್ಗಾಯಿಸಿದ್ದರು ಮತ್ತು ನಾರ್ಕೋ ವಿಶ್ಲೇಷಣೆ ಪರೀಕ್ಷೆಯ ಅರ್ಜಿಯನ್ನು ಆಲಿಸಿದ್ದರು.
![](https://pratidhvani.com/wp-content/uploads/2022/11/aftab-shraddha-3.jpg)
ನಾರ್ಕೋ ಅನಾಲಿಸಿಸ್ ಪರೀಕ್ಷೆಯನ್ನು ಐದು ದಿನಗಳಲ್ಲಿ ಪೂರ್ಣಗೊಳಿಸುವಂತೆ ನ್ಯಾಯಾಲಯ ಪೊಲೀಸರಿಗೆ ನಿರ್ದೇಶನ ನೀಡಿದ್ದು ಆರೋಪಿ ಮೇಲೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ಬಳಸದಂತೆ ಸೂಚಿಸಿದೆ. ಆರೋಪಿ ಅಫ್ತಾಬ್ ಪದೇ ಪದೇ ತನ್ನ ಹೇಳಿಕೆಯನ್ನ ಬದಲಾಯಿಸುತ್ತಿದ್ದು ತನಿಖೆಯ ಹಾದಿಯನ್ನ ತಪ್ಪಿಸುತ್ತಿದ್ದಾನೆ ಎಂದು ಪೊಲೀಸರು ಪಾಲಿಗ್ರಾಫ್ ಪರೀಕ್ಷೆ ನಡೆಸಲು ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.