ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮೂರನೇ ಮುಖ್ಯಮಂತ್ರಿ ಸುದ್ದಿ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಬಿಜೆಪಿ ಸರ್ಕಾರವನ್ನ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಬದಲಾವಣೆಯಿಲ್ಲ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಬಳಿಯೂ ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾವನೆಯಿಲ್ಲ ಎಂದಿದ್ದಾರೆ.
ಮುಖ್ಯಮಂತ್ರಿ ವದ್ದಂತಿ ಎದ್ದಾಗ ಸಾಮಾನ್ಯವಾಗಿ ಜಗದೀಶ್ ಶೆಟ್ಟರ್ ಹೆಸರು ಮುನ್ನೆಲೆಗೆ ಬರುತ್ತದೆ ಅವರು ಪಕ್ಷದ ಹಿರಿಯ ನಾಯಕರಾಗಿರುವ ಕಾರಣ ಅವರ ಹೆಸರು ಚಾಲ್ತಿಗೆ ಬರುತ್ತದೆ. 2023ರ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ನಮ್ಮ ಮೂಖ್ಯಮಂತ್ರಿ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವನ್ನ ಅಸ್ಥಿರಗೊಳಿಸುವ ಯತ್ನಕ್ಕೆ ಕಾಂಗ್ರೆಸ್ ಕೈಹಾಕಿದೆ. ಆಗಾಗ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನ ಮುನ್ನೆಲೆಗೆ ತಂದು ಜನತೆಯಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಹೀಗೆ ಆದಲ್ಲಿ ಮುಂದಿನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಅವರು ಹೀನಾಯವಾಗಿ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.