• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜಧಾನಿಯಲ್ಲಿ ರಸ್ತೆ ಗುಂಡಿಗೆ ಸಾಲು ಸಾಲು ಸಾವು : ಒಬ್ಬರಿಗೂ ಸಿಕ್ಕಿಲ್ಲ ನಯಾಪೈಸೆ ಪರಿಹಾರ!

Any Mind by Any Mind
March 24, 2022
in ಕರ್ನಾಟಕ
0
ರಾಜಧಾನಿಯಲ್ಲಿ ರಸ್ತೆ ಗುಂಡಿಗೆ ಸಾಲು ಸಾಲು ಸಾವು : ಒಬ್ಬರಿಗೂ ಸಿಕ್ಕಿಲ್ಲ ನಯಾಪೈಸೆ ಪರಿಹಾರ!
Share on WhatsAppShare on FacebookShare on Telegram

ಬೆಂಗಳೂರು ರಸ್ತೆ ಮೇಲೆ ಸಂಚರಿಸಬೇಕಾದರೆ ಜೀವ ಕೈಯಲ್ಲಿ ಹಿಡಿದು ಓಡಾಡಬೇಕು ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಮನೆಯಿಂದ ಆಚೆ ಹೋದವರು ಮತ್ತೆ ಜೀವಂತವಾಗಿ ಬರ್ತಾರಾ ಎನ್ನುವ ಯಾವ ನಂಬಿಕೆಯೂ ಇಲ್ಲ ಎನ್ನುವ ಸ್ಥಿತಿ ಸದ್ಯದ್ದು. ಅಂಥಾ ಅದ್ವಾನ ಸ್ಥಿತಿಯಲ್ಲಿದೆ ಬೆಂಗಳೂರಿನ ರಸ್ತೆಗಳು. ರಸ್ತೆ ಗುಂಡಿಯಿಂದ ಸಾವಾದರೆ ಪರಿಹಾರ ಕೊಡುವ ಜವಾಬ್ದಾರಿಯನ್ನು ಪಾಲಿಕೆ ಹೊತ್ತುಕೊಂಡಿತ್ತು. ಆದರೆ ಕಳೆದ ಒಂದು ವರ್ಷದಲ್ಲಿ ಆದ ರಸ್ತೆ ಅಪಘಾತದಲ್ಲಿ ಜೀವಹಾನಿಯಾದವರಿಗೆ ಬಿಬಿಎಂಪಿಯಿಂದ ನಯಾ ಪೈಸೆ ಪರಿಹಾರ ಸಿಕ್ಕಿಲ್ಲ.‌

ADVERTISEMENT

ಒಂದು ವರ್ಷದಲ್ಲಿ 6 ಜನ ಅಮಾಯಕರು ಬಲಿ, ಮೃತರ ಕುಟುಂಬಕ್ಕೆ ಸಲ್ಲಿಕೆಯಾಗದ ಪರಿಹಾರ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವರ್ಷದಲ್ಲಿ ರಸ್ತೆಗುಂಡಿಯಿಂದ ಬರೋಬ್ಬರಿ 600 ಕ್ಕೂ ಅಧಿಕ ಅಫಘಾತ ಸಂಭವಿಸಿವೆ. ಈ ಒಂದು ವರ್ಷದ ಅವಧಿಯಲ್ಲಿ ಆರು ಜನ ರಸ್ತೆ ಗುಂಡಿಯಲ್ಲಿ ಬಿದ್ದು ಜೀವ ಕಳೆದುಕೊಂಡರೆ, ನೂರಾರು ಸಂಖ್ಯೆಯಲ್ಲಿ ಜನರು ಕೈ ಕಾಲು ಕಳೆದುಕೊಂಡು ಬದುಕುತ್ತಿದ್ದಾರೆ. ಆದರೆ ಬಿಬಿಎಂಪಿ ನಿರ್ಲಕ್ಷ್ಯ ಮತ್ತು ನಿರ್ವಹಣೆ ವೈಫಲ್ಯದಿಂದ ಸಂಭವಿಸಿದ ಅಪಘಾತಗಳಿಗೆ ಬಿಬಿಎಂಪಿಯೇ ನೇರ ಹೊಣೆ ಎಂದು ಹೈಕೋರ್ಟ್ ಸಹ ಹೇಳಿದೆ. 2020 ಡಿಸೆಂಬರ್ ನಲ್ಲಿ ಹೈಕೋರ್ಟ್, ಪಾಲಿಕೆ ಪರಿಹಾರ ಒದಗಿಸಬೇಕು ಎಂದು ಖಡಕ್ ಸೂಚನೆಯನ್ನು ಕೊಟ್ಟಿತ್ತು. ಆದರೆ ಬಿಬಿಎಂಪಿಯಿಂದ ಸತ್ತವರಿಗೆ ಈವರೆಗೆ ಪರಿಹಾರ ಸೇರಿಲ್ಲ. ಇದುವರೆಗೂ ಸಾರ್ಜನಿಕರು ಯಾರೂ ಕೂಡ ಪರಿಹಾರಕ್ಕೆ ಅರ್ಜಿ ಸಲ್ಲಿಸಿಲ್ಲಾ. ಅರ್ಜಿ ಬಂದರೆ ಪರಿಶೀಲನೆ ನಡೆಸಿ ಪರಿಹಾರ ನಿಡುತ್ತೇವೆ ಎನ್ನುವ ಬಿಬಿಎಂಪಿ ಅಧಿಕಾರಿಗಳು, ಅರ್ಜಿ ಸಲ್ಲಿಸಬೇಕಾದ ರೀತಿ ರಿವಾಜುಗಳ ಪಟ್ಟಿಯನ್ನೇ ಈವರೆಗೆ ಅಧಿಕೃತವಾಗಿ ಪ್ರಕಟಿಸಿಲ್ಲ.

ಯಾವ ರಸ್ತೆಯಲ್ಲಿ ಎಷ್ಟು ಅಪಘಾತಗಳು

ಸಿಮೆಂಟ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಸಂಖ್ಯೆ :

2019 ರಲ್ಲಿ- 35
2020 ರಲ್ಲಿ – 29
2021 ರಲ್ಲಿ – 77

ಡಾಂಬರ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಸಂಖ್ಯೆ :

2019 ರಲ್ಲಿ – 744
2020 ರಲ್ಲಿ – 588
2021ರಲ್ಲಿ – 535

ಪರಿಹಾರ ಧನ ಕೊಡುವಂತೆ ಬಿಬಿಎಂಪಿ ಕಿವಿ ಹಿಂಡಿದ್ದ ಹೈ ಕೋರ್ಟ್!

ರಸ್ತೆ ಗುಂಡಿಯಿಂದ ಅಫಘಾತವಾದವರಿಗೆ ಪರಿಶೀಪಿಸಿ ಪರಿಹಾರ ಒದಗಿಸಬೇಕು ಬಿಬಿಎಂಪಿ. ಈ ಬಗ್ಗೆ ಹೈ ಕೋರ್ಟ್ ಸೂಚನೆ ನೀಡಿ ಒಂದು ವರ್ಷ ಕಳೆದರು ಒಂದು ಅರ್ಜಿಯೂ ಬಂದಿಲ್ಲ. ಅಪಘಾತದಿಂದ ಆದ ಹಾನಿ ಆಧಾರದ ಮೇಲೆ ಪರಿಹಾರ ಸಿಗುತ್ತದೆ. ಆದರೆ ಮಾಹಿತಿಯ ಕೊರತೆಯಿಂದ ಅರ್ಜಿಗಳು ಬಂದಿಲ್ಲ ಎಂಬುವುದೇ ವಾಸ್ತವ. ಸಾರ್ವಜನಿಕರು ರಸ್ತೆ ಗುಂಡಿಗೆ ಆದ ಬಲಿಗಳಿಗೆ ಬಿಬಿಎಂಪಿ ನೇರ ಹೊಣೆ ಎಂದು ಹಿಡಿ ಶಾಪ ಹಾಕಿ ಓಡಾಡುವ ಸ್ಥಿತಿ ತಲುಪಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೇಲ್ಲಾ ಕಾರಣ. ನ್ಯಾಯಾಂಗ ಆದೇಶವನ್ನು ಅಧಿಕಾರಿಗಳು ಉಲ್ಲಂಘನೆ ಮಾಡುತ್ತಿದ್ದಾರೆ. ಪರಿಹಾರ‌ದ ಕುರಿತು ಸಾರ್ವಜನಿಕರಿಗೆ ಮಾಹಿತಿ‌ ನೀಡುವಲ್ಲಿ ಬಿಬಿಎಂಪಿ ಎಡವಿದೆ ಎಂಬುವುದು ಸಾರ್ವಜನಿಕರ ಮಾತು. ಬಿಬಿಎಂಪಿ ಮಾಹಿತಿ ಕೊರತೆಯಿಂದ ಅಪಘಾತವಾದ ಕುಟುಂಬಗಳಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಎಷ್ಟೇ ಸಾವು ನೋವುಗಳಾದರೂ ಸಹ ಬಿಬಿಎಂಪಿ ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಹೊಸ ಹೊಸ ಯೋಜನೆಗಳು ಜಾರಿ ಮಾಡಿ ಬಿಲ್ ಲಗತ್ತಿಸುವ ಕೆಲಸದಲ್ಲಿದೆ.

ಎಎಪಿಯಿಂದ ನಗರದೆಲ್ಲೆಡೆ ಗುಂಡಿಗಳು ಬಿದ್ದಿರುವುದನ್ನು ಖಂಡಿಸಿ ಬೃಹತ್ ಸಹಿ ಸಂಗ್ರಹ ಅಭಿಯಾನ ಆರಂಭ

ಇತ್ತ ರಾಜಧಾನಿಯ ರಸ್ತೆ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಗರದೆಲ್ಲೆಡೆ ಗುಂಡಿಗಳು ಬಿದ್ದಿರುವುದನ್ನು ಖಂಡಿಸಿ 10 ದಿನಗಳ ಬೃಹತ್ ಸಹಿ ಸಂಗ್ರಹ ಅಭಿಯಾನಕ್ಕೆ ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ಶನಿವಾರ ಚಾಲನೆ ನೀಡಿದರು.

Tags: BJPCongress PartyCovid 19ನಯಾಪೈಸೆ ಪರಿಹಾರನರೇಂದ್ರ ಮೋದಿಬಿಜೆಪಿರಸ್ತೆ ಗುಂಡಿರಾಜಧಾನಿಸಾಲು ಸಾಲು ಸಾವು
Previous Post

ಟಿಎಂಸಿ ನಾಯಕನ ಹತ್ಯೆಗೆ ಪ್ರತೀಕಾರ: ಭೀಕರ ಹಿಂಸಾಚಾರಕ್ಕೆ ಕನಿಷ್ಟ ಎಂಟು ಮಂದಿ ಸಜೀವ ದಹನ

Next Post

ಇಡೀ ರಾಜ್ಯಕ್ಕೆ ಬೆಂಕಿ ಹಚ್ಚಿದವನು ನೀನು – ಜಮೀರ್ ವಿರುದ್ಧ ಏಕವಚನದಲ್ಲಿ ಕಿಡಿಕಾರಿದ ಈಶ್ವರಪ್ಪ!

Related Posts

Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
0

ಸಮರ್ಪಕ ವಿದ್ಯುತ್ ಪೂರೈಕೆಗೆ ಈಗಾಗಲೇ 100 ಸಬ್ ಸ್ಟೇಷನ್ ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಸೂಕ್ತ ಜಾಗ ನೀಡಿದರೆ ಇನ್ನಷ್ಟು ಸಬ್‌ಸ್ಟೇಷನ್‌ಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ...

Read moreDetails

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

November 3, 2025
Next Post
ಇಡೀ ರಾಜ್ಯಕ್ಕೆ ಬೆಂಕಿ ಹಚ್ಚಿದವನು ನೀನು – ಜಮೀರ್ ವಿರುದ್ಧ ಏಕವಚನದಲ್ಲಿ ಕಿಡಿಕಾರಿದ ಈಶ್ವರಪ್ಪ!

ಇಡೀ ರಾಜ್ಯಕ್ಕೆ ಬೆಂಕಿ ಹಚ್ಚಿದವನು ನೀನು - ಜಮೀರ್ ವಿರುದ್ಧ ಏಕವಚನದಲ್ಲಿ ಕಿಡಿಕಾರಿದ ಈಶ್ವರಪ್ಪ!

Please login to join discussion

Recent News

Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada