• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮೈಸೂರಿನ ಮೇಯರ್‌ ಸದಸ್ಯತ್ವ ರದ್ದತಿ ಹಿನ್ನೆಲೆಯಲ್ಲೇ ಗರಿಗೆದರಿದ ರಾಜಕೀಯ ಚಟುವಟಿಕೆ

Any Mind by Any Mind
June 4, 2021
in ರಾಜಕೀಯ
0
ಮೈಸೂರಿನ  ಮೇಯರ್‌ ಸದಸ್ಯತ್ವ ರದ್ದತಿ ಹಿನ್ನೆಲೆಯಲ್ಲೇ ಗರಿಗೆದರಿದ ರಾಜಕೀಯ ಚಟುವಟಿಕೆ
Share on WhatsAppShare on FacebookShare on Telegram

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಆತಂಕದ ಬೆನ್ನಲ್ಲೇ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಗೆ ತೆರೆಮರೆಯ ಕಸರತ್ತು ಶುರುವಾಗಿದ್ದು, ಮೂರು ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆ ಶುರುವಾಗಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಮೂರು ಪಕ್ಷಗಳ ಭಾರೀ ಪೈಪೋಟಿ ನಡುವೆ ನಡೆದಿದ್ದ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿಯೊಂದಿಗೆ ಜೆಡಿಎಸ್ ಪಾಲಿಕೆ ಸದಸ್ಯೆ ರುಕ್ಮಿಣಿ ಮಾದೇಗೌಡ ಅವರಿಗೆ ಮೇಯರ್ ಗದ್ದುಗೆ ಏರುವ ಅವಕಾಶ ಒಲಿದು ಬಂದಿತ್ತು. 

ADVERTISEMENT

ಇದೀಗ ರಾಜ್ಯ ಹೈ ಕೋರ್ಟ್ ಮೇಯರ್‌ ಅವರ ಸದಸ್ಯತ್ವವನ್ನೇ ರದ್ದು ಪಡಿಸಿದ ಹಿನ್ನೆಲೆಯಲ್ಲಿ ಮೂರೂ ಪಕ್ಷಗಳ ನಾಯಕರಲ್ಲಿ ತಳಮಳ ಸೃಷ್ಟಿಯಾಗಿದೆ. ಚುನಾವಣೆಗೆ ಸಜ್ಜಾಗಬೇಕೋ? ಬೇಡವೋ ಎಂಬುದು ಜಿಜ್ಞಾಸೆಯಾಗಿ ಕಾಡಲಾರಂಭಿಸಿದೆ. ಮೈಸೂರು ಮಹಾನಗರ ಪಾಲಿಕೆಯ ಇತಿಹಾಸದಲ್ಲಿಯೇ ಎಂದಿಗೂ ಮೇಯರ್‌ ಅವರ  ಸದಸ್ಯತ್ವ ರದ್ದಾಗಿರಲಿಲ್ಲ. ಈ ರದ್ದತಿ ಜೆಡಿಎಸ್‌ ಪಕ್ಷಕ್ಕೂ ಹಿನ್ನಡೆ ಆದಂತೆ ಆಗಿದೆ.

‘ಹೊಸ ಮೇಯರ್ ಆಯ್ಕೆಯಾದಾಗಿನಿಂದಲೂ ಏನೊಂದೂ ಕೆಲಸವೇ ಆಗಿಲ್ಲ. ಮೇಯರ್ ಆಯ್ಕೆಯ ಸಂದರ್ಭವೇ ರುಕ್ಮಿಣಿ ಅವರ ಸದಸ್ಯತ್ವ ಅನರ್ಹತೆಯ ಕುರಿತಂತೆ ಹೈಕೋರ್ಟ್ನಲ್ಲಿ ಪ್ರಕರಣವಿದೆ ಎಂಬುದನ್ನು ವರಿಷ್ಠರ ಗಮನಕ್ಕೂ ತಂದಿದ್ದೆವು. ಆಗ ಸುಪ್ರೀಂಕೋರ್ಟ್ಗೆ ಹೋದರಾಯಿತು. ಅಷ್ಟರೊಳಗೆ ಅವಧಿಯೇ ಮುಗಿಯಲಿದೆ ಎಂದಿದ್ದರು. ಈಗ ಮೈಸೂರಿನ ಗೌರವಕ್ಕೆ ಧಕ್ಕೆ ಬಂದಿತು’ ಎಂದು ಹೆಸರು ಬಹಿರಂಗ ಪಡಿಸಲು ಬಯಸದ ಪಾಲಿಕೆಯ ಜೆಡಿಎಸ್ ಕಾರ್ಪೊರೇಟರ್ ಒಬ್ಬರು ‘ ಹೇಳಿದರು.

