ಹುಬ್ಬಳ್ಳಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಚಟುವಟಿಕೆಗಳ ನಡುವೆಯೇ ಲಿಂಗಾಯತ ಸಿಎಂ ಹೇಳಿಕೆ ಆಗಾಗ ಮುನ್ನೆಲೆಗೆ ಬರುತ್ತಲೇ ಇದೆ. ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಲಿಂಗಾಯತ ಸಮುದಾಯದ ನಾಯಕನಿಗೆ ಸಿಎಂ ಕುರ್ಚಿ ಫಿಕ್ಸ್ ಎಂಬ ಮಾತು ಎಲ್ಲೆಡೆ ಹರಿದಾಡುತ್ತಿರುವಾಗಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
![](https://pratidhvani.com/wp-content/uploads/2023/04/coal-import-to-be-stopped-by-2024-pralhad-joshi-1-1024x640.jpg)
ಹುಬ್ಬಳ್ಳಿಯಲ್ಲಿ ಈ ವಿಚಾರವಾಗಿ ಮಾತನಾಡಿರುವ ಅವರು, ನಾವು ಮೂರು ಜನ ಲಿಂಗಾಯತ ಸಮಾಜದ ನಾಯಕನನ್ನು ಸಿಎಂ ಮಾಡಿದ್ದೇವೆ. ಈ ಬಾರಿಯೂ ಲಿಂಗಾಯತ ಸಮುದಾಯದವರನ್ನೇ ಮುಖ್ಯಮಂತ್ರಿ ಮಾಡುತ್ತೇವೆಂದು ಎಲ್ಲಿಯೂ ಹೇಳಿಲ್ಲ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಪ್ರಹ್ಲಾದ್ ಜೋಶಿ ಈ ಹೇಳಿಕೆಯಿಂದಾಗಿ ಯಡಿಯೂರಪ್ಪ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಕೂಡ ಚುನಾವಣೆ ಬಳಿಕ ಮೂಲೆಗುಂಪು ಸೇರುತ್ತಾರಾ..? ಈ ಬಾರಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದಲ್ಲಿ ಹೊಸಮುಖಕ್ಕೆ ಮುಖ್ಯಮಂತ್ರಿ ಗದ್ದುಗೆ ಏರಲು ಅವಕಾಶ ಸಿಗಬಹುದೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಹರಿದಾಡಲು ಆರಂಭಿಸಿದೆ.