• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ರಾಜಕೀಯ ಸಂಕಷ್ಟ..! ಭ್ರಷ್ಟಾಚಾರಕ್ಕೆ ಬರಿಗಣ್ಣ ಸಾಕ್ಷಿ..!

ಕೃಷ್ಣ ಮಣಿ by ಕೃಷ್ಣ ಮಣಿ
February 14, 2023
in ಅಂಕಣ
0
ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ರಾಜಕೀಯ ಸಂಕಷ್ಟ..! ಭ್ರಷ್ಟಾಚಾರಕ್ಕೆ ಬರಿಗಣ್ಣ ಸಾಕ್ಷಿ..!
Share on WhatsAppShare on FacebookShare on Telegram

ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಈಗಾಗಲೇ ಕಾಂಗ್ರೆಸ್​, ಬಿಜೆಪಿ ಹಾಗು ಜೆಡಿಎಸ್​ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯವನ್ನು ಸುತ್ತಾಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ನಾವು ಹೀಗೆ ಕೆಲಸ ಮಾಡುತ್ತೇವೆ, ಇಷ್ಟು ಅಭಿವೃದ್ಧಿ ಮಾಡ್ತೇವೆ ಎಂದು ಭರವಸೆಗಳ ಪಟ್ಟಿಯನ್ನೇ ನೀಡುತ್ತಿವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷರು ಮಾತ್ರ ಅಭಿವೃದ್ಧಿ ವಿಚಾರ ಬೇಕಾಗಿಲ್ಲ, ಧರ್ಮದ ಆಧಾರದಲ್ಲಿ ಚುನಾವಣೆ ನಡೆಯಬೇಕು. ಟಿಪ್ಪು ವರ್ಸಸ್​ ಸಾವರ್ಕರ್​ ಎಂದಿದ್ದರು. ಅದಕ್ಕೂ ಮೊದಲು ಚರಂಡಿ, ರಸ್ತೆಗುಂಡಿ ಎಂದು ಮತ ನೀಡಬೇಡಿ, ಹಿಂದೂ ಹುಡುಗಿ ಮುಸ್ಲಿಂ ಹುಡುಗನ ಲವ್​ ಜಿಹಾದ್​’ಗೆ ಒಳಗಾಗಬಾರದು ಅನ್ನೋ ಕಾರಣಕ್ಕೆ ಬಿಜೆಪಿಗೆ ಮತ ನೀಡಿ ಎಂದು ನೇರವಾಗಿಯೇ ಹೇಳಿದ್ದರು. ಆ ಮಾತನ್ನು ರಾಜ್ಯ ಬಿಜೆಪಿ ನಾಯಕರೂ ಸಮರ್ಥಿಸಿಕೊಂಡಿದ್ದರು. ಇದರ ನಡುವೆ ರಾಜ್ಯ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್​ ಪಕ್ಷ 40 ಪರ್ಸೆಂಟ್​ ಸರ್ಕಾರ ಎಂದು ಟೀಕಿಸಿ ಅಭಿಯಾನ ಮಾಡಿತ್ತು. ಅದನ್ನು ಬಿಜೆಪಿ ಅಲ್ಲಗಳೆದಿತ್ತು. ಆದರೆ ಅದು ಸತ್ಯ ಎನ್ನುವಂತೆ ಮಾಡಿದೆ ಈ ಪ್ರಕರಣಗಳು. ಇದನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಯಾವುದೇ ಪುರಾವೆ ಬೇಕಿಲ್ಲ.

ADVERTISEMENT

ಮಕ್ಕಳಿಗೆ ಗುತ್ತಿಗೆ ಕೊಟ್ಟು ತಗ್ಲಾಕೊಂಡ BJP ಶಾಸಕ..!

ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ನೆಹರು ಓಲೇಕಾರ್​ ಹಾಗು ಇಬ್ಬರು ಪುತ್ರರು ಸೇರಿ ಐವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆ ನೀಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ಹಾಗು ಎರಡು ಸಾವಿರ ದಂಡ ವಿಧಿಸಿ ಕೋರ್ಟ್​ ಆದೇಶ ಮಾಡಿದೆ. 2012 ರಲ್ಲಿ ನಗರಸಭೆ ಕಾಮಗಾರಿಯಲ್ಲಿ ಅವ್ಯವಹಾರ ಮಾಡಿದ್ದ ಶಾಸಕ ನೆಹರು ಓಲೇಕಾರ್​ ಹಾಗು ಮಕ್ಕಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ5 ಕೋಟಿ 35 ಲಕ್ಷ ರೂಪಾಯಿ ಹಣವನ್ನು ಸರ್ಕಾರಕ್ಕೆ ಮೋಸ ಮಾಡಲಾಗಿದೆ ಎನ್ನುವುದನ್ನು ಕೋರ್ಟ್​ ಒಪ್ಪಿಕೊಂಡಿದೆ. ಕ್ಲಾಸ್ ಓನ್ ಗುತ್ತಿಗೆದಾರ ಪ್ರಮಾಣಪತ್ರವನ್ನು ನಕಲಿಯಾಗಿ ಪಡೆದುಕೊಂಡು ಕಾಮಗಾರಿ ಮಾಡಿರುವುದು ಸಾಬೀತು ಆಗಿದೆ. ಆರೋಪಿ 1 ನೆಹರು ಓಲೇಕಾರ್, ಆರೋಪಿ 2 ಮಂಜುನಾಥ್ ಓಲೇಕಾರ್​, ಆರೋಪಿ 3 ದೇವರಾಜ್ ಓಲೇಕಾರ್  ಆಗಿದ್ದು, ಆರೋಪಿ 4 ಎಚ್.ಕೆ ರುದ್ರಪ್ಪ, ಆರೋಪಿ 5 ಎಚ್.ಕೆ.ಕಲ್ಲಪ್ಪ, ಆರೋಪಿ 7 ಶಿವಕುಮಾರ್ ಪಿ, ಆರೋಪಿ 8 ಚಂದ್ರಮೋಹನ್ ಪಿ.ಎಸ್ ಎಂಬುವರ ಆರೋಪ ಸಾಬೀತಾಗಿದೆ. ಜೊತೆಗೆ ಕೋರ್ಟ್​ನಲ್ಲಿ ಜಾಮೀನು ಪಡೆದುಕೊಳ್ಳಲಾಗಿದೆ.

ಮೂಡಿಗೆರೆ ಶಾಸಕ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ..!

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕ್ಷೇತ್ರದ ಶಾಸಕ ಆಗಿರುವ ಎಂ.ಪಿ ಕುಮಾರಸ್ವಾಮಿಗೆ ಬರೋಬ್ಬರಿ 4 ವರ್ಷ ಜೈಲು ಶಿಕ್ಷೆಯಾಗಿದೆ. 8 ಜನರಿಗೆ ಎಂ.ಪಿ ಕುಮಾರಸ್ವಾಮಿ 1 ಕೋಟಿ 38 ಲಕ್ಷದ 65 ಸಾವಿರ  ರೂಪಾಯಿ ಹಣಕ್ಕೆ ಎಲ್ಲರಿಗೂ ಚೆಕ್​ ವಿತರಣೆ ಮಾಡಿದ್ದು, ಅದರಲ್ಲಿ 1 ಕೋಟಿ 36 ಲಕ್ಷದ 50 ಸಾವಿರ ಹಣ ಬಾಕಿ ಉಳಿಸಿಕೊಂಡಿದ್ದು. ಊವಪ್ಪಗೌಡ ಎಂಬುವವರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ರು. ಈ ಹಿಂದೆ ಜಾಮೀನು ರಹಿತ ವಾರೆಂಟ್ ಕೂಡ ಜಾರಿಯಾಗಿತ್ತು. ಆದರೆ ಅನಾರೋಗ್ಯ ಕಾರಣ ನೀಡಿ ತಪ್ಪಿಸಿಕೊಂಡಿದ್ದರು. ಇದೀಗ ಎಂಪಿ ಕುಮಾರಸ್ವಾಮಿ ಪರ ವಕೀಲರಿಗೆ ಜನಪ್ರತಿನಿಧಿಗಳ ಕೋರ್ಟ್ 10 ದಿನಗಳ ಕಾಲಗಳ ಕಾಲಾವಕಾಶ ನೀಡಿದ್ದು, ಹತ್ತು ದಿನದಲ್ಲಿ ಹಣ ವಾಪಸ್​ ಮಾಡಿಲ್ಲ ಅಂದ್ರೆ ಒಂದೊಂದು ಕೇಸ್​ಗೆ ಸಂಬಂಧಿಸಿದಂತೆ ತಲಾ 6 ತಿಂಗಳ ಸಾದಾ ಜೈಲು ಶಿಕ್ಷೆ. ಅಂದರೆ ಒಟ್ಟು 4 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸುವಂತೆ ಸೂಚನೆ ನೀಡಿದ್ದಾರೆ.

ಒಂದು ಕೇಸ್​’ನಲ್ಲಿ ಭ್ರಷ್ಟಾಚಾರ, ಮತ್ತೊಂದು ವಂಚನೆ..!

2012ರಲ್ಲಿ ಅಂದರೆ ಬಿಜೆಪಿ ಸರ್ಕಾರದಲ್ಲೇ ಮೋಸ ಮಾಡಿ 5 ಕೋಟಿಗೂ ಹೆಚ್ಚು ಹಣವನ್ನು ಸರ್ಕಾರಕ್ಕೆ ವಂಚನೆ ಮಾಡಿರುವುದು ಸಾಬೀತಾಗಿದೆ. ಭ್ರಷ್ಟಾಚಾರ ಮಾಡಿರುವ ಕೇಸ್​ನಲ್ಲಿ ಇಂದಲ್ಲ ನಾಳೆ ಶಿಕ್ಷೆ ಆಗುವುದು ಖಚಿತ. ಇನ್ನೊಂದು ಪ್ರಕರಣದಲ್ಲಿ ಶಾಸಕನೇ ಚೆಕ್​ ಕೊಟ್ಟು ವಂಚನೆ ಮಾಡಿರುವುದು ಸಾಬೀತಾಗಿದೆ. ಇದು ಕಾಂಗ್ರೆಸ್​ ಹಾಗು ಜೆಡಿಎಸ್​ ಪಾಲಿಗೆ ಹಾಲು ಅನ್ನ ಎನ್ನುವಂತಾಗಿದೆ. ಜನರ ಎದುರು ಅಸಲಿ ಘಟನೆಗಳನ್ನೇ ಇಟ್ಟು ಜನರಿಗೆ ತೋರಿಸಬಹುದಾಗಿದೆ. ನಾಯಕರು ಎನಿಸಿಕೊಂಡವರೇ ಈ ರೀತಿ ಭ್ರಷ್ಟಾಚಾರ, ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪ ಎನ್ನುವಂತಾಗಿದೆ. ಇದನ್ನು ಬಿಜೆಪಿ ನಾಯಕರು ಯಾವ ರೀತಿ ನಿಬಾಯಿಸುತ್ತಾರೆ ಎನ್ನುವುದು ಕುತೂಹಲಕಾರಿ.

Tags: ಎಂ.ಪಿ ಕುಮಾರಸ್ವಾಮಿನೆಹರು ಓಲೇಕಾರ್ಬಿಜೆಪಿ
Previous Post

ಮಧುವನ ಕರೆದ ಹಾಡಿನಂತೆ ಅವಳ ಹೆಸರೆಲ್ಲೋ ಮರೆತು ಹೋಗಿತ್ತು ಆದರೆ…

Next Post

ಅದಾನಿ ಸಮೂಹ ವಿಚಾರದಲ್ಲಿ ಮುಚ್ಚಿಡಲು, ಭಯಪಡಲು ಏನು ಇಲ್ಲ: ಅಮಿತ್ ಶಾ

Related Posts

Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
0

ವಿಶೇಷ ಆಂಬ್ಯುಲೆನ್ಸ್'ಗಳು ರಸ್ತೆ ಅಪಘಾತದ ಸ್ಥಳಗಳನ್ನು ನಿಮಿಷಗಳಲ್ಲಿ ತಲುಪುವಂತೆ ನೋಡಿಕೊಳ್ಳುವ ಮಹತ್ವಾಕಾಂಕ್ಷೆಯ ಯೋಜನೆಯನ್ನ ಕೇಂದ್ರ ಸರ್ಕಾರ ರೂಪಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ...

Read moreDetails

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
ಹೊರಟವರೂ ನೀವೇ.. ಕಾಡುವವರೂ ನೀವೇ..!

ಹೊರಟವರೂ ನೀವೇ.. ಕಾಡುವವರೂ ನೀವೇ..!

December 17, 2025

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025
Next Post
ಅದಾನಿ ಸಮೂಹ ವಿಚಾರದಲ್ಲಿ ಮುಚ್ಚಿಡಲು, ಭಯಪಡಲು ಏನು ಇಲ್ಲ: ಅಮಿತ್ ಶಾ

ಅದಾನಿ ಸಮೂಹ ವಿಚಾರದಲ್ಲಿ ಮುಚ್ಚಿಡಲು, ಭಯಪಡಲು ಏನು ಇಲ್ಲ: ಅಮಿತ್ ಶಾ

Please login to join discussion

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada