ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡಬೇಕೆಂದು ಕೋರಿ ವಿಶೇಷ ತನಿಖಾ ತಂಡಕ್ಕೆ (SIT) ಮನವಿ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಎಸ್ಐಟಿ ಮುಖ್ಯಸ್ಥರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಹೀಗಾಗಿ ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.
![](https://pratidhvani.com/wp-content/uploads/2022/07/Prajwal_Revanna_EPS.jpg)
ಹೀಗಾಗಿ ಪತ್ರ ಬರೆದಿರುವ ವಕೀಲರು, ನನ್ನ ಕಕ್ಷಿದಾರರಾದ ಪ್ರಜ್ವಲ್ ಮನೆಯ ಮೇಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೀರಿ. ಆದರೆ ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್ ಕುರಿತು ವಿಷಯ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.
![](https://pratidhvani.com/wp-content/uploads/2022/07/Prajwal-Revanna-DH-File-Photo-1593530371.jpg)
ಹೀಗಾಗಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮ ಮುಂದೆ ಬಂದು ನಂತರ ನೋಟಿಸ್ ನ ಸೂಚನೆಯಂತೆ ಹಾಜರಾಗುತ್ತಾರೆ. ಹೀಗಾಗಿ 7 ದಿನಗಳ ಕಾಲಾವಕಾಶ ಅಗತ್ಯವಿದೆ ಎಂದು ಕೋರಿದ್ದಾರೆ.
![](https://pratidhvani.com/wp-content/uploads/2024/04/Prajwal-Revanna-.webp)
ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ನೀಡಿ ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.