• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ನಾಯಕತ್ವ ಬದಲಾವಣೆಗೆ ಎಐಸಿಸಿ ಮೇಲೆ ಒತ್ತಡ

Any Mind by Any Mind
September 18, 2021
in Uncategorized
0
ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ನಾಯಕತ್ವ ಬದಲಾವಣೆಗೆ ಎಐಸಿಸಿ ಮೇಲೆ ಒತ್ತಡ
Share on WhatsAppShare on FacebookShare on Telegram

ಎಲ್ಲವೂ ಸುಸೂತ್ರವಾಗಿ ಮುಗಿಯಿತು ಎಂದು ಅಂದುಕೊಳ್ಳುತ್ತಿರುವಾಗಲೇ, ಪಂಜಾಬ್ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಗಾಳಿ ಬೀಸುತ್ತಿದೆ. ಕಾಂಗ್ರೆಸ್ ಶಾಸಕರ ದೊಡ್ಡ ಗುಂಪೊಂದು ಅತೀ ಮುಖ್ಯವಾದ ಶಾಸಕಾಂಗ ಸಭೆಯನ್ನು ಕರೆಯಲು ಆಗ್ರಹಿಸಿದೆ. ಈ ಸಭೆಯಲ್ಲಿ ಕ್ಯಾ. ಅಮರೀಂದರ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಕುರಿತಾಗಿ ಚರ್ಚೆ ನಡೆಸುವ ಎಲ್ಲಾ ಸಾಧ್ಯತೆಗಳು ತೆರೆದುಕೊಂಡಿವೆ.

ADVERTISEMENT

ಕಾಂಗ್ರೆಸ್ ಪಂಜಾಬ್ ಘಟಕದ ಉಸ್ತುವಾರಿಯಾಗಿರುವ ಹರೀಶ್ ರಾವತ್ ಅವರು ಈ ಕುರಿತಾಗಿ ಸ್ಪಷ್ಟನೆ ನಿಡಿದ್ದಾರೆ. “ಕಾಂಗ್ರೆಸ್ ಶಾಸಕರ ದೊಡ್ಡ ನಿಯೋಗವೊಂದು ಎಐಸಿಸಿಯನ್ನು ಸಂಪರ್ಕಿಸಿದೆ. ತುರ್ತಾಗಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲು ಈ ನಿಯೋಗ ಆಗ್ರಹಿಸಿದೆ. ಸೆಪ್ಟೆಂಬರ್ 18ರ ಸಂಜೆ ಐದು ಗಂಟೆಗೆ ಈ ಸಭೆ ನಡೆಯಲಿದೆ,” ಎಂದು ಅವರು ಟ್ವೀಟ್ ಮೂಲಕ ಹೇಳಿದ್ದಾರೆ.

ಈ ಸಭೆಗೆ ತಯಾರಿ ನಡೆಸಲು ಎಐಸಿಸಿ ನಿರ್ದೇಶನ ನೀಡಿದೆ. ಪಂಜಾಬ್’ನ ಎಲ್ಲಾ ಕಾಂಗ್ರೆಸ್ ಶಾಸಕರು ಈ ಸಭೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸುತ್ತಿದ್ದೇನೆ, ಎಂದು ಹರೀಶ್ ರಾವತ್ ಹೇಳಿದ್ದಾರೆ.

ಎಐಸಿಸಿ ಪರವಾಗಿ ಹರೀಶ್ ಚೌಧರಿ ಹಾಗು ಅಜಯ್ ಮಾಕೆನ್ ಅವರು ವೀಕ್ಷಕರಾಗಿ ಸಭೆಗೆ ಆಗಮಿಸಲಿದ್ದಾರೆ. ಸಭೆಯನ್ನು ಸೂಚಿಸಿದ ಸಮಯದಲ್ಲಿ ನಡೆಸಲು ತಯಾರಿ ನಡೆಸಲಾಗಿದೆ ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಟ್ವೀಟ್ ಮಾಡಿದ್ದಾರೆ. ಆದರೆ, ಈ ಸಭೆಯ ಕುರಿತಾಗಿ ಕ್ಯಾ. ಅಮರಿಂದರ್ ಸಿಂಗ್ ಅವರು ಮಾತ್ರ ಮೌನ ತಾಳಿದ್ದಾರೆ.

ಕಳೆದ ತಿಂಗಳು ನಾಲ್ಕು ಜನ ಸಚಿವರು ಹಾಗೂ ಸುಮಾರು ಇಪ್ಪತ್ತೈದು ಶಾಸಕರು ಸಿಎಂ ಸಿಂಗ್ ವಿರುದ್ದ ದೂರುಗಳ ಸುರಿಮಳೆಗೈದಿದ್ದರು. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ಶಕ್ತಿ ಅವರಿಗಿಲ್ಲ ಎಂದು ಕಟು ಟೀಕೆ ಮಾಡಿದ್ದರು. ಕಳೆದ ಮೇ ತಿಂಗಳಿನಿಂದಲೂ ಪಂಜಾಬ್ ಕಾಂಗ್ರೆಸ್ ಎಂಬುದು ಸುಪ್ತ ಜ್ವಾಲಾಮುಖಿಯಂತೆ ಕುದಿಯುತ್ತಿದೆ. ಇನ್ನೇನು ಭಿನ್ನಮತ ಸ್ಫೋಟಗೊಳ್ಳುತ್ತದೆ ಎಂದಾಗ ಹೈಕಮಾಂಡ್ ತಕ್ಷಣದ ಪರಿಹಾರಕ್ಕೆ ಮುಂದಾಗುತ್ತಿದೆ. ಆದರೆ, ಇಲ್ಲಿಯವರೆಗೂ ಭಿನ್ನಮತವನ್ನು ಸಂಪೂರ್ಣವಾಗಿ ಶಮನಗೊಳಿಸುವಲ್ಲಿ ಹೈಕಮಾಂಡ್ ಸಫಲವಾಗಿಲ್ಲ.

ದೊಡ್ಡ ಮಟ್ಟದ ಭಿನ್ನಮತ ಎದುರಾಗಿದ್ದರೂ, ಎಐಸಿಸಿ ನಾಯಕರು ಮಾತ್ರ ಏನೂ ನಡೆದೇ ಇಲ್ಲ ಎಂಬಂತಹ ಹೇಳಿಕೆ ನೀಡುತ್ತಿದ್ದಾರೆ. “ಪಂಜಾಬ್’ನಲ್ಲಿ ನಿರ್ಭೀತ ನಾಯಕರಿದ್ದಾರೆ. ಅವರು ತಮ್ಮ ಅಭಿಪ್ರಾಯವನ್ನು ಹೊರಹಾಕುತ್ತಿದ್ದಾರೆ ಅಷ್ಟೇ. ಇದರಿಂದಾಗಿ ಅವರ ಮಧ್ಯೆ ವೈಮನಸ್ಯ ಇದೆ ಎಂದು ತಿಳಿದುಕೊಳ್ಳುವುದು ತಪ್ಪು. ಅವರ ಸಮಸ್ಯೆಗಳನ್ನು ಅವರೇ ಬಗೆಹರಿಸಿಕೊಳ್ಳುತ್ತಾರೆ. ನಾವೇನೂ ಮಾಡುತ್ತಿಲ್ಲ,” ಎಂದು ಇತ್ತೀಚಿಗೆ ಹರೀಶ್ ರಾವತ್ ಅವರು ಹೇಳಿದ್ದರು.

ಇನ್ನೊಂದೆಡೆ, ಕಳೆದ ಆರು ತಿಂಗಳಲ್ಲಿ ಬಿಜೆಪಿಯು ನಾಲ್ಕು ಜನ ಮುಖ್ಯಮಂತ್ರಿಗಳನ್ನು ಬದಲಾಯಿಸಿದೆ. ವಿಜಯ್ ರೂಪಾನಿ, ಬಿ ಎಸ್ ಯಡಿಯೂರಪ್ಪ, ತೀರಥ್ ಸಿಂಗ್ ಸಿಂಗ್ ರಾವತ್ ಹಾಗೂ ತ್ರಿವೇಂದ್ರ ರಾವತ್ ಈಗಾಗಲೇ ಗೇಟ್ ಪಾಸ್ ಪಡೆದಿದ್ದಾರೆ. ಗುಜರಾತ್ ಮತ್ತು ಉತ್ತರಾಖಂಡ್’ಗಳಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಪಂಜಾಬ್ ಕುಡಾ ಚುನಾವಣೆಗೆ ಸಜ್ಜಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಸಿಎಂ ಬದಲಾವಣೆ ಮಾಡಿ ಸರ್ಕಾರದ ಕುರಿತು ಜನರಿಗಿರುವ ಭಾವನೆಗಳನ್ನು ಬದಲಾಯಿಸಬೇಕು ಎಂಬ ಆಲೋಚನೆ ಕಾಂಗ್ರೆಸ್ ಶಾಸಕರದ್ದು.

ಈಗಾಗಲೇ ಮುಂದಿನ ಚುನಾವಣೆಯೂ ಕ್ಯಾ. ಅಮರೀಂದರ್ ಸಿಂಗ್ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಎಐಸಿಸಿ ಘೋಷಿಸಿದ್ದರೂ, ರಾಜಕೀಯದಲ್ಲಿ ಯಾವ ಭರವಸೆಗಳೂ ಶಾಶ್ವತವಲ್ಲ ಎಂದು ರಾಜಕೀಯ ಮುತ್ಸದ್ದಿ ಸಿಎಂ ಸಿಂಗ್ ಅವರಿಗೂ ಗೊತ್ತು. ಹಾಗಾಗಿ ಇಂದಿನ ಸಭೆಯಲ್ಲಿ ನಡೆಯುವ ವಿದ್ಯಾಮಾನಗಳು ಅಮರೀಂದರ್ ಸಿಂಗ್ ಅವರ ಭವಿಷ್ಯವನ್ನು ನಿರ್ಧರಿಸಲಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಕುದುರೆಗೆ ನೀರು ಕುಡಿಸುವುದು ಹೇಗೆ? ಮೋದಿ ಕುರಿತು ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ

Next Post

ಸೋನು ಸೂದ್ ಹಾಗೂ ಆಪ್ತರಿಂದ 20 ಕೋಟಿ ತೆರಿಗೆ ವಂಚನೆ- ಐಟಿ‌ ಇಲಾಖೆ

Related Posts

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?
Uncategorized

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

by ಪ್ರತಿಧ್ವನಿ
January 16, 2026
0

ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ನಾಯಕತ್ವ ಬದಲಾವಣೆಯ ವಿಚಾರ ತಾರಕಕ್ಕೇರಿದ ಸಂದರ್ಭದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ತನ್ನ ನಿಷ್ಠರನ್ನು ಸಂಪರ್ಕಿಸಿ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ...

Read moreDetails
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

January 16, 2026
ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

December 27, 2025

ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ: ಸಿಎಂ ಸಿದ್ದರಾಮಯ್ಯ

December 26, 2025
ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

December 21, 2025
Next Post
ಸೋನು ಸೂದ್ ಹಾಗೂ ಆಪ್ತರಿಂದ 20 ಕೋಟಿ ತೆರಿಗೆ ವಂಚನೆ- ಐಟಿ‌ ಇಲಾಖೆ

ಸೋನು ಸೂದ್ ಹಾಗೂ ಆಪ್ತರಿಂದ 20 ಕೋಟಿ ತೆರಿಗೆ ವಂಚನೆ- ಐಟಿ‌ ಇಲಾಖೆ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada