• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಸ್ತೆ ಕಾಮಗಾರಿಗಾಗಿ ಹಳೇಬೀಡಿನ ಐತಿಹಾಸಿಕ ಕೋಟೆ ಬಲಿ!

ಪ್ರತಿಧ್ವನಿ by ಪ್ರತಿಧ್ವನಿ
March 8, 2022
in ಕರ್ನಾಟಕ
0
ರಸ್ತೆ ಕಾಮಗಾರಿಗಾಗಿ ಹಳೇಬೀಡಿನ ಐತಿಹಾಸಿಕ ಕೋಟೆ ಬಲಿ!
Share on WhatsAppShare on FacebookShare on Telegram

ಒಂದು ಕಾಲದಲ್ಲಿ ಹೊಯ್ಸಳರ ರಾಜಧಾನಿಯಾಗಿದ್ದ ಹಳೇಬೀಡಿನಲ್ಲಿ ರಸ್ತೆ ಕಾಮಗಾರಿಗಾಗಿ ಐತಿಹಾಸಿಕ ಕೋಟೆ ಗೋಡೆಯನ್ನು ಕೆಡವಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ADVERTISEMENT

ಹೌದು, ಒಂದು ಕಾಲದಲ್ಲಿ ಹೊಯ್ಸಳರ ರಾಜಧಾನಿಯಾಗಿದ್ದ (capital of Hoysalas) ಹಳೇಬೀಡಿನಲ್ಲಿ ಶತಮಾನಗಳಿಂದ ನಿಂತಿದ್ದ ಐತಿಹಾಸಿಕ ಕೋಟೆಯನ್ನು (fortification) ಇತ್ತೀಚೆಗೆ ರಸ್ತೆ ನಿರ್ಮಿಸಲು ಸಲುವಾಗಿ ಕೆಡವಿದ್ದಾರೆ. ವಿಶ್ವ ಪರಂಪರೆಯ ತಾಣದ ಟ್ಯಾಗ್ಗೆ ಶಿಫಾರಸು ಮಾಡಲಾದ ಈ ಸ್ಥಳದಲ್ಲಿ ಇಂತಹ ಘಟನೆ ಸಂಭವಿಸಿದ್ದು ಜನರು ಆಘಾತಕ್ಕೊಳಗಾಗಿದ್ದಾರೆ.

ಇತ್ತೀಚೆಗೆ ದಿ ಹಿಂದೂ ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ, ಸ್ಥಳೀಯ ನಿವಾಸಿ ಮಧು ಮಾತನಾಡಿ, “ಶತಮಾನಗಳಷ್ಟು ಹಳೆಯದಾದ ಈ ಕೋಟೆಯ ಗೋಡೆಯನ್ನು (fort wall) ಬೃಹತ್ ಬಂಡೆಗಳಿಂದ ನಿರ್ಮಿಸಲಾಗಿದೆ. ಇಷ್ಟು ವರ್ಷಗಳಾದರು ಅದು ಗಟ್ಟಿಯಾಗಿ ಉಳಿದಿತ್ತು ಆದರೆ ಸುಮಾರು 15 ದಿನಗಳ ಹಿಂದೆ ಇದನ್ನು ಕೆಡವಲಾಗಿದೆ ಎಂದು ಹೇಳಿದ್ದಾರೆ.

ಹಳೇಬೀಡಿನ ಸರ್ವೆ ನಂಬರ್ 501/3ರಲ್ಲಿ ಇದ್ದ ಕೋಟೆ ಗೋಡೆಯನ್ನು 20 ಅಡಿ ಅಗಲದ ರಸ್ತೆಗೆ ಬದಲಾಯಿಸಲಾಗಿದೆ. ಸುತ್ತಲೂ ಬಿದ್ದಿರುವ ಬೃಹತ್ ಬಂಡೆಗಳು ಕೋಟೆಯು ಒಂದು ಕಾಲದಲ್ಲಿ ಹೇಗೆ ಇತ್ತು ಎಂಬ ಕಲ್ಪನೆಯನ್ನು ನೀಡುತ್ತದೆ. ಹೊಸ ರಸ್ತೆಯ ಸಮೀಪದಲ್ಲಿ ವಸತಿ ಲೇಔಟ್ ಬರುವ ನಿರೀಕ್ಷೆಯಿದೆ. ಸ್ಥಿರಾಸ್ತಿದಾರರು (realtors) ಸಹಾಯ ಮಾಡಲು ಕೋಟೆ ಗೋಡೆಯನ್ನು ಕೆಡವಲಾಗಿದೆ ಎಂದು ಹೇಳಲಾಗಿದೆ.

ಹೊಯ್ಸಳ ಅರಸರು (Hoysala rulers) 11ನೇ ಶತಮಾನದಲ್ಲಿ ಗ್ರಾನೈಟ್ ಬಂಡೆಗಳನ್ನು ಬಳಸಿ ಕೋಟೆಯನ್ನು ನಿರ್ಮಿಸಿದ್ದರು. ಇದು ರಾಜಧಾನಿ ಟೌನ್ಶಿಪ್ಗೆ ರಕ್ಷಣೆ ಗೋಡೆಯಾಗಿ ಕಾರ್ಯನಿರ್ವಹಿಸಿತು, ಇದರಲ್ಲಿ ಹೊಯ್ಸಳೇಶ್ವರ, ಶಾಂತಿನಾಥ ಬಸದಿ ಸೇರಿದಂತೆ ಇತರ ಐತಿಹಾಸಿಕ ರಚನೆಗಳು ಮತ್ತು ಸ್ಮಾರಕಗಳು ಸೇರಿವೆ. ಕೆಲ ವರ್ಷಗಳ ಹಿಂದೆ ಕೋಟೆಯ ಗೋಡೆಯ ಭಾಗಗಳು ಹಾನಿಗೊಳಗಾದವು. ಆದಾಗ್ಯೂ, ಇತ್ತೀಚಿನ ಘಟನೆಗಳು ಐತಿಹಾಸಿಕ ರಚನೆಗಳನ್ನು ಸಂರಕ್ಷಿಸಲು ಆಸಕ್ತಿ ಹೊಂದಿರುವವರಿಗೆ ಆಘಾತವನ್ನುಂಟು ಮಾಡಿದೆ. ಬೇಲೂರು ರಸ್ತೆಯಲ್ಲಿರುವ ಕೋಟೆ ಗೋಡೆಯ ಹೊರತಾಗಿ, ಜೈನ ಬಸದಿಯ ಸಮೀಪವಿರುವ ಇನ್ನೊಂದು ಭಾಗವು ಇತ್ತೀಚಿಗೆ ಹಾನಿಗೊಳಗಾಗಿತ್ತು.

”ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಯ ಮಹತ್ವದ ಬಗ್ಗೆ ಸ್ಥಳೀಯ ಸಾರ್ವಜನಿಕರಲ್ಲಿ ಅರಿವಿನ ಕೊರತೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವೇ ಪದೇ ಪದೇ ಕೋಟೆ ಗೋಡೆಗೆ ಹಾನಿಯಾಗುತ್ತಿರುವ ಘಟನೆಗಳಿಗೆ ಕಾರಣ.” ಎಂದು ಹೆಸರು ಹೇಳಲಿಚ್ಛಿಸದ ನಿವಾಸಿಯೊಬ್ಬರು ತಿಳಿಸಿದರು.

ಒಂದು ಕಾಲದಲ್ಲಿ ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಳೇಬೀಡಿನಲ್ಲಿ ಐತಿಹಾಸಿಕ ಕೋಟೆಯನ್ನು ಹಾನಿಗೊಳಿಸಿದ ನಂತರ ರಸ್ತೆಯನ್ನು ಹಾಕಲಾಗಿದೆ. | ಚಿತ್ರಕೃಪೆ: ಪ್ರಕಾಶ್ ಹಾಸನ್

ನಗರದ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾದ ಹಳೇಬೀಡು ವಾರಾಂತ್ಯದಲ್ಲಿ ನೂರಾರು ಪ್ರವಾಸಿಗರನ್ನು ಆಕರ್ಷಿಸುತ್ತದೆ. ಕಳೆದ ಕೆಲವು ವರ್ಷಗಳಿಂದ, ಈ ಸ್ಥಳವು ವಿಶ್ವ ಪರಂಪರೆಯ ತಾಣಗಳ ತಾತ್ಕಾಲಿಕ ಪಟ್ಟಿಯಲ್ಲಿದೆ. ಭಾರತೀಯ ಪುರಾತತ್ವ ಇಲಾಖೆಯು ಸ್ಮಾರಕಗಳ ಮೇಲೆ ನಿಯಂತ್ರಣ ಹೊಂದಿದೆ. ಆದರೆ ಸ್ಮಾರಕಗಳ ಸುತ್ತಲಿನ ಸ್ಥಳಗಳು ಅಸುರಕ್ಷಿತವಾಗಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಕೋಟೆ ಗೋಡೆಗೆ ಹಾನಿಯಾಗಿರುವ ವಿಚಾರವನ್ನು ‘ದಿ ಹಿಂದೂ’ ಪತ್ರಿಕೆಯು ಹಾಸನ ಉಪ ವೃತ್ತದ ಎಎಸ್ಐ ಸಂರಕ್ಷಣಾ ಸಹಾಯಕ ಕೆ.ಗೌತಮ್ ಅವರ ಗಮನಕ್ಕೆ ತಂದಾಗ, ಕೋಟೆಯು ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. “ನಾವು ಸ್ಮಾರಕಗಳನ್ನು ನೋಡಿಕೊಳ್ಳುತ್ತಿದ್ದೇವೆ. ರಾಜ್ಯ ಸರಕಾರದ ಮುಜರಾಯಿ ಇಲಾಖೆ ಅಥವಾ ಪುರಾತತ್ವ ಇಲಾಖೆಯನ್ನು ಸಂಪರ್ಕಿಸಬಹುದು,” ಎಂದರು.

ಆದರೆ, ಸ್ಥಳೀಯರ ಪ್ರಕಾರ, ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಈ ಬೆಳವಣಿಗೆಗಳ ಬಗ್ಗೆ ತಿಳಿದಿದ್ದರೂ ಅವರು ಕೋಟೆ-ಗೋಡೆಯ ರಕ್ಷಣೆಗೆ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.

Tags: capital of Hoysalasfort wallfortificationHoysala rulersrealtorsಕೋಟೆಕೋಟೆ ಗೋಡೆಹೊಯ್ಸಳ ಅರಸರುಹೊಯ್ಸಳರ ರಾಜಧಾನಿ
Previous Post

2021-22 ಫ್ರೆಬ್ರವರಿ ವರೆಗೆ ರಾಜ್ಯದಲ್ಲಿ 5,860 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲು!

Next Post

ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ – ಸಿದ್ದರಾಮಯ್ಯ ನಡುವೆ ವಾಕ್ಸಮರ

Related Posts

Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ...

Read moreDetails

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
Next Post
ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ – ಸಿದ್ದರಾಮಯ್ಯ ನಡುವೆ ವಾಕ್ಸಮರ

ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ - ಸಿದ್ದರಾಮಯ್ಯ ನಡುವೆ ವಾಕ್ಸಮರ

Please login to join discussion

Recent News

Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada