ಪ್ರಜ್ವಲ್ ರೇವಣ್ಣ ವಿಚಾರ ರಾಜ್ಯ ಹಾಗೂ ದೇಶದ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ನಾಯಕರು ಈ ಬಗ್ಗೆ ತುಟಿಕ್ ಪಿಟಿಕ್ ಅನ್ನುತ್ತಿಲ್ಲ ಎಂಬ ಆರೋಪದ ಮಧ್ಯೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಗುವಹಾಟಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರೋ ಚಾಣಕ್ಯ, ವಿಡಿಯೋವನ್ನು ಒಪ್ಪಿಕೊಳ್ಳಲಾಗಲ್ಲ. ರೇವಣ್ಣ ಹಾಗೂ ಪ್ರಜ್ವಲ್ ಮೇಲೆ ಬಂದಿರೋ ಆರೋಪ ಆಧಾರರಹಿತ.
ಮಹಿಳೆಯರ ಘನತೆಗೆ ಧಕ್ಕೆಯಾಗುವುದನ್ನು ಖಂಡಿಸುತ್ತೇನೆ ನಾರಿಶಕ್ತಿಗೆ ಅಪಮಾನವಾಗುವುದನ್ನು ಸಹಿಸಲ್ಲ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಆರೋಪ ಸಹಿಸಲಾಗಲ್ಲ ಕರ್ನಾಟಕ ಸರ್ಕಾರ ಏಕೆ ಶೀಘ್ರಗತಿಯಲ್ಲಿ ತನಿಖೆ ನಡೆಸುತ್ತಿಲ್ಲ? ಅಂತ ಕರ್ನಾಟಕ ಸರ್ಕಾರವನ್ನೇ ಅಮಿತ್ ಶಾ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಹೈಕಮ್ಯಾಂಡ್ ನ ನಿಲುವು ಸ್ಪಷ್ಟಪಡಿಸಿದ ಅಮಿತ್ ಶಾ ,ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪ ಸಹಿಸಲ್ಲ ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಶೀಘ್ರಗತಿ ತನಿಖೆಗೆ ಅಮಿತ್ ಶಾ ಆಗ್ರಹ ಮಾಡಿದ್ದಾರೆ.