ಕಳೆದ ಫೆಬ್ರುವರಿಯಲ್ಲಿ ನಡೆದಿದ್ದ ಮೇಯರ್ ಚುನಾವಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದರು. ಇದರಲ್ಲಿ ಕುಮಾರಸ್ವಾಮಿ ಮೇಲುಗೈ ಸಾಧಿಸಿದ್ದರೆ, ಸಿದ್ದರಾಮಯ್ಯಗೆ ತವರಿನಲ್ಲೇ ಭಾರಿ ಮುಖಭಂಗವಾಗಿತ್ತು. ಈ ಸೋಲನ್ನು ಸಹಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಅಧಿಕಾರದ ಚುಕ್ಕಾಣಿ ಹಿಡಿಯಲು ಕಮಲ ಪಾಳೆಯದ ನಾಯಕರು ನಡೆಸಿದ ಎಲ್ಲ ಕಸರತ್ತು ವಿಫಲವಾಗಿ ಮುಖಭಂಗಕ್ಕೀಡಾಗಿದ್ದರು. ಈಗಿನ ಬೆಳವಣಿಗೆ ಜೆಡಿಎಸ್ಗೆ ಹಿನ್ನಡೆಯಾದಂತಾಗಿದೆ.  ರುಕ್ಮಿಣಿ ಮಾದೇ ಗೌಡ ಅವರಿಗೆ ಇದು ಮಾಡು ಅಥವಾ ಮಡಿ ಹೋರಾಟ ಆಗಿದೆ. ಏಕೆಂದರೆ ಹೈ ಕೋರ್ಟ್‌ ತೀರ್ಪಿನ ವಿರುದ್ದ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದರೆ ಈ ಆದೇಶಕ್ಕೆ ತಡೆಯಾಜ್ಞೆ ಸಿಗುವ ಸಾದ್ಯತೆ ಇದೆ. ಒಂದು ವೇಳೆ ತಡೆಯಾಜ್ಞೆ ಸಿಕ್ಕಿದರೆ  ಅವರ ಸದಸ್ಯತ್ವವೂ ಉಳಿದುಕೊಳ್ಳುತ್ತದೆ ಜತೆಗೇ ಮೇಯರ್‌ ಅಗಿಯೂ ಮುಂದುವರೆಯಲು ಅಡ್ಡಿ ಇಲ್ಲ. ಮುಖಭಂಗವನ್ನೂ ತಪ್ಪಿಸಿಕೊಳ್ಳಬಹುದಾಗಿದೆ. ಇವರು ಒಂದು ವೇಳೆ ನ್ಯಾಯಾಲಯಕ್ಕೆ ತೆರಳದಿದ್ದರೆ ಮರು ಚುನಾವಣೆಯಲ್ಲಿ ಸ್ಪರ್ಧಿಸಿ ಮತ್ತೆ ಗೆಲ್ಲಬೇಕಿದೆ. ಒಂದು ವೇಳೆ ಗೆದ್ದರೂ ಕೂಡ ಮೇಯರ್‌ ಪಟ್ಟ ಸಿಗುವ ಸಾಧ್ಯತೆಗಳೇನೂ ಇಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ತಾವೇ ಸೋಲಿಸಿದ್ದ ಪ್ರತಿಸ್ಪರ್ದಿ ರಜನಿ ಅಣ್ಣಯ್ಯ ಅವರಿಗೆ ನಿರಾಯಾಸವಾಗಿ ಪಾಲಿಕೆ ಸದಸ್ಯತ್ವ ಸಿಗುತ್ತದೆ. 

ಪಾಲಿಕೆ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ ಚುನಾವಣೆ ನಡೆಯುವ ಕೊನೆ ಕ್ಷಣದವರೆಗೂ ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ತರಲು ಅವಕಾಶವಿದೆ. ಸುಪ್ರೀಂಕೋರ್ಟ್ನ ಸೂಚನೆ, ಆದೇಶ, ತೀರ್ಪನ್ನು ಪಾಲಿಸಲೇಬೇಕು. ಒಂದು ವೇಳೆ ಹೊಸ ಮೇಯರ್ ಆಯ್ಕೆಯ ಘೋಷಣೆಗೂ ಮುನ್ನವೇ ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ತಂದರೆ, ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವವೂ ಉಳಿಯಲಿದೆ. ಮೇಯರ್ ಸ್ಥಾನವೂ ಮುಂದುವರೆಯಲಿದೆ’  ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ರುಕ್ಮಿಣಿ ಅವರ ಪತಿ ಮಾದೇ ಗೌಡ ಅವರು  ‘ಹೈಕೋರ್ಟ್ ತೀರ್ಪಿನ ಅಧಿಕೃತ ಪ್ರತಿ ಇನ್ನೂ ನನಗೆ ಸಿಕ್ಕಿಲ್ಲ. ತರಾತುರಿಯಲ್ಲಿ ಸದಸ್ಯತ್ವ ಅನರ್ಹಗೊಳಿಸಿದ್ದಾರೆ. ಈ ಸಂದರ್ಭ ಏನಾದರೂ ಮಾತನಾಡಿದರೆ, ಸರ್ಕಾರದ ವಿರುದ್ಧ, ಅಧಿಕಾರಿಗಳ ವಿರುದ್ಧ ಹರಿಹಾಯ್ದಂತಾಗುತ್ತದೆ’ ಎಂದು ತಿಳಿಸಿದರು. ‘ತೀರ್ಪು ಪ್ರಕಟಗೊಂಡ ದಿನದಿಂದಲೂ ನಮ್ಮ ವಕೀಲರ ಜೊತೆ ಸಂಪರ್ಕದಲ್ಲಿರುವೆ. ಸುಪ್ರೀಂಕೋರ್ಟ್ನ ಮೊರೆಹೋಗಲು ನಿರ್ಧರಿಸಿರುವೆ. ನೋಡೋಣ. ಯಾರನ್ನೂ ದೂರಲ್ಲ. ದೇವರು ಬರೆದ ರೀತಿ ಆಗುತ್ತೆ’ ಎಂದಷ್ಟೇ ಪ್ರತಿಕ್ರಿಯಿಸಿದರು.

ಈ ಸದಸ್ಯತ್ವ ಅನರ್ಹತೆಯ ಹಿನ್ನೆಲೆ ನೋಡುವುದಾದರೆ ಪಾಲಿಕೆಗೆ 2018ರಲ್ಲಿ ನಡೆದ ಚುನಾವಣೆಯಲ್ಲಿ ರುಕ್ಮಿಣಿ ಮಾದೇಗೌಡ ನಗರದ ಯರಗನಹಳ್ಳಿ (36ನೇ) ವಾರ್ಡ್ನಿಂದ ಬಿಸಿಎಂ ‘ಎ’ ಮಹಿಳಾ ಮೀಸಲಾತಿಯಡಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆಲುವು ದಾಖಲಿಸಿದ್ದರು. ಇವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ರಜಿನಿ ಅಣ್ಣಯ್ಯ ಫಲಿತಾಂಶ ಘೋಷಣೆ ಬಳಿಕ ನ್ಯಾಯಾಲಯದ ಮೊರೆ ಹೋಗಿದ್ದರು. ರುಕ್ಮಿಣಿ ನಾಮಪತ್ರ ಸಲ್ಲಿಸುವಾಗ ಆದಾಯಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿ, ಚುನಾವಣಾ ತಕರಾರಿನ ಅರ್ಜಿ ಸಲ್ಲಿಸಿದ್ದರು. ಈ ತಕರಾರು  ಅರ್ಜಿ ಪುರಸ್ಕರಿಸಿದ್ದ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ರುಕ್ಮಿಣಿ ಅವರ ಸದಸ್ಯತ್ವ ರದ್ದುಪಡಿಸಿ 2020ರ ಡಿ.14ರಂದು ಆದೇಶಿಸಿತ್ತು. ಆದೇಶ ಪ್ರಶ್ನಿಸಿ ರುಕ್ಮಿಣಿ ಮಾದೇಗೌಡ ಡಿ.23ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ತಡೆಯಾಜ್ಞೆ ಸಿಕ್ಕಿತ್ತು. ಕಳೆದ ಫೆಬ್ರುವರಿ .24ರಂದು ರುಕ್ಮಿಣಿ ಮೇಯರ್ ಆಗಿ ಆಯ್ಕೆಯಾಗಿದ್ದರು. ಇದೇ ದಿನ ಪ್ರಕರಣದ ವಿಚಾರಣೆ ಆರಂಭವಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರಿದ್ದ ಪೀಠ, ಮೇ 26ರಂದು ಸದಸ್ಯತ್ವ ಅನರ್ಹಗೊಳಿಸುವ ಜೊತೆಗೆ, ವಾರ್ಡ್ನಲ್ಲಿ ಹೊಸದಾಗಿ ಚುನಾವಣೆ ನಡೆಸಲೂ ಆದೇಶಿಸಿ ತೀರ್ಪು ನೀಡಿತ್ತು.  

ಕಳೆದ ಬಾರಿ ಅಧಿಕಾರ ಕಳೆದುಕೊಂಡಿದ್ದ ಬಿಜೆಪಿ ಜೊತೆಗೆ ದೋಸ್ತಿ ಮಾಡಿಕೊಂಡಿದ್ದ ಕಾಂಗ್ರೆಸ್-ಜೆಡಿಎಸ್ನಲ್ಲಿ ಮೇಯರ್ ಸ್ಥಾನದ ಆಕಾಂಕ್ಷಿಗಳಲ್ಲಿ ಮೇಯರ್ ಗದ್ದುಗೆ ಏರುವ ಆಸೆ ಚಿಗುರಿದೆ. ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದಾದ ಬೆನ್ನಲ್ಲೇ ಮೂರು ಪಕ್ಷದಲ್ಲೂ ಮೇಯರ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಪ್ರಮುಖವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ ಮೇಯರ್ ಸ್ಥಾನಕ್ಕೆ ಪೈಪೋಟಿ ಜೋರಾಗಿದ್ದು, ಕಳೆದ ಬಾರಿ ಮೇಯರ್ ಆಗುವ ಕನಸು ಕಂಡಿದ್ದ ಅಭ್ಯರ್ಥಿಗಳು ಇದೀಗ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆ ನಡೆಸಲು ಸಜ್ಜಾಗಿದ್ದಾರೆ. ಅದೃಷ್ಟ ಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೋ ಕಾದು ನೋಡಬೇಕಷ್ಟೆ. 

Previous Post

ಜುಲೈ 3 ನೇ ವಾರದಲ್ಲಿ SSLC ಪರೀಕ್ಷೆ, ಯಾರನ್ನೂ ಅನುತ್ತೀರ್ಣಗೊಳಿಸಲ್ಲ–ಸಚಿವ ಸುರೇಶ್ ಕುಮಾರ್

Next Post

ಮೈಸೂರಿನ 16 ಸ್ಟೆಪ್ ಡೌನ್ ಆಸ್ಪತ್ರೆ ತೆರೆದಿರುವ ಹಿಂದೆ ಭ್ರಷ್ಟಾಚಾರ ನಡೆದಿತ್ತೆ ?

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ಮೈಸೂರಿನ 16 ಸ್ಟೆಪ್ ಡೌನ್ ಆಸ್ಪತ್ರೆ ತೆರೆದಿರುವ ಹಿಂದೆ ಭ್ರಷ್ಟಾಚಾರ ನಡೆದಿತ್ತೆ ?

ಮೈಸೂರಿನ 16 ಸ್ಟೆಪ್ ಡೌನ್ ಆಸ್ಪತ್ರೆ ತೆರೆದಿರುವ ಹಿಂದೆ ಭ್ರಷ್ಟಾಚಾರ ನಡೆದಿತ್ತೆ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada