ನಟ ಶರಣ್ ನಾಯಕನಾಗಿ ನಟಿಸಿ ನಿರ್ಮಾಣ ಮಾಡಿರುವ ಗುರು ಶಿಷ್ಯರು ಸಿನಿಮಾ ಪ್ರೇಕ್ಷಕರ ಮನ ಗೆದ್ದಿದು ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಈಗಾಗಲೇ ಪ್ರೇಕ್ಷಕ ಮಹಾಪ್ರಭು ಫಿದಾ ಆಗಿದ್ದಾರೆ.
ಜಡೇಶ್ ಹಂಪಿ ನಿರ್ದೇಶನವಿರುವ ಗುರು ಶಿಷ್ಯರಿಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು ತರುಣ್ ಸುಧೀರ್ ಹಾಗೂ ಶರಣ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.
ಇತ್ತೀಚಿಗೆ ಚಿತ್ರತಂಡ ರಾಜಕೀಯ ಕ್ಷೇತ್ರದ ಗಣ್ಯರಿಗೆ ವಿಶೇಷ ಪ್ರದರ್ಶನವನ್ನ ಏರ್ಪಡಿಸಿತ್ತು ಚಿತ್ರವನ್ನ ವೀಕ್ಷಿಸಿದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವರಾದ ಆರ್ ಅಶೋಕ್, ಶಾಸಕರಾದ ಎಂ.ಕೃಷ್ಣಪ್ಪ, ಡಿ.ಎಸ್ ಮ್ಯಾಕ್ಸ್ ನ ದಯಾನಂದ್, ಉದ್ಯಮಿ ಲೋಕೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಜಿ.ಮರಿಸ್ವಾಮಿ, ಮಾಜಿ ಕಾರ್ಪೊರೇಟರ್ ಹನುಮಂತಯ್ಯ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಲೋಕೇಶ್ವರ್ ಚಿತ್ರವನ್ನು ವೀಕ್ಷಿಸಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.