• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿಎಂ ಡಿಕೆಶಿ ಭೇಟಿ ಮಾಡಿದ ಪ್ರಕಾಶ್ ರಾಜ್; SIR ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಏನೆಲ್ಲಾ ಚರ್ಚೆ?

ಪ್ರತಿಧ್ವನಿ by ಪ್ರತಿಧ್ವನಿ
August 17, 2026
in ರಾಜಕೀಯ
0
ಸಿಎಂ ಡಿಕೆಶಿ ಭೇಟಿ ಮಾಡಿದ ಪ್ರಕಾಶ್ ರಾಜ್; SIR ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಏನೆಲ್ಲಾ ಚರ್ಚೆ?
Share on WhatsAppShare on FacebookShare on Telegram

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿರುವ ಸಿಎಂ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ‘ಎದ್ದೇಳು ಕರ್ನಾಟಕ’ ಸಂಘಟನೆಯ ನಿಯೋಗದೊಂದಿಗೆ ಆಗಮಿಸಿದ್ದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಸಿಎಂ ಗಮನಕ್ಕೆ ಹಲವು ವಿಚಾರಗಳನ್ನು ತಂದಿದ್ದಾರೆ.

ADVERTISEMENT

ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಎಲ್.ಕೆ. ಅಥೀಕ್ ಉಪಸ್ಥಿತರಿದ್ದರು. ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆ ಅರ್ಹ ಮತದಾರರ ಹೆಸರುಗಳು ಕೈಬಿಡುವ ಸಾಧ್ಯತೆ ಇದೆ ಎಂಬ ಆತಂಕವನ್ನು ನಿಯೋಗ ವ್ಯಕ್ತಪಡಿಸಿದೆ.

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಹಲವು ಲೋಪಗಳು ನಡೆಯುತ್ತಿವೆ ಎಂದು ‘ಎದ್ದೇಳು ಕರ್ನಾಟಕ’ ಸಂಘಟನೆ ಆರೋಪಿಸಿದೆ.

  • ಅರ್ಹ ಮತದಾರರ ಹೆಸರು ಕೈಬಿಡುವ ಆತಂಕ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪ.
  • ಹೆಚ್ಚಿನ ಪ್ರಮಾಣದ ಡಿಲೀಷನ್: ಕೆಲವು ಬೂತ್‌ಗಳಲ್ಲಿ ಶೇ.60ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂಬ ಗಂಭೀರ ಆರೋಪ.
  • ಬದುಕಿರುವವರನ್ನೇ ‘ಮೃತರು’ ಎಂದು ಗುರುತು: ಕೆಲ ಮತದಾರರನ್ನು ತಪ್ಪಾಗಿ ‘ಡೆಡ್’ ಎಂದು ದಾಖಲಿಸಲಾಗುತ್ತಿದೆ ಎಂದು ದೂರಲಾಗಿದೆ.
  • ಸ್ಥಳಾಂತರಗೊಂಡವರ ಸಮಸ್ಯೆ: ಬಾಡಿಗೆ ಮನೆ ಬದಲಿಸಿದವರು ಅಥವಾ ಉದ್ಯೋಗದ ನಿಮಿತ್ತ ಬೇರೆಡೆ ತೆರಳಿದವರನ್ನು ‘ಗೈರುಹಾಜರು’ ಎಂದು ಗುರುತಿಸಲಾಗುತ್ತಿದೆ ಎಂಬ ಆರೋಪ.
  • BLOಗಳ ತರಬೇತಿ ಕುರಿತು ಪ್ರಶ್ನೆ: ಮನೆಮನೆಗೆ ತೆರಳಿ ಪರಿಷ್ಕರಣೆ ನಡೆಸುತ್ತಿರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಲಾಗಿಲ್ಲ ಎಂದು ಸಂಘಟನೆ ದೂರಿದೆ.
H. D. Kumaraswamy : ಕಾಂಂಗ್ರೆಸ್‌ನವ್ರು ವಂದೇ ಮಾತರಂ ಬಗ್ಗೆ ಸಣ್ಣತನ ತೋರಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ತರಾತುರಿಯಲ್ಲಿ ಪೂರ್ಣಗೊಳಿಸುವ ಬದಲು ಕನಿಷ್ಠ ಮೂರು ತಿಂಗಳು ವಿಸ್ತರಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.ಅಲ್ಲದೆ, ಸ್ಥಳಾಂತರಗೊಂಡ ಮತದಾರರಿಗೆ ಮತ್ತೆ ಅವಕಾಶ ಕಲ್ಪಿಸಲು ಫಾರ್ಮ್-6 ಮತ್ತು ಫಾರ್ಮ್-8 ವಿತರಣೆ ಮಾಡಬೇಕು. ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿಕೊಳ್ಳಲು ಸರ್ಕಾರದ ವತಿಯಿಂದ ವ್ಯಾಪಕ ಜಾಗೃತಿ ಅಭಿಯಾನ ನಡೆಸಬೇಕು ಎಂದು ಮನವಿ ಮಾಡಲಾಗಿದೆ.

Bjp leaders : ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು ಹಿಡಿದ ದೋಸ್ತಿ ನಾಯಕರು..

ಅರ್ಹ ಮತದಾರರ ಹಕ್ಕು ಕಸಿದುಕೊಳ್ಳುವ ಯಾವುದೇ ಪ್ರಕ್ರಿಯೆಗೆ ಅವಕಾಶ ನೀಡಬಾರದು ಎಂದು ನಿಯೋಗ ಸಿಎಂಗೆ ಮನವಿ ಮಾಡಿದೆ. ಪ್ರಕಾಶ್ ರಾಜ್ ಅವರು SIR ವಿಚಾರವಾಗಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿರುವುದು ಇದೀಗ ರಾಜಕೀಯ ವಲಯದಲ್ಲೂ ಕುತೂಹಲ ಮೂಡಿಸಿದೆ.

 

Tags: #dkshivakumar#EddeluKarnataka#ElectoralRoll#KarnatakaPolitics#KarnatakaPoliticsNews#KarnatakaSIR#LKAthiq#PoliticalNews #KannadaNews#priyankkharge#VoterID #VoterList#VoterListRevision#VoterRightsBengaluruNewsbreakingnewselectioncommissionkarnatakanewsPrakashRajSIR
Previous Post

HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

Next Post

ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ ಜ್ಚರದ ಆತಂಕ; ಶಾಲೆ ತಾತ್ಕಾಲಿಕ ಬಂದ್! ಯಾವ ಖಾಯಿಲೆ‌?

Related Posts

Top Story

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು: ಭಾಗ ೧

by ನಾ ದಿವಾಕರ
August 18, 2026
0

ಭಾರತ 21ನೆಯ ಶತಮಾನವನ್ನು ಪ್ರವೇಶಿಸಿದಾಗ ಸಾಮಾನ್ಯ ಜನರಲ್ಲೂ ಒಂದು ರೀತಿಯ ಕುತೂಹಲ, ಉತ್ಕಟ ಆಕಾಂಕ್ಷೆಗಳು, ಕನಸುಗಳು ಹಾಗೂ ವೈಯುಕ್ತಿಕ ಬದುಕಿನಲ್ಲಿ ಮಹತ್ತರ ಸುಧಾರಣೆಗಳ ಭ್ರಮೆಗಳು ಗರಿಗೆದರಿದ್ದವು. 2000ದ...

Read moreDetails
HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

August 17, 2026
ಬಿಜೆಪಿ ರಾಷ್ಟ್ರೀಯ ಘಟಕ ದಿಢೀರ್‌ ಪುನಾರಚನೆ: ಯಾರ್ಯಾರಿಗೆ ಯಾವ ಜವಾಬ್ದಾರಿ..?

ಬಿಜೆಪಿ ರಾಷ್ಟ್ರೀಯ ಘಟಕ ದಿಢೀರ್‌ ಪುನಾರಚನೆ: ಯಾರ್ಯಾರಿಗೆ ಯಾವ ಜವಾಬ್ದಾರಿ..?

August 17, 2026
ಕಾಡಂಚಿನ ಜನ ಮತ್ತು ಅರಣ್ಯಾಧಿಕಾರಿಗಳ ನಡುವಿನ ಸಂಘರ್ಷದ ಬಗ್ಗೆ ಧ್ವನಿ ಎತ್ತಿದ ಬಿ.ವೈ ವಿಜಯೇಂದ್ರ

ಕಾಡಂಚಿನ ಜನ ಮತ್ತು ಅರಣ್ಯಾಧಿಕಾರಿಗಳ ನಡುವಿನ ಸಂಘರ್ಷದ ಬಗ್ಗೆ ಧ್ವನಿ ಎತ್ತಿದ ಬಿ.ವೈ ವಿಜಯೇಂದ್ರ

August 17, 2026
ಕಾವೇರಿ ನೀರು ಹಂಚಿಕೆ ವಿವಾದ: ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ

ಕಾವೇರಿ ನೀರು ಹಂಚಿಕೆ ವಿವಾದ: ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ

August 17, 2026
Next Post
ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ ಜ್ಚರದ ಆತಂಕ; ಶಾಲೆ ತಾತ್ಕಾಲಿಕ ಬಂದ್! ಯಾವ ಖಾಯಿಲೆ‌?

ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ ಜ್ಚರದ ಆತಂಕ; ಶಾಲೆ ತಾತ್ಕಾಲಿಕ ಬಂದ್! ಯಾವ ಖಾಯಿಲೆ‌?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada