• Home
  • About Us
  • ಕರ್ನಾಟಕ
Saturday, January 24, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಪ್ರಜ್ವಲ್‌ ರೇವಣ್ಣ ಸಂಸದ ಸ್ಥಾನ ಅನರ್ಹ.. ಕಾರಣ ಏನು..? ಮುಂದಿನ ಹಾದಿ ಯಾವುದು..?

ಪ್ರತಿಧ್ವನಿ by ಪ್ರತಿಧ್ವನಿ
September 2, 2023
in ಅಂಕಣ, ಅಭಿಮತ, ರಾಜಕೀಯ
0
ಪ್ರಜ್ವಲ್‌ ರೇವಣ್ಣ

ಪ್ರಜ್ವಲ್‌ ರೇವಣ್ಣ

Share on WhatsAppShare on FacebookShare on Telegram

ಲೋಕಸಭಾ ಚುನಾವಣೆಗೆ ನಿಧಾನವಾಗಿ ಕಾವು ಏರುತ್ತಿದೆ. 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಆದರೆ ಕರ್ನಾಟಕ ಹೈಕೋರ್ಟ್‌ ಪ್ರಜ್ವಲ್‌ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹ ಮಾಡಿ ಆದೇಶ ಹೊರಡಿಸಿದೆ. ಕಳೆದ ಬಾರಿ ನಡೆದಿದ್ದ ಲೋಕಸಭಾ ಚುನಾವಣೆ ವೇಳೆ ಕೆಲವೊಂದು ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡದೆ ಮುಚ್ಚಿಟ್ಟಿದ್ದರು ಎನ್ನುವುದು ಪ್ರಮುಖ ಆರೋಪ. ಜೊತೆಗೆ ಆದಾಯ ತೆರಿಗೆ ಇಲಾಖೆ ಮಾಹಿತಿ, ಕ್ರಿಮಿನಲ್‌ ಕೇಸ್‌ಗಳ ಬಗ್ಗೆಯೂ ಮಾಹಿತಿ ನೀಡಿರಲಿಲ್ಲ ಎನ್ನುವುದನ್ನು ಪತ್ತೆ ಮಾಡಿದ್ದ ಎದುರಾಳಿ ಅಭ್ಯರ್ಥಿ ಆಗಿದ್ದ ಎ. ಮಂಜು ಹಾಗು ವಕೀಲ ದೇವರಾಜೇಗೌಡ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಆರೋಪಗಳು ಸಾಬೀತಾಗಿದ್ದು, ಅನರ್ಹ ಮಾಡಿ ಆದೇಶ ಮಾಡಲಾಗಿದೆ.

ADVERTISEMENT
ಪ್ರಜ್ವಲ್‌ ರೇವಣ್ಣ
ಪ್ರಜ್ವಲ್‌ ರೇವಣ್ಣ

ಹೈಕೋರ್ಟ್‌ ಏಕಸದಸ್ಯ ಪೀಠದಲ್ಲಿ ಆರೋಪ ಸಾಬೀತು..!

2019ರಲ್ಲಿ ಪ್ರಜ್ವಲ್‌ ರೇವಣ್ಣ ಹಾಸನ ಕ್ಷೇತ್ರದಿಂದ ಜೆಡಿಎಸ್‌‌ ಅಭ್ಯರ್ಥಿ ಆಗಿದ್ದರು. ಈ ವೇಳೆ ಅರಕಲಗೂಡು ಹಾಲಿ ಜೆಡಿಎಸ್‌ ಶಾಸಕ ಎ ಮಂಜು ಎದುರಾಳಿಯಾಗಿ ಸ್ಪರ್ಧೆ ಮಾಡಿದ್ದರು. ಆದರೆ ನಾಮಪತ್ರ ಸಲ್ಲಿಕೆ ಮಾಡುವಾಗ ಚುನಾವಣಾ ಆಯೋಗ ಹಾಗು ಪ್ರಚಾರದ ಮಾಹಿತಿ ನೀಡುವಾಗ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಎ ಮಂಜು ಆರೋಪ ಮಾಡಿದ್ದರು. ಸರ್ಕಾರಿ ಜಮೀನನ್ನು ಅಕ್ರಮವಾಗಿ ಖರೀದಿ ಮಾಡಿ, ಆದಾಯ ತೆರಿಗೆ ಕಟ್ಟದೇ ವಂಚನೆ ಆರೋಪ. ಹೊಳೆನರಸೀಪುರದಲ್ಲಿ ಚೆನ್ನಾಂಬಿಕಾ ಕನ್ವೆನ್ಷನ್ ಸೆಂಟರ್‌ ಮೌಲ್ಯ 5 ಕೋಟಿ ಇದ್ದರೂ ನಾಮಪತ್ರದಲ್ಲಿ 14 ಲಕ್ಷ ಎಂದು ಉಲ್ಲೇಖ ಮಾಡಲಾಗಿದೆ. ಬೆಂಗಳೂರಿನ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ಬ್ಯಾಲೆನ್ಸ್‌ ಇದ್ದರೂ ನಾಮಪತ್ರದಲ್ಲಿ ಕೇವಲ 5 ಲಕ್ಷ ಎಂದು ಉಲ್ಲೇಖ ಮಾಡಿದ್ರು, ಚುನಾವಣೆಯಲ್ಲಿ ಪ್ರಚಾರಕ್ಕೆ ದೇವೇಗೌಡರು ಹಾಗು ಸಿದ್ದರಾಮಯ್ಯರನ್ನು ಕರೆಸಿ ಪ್ರಚಾರ ಮಾಡಿದ್ರು. ಆದರೆ ಹೆಲಿಕಾಪ್ಟರ್​​ ಖರ್ಚು ವೆಚ್ಚ ಮುಚ್ಚಿಟ್ಟು ಚುನಾವಣೆ ಆಯೋಗಕ್ಕೆ ವಂಚನೆ ಮಾಡಲಾಗಿದೆ ಎಂದು ಕೋರ್ಟ್‌ ಮೆಟ್ಟಿಲೇರಲಾಗಿತ್ತು. ಎಲ್ಲಾ ಆರೋಪಗಳನ್ನು ಹೈಕೋರ್ಟ್‌ ಒಪ್ಪಿಕೊಂಡಿದೆ.

ಇಂದಿನಿಂದ ಮುಂದಿನ 6 ವರ್ಷ ಸ್ಪರ್ಧೆ ಮಾಡುವಂತಿಲ್ಲ..!

ಪ್ರಜ್ವಲ್​ ರೇವಣ್ಣ ಸಂಸದ ಸ್ಥಾನ ಅಸಿಂಧು ಆಗಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಸ್ಪರ್ಧೆ ಮಾಡುವಂತಿಲ್ಲ, ಅಷ್ಟೇ ಅಲ್ಲದೆ 2029ಕ್ಕೆ ನಡೆಯುವ ಚುನಾವಣೆಯಲ್ಲೂ ಪ್ರಜ್ವಲ್‌ ರೇವಣ್ಣ ಸ್ಪರ್ಧೆಗೆ ಅನರ್ಹರಾಗಿದ್ದಾರೆ. ಭಾರತದ ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ, ಕ್ರಿಮಿನಲ್‌ ಕೇಸ್‌ನಲ್ಲಿ ಶಿಕ್ಷೆಗೆ ಒಳಗಾದ ಜನಪ್ರತಿನಿಧಿಗಳಿಗೆ 6 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತಿಲ್ಲ. ಸೆಪ್ಟೆಂಬರ್‌ 1ರಂದು ಹೈಕೋರ್ಟ್‌ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮುಂದಿನ 6 ವರ್ಷಗಳ ಕಾಲ ಸ್ಪರ್ಧೆ ಮಾಡುವಂತಿಲ್ಲ. ನ್ಯಾಯಮೂರ್ತಿ ಕೆ.ನಟರಾಜನ್​ ಪೀಠ ಈ ಆದೇಶ ಹೊರಡಿಸಿದೆ. ಕಾನೂನು ತಜ್ಙರ ಮೊರೆ ಹೋಗಿರುವ ಪ್ರಜ್ವಲ್‌ ರೇವಣ್ಣ, ಮುಂದಿನ ಕಾನೂನು ಹೋರಾಟ ಹೇಗಿರಬೇಕು ಅನ್ನೋ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಪ್ರಜ್ವಲ್‌ ರೇವಣ್ಣ ಮುಂದಿರುವ ಆಯ್ಕೆಗಳು ಏನು..?
ಕರ್ನಾಟಕ ಹೈಕೋರ್ಟ್‌ ಏಕಸದಸ್ಯ ಪೀಠದಿಂದ ಅನರ್ಹ ಆಗಿರುವ ಕಾರಣಕ್ಕೆ ಕೂಡಲೇ ಹೈಕೋರ್ಟ್‌ ದ್ವಿಸದಸ್ಯ ಪೀಠದ ಎದುರು ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನೆ ಮಾಡುವ ಅವಕಾಶವಿದೆ. ಇಲ್ಲದಿದ್ರೆ ನೇರವಾಗಿ ಮೊದಲು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿ ತಡೆ ನೀಡುವಂತೆ ಮನವಿ ಮಾಡುವ ಅವಕಾಶವಿದೆ. ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರೆ, ವಿಚಾರಣೆಗೆ ತೆಗೆದುಕೊಳ್ಳಲಿರುವ ಸುಪ್ರೀಂಕೋರ್ಟ್‌, ತಡೆ ನೀಡಲು ಯೋಗ್ಯ ಎನಿಸಿದರೆ ಏಕಸದಸ್ಯ ಪೀಠದ ತೀರ್ಪಿಗೆ ತಡೆ ನೀಡಿ, ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ವಿಚಾರಣೆ ಮುಂದುವರಿಸುವಂತೆ ನಿರ್ದೇಶನ ನೀಡಬಹುದು. ಅಥವಾ ಸುಪ್ರೀಂಕೋರ್ಟ್‌ನಲ್ಲೇ ವಿಚಾರಣೆ ಮುಂದುವರಿಸಬಹುದು. ಒಂದು ವೇಳೆ ಸುಪ್ರೀಂಕೋರ್ಟ್‌ನಲ್ಲಿ ತಡೆಯಾಜ್ಞೆ ಸಿಗದಿದ್ರೆ ಮುಂದಿನ ಚುನಾವಣೆ ಮೇಲೆ ಕರಿನೆರಳು ಬೀಳಲಿದೆ ಎನ್ನಲಾಗ್ತಿದೆ.

ಕೃಷ್ಣಮಣಿ

Tags: hddevegowdahdrevannaHigh Court of KarnatakaJDSKarnatakaPrajwal Revanna
Previous Post

10 ವರ್ಷಗಳ ನಂತರ ಮತ್ತೆ ನಿರ್ದೇಶನದತ್ತ ಕಿಚ್ಚ ..!

Next Post

ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

Related Posts

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ
ಇದೀಗ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

by ಪ್ರತಿಧ್ವನಿ
January 24, 2026
0

ಬಳ್ಳಾರಿ: ನಗರದಲ್ಲಿ ನಡೆದಿದ್ದ ಬ್ಯಾನರ್ ಗಲಾಟೆ ಕಿಚ್ಚು ಆರುವ ಮುನ್ನವೇ ಮತ್ತೊಂದು ಕಿಚ್ಚು ಹೊತ್ತುಕೊಂಡಿದೆ. ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ...

Read moreDetails
ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

January 23, 2026
Next Post
ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

Please login to join discussion

Recent News

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!
Top Story

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

by ಪ್ರತಿಧ್ವನಿ
January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!
Top Story

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

by Shivakumar
January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!
Top Story

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

by ಪ್ರತಿಧ್ವನಿ
January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?
Top Story

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

by ಪ್ರತಿಧ್ವನಿ
January 23, 2026
ನಗರ ಜೀವನದ ವ್ಯಾಮೋಹ: ಮದುವೆಯಾದ ಎರಡೇ ತಿಂಗಳಿಗೆ ಯುವತಿ ಸಾ**
Top Story

ನಗರ ಜೀವನದ ವ್ಯಾಮೋಹ: ಮದುವೆಯಾದ ಎರಡೇ ತಿಂಗಳಿಗೆ ಯುವತಿ ಸಾ**

by Rachita
January 23, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

January 24, 2026
ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

January 24, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada