• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಆರ್‌ಎಸ್‌ಎಸ್‌ಗಿರುವಂತಹ ಸಾಂಸ್ಥಿಕ ರಚನೆಯ ತಳಪಾಯ ರಾಜಕೀಯ ಪಕ್ಷಗಳಿಗೆ ಅಗತ್ಯ: ದೇವನೂರು ಮಹಾದೇವ

ಪ್ರತಿಧ್ವನಿ by ಪ್ರತಿಧ್ವನಿ
February 15, 2023
in ರಾಜಕೀಯ
0
ಆರ್‌ಎಸ್‌ಎಸ್‌ಗಿರುವಂತಹ ಸಾಂಸ್ಥಿಕ ರಚನೆಯ ತಳಪಾಯ ರಾಜಕೀಯ ಪಕ್ಷಗಳಿಗೆ ಅಗತ್ಯ: ದೇವನೂರು ಮಹಾದೇವ
Share on WhatsAppShare on FacebookShare on Telegram

  ‘ರಾಜ್ಯದ ಮುಖ್ಯವಾಹಿನಿ ಸಮಾಜಮುಖಿ ರಾಜಕೀಯ ಪಕ್ಷಗಳಿಗೆ ಆರ್‌ಎಸ್‌ಎಸ್‌ ಶೈಲಿಯ ಸಾಂಸ್ಥಿಕ ರಚನೆಯ ತಳಪಾಯ ಹಾಗೂ ರಾಜಕೀಯ ಪ್ರಜ್ಞೆ ಅತ್ಯಗತ್ಯ’ ಎಂದು ಕನ್ನಡದ ಸಾಕ್ಷಿಪ್ರಜ್ಞೆ, ಲೇಖಕ ದೇವನೂರ ಮಹಾದೇವ ಹೇಳಿದ್ದಾರೆ.

ADVERTISEMENT

ಮೈಸೂರಿನಲ್ಲಿ ಮಂಗಳವಾರ ನಡೆದ ಪ್ರೊ.ಮಧುದಂಡವತೆ ಶತಮಾನೋತ್ಸವ ಪ್ರಯುಕ್ತ ‘ಮುಕ್ತ ಮತದಾನ– ಸಮರ್ಥ ಸರ್ಕಾರ’ – ಜನತಂತ್ರದ ‘ನೈಜ ಹಕ್ಕುದಾರರ ಧ್ವನಿ ಹಿಡಿದಿಡುವ ಡಯಗ್ನಾಸ್ಟಿಕ್‌ ವರದಿ’ಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಸಮಾಜಮುಖಿ ರಾಜಕೀಯ ಪಕ್ಷಗಳ ಸಾಂಸ್ಥಿಕ ರಚನೆ ಗಟ್ಟಿಯಿದ್ದರೂ ರಾಜಕೀಯ ಪ್ರಜ್ಞೆಯ ಕೊರತೆಯಿಂದಾಗಿ ಯಾವುದೇ ಅಲೆ ಎಬ್ಬಿಸುತ್ತಿಲ್ಲ. ತನ್ನ ರಾಜಕೀಯ (ಬಿಜೆಪಿಯ) ಪಕ್ಷದ ಗೆಲುವಿನಲ್ಲೇ ತನ್ನ ಅಳಿವು– ಉಳಿವು ಎಂದು ಸಂಘ ಪರಿವಾರವು ಕಾರ್ಯನಿರ್ವಹಿಸುವಂತೆ ಸಮಾಜಮುಖಿ ಪಕ್ಷಗಳ ಸಾಂಸ್ಥಿಕ ಸಂಘಟನೆಗಳು ವರ್ತಿಸುತ್ತಿಲ್ಲ’ ಎಂದು ಹೇಳಿದ್ದಾರೆ.

ಬೆಂಗಳೂರಿನ ಸಮಾಜವೇದಿಕೆ, ದೆಹಲಿಯ ಜನತಾಂತ್ರಿಕ ಸಮಾಜವಾದ ಸಂಘಟನೆ ಸಿದ್ಧಪಡಿಸಿದ ವರದಿಯನ್ನು ಹಿತ್ತಲಗಿಡ ಪ್ರಕಾಶನ ಪ್ರಕಟಿಸಿದ್ದು, ಬಿಜೆಪಿಗೆ ಆರ್‌ಎಸ್‌ಎಸ್‌ ಎಂಬ ಗಟ್ಟಿ ಸಾಂಸ್ಥಿಕ ತಳಪಾಯವಿರುವುದರ ಬಗ್ಗೆ ವರದಿಯಲ್ಲಿ ಪರಾಮರ್ಶಿಸಲಾಗಿದೆ ಎಂದು ದೇವನೂರು ಹೇಳಿದ್ದಾರೆ.

ತಳಮಟ್ಟದವರೆಗೂ ಬೇರೂರಿರುವ ಪ್ರಗತಿಪರ ಸಂಘಟನೆಗಳು, ಸಂಘ– ಸಂಸ್ಥೆಗಳು ಹೊಸ ರಾಜಕೀಯ ಪ್ರಯೋಗಕ್ಕೆ ಈ ರೀತಿಯ ಸಾಂಸ್ಥಿಕ ರಚನೆಯನ್ನು ಒದಗಿಸಬಹುದು. ಆಮ್‌ ಆದ್ಮಿ ಪಕ್ಷವು ಅಲೆ ಎಬ್ಬಿಸುತ್ತಿದ್ದರೂ ಇತರ ಸಮಾನ ಪಕ್ಷಗಳೊಂದಿಗೆ ಕೈಜೋಡಿಸದೆ ಒಂಟಿಯಾಗಿರುವುದೇ ನಿರೀಕ್ಷಿತ ಫಲಿತಾಂಶ ನೀಡದಿರಲು ಕಾರಣ ಎಂಬುದನ್ನು ವರದಿ ಗುರುತಿಸಿದೆ’ ಎಂದು ಹೇಳಿದ್ದಾರೆ.

‘ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಇದುವರೆಗೂ ಆಳ್ವಿಕೆ ಸಂಸಾರ ನಡೆಸಿವೆ. ಅವುಗಳನ್ನು ಬಿಟ್ಟು ಆಳ್ವಿಕೆ ಸಂಸಾರ ಮಾಡದಿರುವ ನವಪಕ್ಷಗಳ ಕಡೆಗೆ ಶೇ 46ರಷ್ಟು ಮತದಾರರು ಒಲವು ತೋರಿದ್ದಾರೆ’ ಎಂದರು.

ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜ್ಯದಲ್ಲಿ ಮೋದಿ, ಅಮಿತ್‌ ಶಾ ಹೆಚ್ಚು ಓಡಾಡುತ್ತಿದ್ದಾರೆ. ಹೀಗಾಗಿ ಇಲ್ಲಿ ಕಸಿಪದ ‘ಮೊದಾನಿ’ ಚಲಾವಣೆಯಲ್ಲಿದೆ. ಮೋದಿ, ಅದಾನಿ ಸೇರಿದ ಒಂದೇ ಪದ, ಒಂದೇ ಹೆಸರು ಇದು. ಅಧಿಕಾರ ಮತ್ತು ಕುರುಡು ಕಾಂಚಾಣ ಸೇರಿ ಒಂದೇ ಪದವಾಗಿದೆ, ಉಳಿಗಾಲವಿಲ್ಲ’ ಎಂದು ದೇವನೂರ ಮಹಾದೇವ ಹೇಳಿದರು.

Previous Post

ಸ್ವಾತಂತ್ರ ಭಾರತದ ಬಹುದೊಡ್ಡ ಆರ್ಥಿಕ ಹಗರಣದ ರೂವಾರಿ ಗೌತಮ್ ಶಾಂತಿಲಾಲ್ ಅದಾನಿ

Next Post

ದೋವಲ್‌ ಯಡವಟ್ಟು ಮಾಡಿದ್ದಾರೆ, ಅವರನ್ನು ವಜಾಗೊಳಿಸದಿದ್ದರೆ ಮೋದಿ ರಾಜಿನಾಮೆ ನೀಡಬೇಕಾಗುತ್ತದೆ: ಸ್ವಾಮಿ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ದೋವಲ್‌ ಯಡವಟ್ಟು ಮಾಡಿದ್ದಾರೆ, ಅವರನ್ನು ವಜಾಗೊಳಿಸದಿದ್ದರೆ ಮೋದಿ ರಾಜಿನಾಮೆ ನೀಡಬೇಕಾಗುತ್ತದೆ: ಸ್ವಾಮಿ

ದೋವಲ್‌ ಯಡವಟ್ಟು ಮಾಡಿದ್ದಾರೆ, ಅವರನ್ನು ವಜಾಗೊಳಿಸದಿದ್ದರೆ ಮೋದಿ ರಾಜಿನಾಮೆ ನೀಡಬೇಕಾಗುತ್ತದೆ: ಸ್ವಾಮಿ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada