• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ದ್ವೇಷದ ರಾಜಕಾರಣ ಪಾರ್ಟ್​ 02.. ಸರ್ಕಾರ ಸೋತಿದ್ಯಾಕೆ ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in ರಾಜಕೀಯ
0
ಯಡಿಯೂರಪ್ಪ ವಿರುದ್ಧ ಹೈಕೋರ್ಟ್​ನಲ್ಲಿ ರಿಟ್​ ಸಂಕಷ್ಟ..!
Share on WhatsAppShare on FacebookShare on Telegram

ಸಂತ್ರಸ್ತೆ ಸಹೋದರನ ಪರ ವಕೀಲ ಬಾಲನ್ ವಾದ ಮಂಡಿಸಿದ್ದು, ಬಿ.ಎಸ್ ಯಡಿಯೂರಪ್ಪ ಬಂಧನಕ್ಕೆ ನಿರ್ದೇಶನ ಕೋರಿ ಸಂತ್ರಸ್ತೆ ಸಹೋದರ ಅರ್ಜಿ ಸಲ್ಲಿಸಿದ್ದಾನೆ ಎಂದಿದ್ದಾರೆ. ಈ ವೇಳೆ ಸಿವಿ ನಾಗೇಶ್ ಮಧ್ಯಪ್ರವೇಶ ಮಾಡಿದ್ದು, ದೂರುದಾರೆ ಮಹಿಳೆ ಅರ್ಜಿದಾರ ಪುತ್ರನ ವಿರುದ್ಧವೇ ಕೇಸ್ ದಾಖಲಿಸಿದ್ದರು. ಬಿಜೆಪಿಯು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿತ್ತು ಎಂದಿದ್ದಾರೆ. ಇದಕ್ಕೆ ಅಡ್ವೊಕೇಟ್ ಜನರಲ್​ ಹಾಗು​​ ವಕೀಲ ಎಸ್‌ ಬಾಲನ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ADVERTISEMENT

ಪುತ್ರ, ಪುತ್ರಿ ಹಾಗೂ ಕಾಂಗ್ರೆಸ್‌ ವಿಧಾನ ಪರಿಷತ್‌ ಉಗ್ರಪ್ಪ ಅವರ ವಿರುದ್ಧವೂ ದೂರು ನೀಡಲಾಗಿದೆ. ಸಿಆರ್‌ಪಿಸಿ ಸೆಕ್ಷನ್‌ 41(1) ರ ಅಡಿಯಲ್ಲಿ ನೋಟಿಸ್‌ ಜಾರಿ ಮಾಡಿದಾಗ ಆರೋಪಿಯನ್ನು ಬಂಧಿಸಲಾಗದು. ಬಂಧನ ವಾರೆಂಟ್‌ ಪಡೆಯಲು ತನಿಖಾಧಿಕಾರಿಗಳು ಪದೇ ಪದೇ ಹೀಗೆ ಮಾಡುತ್ತಿದ್ದಾರೆ. ಇಲ್ಲಿ ತನಿಖಾಧಿಕಾರಿಗಳು ರಾಜಕೀಯ ಮಾಸ್ಟರ್‌ಗಳ ಆಜ್ಞೆ ಪಾಲಿಸುತ್ತಾರೆ ಎಂದು ಸಿ.ವಿ ನಾಗೇಶ್​ ವಾದಿಸಿದ್ದಾರೆ. ಜೂನ್‌ 12ರಂದು ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಇದಕ್ಕಾಗಿ ನಾನು ದೆಹಲಿಗೆ ಹೋಗುತ್ತೇನೆ. ನಿಮ್ಮ ಮುಂದೆ ಜೂನ್‌ 17ರಂದು ಹಾಜರಾಗುತ್ತೇನೆ ಎಂದು ಕೋರಿದ್ದಾರೆ. ಆದರೆ, ಈಗ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಜೂ 17 ರಂದು ಹಾಜರಾಗುವುದಾಗಿ ಪೊಲೀಸರಿಗೆ ಉತ್ತರ ನೀಡಿದ್ದೇವೆ ಎಂದು ಕೋರ್ಟ್​ಗೆ ತಿಳಿಸಿದ್ದಾರೆ ಸಿ ವಿ ನಾಗೇಶ್.

ಹಾಗಾದರೆ ಸೋಮವಾರ ವಿಚಾರಣೆಗೆ ಹಾಜರಾಗಲು ಸಿದ್ದರಿದ್ದೀರಾ..? ಎಂದು ಬಿ.ಎಸ್ ಯಡಿಯೂರಪ್ಪ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಈ ವೇಳೆ ಹೈಕೋರ್ಟ್ ಆದೇಶ ಪಾಲಿಸಲಾಗುವುದು ಎಂದು ಸಿ.ವಿ ನಾಗೇಶ್ ತಿಳಿಸಿದ್ದಾರೆ. ಬಿ.ಎಸ್ ಯಡಿಯೂರಪ್ಪ ಮನೆಯಲ್ಲಿಯೇ ಈ ಘಟನೆ ನಡೆದಿದೆ.. ಆದರೆ ಬಿ.ಎಸ್ ಯಡಿಯೂರಪ್ಪ ಮನೆಯಲ್ಲಿರುವ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ ಎಂದಿದ್ದಾರೆ. ಈ ವೇಳೆ ತನಿಖೆ ಹೇಗೆ ನಡೆಸಬೇಕು ಎನ್ನೋದನ್ನು ತನಿಖಾಧಿಕಾರಿ ತೀರ್ಮಾನಿಸಬೇಕು ಎಂದಿದೆ ಹೈಕೋರ್ಟ್.

ಫೆಬ್ರವರಿ 2ರಂದು ನಡೆದಿರುವ ಘಟನೆಯ ವಿಡಿಯೊ ಮತ್ತು ಆಡಿಯೋ ಇದೆ ಎಂದು ಅಡ್ವೊಕೇಟ್ ಜನರಲ್​ ಹೇಳಿದಾಗ ಎಲ್ಲಿ ತೋರಿಸಿ ನೋಡೋಣ ಎಂದಿದೆ ಪೀಠ. ಈ ವೇಳೆ ಸಿ.ವಿ ನಾಗೇಶ್‌ ಕೂಡ ಎಲ್ಲಿದೆ ತೋರಿಸಿ ನೋಡೋಣ ಎಂದಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಪೀಠ, ಪರಿಸ್ಥಿತಿ ತಿಳಿಗೊಳಿಸಿದೆ. ಸಂತ್ರಸ್ತೆಯನ್ನು ಬಿ.ಎಸ್ ಯಡಿಯೂರಪ್ಪ ರೂಮಿಗೆ ಕರೆದೊಯ್ದಿದ್ದಾರೆ.. ಬಿ.ಎಸ್ ಯಡಿಯೂರಪ್ಪ ಹೇಳಿಕೆಯ ವಿಡಿಯೋ ರೆಕಾರ್ಡಿಂಗ್ ಲಭ್ಯವಿದೆ ಎಂದು ಅಡ್ವೊಕೇಟ್ ಜನರಲ್​ ಮಾಹಿತಿ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿಯನ್ನು ನೀವು ಏಕೆ ಬಂಧಿಸಬೇಕು..? ಅವರು ಓಡಿ ಹೋಗುತ್ತಾರೆಯೇ..? ನೀವು ನ್ಯಾಯಾಲಯದಲ್ಲಿ ಸಮಯ ಕೇಳುವುದಿಲ್ಲವೇ..? ಧ್ವನಿ ಮಾದರಿ ನೀಡಲು ಅವರು ಬಂದಿದ್ದಾರೆ. ಅವರು ನಿಮ್ಮ ತನಿಖೆಗೆ ಸಹಕರಿಸಿದ್ದಾರೆ. ಕೆಲವೊಮ್ಮೆ ಇಂಥವು ನಡೆಯುತ್ತವೆ. ಸುಪ್ರೀಂಕೋರ್ಟ್‌ ಆದೇಶ ಮಾಡಿದರೂ ಅವುಗಳು ಪಾಲನೆಯಾಗದ ಸಂದರ್ಭವಿದೆ. ನಾಲ್ಕು ದಿನದಲ್ಲಿ ಅವರು ಬರದಿದ್ದರೆ ಆಕಾಶ ಕಳಚಿ ಬೀಳಲಿದೆಯೇ..? ಈಗ ಹೊರಡಿಸಿರುವ ವಾರೆಂಟ್‌ ನೋಡಿದರೆ ಅನುಮಾನ ಬರುತ್ತದೆ..? ಎಂದಿದೆ ಹೈಕೋರ್ಟ್​ ಪೀಠ.

ಯಾವುದೇ ಅನುಮಾನಪಡುವ ಅಗತ್ಯವಿಲ್ಲ. ತನಿಖಾಧಿಕಾರಿಗೆ ಬಂಧನ ಅಗತ್ಯವಿದೆ ಎಂದು ಅನಿಸಿದೆ. ಫೆಬ್ರವರಿ 2 ರ ಘಟನೆಗೆ ಮಾರ್ಚ್​ 14 ರಂದು ದೂರು ದಾಖಲಾಗಿದೆ.. ಇಲ್ಲಿಯವರೆಗೆ ಸುಮ್ಮನಿದ್ದು ಈಗ ವಾರೆಂಟ್ ಪಡೆದಿರಯವುದೇಕೆ..? ಮಾಜಿ ಸಿಎಂ, ತನಿಖೆ ತಪ್ಪಿಸಿಕೊಳ್ಳಲು ಸಾಧ್ಯವೇ ? ಕೋರ್ಟ್​ನಲ್ಲಿ ನೀವು ಸಮಯ ಕೇಳುವಂತೆ ಅವರೂ ಕೇಳಿದ್ದಾರಲ್ಲವೇ ಎಂದು ಹೈಕೋರ್ಟ್ ಅಡ್ವೊಕೇಟ್ ಜನರಲ್​ಗೆ ಪ್ರಶ್ನಿಸಿದೆ. ಈ ವೇಳೆ ಬೇರೆ ಒತ್ತಡದಿಂದ ಬಂಧಿಸುತ್ತಿದ್ದಾರೆ ಎಂಬ ಭಾವನೆ ಬರಬಾರದು. ತನಿಖೆಗೆ ಬರುವುದಿಲ್ಲವೆಂದು ಮಾಜಿ ಸಿಎಂ ಹೇಳುತ್ತಿಲ್ಲ. ಯಾರನ್ನು ತೃಪ್ತಿಪಡಿಸಲು ಬಂಧಿಸಲು ಮುಂದಾಗುತ್ತಿದ್ದೀರಿ ಎಂದು ಹೈಕೋರ್ಟ್ ಪ್ರಶ್ನಿಸಿದೆ.

ತನಿಖಾಧಿಕಾರಿ ಬಂಧನದ ಅಗತ್ಯವಿದೆ ಎಂದು ಭಾವಿಸಿದ್ದಾರೆ ಎಂದು ಅಡ್ವೊಕೇಟ್ ಜನರಲ್​ ಹೇಳಿದಾಗ, ಹಾಗಿದ್ದರೆ ಬಂಧನದ ಅಗತ್ಯವಿಲ್ಲದ ಸೆಕ್ಷನ್​ನಲ್ಲಿ 2 ನೋಟಿಸ್ ಏಕೆ‌ ನೀಡಿದಿರಿ..? ಮಾಜಿ ಮುಖ್ಯಮಂತ್ರಿಯನ್ನು ಈ ರೀತಿ ಟ್ರೀಟ್‌ ಮಾಡಿದರೆ, ಸಾಮಾನ್ಯ ಮನುಷ್ಯನ ಗತಿಯೇನು..? ಇದಕ್ಕಿಂತ ಹೆಚ್ಚನ್ನು ನಾನು ಹೇಳುವುದಿಲ್ಲ ಎಂದು ಪೀಠ ಅಸಮಾಧಾನ ಹೊರಹಾಕಿದೆ. ಈ ವೇಳೆ ಪ್ರಕರಣದ ವಿಚಾರಣೆ ನಡೆಸಬಾರದು ಎಂದು ಬಿ.ಎಸ್​ ಯಡಿಯೂರಪ್ಪ ಪರ ವಕೀಲರು ಪೀಠಕ್ಕೆ ಮನವಿ ಮಾಡಿದ್ದಾರೆ. ನೀವು ಲಿಖಿತ ದಾಖಲೆ ಸಲ್ಲಿಸಿದ್ದೀರಿ. ಜೂನ್‌ 17ರಂದು ವಿಚಾರಣೆಗೆ ಬರುತ್ತೇನೆ ಎಂದಿದ್ದೀರಿ. ವಿಚಾರಣೆಗೆ ಹಾಜರಾಗುತ್ತೇನೆಂದು ಈಗ ನಿರಾಕರಿಸಬಾರದು ಎಂದಿರುವ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಬಂಧನ ಮಾಡದಂತೆ ಸೂಚನೆ ನೀಡಿದೆ. ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ. ತನಿಖೆಗೆ ಹಾಜರಾಗುವಂತೆ ಬಿ.ಎಸ್ ಯಡಿಯೂರಪ್ಪಗೆ ಹೈಕೋರ್ಟ್ ಸೂಚನೆ ನೀಡಿದೆ.. ಪ್ರಕರಣ ರದ್ದು ಕೋರಿದ್ದ ಅರ್ಜಿಯಲ್ಲಿ ಸರ್ಕಾರಕ್ಕೆ ನೋಟಿಸ್ ಮಾಡಿದೆ ಹೈಕೋರ್ಟ್..

ಕೃಷ್ಣಮಣಿ

Tags: Yadiyurappa
Previous Post

‘ದ್ವೇಷದ ರಾಜಕಾರಣ’ ವಾದ – ಪ್ರತಿವಾದ.. ಯಡಿಯೂರಪ್ಪಗೆ ಬಿಗ್​​ ರಿಲೀಫ್..! ​

Next Post

ರೇಣುಕಾಸ್ವಾಮಿ ಕೊಲೆ; ಪ್ರಕರಣದ ಮತ್ತಿಬ್ಬರು ಆರೋಪಿಗಳು ಬಂಧನ

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ರೇಣುಕಾಸ್ವಾಮಿ ಕೊಲೆ; ಪ್ರಕರಣದ ಮತ್ತಿಬ್ಬರು ಆರೋಪಿಗಳು ಬಂಧನ

ರೇಣುಕಾಸ್ವಾಮಿ ಕೊಲೆ; ಪ್ರಕರಣದ ಮತ್ತಿಬ್ಬರು ಆರೋಪಿಗಳು ಬಂಧನ

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada